Homeಕರ್ನಾಟಕತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ - ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

- Advertisement -
- Advertisement -

ಜನವರಿ 2 ಅಂದರೆ ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಬರುತ್ತಿದ್ದಾರೆ. ಎಲ್ಲರಲ್ಲಿಯೂ ಹರ್ಷ. ಆದರೆ ಹಿಂದಿನ ಕಥೆ ಸ್ವಲ್ಪ ನೋಡಿದರೆ ಬೇಸರವಾಗುತ್ತದೆ. ಏನದು ನೋಡೋಣ ಬನ್ನಿ.

ತುಮಕೂರು ನಗರದ ಹೊರವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ದೇಶದ ಮೊದಲ ಆಹಾರ ಸಂಸ್ಕರಣಾ ಘಟಕ ಆರಂಭವಾಗಿ ಆರು ವರ್ಷ ಕಳೆದಿದೆ. ಈವರೆಗೆ ಈ ಘಟಕದಿಂದ ಹೇಳಿಕೊಳ್ಳುವಂಥ ಕೆಲಸಗಳೇ ಆಗಿಲ್ಲ. ಪ್ರಧಾನಿಯ ಭರವಸೆಯಂತೆ ಉದ್ಯೋಗ ಸೃಷ್ಟಿಯಾಗಿಲ್ಲ. ರೈತರಿಗೆ ಯಾವುದೇ ಪ್ರಯೋಜನ ಕೂಡ ಆಗಿಲ್ಲ. ಲೆಕ್ಕಕ್ಕೆ ಮಾತ್ರ ಆಹಾರ ಸಂಸ್ಕರಣ ಘಟಕ, ಸಾಧನೆ ಮಾತ್ರ ಶೂನ್ಯ. ರೈತರ ನೆರವಿಗೆ ಆಸರೆಗೆ ಬರಬೇಕಾಗಿದ್ದ ಈ ಘಟಕ ಇದ್ದೂ ಇಲ್ಲದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣ ಪುಸ್ತಕದ ಬದನೆಕಾಯಿ ಎಂಬಂತಾಗಿದೆ.

ಅದು 2014ನೇ ವರ್ಷ. ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಹಿಡಿದರು. ಪ್ರಧಾನಿಯಾದ ಹೊಸದು, ಹುಮ್ಮಸ್ಸು ತುಳುಕುತ್ತಿತ್ತು. ಅದೇ ಹೊತ್ತಲ್ಲಿ  ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನಿ ಮೋದಿ ದಕ್ಷಿಣ ಯಾತ್ರೆ ಕೈಗೊಂಡರು. ತುಮಕೂರಿಗೆ ಭೇಟಿ ನೀಡಿ ವಸಂತನರಸಾಪರುದಲ್ಲಿ ಆಹಾರ ಸಂಸ್ಕರಣಾ ಘಟಕ ಉದ್ಘಾಟನೆ ಮಾಡಿದರು. ಆಗ 10 ಸಾವಿರ ನೇರ ಉದ್ಯೋಗ, ಸುಮಾರು 25 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತವೆ. 12 ಜಿಲ್ಲೆಗಳ ರೈತರಿಗೆ ಇದರ ಉಪಯೋಗವಾಗುತ್ತದೆ. ರೈತರು ಬೆಳೆದ ತರಕಾರಿ, ಹಣ್ಣು ಮೊದಲಾದ ವಸ್ತುಗಳನ್ನು ಶೀತಲ ಘಟಕದಲ್ಲಿ ಕೆಡದಂತೆ ಸಂಗ್ರಹಿಸಿಡಬಹುದು ಎಂದು ಭವರಸೆ ನೀಡಿ ಹೋದರು.

ಪ್ರಧಾನಿ ಭರವಸೆ ನೀಡಿ ಆರು ವರ್ಷಗಳು ಉರುಳಿದ ಮೇಲೆ ಅಲ್ಲಿ ಉದ್ಯೋಗವೂ ಸೃಷ್ಟಿಯಾಗಲಿಲ್ಲ. ರೈತರಿಗೂ ಅನುಕೂಲವಾಗಲಿಲ್ಲ. ಕೋಟ್ಯಂತರ ರೂಪಾಯಿ ಮಾತ್ರ ನಷ್ಟವಾಯಿತು. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಘಟಕದಿಂದ ಪ್ರಧಾನಿ ಹೇಳಿದಷ್ಟು ನೇರ- ಪರೋಕ್ಷ ಉದ್ಯೋಗ ಸೃಷ್ಟಿಯಾಗಲೇ ಇಲ್ಲ. ಕೇವಲ 200 ಮಂದಿ ಕಾಯಂ ನೌಕರರು, 800 ಮಂದಿ ಗುತ್ತಿಗೆ ನೌಕರರು ಈಗ ದುಡಿಯುತ್ತಿದ್ದಾರೆ.  ಕಾಯಂ ಹುದ್ದೆಗಳಿಗೆ ಉತ್ತರ ಭಾರತದವರು ನೇಮಕವಾಗಿದ್ದರೆ, ಕಸ ಹೊಡೆಯುವುದು, ಕಸ ಹೊತ್ತುಹಾಕುವುದು ಮೊದಲಾದ ಸಣ್ಣಪುಟ್ಟ ಕೆಲಸಗಳಿಗೆ ಸ್ಥಳೀಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದಾರೆ.  ಉತ್ತರ ಭಾರತದ ಕಾಯಂ ನೌಕರರಿಗೆ ಹೆಚ್ಚು ವೇತನ, ಸ್ಥಳೀಯರಿಗೆ 7-8 ಸಾವಿರ ರೂಪಾಯಿ ನೀಡಿ ವೇತನ ಮತ್ತು ಕೆಲಸ ನೀಡುವಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಸ್ಥಳೀಯರಿಂದ ಬಿಟ್ಟಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಕಾರ್ಮಿಕರು ದೂರಿದ್ದಾರೆ.

ಕೃಷಿ ಸಲಕರಣೆಗಳ ಅಬಿವೃದ್ದಿ, ಸಂಸ್ಕರಣೆಯ ಮೌಲ್ಯವರ್ಧನೆ, ಸುಗ್ಗಿಯ ನಂತರ ಸೌಲಭ್ಯ, ತಾಂತ್ರಿಕ ಸಹಾಯ ನೀಡುವುದು ಘಟಕ ಉದ್ದೇಶವೆಂದು ಇಂಡಿಯ ಫುಡ್ ಪಾರ್ಕ್ ಡಾಟ್ ಕೊ ಡಾಟ್ ಇನ್ ನಲ್ಲಿ ಹೇಳಿದ್ದು ಇದಕ್ಕೆ ಪೂರಕವಾಗಿ ಕೆಲಸ ಮಾಡದೇ ಇರುವುದು ಕಂಡು ಬಂದಿದೆ. ಅಷ್ಟೇ ಅಲ್ಲ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಸುಸ್ಥಿರ ಕೃಷಿಮೌಲ್ಯ ಸಂಪರ್ಕ ಜಾಲವೂ ಸೃಷ್ಟಿಸುವಲ್ಲಿ ಈ ಘಟಕ ವಿಫಲವಾಗಿದೆ. ಉನ್ನತಗುಣಮಟ್ಟದ ಗ್ರಾಮೀಣ ಸಂಸ್ಕರಣಾ ಸೌಲಭ್ಯವನ್ನು ಕಲ್ಪಿಸುವುದು ಕೇವಲ ಕನಸಿನ ಮಾತಾಗಿದೆ. ಇದುವರೆಗೆ ರೈತರಿಗೆ ಬೇಗ ಹಾಳಾಗುವಂತಹ ಟಮೋಟೋ, ಈರೇಕಾಯಿ, ಉರುಳಿಕಾಯಿ, ಬದನೆ ಸೇರಿದಂತೆ ಯಾವುದೇ ತರಕಾರಿಗಳನ್ನು ಸಂಸ್ಕರಣೆ ಮಾಡುವ ಗೋಜಿಗೇ ಹೋಗಿಲ್ಲ. ಉತ್ಪಾದನೆ ಮತ್ತು ಸಂಸ್ಕರಣೆ ಸಾಮರ್ಥ್ಯ ಹೆಚ್ಚಿಸುವಂತಹ ಪ್ರಯತ್ನಗಳನ್ನು ಆಹಾರ ಸಂಸ್ಕರಣ ಘಟಕದಲ್ಲಿ ಮಾಡಿಲ್ಲ.

ಪ್ರಧಾನಿ ನರೇಂದ್ರ ಮೋದಿ ಈ ಘಟಕದಿಂದ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಬೆಂಗಳೂರು ನಗರ ಹೀಗೆ ಸುಮಾರು 12 ಜಿಲ್ಲೆಯ ರೈತರು ತಾವು ಬೆಳೆದ ತರಕಾರಿ ಮತ್ತು ಹಣ್ಣಿನ ಬೆಳೆಗಳನ್ನು ಈ ಘಟಕದಲ್ಲಿ ಸಂರಕ್ಷಣೆ ಮಾಡಬಹುದು ಎಂದು ಹೇಳಿದ್ದರು. ಈ ಕಾರ್ಯವೂ ಆಗಿಲ್ಲ. ಇದು ಲಾಭವಾಗಿದ್ದು ಮಾತ್ರ ಉತ್ತರ ಭಾರತದ ಮಾರ್ವಾಡಿ ಮಾಲಿಕನಿಗೆ. ಆಹಾರ ಸಂಸ್ಕರಣ ಮುಚ್ಚಿಹೋಗುವ ಹಂತದಲ್ಲಿದ್ದು, ಮಾಲಿಕ ಆ ಘಟಕವನ್ನೇ ಬೇರೆಯವರಿಗೆ ಲಾಭಕ್ಕೆ ಮಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂದರೆ ಘಟಕ ಉದ್ದೇಶವೇ ಹಾಳಾಗಿದ್ದು ಹಣವೂ ಪೋಲಾಗಿದೆ. ಇದನ್ನು ಕೇಳುವವರು ಯಾರೂ ಇಲ್ಲ.

ಎಚ್‌ಎಎಲ್‌ ಕಥೆ ಭಿನ್ನವಲ್ಲ!

2016 ಮಾರ್ಚ್ 8 ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿ ಹಿಂದೂಸ್ತಾನ ಏರೋನಾಟಿಕ್ ಲಿಮಿಟೆಡ್ ಸಂಸ್ಥೆಯಡಿ ಲಘು ಯುದ್ದ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. 2018ರ ಡಿಸೆಂಬರ್ ಅಂತ್ಯಕ್ಕೆ ಮೊದಲ ಹೆಲಿಕಾಪ್ಟರ್ ಹಾರಲಿದೆ ಎಂದು ಅಂದಿನ ವೇದಿಕೆಯಲ್ಲಿ ಭಾಷಣ ಮಾಡಿ ಹೇಳಿದರು. ಪ್ರಧಾನಿ ಈ ಮಾತುಗಳನ್ನಾಡಿ ಮೂರು ವರ್ಷ ಕಳೆದರೂ ಹೆಲಿಕಾಪ್ಟರ್ ಹಾರಲೇ ಇಲ್ಲ. ಪ್ರಧಾನಿ ಮೋದಿ ಅವರ ಎರಡನೇ ಭರವಸೆಯೂ ಸುಳ್ಳಾಗಿದೆ.

ಎಚ್.ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆಗೆ ಸಣ್ಣ ಮತ್ತು ಅತಿಸಣ್ಣ ರೈತರಿಂದ ಅಕ್ಷರಶಃ ಭೂಮಿಯನ್ನು ಕಸಿದುಕೊಳ್ಳಲಾಯಿತು. ಹಲವು ವರ್ಷಗಳಿಂದ ಅದೇ ಭೂಮಿಯನ್ನು ನೆಚ್ಚಿಕೊಂಡು ಬರುತ್ತಿದ್ದ ರೈತರಿಗೆ ಭೂಮಿಯೇ ಇಲ್ಲವಾಯಿತು. ಬಗರ್ ಹುಕುಂ ಸಾಗುವಳಿದಾರರನ್ನು ಬೆದರಿಸಿ ಭೂಮಿ ಕಿತ್ತುಕೊಂಡರು. ಸುಮಾರು 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದ 70 ಕುಟುಂಬಗಳಿಗೆ ಭೂಮಿಯೂ ಇಲ್ಲ, ಪರಿಹಾರವನ್ನೂ ನೀಡಿಲ್ಲ. ಗೋಮಾಳದಲ್ಲಿ ಉಳುಮೆ ಮಾಡುವ ಜೊತೆಗೆ ಅಲ್ಲಿಯೆ ಗುಡಿಸಲು ನಿರ್ಮಿಸಿ ವಾಸ ಮಾಡುತ್ತಿದ್ದ ಕುಟುಂಬಗಳನ್ನು ಒಕ್ಕಲೆಬ್ಬಿಸಿ ಬೆದರಿಸಿ ಬೇರೆ ಸ್ಥಳಾಂತರ ಮಾಡುವಂತೆ ಮಾಡಲಾಗಿದೆ.

ಕೆಲವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ವಿಚಾರಣೆಯ ಹಂತದಲ್ಲಿವೆ. ಇದರ ನಡುವೆಯೂ 615 ಎಕರೆ ಭೂಮಿಯಲ್ಲಿ ಹೆಲಿಕಾಪ್ಟರ್ ತಯಾರಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಆದರೆ ರಕ್ಷಣಾ ಇಲಾಖೆಯಿಂದ ಬೇಡಿಕೆ ಪತ್ರ ಬಂದಿಲ್ಲ. ಹೀಗಾಗಿ ಹೆಲಿಕಾಪ್ಟರ್ ತಯಾರಿಸುವುದನ್ನು ಇಂದಿಗೂ ಆರಂಭಿಸಿಲ್ಲ. 2018ರ ಡಿಸೆಂಬರ್ ಅಂತ್ಯದೊಳಗೆ ಹೆಲಿಕಾಪ್ಟರ್ ಹಾರುತ್ತದೆ ಎಂಬ ಮೋದಿ ಮಾತುಗಳು ಹುಸಿಯಾಗಿವೆ. ಎರಡು ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರೂ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ತಯಾರಿಕೆಗೆ ಗ್ರೀನ್ ಸಿಗ್ನಲ್ ನೀಡದೇ ಇರುವುದು ಏಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಎಚ್.ಎಎಲ್  ಹೆಲಿಕಾಪ್ಟರ್ ಘಟಕಕ್ಕೆ ಶಂಕುಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸುವ ಹಂತ ತಲುಪಿದ್ದರೂ ಅಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಪ್ರಧಾನಿ ಹೇಳಿದಂತೆ ನಾಲ್ಕು ಸಾವಿರ ಉದ್ಯೋಗವೂ ಸೃಷ್ಟಿಯಾಗಿಲ್ಲ. ಹಾಗಾಗಿ ಪ್ರಧಾನಿ ಉದ್ಘಾಟಿಸಿದ ಆಹಾರ ಸಂಸ್ಕರಣ ಘಟಕದಲ್ಲಿ ಉದ್ಯೋಗವೂ ಇಲ್ಲ. ಎಚ್ ಎಎಲ್ ಹೆಲಿಕಾಪ್ಟರ್ ಗಳು ಹಾರಲೇ ಇಲ್ಲ ಎಂದು ಜನ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ದೇಶಕ್ಕೆ ನರೇಂದ್ರ ಮೋದಿ ಮಾರಕವಾಗಿ ಇದ್ದಾರೆ ಮೋದಿಯ ಭಾಷಣ ಮಾಸ್ತ್ರ ಐಲೆಟ್ ಆಗಿರುತ್ತೆ ಅಷ್ಟೇ
    ಹಿಂದುತ್ವದ ಹೆಸರಿನಲ್ಲಿ ಮೋಹನ್ ಭಗವತ್ ರವರ ಕುಚೇಲನ್ ಆಗಿ ಕಾರ್ಯನಿರ್ವಹಿಸುತ್ತಿರುವ ನರೇಂದ್ರ ಮೋದಿಯವರು
    ಉದ್ಯೋಗ ಸೃಷ್ಟಿಸಲು ತುಮಕೂರು ಒಂದರ ಕಥೆಯಲ್ಲ ಇಡೀ ದೇಶವೇ ತಲೆಕೆಳಗಾಗುವ ಗತಿ ಬಂದಿದೆ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...