Homeಕರ್ನಾಟಕಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

- Advertisement -
- Advertisement -

ಗನ್‌ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಹೇಳಿಕೆಯನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೀಡಿದ್ದು, ಮಡಿಕೇರಿಯಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಜಾಗರಣಾ ವೇದಿಕೆ ಶಸ್ತ್ರಾಸ್ತ್ರ ತರಬೇತಿ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.

ಪೊನ್ನಂಪೇಟೆಯಲ್ಲಿ ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ ಹಾಗೂ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಫೋಟೋಗಳು ವೈರಲ್‌ ಆದ ಬಳಿಕ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ, ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ನೀಡಿರುವ ಹೇಳಿಕೆಗೂ ಸಿ.ಟಿ.ರವಿಯವರ ಪ್ರತಿಕ್ರಿಯೆಗೂ ವಿರೋಧಾಭಾಸ ಕಂಡು ಬರುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


“ವಿಚಾರ ತಿಳಿಯದೆ ಆಕ್ಷೇಪಿಸುತ್ತಿರುವರಿಗೆ ತಲೆ ಸರಿಯಿಲ್ಲ. ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಸ್ತ್ರಾಸ್ತ್ರ ತರಬೇತಿ ಕೊಡುವುದಿಲ್ಲ. ಯೋಗ ಕಲಿಸುವ, ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯಲಿದೆ”
ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ (ಪ್ರಜಾವಾಣಿ ವರದಿ). ಆದರೆ ಸಿ.ಟಿ.ರವಿಯವರ ಹೇಳಿಕೆ ಇದಕ್ಕೆ ತದ್ವಿರುದ್ಧವಾಗಿದ್ದು, ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಕನ್ನಡದ ವಿಶ್ವಾಸಾರ್ಹ ಮಾಧ್ಯಮ ‘ಪ್ರಜಾವಾಣಿ’ಯಲ್ಲಿ ಆಗಿರುವ ವರದಿ

ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿ.ಟಿ.ರವಿ, “ಅದರಲ್ಲೇನಿದೆ ವಿಶೇಷ. ಪ್ರತಿ ವರ್ಷ ರಾಜ್ಯ ಮತ್ತು ಜಿಲ್ಲೆಗಳಿಂದ ಸ್ವರಕ್ಷಣೆಗಾಗಿ ತರಬೇತಿ ನೀಡಲಾಗುತ್ತದೆ. ಪೊಲೀಸ್ ಇಲಾಖೆಯಿಂದಲೂ ಕೊಡುತ್ತಾರೆ. ಅದರಲ್ಲೇನಿದೆ? ಏರ್‌ಗನ್‌ ಟ್ರೈನಿಂಗ್‌ ಕೊಟ್ಟಿದ್ದಾರೆಯೇ ಹೊರತು ಎ.ಕೆ. 47 ಗನ್‌ ಟ್ರೈನಿಂಗ್ ಕೊಟ್ಟಿಲ್ಲ. ಬಾಂಬ್‌ ಹಾಕುವ ಟ್ರೈನಿಂಗ್ ಕೊಟ್ಟಿಲ್ಲ. ಆತ್ಮರಕ್ಷಣೆಯ ತರಬೇತಿಯನ್ನು ಪೊಲೀಸ್ ಇಲಾಖೆಯೂ ಆಯೋಜನೆ ಮಾಡುತ್ತದೆ, ಬಜರಂಗದಳವೂ ಮಾಡುತ್ತದೆ. ಅದರಲ್ಲೇನಿದೆ ವಿಶೇಷ?” ಎಂದು ಪ್ರಶ್ನಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಘಟನೆಗೆ ವ್ಯಾಪಕವಾದ ಟೀಕೆಗಳು ವ್ಯಕ್ತವಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳು ಹರಿದಾಡಿವೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ತಿಳಿದುಬಂದಿದೆ.

ಇದನ್ನೂ ಓದಿರಿ: ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ನಾಲ್ಕಾರು ಬಾರಿ ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸುತ್ತಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...