Homeಮುಖಪುಟಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲೆ ಗುಂಡಾಗಳು ನಡೆಸಿದ ದಾಳಿಗೆ ಪೊಲೀಸರ ಸಹಕಾರವಿದೆ ಎಂಬ ಆರೋಪ ನಿಜವಾಗುವ ರೀತಿಯಲ್ಲಿ ದೆಹಲಿ ಪೊಲೀಸರು ವರ್ತಿಸುತ್ತಿದ್ದಾರೆ. ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ JNUSU ಅಧ್ಯಕ್ಷೆ ಆಯಿಶಾ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR ದಾಖಲಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಆಯಿಶಾ ಮೇಲಿನ ದೂರುಗಳು ಭಾನುವಾರ ರಾತ್ರಿಯೇ ದಾಖಲಾಗಿದ್ದರೂ ಮಂಗಳವಾರ ಬೆಳಿಗ್ಗೆಯವರೆಗೂ ಆ ಮಾಹಿತಿ ಹೊರಬಂದಿರಲಿಲ್ಲ.. ಆದರೆ ಯಾವಾಗ ದಾಳಿಕೋರರ ಬಂಧನವಾಗಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೋ ಆಗ ಪೊಲೀಸರು ಎಫ್‌ಐಆರ್‌ ಅನ್ನು ಬಹಿರಂಗಗೊಳಿಸಿದ್ದಾರೆ.

ಆಯಿಷೆ ಘೋಷ್ ಮತ್ತು ಇತರ ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಭಾನುವಾರ ರಾತ್ರಿ 8.39 ಕ್ಕೆ ಮತ್ತು  8.43 ಕ್ಕೆ ಕ್ಯಾಂಪಸ್‌ನಲ್ಲಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದು ಹಾಸ್ಟೆಲ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಆ ಸಮಯದಲ್ಲಿ ಅವರು ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಾ ಆಸ್ಪತ್ರೆಯ ಹಾದಿಯಲ್ಲಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಎಡ ಒಕ್ಕೂಟದ ವಿದ್ಯಾರ್ಥಿಗಳು ಎಬಿವಿಪಿ ಮೇಲೆ ದಾಳಿಯ ಆರೋಪ ಹೊರಿಸಿ ನೀಡಿರುವ ಹಲವರು ದೂರುಗಳನ್ನು ಒಟ್ಟುಗೂಡಿಸಿ ಒಂದೇ ದೂರು ದಾಖಲಿಸಿರುವ ಪೊಲೀಸರು ಯಾವೊಬ್ಬ ಎಬಿವಿಪಿಯ ಸದಸ್ಯನ ಹೆಸರನ್ನು ಹೆಸರಿಸದೇ ಅನಾಮಧೇಯರು ಎಂದು ಉಲ್ಲೇಖಸಿದ್ದಾರೆ.

ಐಶೆ ಮತ್ತು ಇತರ 26 ವಿದ್ಯಾರ್ಥಿಗಳ ಮೇಲೆ ಜನವರಿ 1 ಮತ್ತು 4 ರಂದು ಎರಡು ಬಾರಿ ವಿಶ್ವವಿದ್ಯಾಲಯದ ಸರ್ವರ್ ಕೊಠಡಿಯನ್ನು ಧ್ವಂಸಗೊಳಿಸಿದ ಆರೋಪ ಮತ್ತು ಚಳಿಗಾಲದ ಸೆಮಿಸ್ಟರ್‌ಗೆ ವಿದ್ಯಾರ್ಥಿಗಳ ನೋಂದಣಿ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ.

ವಿದ್ಯಾರ್ಥಿಗಳು “ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಅಪರಾಧದ ಉದ್ದೇಶದಿಂದ ವಿಶ್ವವಿದ್ಯಾನಿಲಯದ ಆಸ್ತಿಯನ್ನು ಅಕ್ರಮವಾಗಿ ಅತಿಕ್ರಮಿಸಿದ್ದಾರೆ. ಅವರು ಸರ್ವರ್‌ಗಳನ್ನು ಹಾನಿಗೊಳಿಸಿದರು ಮತ್ತು ಅದನ್ನು ನಿಷ್ಕ್ರಿಯಗೊಳಿಸಿದರು. ಅವರು ಫೈಬರ್ ಆಪ್ಟಿಕ್ ವಿದ್ಯುತ್ ಸರಬರಾಜುಗಳನ್ನು ಸಹ ಹಾನಿಗೊಳಿಸಿದರು ಮತ್ತು ಕೋಣೆಯೊಳಗಿನ ಬಯೋಮೆಟ್ರಿಕ್ ವ್ಯವಸ್ಥೆಗಳನ್ನು ಮುರಿದರು” ಎಂದು ವಿಶ್ವವಿದ್ಯಾಲಯವು ದೂರು ನೀಡಿತ್ತು.

ಮುಸುಕು ಧರಿಸಿದ್ದ ಗೂಂಡಾಗಳು ಎಬಿವಿಪಿಯವರೆ ಆಗಿದ್ದಾರೆ. ಅವರು ಕ್ಯಾಂಪಸ್‌ನಿಂದ ದಾಳಿಯ ನಂತರ ಹೊರಹೋಗಲು ಪೊಲೀಸರೇ ಸಹಕರಿಸಿದ್ದಾರೆ. ಹಲವು ಫೋಟೊ ಮತ್ತು ವಿಡಿಯೋಗಳಲ್ಲಿ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ಗಳಲ್ಲಿ ಅವರ ಹೆಸರು ಮತ್ತು ಮುಖವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿದೆ. ಆದರೂ ಪೊಲೀಸರು ಪಕ್ಷಪಾತವಾಗಿ ವರ್ತಿಸುತ್ತಿದ್ದು ಅವರ ಬಂಧನಕ್ಕೆ ಮುಂದಾಗಿಲ್ಲ. ಒಂದು ರೀತಿಯಲ್ಲಿ ಆರೋಪಿಗಳಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂದು JNUSU ಉಪಾಧ್ಯಕ್ಷ ಸಾಕೇತ್‌ ಮೂನ್‌ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಲ್ಲೆಗೆ ಒಳಗಾದವರ ಮೇಲೆಯೇ ದೂರು ದಾಖಲಿಸಿರುವುದು ಪೂರ್ವ ನಿಯೋಜಿತ ಸಂಚು.

  2. ದೇಶದ ಭವಿಷ್ಯವನ್ನು ರೂಪಿಸುವವರನು ನಾವು ಚುನಾಯಿಸಿದ ಕಾರಣ ಈ ರೀತಿ ದೇಶದ ನಾಗರಿಕರು ಈ ರೀತಿ ದುರಾಡಳಿತಕ್ಕೆ ಒಳಪಡಬೇಕಾಗುತ್ತದೆ ಎಂದರೆ ತಪ್ಪಾಗಲಾರದು ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...