Homeಮುಖಪುಟಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ 'ED'ಯಿಂದ ಸಮನ್ಸ್‌!

ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

- Advertisement -
- Advertisement -

ಬಿಜೆಪಿ ನಾಯಕನೋರ್ವನ ವಿರುದ್ದ ಕಾನೂನು ಹೋರಾಟ ಮಾಡುತ್ತಿದ್ದ ತಮಿಳುನಾಡಿನ ಸೇಲಂ ಜಿಲ್ಲೆಯ ಅತ್ತೂರಿನ ಇಬ್ಬರು ದಲಿತ ರೈತರಿಗೆ ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.

70ರ ಹರೆಯದ ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್  ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರದ ಬಹು-ಶಿಸ್ತಿನ ಸಂಸ್ಥೆ ಎಂದು ಹೇಳಿಕೊಳ್ಳುತ್ತಿರುವ ಇಡಿ ಅಕ್ರಮ ಹಣ ವರ್ಗಾವಣೆ ಮತ್ತು ವಿದೇಶಿ ವಿನಿಮಯ ಕಾನೂನುಗಳ ಉಲ್ಲಂಘನೆ ಸೇರಿ ಕೆಲ ಗಂಭೀರ ಹಣಕಾಸಿನ ಅವ್ಯವಹಾರದ, ಕಾನೂನಿನ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಆದರೆ ಬರೀ 6.5 ಎಕರೆ ಕೃಷಿ ಭೂಮಿ ಹೊಂದಿರುವ ಇಬ್ಬರು ಬಡ ಕಟುಂಬದ ಸಹೋದರರನ್ನು ‘ಇಡಿ’ ವಿಚಾರಣೆಗೆ ಏಕೆ ಕರೆದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ಇಡಿ ಹಿಂಬಾಲಿಸಿದೆ. ಈ ರೈತರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದರು.

‘ಇಡಿ’ ಸಹಾಯಕ ನಿರ್ದೇಶಕರಾದ ರಿತೇಶ್ ಕುಮಾರ್ ಅವರು ರೈತರಿಗೆ ಸಮನ್ಸ್‌ನ ಪ್ರತಿಯನ್ನು ಕಳುಹಿಸಿದ್ದರು. ಸಮನ್ಸ್ ಪ್ರಕಾರ, ತನಿಖಾಧಿಕಾರಿ ರಿತೇಶ್ ಕುಮಾರ್ ಅಕ್ರಮ ಹಣ ವರ್ಗಾವಣೆ ತಡೆಗಟ್ಟುವಿಕೆಯ ಕಾಯ್ದೆಯಡಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಕಣ್ಣಿಯಾನ್ ಮತ್ತು ಕೃಷ್ಣನ್ ಅವರನ್ನು ಇಡಿ ಮುಂದೆ ಹಾಜರಾಗಲು ಕೇಳಲಾಗಿತ್ತು. ರೈತರಿಗೆ ತಮ್ಮ ಪಾನ್ ಕಾರ್ಡ್, ಆಧಾರ್ ಕಾರ್ಡ್, ವೋಟರ್ ಐಡಿ, ಪಾಸ್ ಪೋರ್ಟ್ ಪ್ರತಿ, ಎರಡು ಪಾಸ್ ಪೋರ್ಟ್ ಅಳತೆಯ ಪೋಟೋಗಳು, ಟ್ಯಾಕ್ಸ್‌  ರಿಟರ್ನ್ಸ್ ನಕಲು ಪ್ರತಿಗಳು, ಅವರ ಮತ್ತು ಅವರ ಕುಟುಂಬದ ಸದಸ್ಯರ ಹೂಡಿಕೆಯ ಕುರಿತ ವಿವರಗಳು, ಅವರ ಹೆಸರಿನಲ್ಲಿ ಮತ್ತು ಕುಟುಂಬದ ಸದಸ್ಯರ ಹೆಸರಿನಲ್ಲಿರುವ ಸ್ಥಿರ ಆಸ್ತಿಗಳ ವಿವರಗಳು, ಬ್ಯಾಂಕ್ ಖಾತೆಗಳ ವಿವರಗಳು, ಅವರ ಹೆಸರಿನಲ್ಲಿ ಸ್ಥಿರ ಠೇವಣಿ ಮತ್ತು ಕುಟುಂಬ ಸದಸ್ಯರ ಹೆಸರುಗಳು, ಕೃಷಿ ಭೂಮಿಯ ವಿವರಗಳು ಮತ್ತು ಬೆಳೆ ಉತ್ಪಾದನೆಯ ವಿವರಗಳನ್ನು ಕೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ಇಡಿ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದಾರೆ.

ಕಣ್ಣಿಯಾನ್ ಮತ್ತು ಕೃಷ್ಣನ್ ಅವರು ಸೇಲಂ ಜಿಲ್ಲೆಯ ಅತ್ತೂರು ಬಳಿಯ ರಾಮನಾಯ್ಕನ್‌ಪಾಳ್ಯಂನಲ್ಲಿ 6.5 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ ಮತ್ತು ಅವರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಕೃಷ್ಣನ್ ಅವರ ದೂರಿನ ಆಧಾರದ ಮೇಲೆ, ಗುಣಶೇಖರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಮತ್ತು 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಕೃಷ್ಣನ್ ಮತ್ತು ಗುಣಶೇಖರ್ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದ ಸಿವಿಲ್ ಪ್ರಕರಣವು ಅತ್ತೂರು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ನಾವು ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ED ಅಧಿಕಾರಿಗಳನ್ನು ಭೇಟಿ ಮಾಡಲು ಹೋದೆವು. ಅವರು ನಮ್ಮನ್ನು ಮತ್ತೆ ಹಾಜರಾಗುವಂತೆ ಕೇಳಿಕೊಂಡರು. ನಾವು ಕಷ್ಟದಿಂದ ಬದುಕುತ್ತಿದ್ದೇವೆ ಎಂದು ನಾವು ಅವರಿಗೆ ಹೇಳಿದ್ದೇವೆ. ಯಾರಾದರೂ ನಮ್ಮ ಮೇಲೆ ಅಕ್ರಮ ಸಂಪತ್ತಿನ ಆರೋಪವನ್ನು ಹೇಗೆ ಮಾಡಲು ಸಾಧ್ಯವೇ ಎಂದು ಕೃಷ್ಣನ್ ಪ್ರಶ್ನಿಸಿದ್ದಾರೆ.

ಇಡಿ ಕಚೇರಿಯಲ್ಲಿ ರೈತರಿಗೆ ಇಂಗ್ಲಿಷ್‌ನಲ್ಲಿ ವಿಚಾರಣೆಗಾಗಿ ಕೆಲವೊಂದು ಪ್ರಶ್ನೆಗಳನ್ನು ನೀಡಿ ಭರ್ತಿ ಮಾಡಲು ಕೇಳಲಾಯಿತು ಮತ್ತು ಅದನ್ನು ಅವರ ಜೊತೆಗಿದ್ದ ವಕೀಲರು ತುಂಬಿದರು. ರೈತರು ತಮ್ಮ ಹಣಕಾಸಿನ ವಿವರಗಳ ಬಗ್ಗೆ ವಿವರಗಳನ್ನು ಭರ್ತಿ ಮಾಡಲು ಕೇಳಿದರು ಮತ್ತು ರೈತರು ತಮಿಳುನಾಡು ಸರ್ಕಾರದಿಂದ 1,000 ರೂಪಾಯಿಗಳ ವೃದ್ಧಾಪ್ಯ ಪಿಂಚಣಿ ಪಡೆಯುತ್ತಿದ್ದಾರೆ ಮತ್ತು ಅವರಿಗೆ ಬೇರೆ ಆದಾಯದ ಮೂಲವಿಲ್ಲ ಎಂದು ನಮೂದಿಸಿದ್ದಾರೆ.

ಈ ಬಗ್ಗೆ ಪರ್ವಿನ ಮಾತನಾಡಿ, ಜಮೀನಿನ ಸಮಸ್ಯೆಯಿಂದಾಗಿ ಕಳೆದ 4 ವರ್ಷಗಳಿಂದ ರೈತರು ತಮ್ಮ ಕೃಷಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಏಕೈಕ ಆದಾಯದ ಮೂಲವೆಂದರೆ ವೃದ್ಧಾಪ್ಯ ಪಿಂಚಣಿ, ಅವರು ತಮಿಳುನಾಡು ಸರ್ಕಾರವು ನೀಡುವ ಉಚಿತ ಪಡಿತರವನ್ನು ಸ್ವೀಕರಿಸುತ್ತಾರೆ. ‘ಇಡಿ’ ಕಚೇರಿಗೆ ಭೇಟಿ ನೀಡುವ ವೆಚ್ಚವನ್ನು ಭರಿಸಲು ರೈತರು ತಮ್ಮ ಭೂಮಿಯನ್ನು ಒತ್ತೆ ಇಟ್ಟು ಸಾಲ ಮಾಡಬೇಕಾಗಿದೆ. ಚೆನ್ನೈನಲ್ಲಿರುವ ‘ಇಡಿ’ ಕಚೇರಿಯಲ್ಲಿ ಐಒ ಎದುರು ಹಾಜರಾಗುವಂತೆ ಸಮನ್ಸ್ ಸ್ವೀಕರಿಸಿದಾಗ ರೈತರ ಬ್ಯಾಂಕ್ ಖಾತೆಯಲ್ಲಿ 450 ರೂ.ಇತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಮ ಮಂದಿರ ಉದ್ಘಾಟನೆ ವೇಳೆ ಮಸೀದಿ, ಮದರಸಾಗಳಲ್ಲಿ ಜೈಶ್ರೀರಾಮ್ ಹೇಳಿ: ಆರೆಸ್ಸೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...