Homeಕರ್ನಾಟಕತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ - ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ

- Advertisement -
- Advertisement -

ಜನವರಿ 2 ಅಂದರೆ ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಬರುತ್ತಿದ್ದಾರೆ. ಎಲ್ಲರಲ್ಲಿಯೂ ಹರ್ಷ. ಆದರೆ ಹಿಂದಿನ ಕಥೆ ಸ್ವಲ್ಪ ನೋಡಿದರೆ ಬೇಸರವಾಗುತ್ತದೆ. ಏನದು ನೋಡೋಣ ಬನ್ನಿ.

ತುಮಕೂರು ನಗರದ ಹೊರವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ದೇಶದ ಮೊದಲ ಆಹಾರ ಸಂಸ್ಕರಣಾ ಘಟಕ ಆರಂಭವಾಗಿ ಆರು ವರ್ಷ ಕಳೆದಿದೆ. ಈವರೆಗೆ ಈ ಘಟಕದಿಂದ ಹೇಳಿಕೊಳ್ಳುವಂಥ ಕೆಲಸಗಳೇ ಆಗಿಲ್ಲ. ಪ್ರಧಾನಿಯ ಭರವಸೆಯಂತೆ ಉದ್ಯೋಗ ಸೃಷ್ಟಿಯಾಗಿಲ್ಲ. ರೈತರಿಗೆ ಯಾವುದೇ ಪ್ರಯೋಜನ ಕೂಡ ಆಗಿಲ್ಲ. ಲೆಕ್ಕಕ್ಕೆ ಮಾತ್ರ ಆಹಾರ ಸಂಸ್ಕರಣ ಘಟಕ, ಸಾಧನೆ ಮಾತ್ರ ಶೂನ್ಯ. ರೈತರ ನೆರವಿಗೆ ಆಸರೆಗೆ ಬರಬೇಕಾಗಿದ್ದ ಈ ಘಟಕ ಇದ್ದೂ ಇಲ್ಲದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣ ಪುಸ್ತಕದ ಬದನೆಕಾಯಿ ಎಂಬಂತಾಗಿದೆ.

ಅದು 2014ನೇ ವರ್ಷ. ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಹಿಡಿದರು. ಪ್ರಧಾನಿಯಾದ ಹೊಸದು, ಹುಮ್ಮಸ್ಸು ತುಳುಕುತ್ತಿತ್ತು. ಅದೇ ಹೊತ್ತಲ್ಲಿ  ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನಿ ಮೋದಿ ದಕ್ಷಿಣ ಯಾತ್ರೆ ಕೈಗೊಂಡರು. ತುಮಕೂರಿಗೆ ಭೇಟಿ ನೀಡಿ ವಸಂತನರಸಾಪರುದಲ್ಲಿ ಆಹಾರ ಸಂಸ್ಕರಣಾ ಘಟಕ ಉದ್ಘಾಟನೆ ಮಾಡಿದರು. ಆಗ 10 ಸಾವಿರ ನೇರ ಉದ್ಯೋಗ, ಸುಮಾರು 25 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತವೆ. 12 ಜಿಲ್ಲೆಗಳ ರೈತರಿಗೆ ಇದರ ಉಪಯೋಗವಾಗುತ್ತದೆ. ರೈತರು ಬೆಳೆದ ತರಕಾರಿ, ಹಣ್ಣು ಮೊದಲಾದ ವಸ್ತುಗಳನ್ನು ಶೀತಲ ಘಟಕದಲ್ಲಿ ಕೆಡದಂತೆ ಸಂಗ್ರಹಿಸಿಡಬಹುದು ಎಂದು ಭವರಸೆ ನೀಡಿ ಹೋದರು.

ಪ್ರಧಾನಿ ಭರವಸೆ ನೀಡಿ ಆರು ವರ್ಷಗಳು ಉರುಳಿದ ಮೇಲೆ ಅಲ್ಲಿ ಉದ್ಯೋಗವೂ ಸೃಷ್ಟಿಯಾಗಲಿಲ್ಲ. ರೈತರಿಗೂ ಅನುಕೂಲವಾಗಲಿಲ್ಲ. ಕೋಟ್ಯಂತರ ರೂಪಾಯಿ ಮಾತ್ರ ನಷ್ಟವಾಯಿತು. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಘಟಕದಿಂದ ಪ್ರಧಾನಿ ಹೇಳಿದಷ್ಟು ನೇರ- ಪರೋಕ್ಷ ಉದ್ಯೋಗ ಸೃಷ್ಟಿಯಾಗಲೇ ಇಲ್ಲ. ಕೇವಲ 200 ಮಂದಿ ಕಾಯಂ ನೌಕರರು, 800 ಮಂದಿ ಗುತ್ತಿಗೆ ನೌಕರರು ಈಗ ದುಡಿಯುತ್ತಿದ್ದಾರೆ.  ಕಾಯಂ ಹುದ್ದೆಗಳಿಗೆ ಉತ್ತರ ಭಾರತದವರು ನೇಮಕವಾಗಿದ್ದರೆ, ಕಸ ಹೊಡೆಯುವುದು, ಕಸ ಹೊತ್ತುಹಾಕುವುದು ಮೊದಲಾದ ಸಣ್ಣಪುಟ್ಟ ಕೆಲಸಗಳಿಗೆ ಸ್ಥಳೀಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದಾರೆ.  ಉತ್ತರ ಭಾರತದ ಕಾಯಂ ನೌಕರರಿಗೆ ಹೆಚ್ಚು ವೇತನ, ಸ್ಥಳೀಯರಿಗೆ 7-8 ಸಾವಿರ ರೂಪಾಯಿ ನೀಡಿ ವೇತನ ಮತ್ತು ಕೆಲಸ ನೀಡುವಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಸ್ಥಳೀಯರಿಂದ ಬಿಟ್ಟಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಕಾರ್ಮಿಕರು ದೂರಿದ್ದಾರೆ.

ಕೃಷಿ ಸಲಕರಣೆಗಳ ಅಬಿವೃದ್ದಿ, ಸಂಸ್ಕರಣೆಯ ಮೌಲ್ಯವರ್ಧನೆ, ಸುಗ್ಗಿಯ ನಂತರ ಸೌಲಭ್ಯ, ತಾಂತ್ರಿಕ ಸಹಾಯ ನೀಡುವುದು ಘಟಕ ಉದ್ದೇಶವೆಂದು ಇಂಡಿಯ ಫುಡ್ ಪಾರ್ಕ್ ಡಾಟ್ ಕೊ ಡಾಟ್ ಇನ್ ನಲ್ಲಿ ಹೇಳಿದ್ದು ಇದಕ್ಕೆ ಪೂರಕವಾಗಿ ಕೆಲಸ ಮಾಡದೇ ಇರುವುದು ಕಂಡು ಬಂದಿದೆ. ಅಷ್ಟೇ ಅಲ್ಲ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಸುಸ್ಥಿರ ಕೃಷಿಮೌಲ್ಯ ಸಂಪರ್ಕ ಜಾಲವೂ ಸೃಷ್ಟಿಸುವಲ್ಲಿ ಈ ಘಟಕ ವಿಫಲವಾಗಿದೆ. ಉನ್ನತಗುಣಮಟ್ಟದ ಗ್ರಾಮೀಣ ಸಂಸ್ಕರಣಾ ಸೌಲಭ್ಯವನ್ನು ಕಲ್ಪಿಸುವುದು ಕೇವಲ ಕನಸಿನ ಮಾತಾಗಿದೆ. ಇದುವರೆಗೆ ರೈತರಿಗೆ ಬೇಗ ಹಾಳಾಗುವಂತಹ ಟಮೋಟೋ, ಈರೇಕಾಯಿ, ಉರುಳಿಕಾಯಿ, ಬದನೆ ಸೇರಿದಂತೆ ಯಾವುದೇ ತರಕಾರಿಗಳನ್ನು ಸಂಸ್ಕರಣೆ ಮಾಡುವ ಗೋಜಿಗೇ ಹೋಗಿಲ್ಲ. ಉತ್ಪಾದನೆ ಮತ್ತು ಸಂಸ್ಕರಣೆ ಸಾಮರ್ಥ್ಯ ಹೆಚ್ಚಿಸುವಂತಹ ಪ್ರಯತ್ನಗಳನ್ನು ಆಹಾರ ಸಂಸ್ಕರಣ ಘಟಕದಲ್ಲಿ ಮಾಡಿಲ್ಲ.

ಪ್ರಧಾನಿ ನರೇಂದ್ರ ಮೋದಿ ಈ ಘಟಕದಿಂದ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಬೆಂಗಳೂರು ನಗರ ಹೀಗೆ ಸುಮಾರು 12 ಜಿಲ್ಲೆಯ ರೈತರು ತಾವು ಬೆಳೆದ ತರಕಾರಿ ಮತ್ತು ಹಣ್ಣಿನ ಬೆಳೆಗಳನ್ನು ಈ ಘಟಕದಲ್ಲಿ ಸಂರಕ್ಷಣೆ ಮಾಡಬಹುದು ಎಂದು ಹೇಳಿದ್ದರು. ಈ ಕಾರ್ಯವೂ ಆಗಿಲ್ಲ. ಇದು ಲಾಭವಾಗಿದ್ದು ಮಾತ್ರ ಉತ್ತರ ಭಾರತದ ಮಾರ್ವಾಡಿ ಮಾಲಿಕನಿಗೆ. ಆಹಾರ ಸಂಸ್ಕರಣ ಮುಚ್ಚಿಹೋಗುವ ಹಂತದಲ್ಲಿದ್ದು, ಮಾಲಿಕ ಆ ಘಟಕವನ್ನೇ ಬೇರೆಯವರಿಗೆ ಲಾಭಕ್ಕೆ ಮಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂದರೆ ಘಟಕ ಉದ್ದೇಶವೇ ಹಾಳಾಗಿದ್ದು ಹಣವೂ ಪೋಲಾಗಿದೆ. ಇದನ್ನು ಕೇಳುವವರು ಯಾರೂ ಇಲ್ಲ.

ಎಚ್‌ಎಎಲ್‌ ಕಥೆ ಭಿನ್ನವಲ್ಲ!

2016 ಮಾರ್ಚ್ 8 ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿ ಹಿಂದೂಸ್ತಾನ ಏರೋನಾಟಿಕ್ ಲಿಮಿಟೆಡ್ ಸಂಸ್ಥೆಯಡಿ ಲಘು ಯುದ್ದ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. 2018ರ ಡಿಸೆಂಬರ್ ಅಂತ್ಯಕ್ಕೆ ಮೊದಲ ಹೆಲಿಕಾಪ್ಟರ್ ಹಾರಲಿದೆ ಎಂದು ಅಂದಿನ ವೇದಿಕೆಯಲ್ಲಿ ಭಾಷಣ ಮಾಡಿ ಹೇಳಿದರು. ಪ್ರಧಾನಿ ಈ ಮಾತುಗಳನ್ನಾಡಿ ಮೂರು ವರ್ಷ ಕಳೆದರೂ ಹೆಲಿಕಾಪ್ಟರ್ ಹಾರಲೇ ಇಲ್ಲ. ಪ್ರಧಾನಿ ಮೋದಿ ಅವರ ಎರಡನೇ ಭರವಸೆಯೂ ಸುಳ್ಳಾಗಿದೆ.

ಎಚ್.ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆಗೆ ಸಣ್ಣ ಮತ್ತು ಅತಿಸಣ್ಣ ರೈತರಿಂದ ಅಕ್ಷರಶಃ ಭೂಮಿಯನ್ನು ಕಸಿದುಕೊಳ್ಳಲಾಯಿತು. ಹಲವು ವರ್ಷಗಳಿಂದ ಅದೇ ಭೂಮಿಯನ್ನು ನೆಚ್ಚಿಕೊಂಡು ಬರುತ್ತಿದ್ದ ರೈತರಿಗೆ ಭೂಮಿಯೇ ಇಲ್ಲವಾಯಿತು. ಬಗರ್ ಹುಕುಂ ಸಾಗುವಳಿದಾರರನ್ನು ಬೆದರಿಸಿ ಭೂಮಿ ಕಿತ್ತುಕೊಂಡರು. ಸುಮಾರು 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದ 70 ಕುಟುಂಬಗಳಿಗೆ ಭೂಮಿಯೂ ಇಲ್ಲ, ಪರಿಹಾರವನ್ನೂ ನೀಡಿಲ್ಲ. ಗೋಮಾಳದಲ್ಲಿ ಉಳುಮೆ ಮಾಡುವ ಜೊತೆಗೆ ಅಲ್ಲಿಯೆ ಗುಡಿಸಲು ನಿರ್ಮಿಸಿ ವಾಸ ಮಾಡುತ್ತಿದ್ದ ಕುಟುಂಬಗಳನ್ನು ಒಕ್ಕಲೆಬ್ಬಿಸಿ ಬೆದರಿಸಿ ಬೇರೆ ಸ್ಥಳಾಂತರ ಮಾಡುವಂತೆ ಮಾಡಲಾಗಿದೆ.

ಕೆಲವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ವಿಚಾರಣೆಯ ಹಂತದಲ್ಲಿವೆ. ಇದರ ನಡುವೆಯೂ 615 ಎಕರೆ ಭೂಮಿಯಲ್ಲಿ ಹೆಲಿಕಾಪ್ಟರ್ ತಯಾರಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಆದರೆ ರಕ್ಷಣಾ ಇಲಾಖೆಯಿಂದ ಬೇಡಿಕೆ ಪತ್ರ ಬಂದಿಲ್ಲ. ಹೀಗಾಗಿ ಹೆಲಿಕಾಪ್ಟರ್ ತಯಾರಿಸುವುದನ್ನು ಇಂದಿಗೂ ಆರಂಭಿಸಿಲ್ಲ. 2018ರ ಡಿಸೆಂಬರ್ ಅಂತ್ಯದೊಳಗೆ ಹೆಲಿಕಾಪ್ಟರ್ ಹಾರುತ್ತದೆ ಎಂಬ ಮೋದಿ ಮಾತುಗಳು ಹುಸಿಯಾಗಿವೆ. ಎರಡು ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರೂ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ತಯಾರಿಕೆಗೆ ಗ್ರೀನ್ ಸಿಗ್ನಲ್ ನೀಡದೇ ಇರುವುದು ಏಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಎಚ್.ಎಎಲ್  ಹೆಲಿಕಾಪ್ಟರ್ ಘಟಕಕ್ಕೆ ಶಂಕುಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸುವ ಹಂತ ತಲುಪಿದ್ದರೂ ಅಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಪ್ರಧಾನಿ ಹೇಳಿದಂತೆ ನಾಲ್ಕು ಸಾವಿರ ಉದ್ಯೋಗವೂ ಸೃಷ್ಟಿಯಾಗಿಲ್ಲ. ಹಾಗಾಗಿ ಪ್ರಧಾನಿ ಉದ್ಘಾಟಿಸಿದ ಆಹಾರ ಸಂಸ್ಕರಣ ಘಟಕದಲ್ಲಿ ಉದ್ಯೋಗವೂ ಇಲ್ಲ. ಎಚ್ ಎಎಲ್ ಹೆಲಿಕಾಪ್ಟರ್ ಗಳು ಹಾರಲೇ ಇಲ್ಲ ಎಂದು ಜನ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ದೇಶಕ್ಕೆ ನರೇಂದ್ರ ಮೋದಿ ಮಾರಕವಾಗಿ ಇದ್ದಾರೆ ಮೋದಿಯ ಭಾಷಣ ಮಾಸ್ತ್ರ ಐಲೆಟ್ ಆಗಿರುತ್ತೆ ಅಷ್ಟೇ
    ಹಿಂದುತ್ವದ ಹೆಸರಿನಲ್ಲಿ ಮೋಹನ್ ಭಗವತ್ ರವರ ಕುಚೇಲನ್ ಆಗಿ ಕಾರ್ಯನಿರ್ವಹಿಸುತ್ತಿರುವ ನರೇಂದ್ರ ಮೋದಿಯವರು
    ಉದ್ಯೋಗ ಸೃಷ್ಟಿಸಲು ತುಮಕೂರು ಒಂದರ ಕಥೆಯಲ್ಲ ಇಡೀ ದೇಶವೇ ತಲೆಕೆಳಗಾಗುವ ಗತಿ ಬಂದಿದೆ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...