Homeಕರ್ನಾಟಕತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ - ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

- Advertisement -
- Advertisement -

ಜನವರಿ 2 ಅಂದರೆ ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಬರುತ್ತಿದ್ದಾರೆ. ಎಲ್ಲರಲ್ಲಿಯೂ ಹರ್ಷ. ಆದರೆ ಹಿಂದಿನ ಕಥೆ ಸ್ವಲ್ಪ ನೋಡಿದರೆ ಬೇಸರವಾಗುತ್ತದೆ. ಏನದು ನೋಡೋಣ ಬನ್ನಿ.

ತುಮಕೂರು ನಗರದ ಹೊರವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ದೇಶದ ಮೊದಲ ಆಹಾರ ಸಂಸ್ಕರಣಾ ಘಟಕ ಆರಂಭವಾಗಿ ಆರು ವರ್ಷ ಕಳೆದಿದೆ. ಈವರೆಗೆ ಈ ಘಟಕದಿಂದ ಹೇಳಿಕೊಳ್ಳುವಂಥ ಕೆಲಸಗಳೇ ಆಗಿಲ್ಲ. ಪ್ರಧಾನಿಯ ಭರವಸೆಯಂತೆ ಉದ್ಯೋಗ ಸೃಷ್ಟಿಯಾಗಿಲ್ಲ. ರೈತರಿಗೆ ಯಾವುದೇ ಪ್ರಯೋಜನ ಕೂಡ ಆಗಿಲ್ಲ. ಲೆಕ್ಕಕ್ಕೆ ಮಾತ್ರ ಆಹಾರ ಸಂಸ್ಕರಣ ಘಟಕ, ಸಾಧನೆ ಮಾತ್ರ ಶೂನ್ಯ. ರೈತರ ನೆರವಿಗೆ ಆಸರೆಗೆ ಬರಬೇಕಾಗಿದ್ದ ಈ ಘಟಕ ಇದ್ದೂ ಇಲ್ಲದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣ ಪುಸ್ತಕದ ಬದನೆಕಾಯಿ ಎಂಬಂತಾಗಿದೆ.

ಅದು 2014ನೇ ವರ್ಷ. ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಹಿಡಿದರು. ಪ್ರಧಾನಿಯಾದ ಹೊಸದು, ಹುಮ್ಮಸ್ಸು ತುಳುಕುತ್ತಿತ್ತು. ಅದೇ ಹೊತ್ತಲ್ಲಿ  ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನಿ ಮೋದಿ ದಕ್ಷಿಣ ಯಾತ್ರೆ ಕೈಗೊಂಡರು. ತುಮಕೂರಿಗೆ ಭೇಟಿ ನೀಡಿ ವಸಂತನರಸಾಪರುದಲ್ಲಿ ಆಹಾರ ಸಂಸ್ಕರಣಾ ಘಟಕ ಉದ್ಘಾಟನೆ ಮಾಡಿದರು. ಆಗ 10 ಸಾವಿರ ನೇರ ಉದ್ಯೋಗ, ಸುಮಾರು 25 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತವೆ. 12 ಜಿಲ್ಲೆಗಳ ರೈತರಿಗೆ ಇದರ ಉಪಯೋಗವಾಗುತ್ತದೆ. ರೈತರು ಬೆಳೆದ ತರಕಾರಿ, ಹಣ್ಣು ಮೊದಲಾದ ವಸ್ತುಗಳನ್ನು ಶೀತಲ ಘಟಕದಲ್ಲಿ ಕೆಡದಂತೆ ಸಂಗ್ರಹಿಸಿಡಬಹುದು ಎಂದು ಭವರಸೆ ನೀಡಿ ಹೋದರು.

ಪ್ರಧಾನಿ ಭರವಸೆ ನೀಡಿ ಆರು ವರ್ಷಗಳು ಉರುಳಿದ ಮೇಲೆ ಅಲ್ಲಿ ಉದ್ಯೋಗವೂ ಸೃಷ್ಟಿಯಾಗಲಿಲ್ಲ. ರೈತರಿಗೂ ಅನುಕೂಲವಾಗಲಿಲ್ಲ. ಕೋಟ್ಯಂತರ ರೂಪಾಯಿ ಮಾತ್ರ ನಷ್ಟವಾಯಿತು. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಘಟಕದಿಂದ ಪ್ರಧಾನಿ ಹೇಳಿದಷ್ಟು ನೇರ- ಪರೋಕ್ಷ ಉದ್ಯೋಗ ಸೃಷ್ಟಿಯಾಗಲೇ ಇಲ್ಲ. ಕೇವಲ 200 ಮಂದಿ ಕಾಯಂ ನೌಕರರು, 800 ಮಂದಿ ಗುತ್ತಿಗೆ ನೌಕರರು ಈಗ ದುಡಿಯುತ್ತಿದ್ದಾರೆ.  ಕಾಯಂ ಹುದ್ದೆಗಳಿಗೆ ಉತ್ತರ ಭಾರತದವರು ನೇಮಕವಾಗಿದ್ದರೆ, ಕಸ ಹೊಡೆಯುವುದು, ಕಸ ಹೊತ್ತುಹಾಕುವುದು ಮೊದಲಾದ ಸಣ್ಣಪುಟ್ಟ ಕೆಲಸಗಳಿಗೆ ಸ್ಥಳೀಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದಾರೆ.  ಉತ್ತರ ಭಾರತದ ಕಾಯಂ ನೌಕರರಿಗೆ ಹೆಚ್ಚು ವೇತನ, ಸ್ಥಳೀಯರಿಗೆ 7-8 ಸಾವಿರ ರೂಪಾಯಿ ನೀಡಿ ವೇತನ ಮತ್ತು ಕೆಲಸ ನೀಡುವಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಸ್ಥಳೀಯರಿಂದ ಬಿಟ್ಟಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಕಾರ್ಮಿಕರು ದೂರಿದ್ದಾರೆ.

ಕೃಷಿ ಸಲಕರಣೆಗಳ ಅಬಿವೃದ್ದಿ, ಸಂಸ್ಕರಣೆಯ ಮೌಲ್ಯವರ್ಧನೆ, ಸುಗ್ಗಿಯ ನಂತರ ಸೌಲಭ್ಯ, ತಾಂತ್ರಿಕ ಸಹಾಯ ನೀಡುವುದು ಘಟಕ ಉದ್ದೇಶವೆಂದು ಇಂಡಿಯ ಫುಡ್ ಪಾರ್ಕ್ ಡಾಟ್ ಕೊ ಡಾಟ್ ಇನ್ ನಲ್ಲಿ ಹೇಳಿದ್ದು ಇದಕ್ಕೆ ಪೂರಕವಾಗಿ ಕೆಲಸ ಮಾಡದೇ ಇರುವುದು ಕಂಡು ಬಂದಿದೆ. ಅಷ್ಟೇ ಅಲ್ಲ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಸುಸ್ಥಿರ ಕೃಷಿಮೌಲ್ಯ ಸಂಪರ್ಕ ಜಾಲವೂ ಸೃಷ್ಟಿಸುವಲ್ಲಿ ಈ ಘಟಕ ವಿಫಲವಾಗಿದೆ. ಉನ್ನತಗುಣಮಟ್ಟದ ಗ್ರಾಮೀಣ ಸಂಸ್ಕರಣಾ ಸೌಲಭ್ಯವನ್ನು ಕಲ್ಪಿಸುವುದು ಕೇವಲ ಕನಸಿನ ಮಾತಾಗಿದೆ. ಇದುವರೆಗೆ ರೈತರಿಗೆ ಬೇಗ ಹಾಳಾಗುವಂತಹ ಟಮೋಟೋ, ಈರೇಕಾಯಿ, ಉರುಳಿಕಾಯಿ, ಬದನೆ ಸೇರಿದಂತೆ ಯಾವುದೇ ತರಕಾರಿಗಳನ್ನು ಸಂಸ್ಕರಣೆ ಮಾಡುವ ಗೋಜಿಗೇ ಹೋಗಿಲ್ಲ. ಉತ್ಪಾದನೆ ಮತ್ತು ಸಂಸ್ಕರಣೆ ಸಾಮರ್ಥ್ಯ ಹೆಚ್ಚಿಸುವಂತಹ ಪ್ರಯತ್ನಗಳನ್ನು ಆಹಾರ ಸಂಸ್ಕರಣ ಘಟಕದಲ್ಲಿ ಮಾಡಿಲ್ಲ.

ಪ್ರಧಾನಿ ನರೇಂದ್ರ ಮೋದಿ ಈ ಘಟಕದಿಂದ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಬೆಂಗಳೂರು ನಗರ ಹೀಗೆ ಸುಮಾರು 12 ಜಿಲ್ಲೆಯ ರೈತರು ತಾವು ಬೆಳೆದ ತರಕಾರಿ ಮತ್ತು ಹಣ್ಣಿನ ಬೆಳೆಗಳನ್ನು ಈ ಘಟಕದಲ್ಲಿ ಸಂರಕ್ಷಣೆ ಮಾಡಬಹುದು ಎಂದು ಹೇಳಿದ್ದರು. ಈ ಕಾರ್ಯವೂ ಆಗಿಲ್ಲ. ಇದು ಲಾಭವಾಗಿದ್ದು ಮಾತ್ರ ಉತ್ತರ ಭಾರತದ ಮಾರ್ವಾಡಿ ಮಾಲಿಕನಿಗೆ. ಆಹಾರ ಸಂಸ್ಕರಣ ಮುಚ್ಚಿಹೋಗುವ ಹಂತದಲ್ಲಿದ್ದು, ಮಾಲಿಕ ಆ ಘಟಕವನ್ನೇ ಬೇರೆಯವರಿಗೆ ಲಾಭಕ್ಕೆ ಮಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂದರೆ ಘಟಕ ಉದ್ದೇಶವೇ ಹಾಳಾಗಿದ್ದು ಹಣವೂ ಪೋಲಾಗಿದೆ. ಇದನ್ನು ಕೇಳುವವರು ಯಾರೂ ಇಲ್ಲ.

ಎಚ್‌ಎಎಲ್‌ ಕಥೆ ಭಿನ್ನವಲ್ಲ!

2016 ಮಾರ್ಚ್ 8 ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿ ಹಿಂದೂಸ್ತಾನ ಏರೋನಾಟಿಕ್ ಲಿಮಿಟೆಡ್ ಸಂಸ್ಥೆಯಡಿ ಲಘು ಯುದ್ದ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. 2018ರ ಡಿಸೆಂಬರ್ ಅಂತ್ಯಕ್ಕೆ ಮೊದಲ ಹೆಲಿಕಾಪ್ಟರ್ ಹಾರಲಿದೆ ಎಂದು ಅಂದಿನ ವೇದಿಕೆಯಲ್ಲಿ ಭಾಷಣ ಮಾಡಿ ಹೇಳಿದರು. ಪ್ರಧಾನಿ ಈ ಮಾತುಗಳನ್ನಾಡಿ ಮೂರು ವರ್ಷ ಕಳೆದರೂ ಹೆಲಿಕಾಪ್ಟರ್ ಹಾರಲೇ ಇಲ್ಲ. ಪ್ರಧಾನಿ ಮೋದಿ ಅವರ ಎರಡನೇ ಭರವಸೆಯೂ ಸುಳ್ಳಾಗಿದೆ.

ಎಚ್.ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆಗೆ ಸಣ್ಣ ಮತ್ತು ಅತಿಸಣ್ಣ ರೈತರಿಂದ ಅಕ್ಷರಶಃ ಭೂಮಿಯನ್ನು ಕಸಿದುಕೊಳ್ಳಲಾಯಿತು. ಹಲವು ವರ್ಷಗಳಿಂದ ಅದೇ ಭೂಮಿಯನ್ನು ನೆಚ್ಚಿಕೊಂಡು ಬರುತ್ತಿದ್ದ ರೈತರಿಗೆ ಭೂಮಿಯೇ ಇಲ್ಲವಾಯಿತು. ಬಗರ್ ಹುಕುಂ ಸಾಗುವಳಿದಾರರನ್ನು ಬೆದರಿಸಿ ಭೂಮಿ ಕಿತ್ತುಕೊಂಡರು. ಸುಮಾರು 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದ 70 ಕುಟುಂಬಗಳಿಗೆ ಭೂಮಿಯೂ ಇಲ್ಲ, ಪರಿಹಾರವನ್ನೂ ನೀಡಿಲ್ಲ. ಗೋಮಾಳದಲ್ಲಿ ಉಳುಮೆ ಮಾಡುವ ಜೊತೆಗೆ ಅಲ್ಲಿಯೆ ಗುಡಿಸಲು ನಿರ್ಮಿಸಿ ವಾಸ ಮಾಡುತ್ತಿದ್ದ ಕುಟುಂಬಗಳನ್ನು ಒಕ್ಕಲೆಬ್ಬಿಸಿ ಬೆದರಿಸಿ ಬೇರೆ ಸ್ಥಳಾಂತರ ಮಾಡುವಂತೆ ಮಾಡಲಾಗಿದೆ.

ಕೆಲವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ವಿಚಾರಣೆಯ ಹಂತದಲ್ಲಿವೆ. ಇದರ ನಡುವೆಯೂ 615 ಎಕರೆ ಭೂಮಿಯಲ್ಲಿ ಹೆಲಿಕಾಪ್ಟರ್ ತಯಾರಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಆದರೆ ರಕ್ಷಣಾ ಇಲಾಖೆಯಿಂದ ಬೇಡಿಕೆ ಪತ್ರ ಬಂದಿಲ್ಲ. ಹೀಗಾಗಿ ಹೆಲಿಕಾಪ್ಟರ್ ತಯಾರಿಸುವುದನ್ನು ಇಂದಿಗೂ ಆರಂಭಿಸಿಲ್ಲ. 2018ರ ಡಿಸೆಂಬರ್ ಅಂತ್ಯದೊಳಗೆ ಹೆಲಿಕಾಪ್ಟರ್ ಹಾರುತ್ತದೆ ಎಂಬ ಮೋದಿ ಮಾತುಗಳು ಹುಸಿಯಾಗಿವೆ. ಎರಡು ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರೂ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ತಯಾರಿಕೆಗೆ ಗ್ರೀನ್ ಸಿಗ್ನಲ್ ನೀಡದೇ ಇರುವುದು ಏಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಎಚ್.ಎಎಲ್  ಹೆಲಿಕಾಪ್ಟರ್ ಘಟಕಕ್ಕೆ ಶಂಕುಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸುವ ಹಂತ ತಲುಪಿದ್ದರೂ ಅಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಪ್ರಧಾನಿ ಹೇಳಿದಂತೆ ನಾಲ್ಕು ಸಾವಿರ ಉದ್ಯೋಗವೂ ಸೃಷ್ಟಿಯಾಗಿಲ್ಲ. ಹಾಗಾಗಿ ಪ್ರಧಾನಿ ಉದ್ಘಾಟಿಸಿದ ಆಹಾರ ಸಂಸ್ಕರಣ ಘಟಕದಲ್ಲಿ ಉದ್ಯೋಗವೂ ಇಲ್ಲ. ಎಚ್ ಎಎಲ್ ಹೆಲಿಕಾಪ್ಟರ್ ಗಳು ಹಾರಲೇ ಇಲ್ಲ ಎಂದು ಜನ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ದೇಶಕ್ಕೆ ನರೇಂದ್ರ ಮೋದಿ ಮಾರಕವಾಗಿ ಇದ್ದಾರೆ ಮೋದಿಯ ಭಾಷಣ ಮಾಸ್ತ್ರ ಐಲೆಟ್ ಆಗಿರುತ್ತೆ ಅಷ್ಟೇ
    ಹಿಂದುತ್ವದ ಹೆಸರಿನಲ್ಲಿ ಮೋಹನ್ ಭಗವತ್ ರವರ ಕುಚೇಲನ್ ಆಗಿ ಕಾರ್ಯನಿರ್ವಹಿಸುತ್ತಿರುವ ನರೇಂದ್ರ ಮೋದಿಯವರು
    ಉದ್ಯೋಗ ಸೃಷ್ಟಿಸಲು ತುಮಕೂರು ಒಂದರ ಕಥೆಯಲ್ಲ ಇಡೀ ದೇಶವೇ ತಲೆಕೆಳಗಾಗುವ ಗತಿ ಬಂದಿದೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...