Homeಕರ್ನಾಟಕತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ - ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

- Advertisement -
- Advertisement -

ಜನವರಿ 2 ಅಂದರೆ ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಬರುತ್ತಿದ್ದಾರೆ. ಎಲ್ಲರಲ್ಲಿಯೂ ಹರ್ಷ. ಆದರೆ ಹಿಂದಿನ ಕಥೆ ಸ್ವಲ್ಪ ನೋಡಿದರೆ ಬೇಸರವಾಗುತ್ತದೆ. ಏನದು ನೋಡೋಣ ಬನ್ನಿ.

ತುಮಕೂರು ನಗರದ ಹೊರವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ದೇಶದ ಮೊದಲ ಆಹಾರ ಸಂಸ್ಕರಣಾ ಘಟಕ ಆರಂಭವಾಗಿ ಆರು ವರ್ಷ ಕಳೆದಿದೆ. ಈವರೆಗೆ ಈ ಘಟಕದಿಂದ ಹೇಳಿಕೊಳ್ಳುವಂಥ ಕೆಲಸಗಳೇ ಆಗಿಲ್ಲ. ಪ್ರಧಾನಿಯ ಭರವಸೆಯಂತೆ ಉದ್ಯೋಗ ಸೃಷ್ಟಿಯಾಗಿಲ್ಲ. ರೈತರಿಗೆ ಯಾವುದೇ ಪ್ರಯೋಜನ ಕೂಡ ಆಗಿಲ್ಲ. ಲೆಕ್ಕಕ್ಕೆ ಮಾತ್ರ ಆಹಾರ ಸಂಸ್ಕರಣ ಘಟಕ, ಸಾಧನೆ ಮಾತ್ರ ಶೂನ್ಯ. ರೈತರ ನೆರವಿಗೆ ಆಸರೆಗೆ ಬರಬೇಕಾಗಿದ್ದ ಈ ಘಟಕ ಇದ್ದೂ ಇಲ್ಲದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣ ಪುಸ್ತಕದ ಬದನೆಕಾಯಿ ಎಂಬಂತಾಗಿದೆ.

ಅದು 2014ನೇ ವರ್ಷ. ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಹಿಡಿದರು. ಪ್ರಧಾನಿಯಾದ ಹೊಸದು, ಹುಮ್ಮಸ್ಸು ತುಳುಕುತ್ತಿತ್ತು. ಅದೇ ಹೊತ್ತಲ್ಲಿ  ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನಿ ಮೋದಿ ದಕ್ಷಿಣ ಯಾತ್ರೆ ಕೈಗೊಂಡರು. ತುಮಕೂರಿಗೆ ಭೇಟಿ ನೀಡಿ ವಸಂತನರಸಾಪರುದಲ್ಲಿ ಆಹಾರ ಸಂಸ್ಕರಣಾ ಘಟಕ ಉದ್ಘಾಟನೆ ಮಾಡಿದರು. ಆಗ 10 ಸಾವಿರ ನೇರ ಉದ್ಯೋಗ, ಸುಮಾರು 25 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತವೆ. 12 ಜಿಲ್ಲೆಗಳ ರೈತರಿಗೆ ಇದರ ಉಪಯೋಗವಾಗುತ್ತದೆ. ರೈತರು ಬೆಳೆದ ತರಕಾರಿ, ಹಣ್ಣು ಮೊದಲಾದ ವಸ್ತುಗಳನ್ನು ಶೀತಲ ಘಟಕದಲ್ಲಿ ಕೆಡದಂತೆ ಸಂಗ್ರಹಿಸಿಡಬಹುದು ಎಂದು ಭವರಸೆ ನೀಡಿ ಹೋದರು.

ಪ್ರಧಾನಿ ಭರವಸೆ ನೀಡಿ ಆರು ವರ್ಷಗಳು ಉರುಳಿದ ಮೇಲೆ ಅಲ್ಲಿ ಉದ್ಯೋಗವೂ ಸೃಷ್ಟಿಯಾಗಲಿಲ್ಲ. ರೈತರಿಗೂ ಅನುಕೂಲವಾಗಲಿಲ್ಲ. ಕೋಟ್ಯಂತರ ರೂಪಾಯಿ ಮಾತ್ರ ನಷ್ಟವಾಯಿತು. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಘಟಕದಿಂದ ಪ್ರಧಾನಿ ಹೇಳಿದಷ್ಟು ನೇರ- ಪರೋಕ್ಷ ಉದ್ಯೋಗ ಸೃಷ್ಟಿಯಾಗಲೇ ಇಲ್ಲ. ಕೇವಲ 200 ಮಂದಿ ಕಾಯಂ ನೌಕರರು, 800 ಮಂದಿ ಗುತ್ತಿಗೆ ನೌಕರರು ಈಗ ದುಡಿಯುತ್ತಿದ್ದಾರೆ.  ಕಾಯಂ ಹುದ್ದೆಗಳಿಗೆ ಉತ್ತರ ಭಾರತದವರು ನೇಮಕವಾಗಿದ್ದರೆ, ಕಸ ಹೊಡೆಯುವುದು, ಕಸ ಹೊತ್ತುಹಾಕುವುದು ಮೊದಲಾದ ಸಣ್ಣಪುಟ್ಟ ಕೆಲಸಗಳಿಗೆ ಸ್ಥಳೀಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದಾರೆ.  ಉತ್ತರ ಭಾರತದ ಕಾಯಂ ನೌಕರರಿಗೆ ಹೆಚ್ಚು ವೇತನ, ಸ್ಥಳೀಯರಿಗೆ 7-8 ಸಾವಿರ ರೂಪಾಯಿ ನೀಡಿ ವೇತನ ಮತ್ತು ಕೆಲಸ ನೀಡುವಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಸ್ಥಳೀಯರಿಂದ ಬಿಟ್ಟಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಕಾರ್ಮಿಕರು ದೂರಿದ್ದಾರೆ.

ಕೃಷಿ ಸಲಕರಣೆಗಳ ಅಬಿವೃದ್ದಿ, ಸಂಸ್ಕರಣೆಯ ಮೌಲ್ಯವರ್ಧನೆ, ಸುಗ್ಗಿಯ ನಂತರ ಸೌಲಭ್ಯ, ತಾಂತ್ರಿಕ ಸಹಾಯ ನೀಡುವುದು ಘಟಕ ಉದ್ದೇಶವೆಂದು ಇಂಡಿಯ ಫುಡ್ ಪಾರ್ಕ್ ಡಾಟ್ ಕೊ ಡಾಟ್ ಇನ್ ನಲ್ಲಿ ಹೇಳಿದ್ದು ಇದಕ್ಕೆ ಪೂರಕವಾಗಿ ಕೆಲಸ ಮಾಡದೇ ಇರುವುದು ಕಂಡು ಬಂದಿದೆ. ಅಷ್ಟೇ ಅಲ್ಲ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಸುಸ್ಥಿರ ಕೃಷಿಮೌಲ್ಯ ಸಂಪರ್ಕ ಜಾಲವೂ ಸೃಷ್ಟಿಸುವಲ್ಲಿ ಈ ಘಟಕ ವಿಫಲವಾಗಿದೆ. ಉನ್ನತಗುಣಮಟ್ಟದ ಗ್ರಾಮೀಣ ಸಂಸ್ಕರಣಾ ಸೌಲಭ್ಯವನ್ನು ಕಲ್ಪಿಸುವುದು ಕೇವಲ ಕನಸಿನ ಮಾತಾಗಿದೆ. ಇದುವರೆಗೆ ರೈತರಿಗೆ ಬೇಗ ಹಾಳಾಗುವಂತಹ ಟಮೋಟೋ, ಈರೇಕಾಯಿ, ಉರುಳಿಕಾಯಿ, ಬದನೆ ಸೇರಿದಂತೆ ಯಾವುದೇ ತರಕಾರಿಗಳನ್ನು ಸಂಸ್ಕರಣೆ ಮಾಡುವ ಗೋಜಿಗೇ ಹೋಗಿಲ್ಲ. ಉತ್ಪಾದನೆ ಮತ್ತು ಸಂಸ್ಕರಣೆ ಸಾಮರ್ಥ್ಯ ಹೆಚ್ಚಿಸುವಂತಹ ಪ್ರಯತ್ನಗಳನ್ನು ಆಹಾರ ಸಂಸ್ಕರಣ ಘಟಕದಲ್ಲಿ ಮಾಡಿಲ್ಲ.

ಪ್ರಧಾನಿ ನರೇಂದ್ರ ಮೋದಿ ಈ ಘಟಕದಿಂದ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಬೆಂಗಳೂರು ನಗರ ಹೀಗೆ ಸುಮಾರು 12 ಜಿಲ್ಲೆಯ ರೈತರು ತಾವು ಬೆಳೆದ ತರಕಾರಿ ಮತ್ತು ಹಣ್ಣಿನ ಬೆಳೆಗಳನ್ನು ಈ ಘಟಕದಲ್ಲಿ ಸಂರಕ್ಷಣೆ ಮಾಡಬಹುದು ಎಂದು ಹೇಳಿದ್ದರು. ಈ ಕಾರ್ಯವೂ ಆಗಿಲ್ಲ. ಇದು ಲಾಭವಾಗಿದ್ದು ಮಾತ್ರ ಉತ್ತರ ಭಾರತದ ಮಾರ್ವಾಡಿ ಮಾಲಿಕನಿಗೆ. ಆಹಾರ ಸಂಸ್ಕರಣ ಮುಚ್ಚಿಹೋಗುವ ಹಂತದಲ್ಲಿದ್ದು, ಮಾಲಿಕ ಆ ಘಟಕವನ್ನೇ ಬೇರೆಯವರಿಗೆ ಲಾಭಕ್ಕೆ ಮಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂದರೆ ಘಟಕ ಉದ್ದೇಶವೇ ಹಾಳಾಗಿದ್ದು ಹಣವೂ ಪೋಲಾಗಿದೆ. ಇದನ್ನು ಕೇಳುವವರು ಯಾರೂ ಇಲ್ಲ.

ಎಚ್‌ಎಎಲ್‌ ಕಥೆ ಭಿನ್ನವಲ್ಲ!

2016 ಮಾರ್ಚ್ 8 ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿ ಹಿಂದೂಸ್ತಾನ ಏರೋನಾಟಿಕ್ ಲಿಮಿಟೆಡ್ ಸಂಸ್ಥೆಯಡಿ ಲಘು ಯುದ್ದ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. 2018ರ ಡಿಸೆಂಬರ್ ಅಂತ್ಯಕ್ಕೆ ಮೊದಲ ಹೆಲಿಕಾಪ್ಟರ್ ಹಾರಲಿದೆ ಎಂದು ಅಂದಿನ ವೇದಿಕೆಯಲ್ಲಿ ಭಾಷಣ ಮಾಡಿ ಹೇಳಿದರು. ಪ್ರಧಾನಿ ಈ ಮಾತುಗಳನ್ನಾಡಿ ಮೂರು ವರ್ಷ ಕಳೆದರೂ ಹೆಲಿಕಾಪ್ಟರ್ ಹಾರಲೇ ಇಲ್ಲ. ಪ್ರಧಾನಿ ಮೋದಿ ಅವರ ಎರಡನೇ ಭರವಸೆಯೂ ಸುಳ್ಳಾಗಿದೆ.

ಎಚ್.ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆಗೆ ಸಣ್ಣ ಮತ್ತು ಅತಿಸಣ್ಣ ರೈತರಿಂದ ಅಕ್ಷರಶಃ ಭೂಮಿಯನ್ನು ಕಸಿದುಕೊಳ್ಳಲಾಯಿತು. ಹಲವು ವರ್ಷಗಳಿಂದ ಅದೇ ಭೂಮಿಯನ್ನು ನೆಚ್ಚಿಕೊಂಡು ಬರುತ್ತಿದ್ದ ರೈತರಿಗೆ ಭೂಮಿಯೇ ಇಲ್ಲವಾಯಿತು. ಬಗರ್ ಹುಕುಂ ಸಾಗುವಳಿದಾರರನ್ನು ಬೆದರಿಸಿ ಭೂಮಿ ಕಿತ್ತುಕೊಂಡರು. ಸುಮಾರು 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದ 70 ಕುಟುಂಬಗಳಿಗೆ ಭೂಮಿಯೂ ಇಲ್ಲ, ಪರಿಹಾರವನ್ನೂ ನೀಡಿಲ್ಲ. ಗೋಮಾಳದಲ್ಲಿ ಉಳುಮೆ ಮಾಡುವ ಜೊತೆಗೆ ಅಲ್ಲಿಯೆ ಗುಡಿಸಲು ನಿರ್ಮಿಸಿ ವಾಸ ಮಾಡುತ್ತಿದ್ದ ಕುಟುಂಬಗಳನ್ನು ಒಕ್ಕಲೆಬ್ಬಿಸಿ ಬೆದರಿಸಿ ಬೇರೆ ಸ್ಥಳಾಂತರ ಮಾಡುವಂತೆ ಮಾಡಲಾಗಿದೆ.

ಕೆಲವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ವಿಚಾರಣೆಯ ಹಂತದಲ್ಲಿವೆ. ಇದರ ನಡುವೆಯೂ 615 ಎಕರೆ ಭೂಮಿಯಲ್ಲಿ ಹೆಲಿಕಾಪ್ಟರ್ ತಯಾರಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಆದರೆ ರಕ್ಷಣಾ ಇಲಾಖೆಯಿಂದ ಬೇಡಿಕೆ ಪತ್ರ ಬಂದಿಲ್ಲ. ಹೀಗಾಗಿ ಹೆಲಿಕಾಪ್ಟರ್ ತಯಾರಿಸುವುದನ್ನು ಇಂದಿಗೂ ಆರಂಭಿಸಿಲ್ಲ. 2018ರ ಡಿಸೆಂಬರ್ ಅಂತ್ಯದೊಳಗೆ ಹೆಲಿಕಾಪ್ಟರ್ ಹಾರುತ್ತದೆ ಎಂಬ ಮೋದಿ ಮಾತುಗಳು ಹುಸಿಯಾಗಿವೆ. ಎರಡು ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರೂ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ತಯಾರಿಕೆಗೆ ಗ್ರೀನ್ ಸಿಗ್ನಲ್ ನೀಡದೇ ಇರುವುದು ಏಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಎಚ್.ಎಎಲ್  ಹೆಲಿಕಾಪ್ಟರ್ ಘಟಕಕ್ಕೆ ಶಂಕುಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸುವ ಹಂತ ತಲುಪಿದ್ದರೂ ಅಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಪ್ರಧಾನಿ ಹೇಳಿದಂತೆ ನಾಲ್ಕು ಸಾವಿರ ಉದ್ಯೋಗವೂ ಸೃಷ್ಟಿಯಾಗಿಲ್ಲ. ಹಾಗಾಗಿ ಪ್ರಧಾನಿ ಉದ್ಘಾಟಿಸಿದ ಆಹಾರ ಸಂಸ್ಕರಣ ಘಟಕದಲ್ಲಿ ಉದ್ಯೋಗವೂ ಇಲ್ಲ. ಎಚ್ ಎಎಲ್ ಹೆಲಿಕಾಪ್ಟರ್ ಗಳು ಹಾರಲೇ ಇಲ್ಲ ಎಂದು ಜನ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ದೇಶಕ್ಕೆ ನರೇಂದ್ರ ಮೋದಿ ಮಾರಕವಾಗಿ ಇದ್ದಾರೆ ಮೋದಿಯ ಭಾಷಣ ಮಾಸ್ತ್ರ ಐಲೆಟ್ ಆಗಿರುತ್ತೆ ಅಷ್ಟೇ
    ಹಿಂದುತ್ವದ ಹೆಸರಿನಲ್ಲಿ ಮೋಹನ್ ಭಗವತ್ ರವರ ಕುಚೇಲನ್ ಆಗಿ ಕಾರ್ಯನಿರ್ವಹಿಸುತ್ತಿರುವ ನರೇಂದ್ರ ಮೋದಿಯವರು
    ಉದ್ಯೋಗ ಸೃಷ್ಟಿಸಲು ತುಮಕೂರು ಒಂದರ ಕಥೆಯಲ್ಲ ಇಡೀ ದೇಶವೇ ತಲೆಕೆಳಗಾಗುವ ಗತಿ ಬಂದಿದೆ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...