Homeಮುಖಪುಟಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲೆ ಗುಂಡಾಗಳು ನಡೆಸಿದ ದಾಳಿಗೆ ಪೊಲೀಸರ ಸಹಕಾರವಿದೆ ಎಂಬ ಆರೋಪ ನಿಜವಾಗುವ ರೀತಿಯಲ್ಲಿ ದೆಹಲಿ ಪೊಲೀಸರು ವರ್ತಿಸುತ್ತಿದ್ದಾರೆ. ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ JNUSU ಅಧ್ಯಕ್ಷೆ ಆಯಿಶಾ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR ದಾಖಲಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಆಯಿಶಾ ಮೇಲಿನ ದೂರುಗಳು ಭಾನುವಾರ ರಾತ್ರಿಯೇ ದಾಖಲಾಗಿದ್ದರೂ ಮಂಗಳವಾರ ಬೆಳಿಗ್ಗೆಯವರೆಗೂ ಆ ಮಾಹಿತಿ ಹೊರಬಂದಿರಲಿಲ್ಲ.. ಆದರೆ ಯಾವಾಗ ದಾಳಿಕೋರರ ಬಂಧನವಾಗಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೋ ಆಗ ಪೊಲೀಸರು ಎಫ್‌ಐಆರ್‌ ಅನ್ನು ಬಹಿರಂಗಗೊಳಿಸಿದ್ದಾರೆ.

ಆಯಿಷೆ ಘೋಷ್ ಮತ್ತು ಇತರ ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಭಾನುವಾರ ರಾತ್ರಿ 8.39 ಕ್ಕೆ ಮತ್ತು  8.43 ಕ್ಕೆ ಕ್ಯಾಂಪಸ್‌ನಲ್ಲಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದು ಹಾಸ್ಟೆಲ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಆ ಸಮಯದಲ್ಲಿ ಅವರು ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಾ ಆಸ್ಪತ್ರೆಯ ಹಾದಿಯಲ್ಲಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಎಡ ಒಕ್ಕೂಟದ ವಿದ್ಯಾರ್ಥಿಗಳು ಎಬಿವಿಪಿ ಮೇಲೆ ದಾಳಿಯ ಆರೋಪ ಹೊರಿಸಿ ನೀಡಿರುವ ಹಲವರು ದೂರುಗಳನ್ನು ಒಟ್ಟುಗೂಡಿಸಿ ಒಂದೇ ದೂರು ದಾಖಲಿಸಿರುವ ಪೊಲೀಸರು ಯಾವೊಬ್ಬ ಎಬಿವಿಪಿಯ ಸದಸ್ಯನ ಹೆಸರನ್ನು ಹೆಸರಿಸದೇ ಅನಾಮಧೇಯರು ಎಂದು ಉಲ್ಲೇಖಸಿದ್ದಾರೆ.

ಐಶೆ ಮತ್ತು ಇತರ 26 ವಿದ್ಯಾರ್ಥಿಗಳ ಮೇಲೆ ಜನವರಿ 1 ಮತ್ತು 4 ರಂದು ಎರಡು ಬಾರಿ ವಿಶ್ವವಿದ್ಯಾಲಯದ ಸರ್ವರ್ ಕೊಠಡಿಯನ್ನು ಧ್ವಂಸಗೊಳಿಸಿದ ಆರೋಪ ಮತ್ತು ಚಳಿಗಾಲದ ಸೆಮಿಸ್ಟರ್‌ಗೆ ವಿದ್ಯಾರ್ಥಿಗಳ ನೋಂದಣಿ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ.

ವಿದ್ಯಾರ್ಥಿಗಳು “ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಅಪರಾಧದ ಉದ್ದೇಶದಿಂದ ವಿಶ್ವವಿದ್ಯಾನಿಲಯದ ಆಸ್ತಿಯನ್ನು ಅಕ್ರಮವಾಗಿ ಅತಿಕ್ರಮಿಸಿದ್ದಾರೆ. ಅವರು ಸರ್ವರ್‌ಗಳನ್ನು ಹಾನಿಗೊಳಿಸಿದರು ಮತ್ತು ಅದನ್ನು ನಿಷ್ಕ್ರಿಯಗೊಳಿಸಿದರು. ಅವರು ಫೈಬರ್ ಆಪ್ಟಿಕ್ ವಿದ್ಯುತ್ ಸರಬರಾಜುಗಳನ್ನು ಸಹ ಹಾನಿಗೊಳಿಸಿದರು ಮತ್ತು ಕೋಣೆಯೊಳಗಿನ ಬಯೋಮೆಟ್ರಿಕ್ ವ್ಯವಸ್ಥೆಗಳನ್ನು ಮುರಿದರು” ಎಂದು ವಿಶ್ವವಿದ್ಯಾಲಯವು ದೂರು ನೀಡಿತ್ತು.

ಮುಸುಕು ಧರಿಸಿದ್ದ ಗೂಂಡಾಗಳು ಎಬಿವಿಪಿಯವರೆ ಆಗಿದ್ದಾರೆ. ಅವರು ಕ್ಯಾಂಪಸ್‌ನಿಂದ ದಾಳಿಯ ನಂತರ ಹೊರಹೋಗಲು ಪೊಲೀಸರೇ ಸಹಕರಿಸಿದ್ದಾರೆ. ಹಲವು ಫೋಟೊ ಮತ್ತು ವಿಡಿಯೋಗಳಲ್ಲಿ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ಗಳಲ್ಲಿ ಅವರ ಹೆಸರು ಮತ್ತು ಮುಖವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿದೆ. ಆದರೂ ಪೊಲೀಸರು ಪಕ್ಷಪಾತವಾಗಿ ವರ್ತಿಸುತ್ತಿದ್ದು ಅವರ ಬಂಧನಕ್ಕೆ ಮುಂದಾಗಿಲ್ಲ. ಒಂದು ರೀತಿಯಲ್ಲಿ ಆರೋಪಿಗಳಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂದು JNUSU ಉಪಾಧ್ಯಕ್ಷ ಸಾಕೇತ್‌ ಮೂನ್‌ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಲ್ಲೆಗೆ ಒಳಗಾದವರ ಮೇಲೆಯೇ ದೂರು ದಾಖಲಿಸಿರುವುದು ಪೂರ್ವ ನಿಯೋಜಿತ ಸಂಚು.

  2. ದೇಶದ ಭವಿಷ್ಯವನ್ನು ರೂಪಿಸುವವರನು ನಾವು ಚುನಾಯಿಸಿದ ಕಾರಣ ಈ ರೀತಿ ದೇಶದ ನಾಗರಿಕರು ಈ ರೀತಿ ದುರಾಡಳಿತಕ್ಕೆ ಒಳಪಡಬೇಕಾಗುತ್ತದೆ ಎಂದರೆ ತಪ್ಪಾಗಲಾರದು ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...