Homeಮುಖಪುಟಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲೆ ಗುಂಡಾಗಳು ನಡೆಸಿದ ದಾಳಿಗೆ ಪೊಲೀಸರ ಸಹಕಾರವಿದೆ ಎಂಬ ಆರೋಪ ನಿಜವಾಗುವ ರೀತಿಯಲ್ಲಿ ದೆಹಲಿ ಪೊಲೀಸರು ವರ್ತಿಸುತ್ತಿದ್ದಾರೆ. ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ JNUSU ಅಧ್ಯಕ್ಷೆ ಆಯಿಶಾ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR ದಾಖಲಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಆಯಿಶಾ ಮೇಲಿನ ದೂರುಗಳು ಭಾನುವಾರ ರಾತ್ರಿಯೇ ದಾಖಲಾಗಿದ್ದರೂ ಮಂಗಳವಾರ ಬೆಳಿಗ್ಗೆಯವರೆಗೂ ಆ ಮಾಹಿತಿ ಹೊರಬಂದಿರಲಿಲ್ಲ.. ಆದರೆ ಯಾವಾಗ ದಾಳಿಕೋರರ ಬಂಧನವಾಗಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೋ ಆಗ ಪೊಲೀಸರು ಎಫ್‌ಐಆರ್‌ ಅನ್ನು ಬಹಿರಂಗಗೊಳಿಸಿದ್ದಾರೆ.

ಆಯಿಷೆ ಘೋಷ್ ಮತ್ತು ಇತರ ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಭಾನುವಾರ ರಾತ್ರಿ 8.39 ಕ್ಕೆ ಮತ್ತು  8.43 ಕ್ಕೆ ಕ್ಯಾಂಪಸ್‌ನಲ್ಲಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದು ಹಾಸ್ಟೆಲ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಆ ಸಮಯದಲ್ಲಿ ಅವರು ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಾ ಆಸ್ಪತ್ರೆಯ ಹಾದಿಯಲ್ಲಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಎಡ ಒಕ್ಕೂಟದ ವಿದ್ಯಾರ್ಥಿಗಳು ಎಬಿವಿಪಿ ಮೇಲೆ ದಾಳಿಯ ಆರೋಪ ಹೊರಿಸಿ ನೀಡಿರುವ ಹಲವರು ದೂರುಗಳನ್ನು ಒಟ್ಟುಗೂಡಿಸಿ ಒಂದೇ ದೂರು ದಾಖಲಿಸಿರುವ ಪೊಲೀಸರು ಯಾವೊಬ್ಬ ಎಬಿವಿಪಿಯ ಸದಸ್ಯನ ಹೆಸರನ್ನು ಹೆಸರಿಸದೇ ಅನಾಮಧೇಯರು ಎಂದು ಉಲ್ಲೇಖಸಿದ್ದಾರೆ.

ಐಶೆ ಮತ್ತು ಇತರ 26 ವಿದ್ಯಾರ್ಥಿಗಳ ಮೇಲೆ ಜನವರಿ 1 ಮತ್ತು 4 ರಂದು ಎರಡು ಬಾರಿ ವಿಶ್ವವಿದ್ಯಾಲಯದ ಸರ್ವರ್ ಕೊಠಡಿಯನ್ನು ಧ್ವಂಸಗೊಳಿಸಿದ ಆರೋಪ ಮತ್ತು ಚಳಿಗಾಲದ ಸೆಮಿಸ್ಟರ್‌ಗೆ ವಿದ್ಯಾರ್ಥಿಗಳ ನೋಂದಣಿ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ.

ವಿದ್ಯಾರ್ಥಿಗಳು “ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಅಪರಾಧದ ಉದ್ದೇಶದಿಂದ ವಿಶ್ವವಿದ್ಯಾನಿಲಯದ ಆಸ್ತಿಯನ್ನು ಅಕ್ರಮವಾಗಿ ಅತಿಕ್ರಮಿಸಿದ್ದಾರೆ. ಅವರು ಸರ್ವರ್‌ಗಳನ್ನು ಹಾನಿಗೊಳಿಸಿದರು ಮತ್ತು ಅದನ್ನು ನಿಷ್ಕ್ರಿಯಗೊಳಿಸಿದರು. ಅವರು ಫೈಬರ್ ಆಪ್ಟಿಕ್ ವಿದ್ಯುತ್ ಸರಬರಾಜುಗಳನ್ನು ಸಹ ಹಾನಿಗೊಳಿಸಿದರು ಮತ್ತು ಕೋಣೆಯೊಳಗಿನ ಬಯೋಮೆಟ್ರಿಕ್ ವ್ಯವಸ್ಥೆಗಳನ್ನು ಮುರಿದರು” ಎಂದು ವಿಶ್ವವಿದ್ಯಾಲಯವು ದೂರು ನೀಡಿತ್ತು.

ಮುಸುಕು ಧರಿಸಿದ್ದ ಗೂಂಡಾಗಳು ಎಬಿವಿಪಿಯವರೆ ಆಗಿದ್ದಾರೆ. ಅವರು ಕ್ಯಾಂಪಸ್‌ನಿಂದ ದಾಳಿಯ ನಂತರ ಹೊರಹೋಗಲು ಪೊಲೀಸರೇ ಸಹಕರಿಸಿದ್ದಾರೆ. ಹಲವು ಫೋಟೊ ಮತ್ತು ವಿಡಿಯೋಗಳಲ್ಲಿ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ಗಳಲ್ಲಿ ಅವರ ಹೆಸರು ಮತ್ತು ಮುಖವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿದೆ. ಆದರೂ ಪೊಲೀಸರು ಪಕ್ಷಪಾತವಾಗಿ ವರ್ತಿಸುತ್ತಿದ್ದು ಅವರ ಬಂಧನಕ್ಕೆ ಮುಂದಾಗಿಲ್ಲ. ಒಂದು ರೀತಿಯಲ್ಲಿ ಆರೋಪಿಗಳಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂದು JNUSU ಉಪಾಧ್ಯಕ್ಷ ಸಾಕೇತ್‌ ಮೂನ್‌ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಲ್ಲೆಗೆ ಒಳಗಾದವರ ಮೇಲೆಯೇ ದೂರು ದಾಖಲಿಸಿರುವುದು ಪೂರ್ವ ನಿಯೋಜಿತ ಸಂಚು.

  2. ದೇಶದ ಭವಿಷ್ಯವನ್ನು ರೂಪಿಸುವವರನು ನಾವು ಚುನಾಯಿಸಿದ ಕಾರಣ ಈ ರೀತಿ ದೇಶದ ನಾಗರಿಕರು ಈ ರೀತಿ ದುರಾಡಳಿತಕ್ಕೆ ಒಳಪಡಬೇಕಾಗುತ್ತದೆ ಎಂದರೆ ತಪ್ಪಾಗಲಾರದು ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...