Homeಮುಖಪುಟಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲೆ ಗುಂಡಾಗಳು ನಡೆಸಿದ ದಾಳಿಗೆ ಪೊಲೀಸರ ಸಹಕಾರವಿದೆ ಎಂಬ ಆರೋಪ ನಿಜವಾಗುವ ರೀತಿಯಲ್ಲಿ ದೆಹಲಿ ಪೊಲೀಸರು ವರ್ತಿಸುತ್ತಿದ್ದಾರೆ. ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ JNUSU ಅಧ್ಯಕ್ಷೆ ಆಯಿಶಾ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR ದಾಖಲಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಆಯಿಶಾ ಮೇಲಿನ ದೂರುಗಳು ಭಾನುವಾರ ರಾತ್ರಿಯೇ ದಾಖಲಾಗಿದ್ದರೂ ಮಂಗಳವಾರ ಬೆಳಿಗ್ಗೆಯವರೆಗೂ ಆ ಮಾಹಿತಿ ಹೊರಬಂದಿರಲಿಲ್ಲ.. ಆದರೆ ಯಾವಾಗ ದಾಳಿಕೋರರ ಬಂಧನವಾಗಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೋ ಆಗ ಪೊಲೀಸರು ಎಫ್‌ಐಆರ್‌ ಅನ್ನು ಬಹಿರಂಗಗೊಳಿಸಿದ್ದಾರೆ.

ಆಯಿಷೆ ಘೋಷ್ ಮತ್ತು ಇತರ ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಭಾನುವಾರ ರಾತ್ರಿ 8.39 ಕ್ಕೆ ಮತ್ತು  8.43 ಕ್ಕೆ ಕ್ಯಾಂಪಸ್‌ನಲ್ಲಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದು ಹಾಸ್ಟೆಲ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಆ ಸಮಯದಲ್ಲಿ ಅವರು ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಾ ಆಸ್ಪತ್ರೆಯ ಹಾದಿಯಲ್ಲಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಎಡ ಒಕ್ಕೂಟದ ವಿದ್ಯಾರ್ಥಿಗಳು ಎಬಿವಿಪಿ ಮೇಲೆ ದಾಳಿಯ ಆರೋಪ ಹೊರಿಸಿ ನೀಡಿರುವ ಹಲವರು ದೂರುಗಳನ್ನು ಒಟ್ಟುಗೂಡಿಸಿ ಒಂದೇ ದೂರು ದಾಖಲಿಸಿರುವ ಪೊಲೀಸರು ಯಾವೊಬ್ಬ ಎಬಿವಿಪಿಯ ಸದಸ್ಯನ ಹೆಸರನ್ನು ಹೆಸರಿಸದೇ ಅನಾಮಧೇಯರು ಎಂದು ಉಲ್ಲೇಖಸಿದ್ದಾರೆ.

ಐಶೆ ಮತ್ತು ಇತರ 26 ವಿದ್ಯಾರ್ಥಿಗಳ ಮೇಲೆ ಜನವರಿ 1 ಮತ್ತು 4 ರಂದು ಎರಡು ಬಾರಿ ವಿಶ್ವವಿದ್ಯಾಲಯದ ಸರ್ವರ್ ಕೊಠಡಿಯನ್ನು ಧ್ವಂಸಗೊಳಿಸಿದ ಆರೋಪ ಮತ್ತು ಚಳಿಗಾಲದ ಸೆಮಿಸ್ಟರ್‌ಗೆ ವಿದ್ಯಾರ್ಥಿಗಳ ನೋಂದಣಿ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ.

ವಿದ್ಯಾರ್ಥಿಗಳು “ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಅಪರಾಧದ ಉದ್ದೇಶದಿಂದ ವಿಶ್ವವಿದ್ಯಾನಿಲಯದ ಆಸ್ತಿಯನ್ನು ಅಕ್ರಮವಾಗಿ ಅತಿಕ್ರಮಿಸಿದ್ದಾರೆ. ಅವರು ಸರ್ವರ್‌ಗಳನ್ನು ಹಾನಿಗೊಳಿಸಿದರು ಮತ್ತು ಅದನ್ನು ನಿಷ್ಕ್ರಿಯಗೊಳಿಸಿದರು. ಅವರು ಫೈಬರ್ ಆಪ್ಟಿಕ್ ವಿದ್ಯುತ್ ಸರಬರಾಜುಗಳನ್ನು ಸಹ ಹಾನಿಗೊಳಿಸಿದರು ಮತ್ತು ಕೋಣೆಯೊಳಗಿನ ಬಯೋಮೆಟ್ರಿಕ್ ವ್ಯವಸ್ಥೆಗಳನ್ನು ಮುರಿದರು” ಎಂದು ವಿಶ್ವವಿದ್ಯಾಲಯವು ದೂರು ನೀಡಿತ್ತು.

ಮುಸುಕು ಧರಿಸಿದ್ದ ಗೂಂಡಾಗಳು ಎಬಿವಿಪಿಯವರೆ ಆಗಿದ್ದಾರೆ. ಅವರು ಕ್ಯಾಂಪಸ್‌ನಿಂದ ದಾಳಿಯ ನಂತರ ಹೊರಹೋಗಲು ಪೊಲೀಸರೇ ಸಹಕರಿಸಿದ್ದಾರೆ. ಹಲವು ಫೋಟೊ ಮತ್ತು ವಿಡಿಯೋಗಳಲ್ಲಿ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ಗಳಲ್ಲಿ ಅವರ ಹೆಸರು ಮತ್ತು ಮುಖವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿದೆ. ಆದರೂ ಪೊಲೀಸರು ಪಕ್ಷಪಾತವಾಗಿ ವರ್ತಿಸುತ್ತಿದ್ದು ಅವರ ಬಂಧನಕ್ಕೆ ಮುಂದಾಗಿಲ್ಲ. ಒಂದು ರೀತಿಯಲ್ಲಿ ಆರೋಪಿಗಳಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂದು JNUSU ಉಪಾಧ್ಯಕ್ಷ ಸಾಕೇತ್‌ ಮೂನ್‌ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಲ್ಲೆಗೆ ಒಳಗಾದವರ ಮೇಲೆಯೇ ದೂರು ದಾಖಲಿಸಿರುವುದು ಪೂರ್ವ ನಿಯೋಜಿತ ಸಂಚು.

  2. ದೇಶದ ಭವಿಷ್ಯವನ್ನು ರೂಪಿಸುವವರನು ನಾವು ಚುನಾಯಿಸಿದ ಕಾರಣ ಈ ರೀತಿ ದೇಶದ ನಾಗರಿಕರು ಈ ರೀತಿ ದುರಾಡಳಿತಕ್ಕೆ ಒಳಪಡಬೇಕಾಗುತ್ತದೆ ಎಂದರೆ ತಪ್ಪಾಗಲಾರದು ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...