Homeಕರ್ನಾಟಕತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ - ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

- Advertisement -
- Advertisement -

ಜನವರಿ 2 ಅಂದರೆ ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಬರುತ್ತಿದ್ದಾರೆ. ಎಲ್ಲರಲ್ಲಿಯೂ ಹರ್ಷ. ಆದರೆ ಹಿಂದಿನ ಕಥೆ ಸ್ವಲ್ಪ ನೋಡಿದರೆ ಬೇಸರವಾಗುತ್ತದೆ. ಏನದು ನೋಡೋಣ ಬನ್ನಿ.

ತುಮಕೂರು ನಗರದ ಹೊರವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ದೇಶದ ಮೊದಲ ಆಹಾರ ಸಂಸ್ಕರಣಾ ಘಟಕ ಆರಂಭವಾಗಿ ಆರು ವರ್ಷ ಕಳೆದಿದೆ. ಈವರೆಗೆ ಈ ಘಟಕದಿಂದ ಹೇಳಿಕೊಳ್ಳುವಂಥ ಕೆಲಸಗಳೇ ಆಗಿಲ್ಲ. ಪ್ರಧಾನಿಯ ಭರವಸೆಯಂತೆ ಉದ್ಯೋಗ ಸೃಷ್ಟಿಯಾಗಿಲ್ಲ. ರೈತರಿಗೆ ಯಾವುದೇ ಪ್ರಯೋಜನ ಕೂಡ ಆಗಿಲ್ಲ. ಲೆಕ್ಕಕ್ಕೆ ಮಾತ್ರ ಆಹಾರ ಸಂಸ್ಕರಣ ಘಟಕ, ಸಾಧನೆ ಮಾತ್ರ ಶೂನ್ಯ. ರೈತರ ನೆರವಿಗೆ ಆಸರೆಗೆ ಬರಬೇಕಾಗಿದ್ದ ಈ ಘಟಕ ಇದ್ದೂ ಇಲ್ಲದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣ ಪುಸ್ತಕದ ಬದನೆಕಾಯಿ ಎಂಬಂತಾಗಿದೆ.

ಅದು 2014ನೇ ವರ್ಷ. ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಹಿಡಿದರು. ಪ್ರಧಾನಿಯಾದ ಹೊಸದು, ಹುಮ್ಮಸ್ಸು ತುಳುಕುತ್ತಿತ್ತು. ಅದೇ ಹೊತ್ತಲ್ಲಿ  ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನಿ ಮೋದಿ ದಕ್ಷಿಣ ಯಾತ್ರೆ ಕೈಗೊಂಡರು. ತುಮಕೂರಿಗೆ ಭೇಟಿ ನೀಡಿ ವಸಂತನರಸಾಪರುದಲ್ಲಿ ಆಹಾರ ಸಂಸ್ಕರಣಾ ಘಟಕ ಉದ್ಘಾಟನೆ ಮಾಡಿದರು. ಆಗ 10 ಸಾವಿರ ನೇರ ಉದ್ಯೋಗ, ಸುಮಾರು 25 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತವೆ. 12 ಜಿಲ್ಲೆಗಳ ರೈತರಿಗೆ ಇದರ ಉಪಯೋಗವಾಗುತ್ತದೆ. ರೈತರು ಬೆಳೆದ ತರಕಾರಿ, ಹಣ್ಣು ಮೊದಲಾದ ವಸ್ತುಗಳನ್ನು ಶೀತಲ ಘಟಕದಲ್ಲಿ ಕೆಡದಂತೆ ಸಂಗ್ರಹಿಸಿಡಬಹುದು ಎಂದು ಭವರಸೆ ನೀಡಿ ಹೋದರು.

ಪ್ರಧಾನಿ ಭರವಸೆ ನೀಡಿ ಆರು ವರ್ಷಗಳು ಉರುಳಿದ ಮೇಲೆ ಅಲ್ಲಿ ಉದ್ಯೋಗವೂ ಸೃಷ್ಟಿಯಾಗಲಿಲ್ಲ. ರೈತರಿಗೂ ಅನುಕೂಲವಾಗಲಿಲ್ಲ. ಕೋಟ್ಯಂತರ ರೂಪಾಯಿ ಮಾತ್ರ ನಷ್ಟವಾಯಿತು. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಘಟಕದಿಂದ ಪ್ರಧಾನಿ ಹೇಳಿದಷ್ಟು ನೇರ- ಪರೋಕ್ಷ ಉದ್ಯೋಗ ಸೃಷ್ಟಿಯಾಗಲೇ ಇಲ್ಲ. ಕೇವಲ 200 ಮಂದಿ ಕಾಯಂ ನೌಕರರು, 800 ಮಂದಿ ಗುತ್ತಿಗೆ ನೌಕರರು ಈಗ ದುಡಿಯುತ್ತಿದ್ದಾರೆ.  ಕಾಯಂ ಹುದ್ದೆಗಳಿಗೆ ಉತ್ತರ ಭಾರತದವರು ನೇಮಕವಾಗಿದ್ದರೆ, ಕಸ ಹೊಡೆಯುವುದು, ಕಸ ಹೊತ್ತುಹಾಕುವುದು ಮೊದಲಾದ ಸಣ್ಣಪುಟ್ಟ ಕೆಲಸಗಳಿಗೆ ಸ್ಥಳೀಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದಾರೆ.  ಉತ್ತರ ಭಾರತದ ಕಾಯಂ ನೌಕರರಿಗೆ ಹೆಚ್ಚು ವೇತನ, ಸ್ಥಳೀಯರಿಗೆ 7-8 ಸಾವಿರ ರೂಪಾಯಿ ನೀಡಿ ವೇತನ ಮತ್ತು ಕೆಲಸ ನೀಡುವಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಸ್ಥಳೀಯರಿಂದ ಬಿಟ್ಟಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಕಾರ್ಮಿಕರು ದೂರಿದ್ದಾರೆ.

ಕೃಷಿ ಸಲಕರಣೆಗಳ ಅಬಿವೃದ್ದಿ, ಸಂಸ್ಕರಣೆಯ ಮೌಲ್ಯವರ್ಧನೆ, ಸುಗ್ಗಿಯ ನಂತರ ಸೌಲಭ್ಯ, ತಾಂತ್ರಿಕ ಸಹಾಯ ನೀಡುವುದು ಘಟಕ ಉದ್ದೇಶವೆಂದು ಇಂಡಿಯ ಫುಡ್ ಪಾರ್ಕ್ ಡಾಟ್ ಕೊ ಡಾಟ್ ಇನ್ ನಲ್ಲಿ ಹೇಳಿದ್ದು ಇದಕ್ಕೆ ಪೂರಕವಾಗಿ ಕೆಲಸ ಮಾಡದೇ ಇರುವುದು ಕಂಡು ಬಂದಿದೆ. ಅಷ್ಟೇ ಅಲ್ಲ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಸುಸ್ಥಿರ ಕೃಷಿಮೌಲ್ಯ ಸಂಪರ್ಕ ಜಾಲವೂ ಸೃಷ್ಟಿಸುವಲ್ಲಿ ಈ ಘಟಕ ವಿಫಲವಾಗಿದೆ. ಉನ್ನತಗುಣಮಟ್ಟದ ಗ್ರಾಮೀಣ ಸಂಸ್ಕರಣಾ ಸೌಲಭ್ಯವನ್ನು ಕಲ್ಪಿಸುವುದು ಕೇವಲ ಕನಸಿನ ಮಾತಾಗಿದೆ. ಇದುವರೆಗೆ ರೈತರಿಗೆ ಬೇಗ ಹಾಳಾಗುವಂತಹ ಟಮೋಟೋ, ಈರೇಕಾಯಿ, ಉರುಳಿಕಾಯಿ, ಬದನೆ ಸೇರಿದಂತೆ ಯಾವುದೇ ತರಕಾರಿಗಳನ್ನು ಸಂಸ್ಕರಣೆ ಮಾಡುವ ಗೋಜಿಗೇ ಹೋಗಿಲ್ಲ. ಉತ್ಪಾದನೆ ಮತ್ತು ಸಂಸ್ಕರಣೆ ಸಾಮರ್ಥ್ಯ ಹೆಚ್ಚಿಸುವಂತಹ ಪ್ರಯತ್ನಗಳನ್ನು ಆಹಾರ ಸಂಸ್ಕರಣ ಘಟಕದಲ್ಲಿ ಮಾಡಿಲ್ಲ.

ಪ್ರಧಾನಿ ನರೇಂದ್ರ ಮೋದಿ ಈ ಘಟಕದಿಂದ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಬೆಂಗಳೂರು ನಗರ ಹೀಗೆ ಸುಮಾರು 12 ಜಿಲ್ಲೆಯ ರೈತರು ತಾವು ಬೆಳೆದ ತರಕಾರಿ ಮತ್ತು ಹಣ್ಣಿನ ಬೆಳೆಗಳನ್ನು ಈ ಘಟಕದಲ್ಲಿ ಸಂರಕ್ಷಣೆ ಮಾಡಬಹುದು ಎಂದು ಹೇಳಿದ್ದರು. ಈ ಕಾರ್ಯವೂ ಆಗಿಲ್ಲ. ಇದು ಲಾಭವಾಗಿದ್ದು ಮಾತ್ರ ಉತ್ತರ ಭಾರತದ ಮಾರ್ವಾಡಿ ಮಾಲಿಕನಿಗೆ. ಆಹಾರ ಸಂಸ್ಕರಣ ಮುಚ್ಚಿಹೋಗುವ ಹಂತದಲ್ಲಿದ್ದು, ಮಾಲಿಕ ಆ ಘಟಕವನ್ನೇ ಬೇರೆಯವರಿಗೆ ಲಾಭಕ್ಕೆ ಮಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂದರೆ ಘಟಕ ಉದ್ದೇಶವೇ ಹಾಳಾಗಿದ್ದು ಹಣವೂ ಪೋಲಾಗಿದೆ. ಇದನ್ನು ಕೇಳುವವರು ಯಾರೂ ಇಲ್ಲ.

ಎಚ್‌ಎಎಲ್‌ ಕಥೆ ಭಿನ್ನವಲ್ಲ!

2016 ಮಾರ್ಚ್ 8 ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿ ಹಿಂದೂಸ್ತಾನ ಏರೋನಾಟಿಕ್ ಲಿಮಿಟೆಡ್ ಸಂಸ್ಥೆಯಡಿ ಲಘು ಯುದ್ದ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. 2018ರ ಡಿಸೆಂಬರ್ ಅಂತ್ಯಕ್ಕೆ ಮೊದಲ ಹೆಲಿಕಾಪ್ಟರ್ ಹಾರಲಿದೆ ಎಂದು ಅಂದಿನ ವೇದಿಕೆಯಲ್ಲಿ ಭಾಷಣ ಮಾಡಿ ಹೇಳಿದರು. ಪ್ರಧಾನಿ ಈ ಮಾತುಗಳನ್ನಾಡಿ ಮೂರು ವರ್ಷ ಕಳೆದರೂ ಹೆಲಿಕಾಪ್ಟರ್ ಹಾರಲೇ ಇಲ್ಲ. ಪ್ರಧಾನಿ ಮೋದಿ ಅವರ ಎರಡನೇ ಭರವಸೆಯೂ ಸುಳ್ಳಾಗಿದೆ.

ಎಚ್.ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆಗೆ ಸಣ್ಣ ಮತ್ತು ಅತಿಸಣ್ಣ ರೈತರಿಂದ ಅಕ್ಷರಶಃ ಭೂಮಿಯನ್ನು ಕಸಿದುಕೊಳ್ಳಲಾಯಿತು. ಹಲವು ವರ್ಷಗಳಿಂದ ಅದೇ ಭೂಮಿಯನ್ನು ನೆಚ್ಚಿಕೊಂಡು ಬರುತ್ತಿದ್ದ ರೈತರಿಗೆ ಭೂಮಿಯೇ ಇಲ್ಲವಾಯಿತು. ಬಗರ್ ಹುಕುಂ ಸಾಗುವಳಿದಾರರನ್ನು ಬೆದರಿಸಿ ಭೂಮಿ ಕಿತ್ತುಕೊಂಡರು. ಸುಮಾರು 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದ 70 ಕುಟುಂಬಗಳಿಗೆ ಭೂಮಿಯೂ ಇಲ್ಲ, ಪರಿಹಾರವನ್ನೂ ನೀಡಿಲ್ಲ. ಗೋಮಾಳದಲ್ಲಿ ಉಳುಮೆ ಮಾಡುವ ಜೊತೆಗೆ ಅಲ್ಲಿಯೆ ಗುಡಿಸಲು ನಿರ್ಮಿಸಿ ವಾಸ ಮಾಡುತ್ತಿದ್ದ ಕುಟುಂಬಗಳನ್ನು ಒಕ್ಕಲೆಬ್ಬಿಸಿ ಬೆದರಿಸಿ ಬೇರೆ ಸ್ಥಳಾಂತರ ಮಾಡುವಂತೆ ಮಾಡಲಾಗಿದೆ.

ಕೆಲವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ವಿಚಾರಣೆಯ ಹಂತದಲ್ಲಿವೆ. ಇದರ ನಡುವೆಯೂ 615 ಎಕರೆ ಭೂಮಿಯಲ್ಲಿ ಹೆಲಿಕಾಪ್ಟರ್ ತಯಾರಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಆದರೆ ರಕ್ಷಣಾ ಇಲಾಖೆಯಿಂದ ಬೇಡಿಕೆ ಪತ್ರ ಬಂದಿಲ್ಲ. ಹೀಗಾಗಿ ಹೆಲಿಕಾಪ್ಟರ್ ತಯಾರಿಸುವುದನ್ನು ಇಂದಿಗೂ ಆರಂಭಿಸಿಲ್ಲ. 2018ರ ಡಿಸೆಂಬರ್ ಅಂತ್ಯದೊಳಗೆ ಹೆಲಿಕಾಪ್ಟರ್ ಹಾರುತ್ತದೆ ಎಂಬ ಮೋದಿ ಮಾತುಗಳು ಹುಸಿಯಾಗಿವೆ. ಎರಡು ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರೂ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ತಯಾರಿಕೆಗೆ ಗ್ರೀನ್ ಸಿಗ್ನಲ್ ನೀಡದೇ ಇರುವುದು ಏಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಎಚ್.ಎಎಲ್  ಹೆಲಿಕಾಪ್ಟರ್ ಘಟಕಕ್ಕೆ ಶಂಕುಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸುವ ಹಂತ ತಲುಪಿದ್ದರೂ ಅಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಪ್ರಧಾನಿ ಹೇಳಿದಂತೆ ನಾಲ್ಕು ಸಾವಿರ ಉದ್ಯೋಗವೂ ಸೃಷ್ಟಿಯಾಗಿಲ್ಲ. ಹಾಗಾಗಿ ಪ್ರಧಾನಿ ಉದ್ಘಾಟಿಸಿದ ಆಹಾರ ಸಂಸ್ಕರಣ ಘಟಕದಲ್ಲಿ ಉದ್ಯೋಗವೂ ಇಲ್ಲ. ಎಚ್ ಎಎಲ್ ಹೆಲಿಕಾಪ್ಟರ್ ಗಳು ಹಾರಲೇ ಇಲ್ಲ ಎಂದು ಜನ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ದೇಶಕ್ಕೆ ನರೇಂದ್ರ ಮೋದಿ ಮಾರಕವಾಗಿ ಇದ್ದಾರೆ ಮೋದಿಯ ಭಾಷಣ ಮಾಸ್ತ್ರ ಐಲೆಟ್ ಆಗಿರುತ್ತೆ ಅಷ್ಟೇ
    ಹಿಂದುತ್ವದ ಹೆಸರಿನಲ್ಲಿ ಮೋಹನ್ ಭಗವತ್ ರವರ ಕುಚೇಲನ್ ಆಗಿ ಕಾರ್ಯನಿರ್ವಹಿಸುತ್ತಿರುವ ನರೇಂದ್ರ ಮೋದಿಯವರು
    ಉದ್ಯೋಗ ಸೃಷ್ಟಿಸಲು ತುಮಕೂರು ಒಂದರ ಕಥೆಯಲ್ಲ ಇಡೀ ದೇಶವೇ ತಲೆಕೆಳಗಾಗುವ ಗತಿ ಬಂದಿದೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...