Homeಮುಖಪುಟಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR!

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲೆ ಗುಂಡಾಗಳು ನಡೆಸಿದ ದಾಳಿಗೆ ಪೊಲೀಸರ ಸಹಕಾರವಿದೆ ಎಂಬ ಆರೋಪ ನಿಜವಾಗುವ ರೀತಿಯಲ್ಲಿ ದೆಹಲಿ ಪೊಲೀಸರು ವರ್ತಿಸುತ್ತಿದ್ದಾರೆ. ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಿದ್ದ JNUSU ಅಧ್ಯಕ್ಷೆ ಆಯಿಶಾ ಘೋಷ್‌ ಮೇಲೆ ನಾಲ್ಕು ನಿಮಿಷದ ಅವಧಿಯಲ್ಲಿ 2 FIR ದಾಖಲಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಆಯಿಶಾ ಮೇಲಿನ ದೂರುಗಳು ಭಾನುವಾರ ರಾತ್ರಿಯೇ ದಾಖಲಾಗಿದ್ದರೂ ಮಂಗಳವಾರ ಬೆಳಿಗ್ಗೆಯವರೆಗೂ ಆ ಮಾಹಿತಿ ಹೊರಬಂದಿರಲಿಲ್ಲ.. ಆದರೆ ಯಾವಾಗ ದಾಳಿಕೋರರ ಬಂಧನವಾಗಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೋ ಆಗ ಪೊಲೀಸರು ಎಫ್‌ಐಆರ್‌ ಅನ್ನು ಬಹಿರಂಗಗೊಳಿಸಿದ್ದಾರೆ.

ಆಯಿಷೆ ಘೋಷ್ ಮತ್ತು ಇತರ ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಭಾನುವಾರ ರಾತ್ರಿ 8.39 ಕ್ಕೆ ಮತ್ತು  8.43 ಕ್ಕೆ ಕ್ಯಾಂಪಸ್‌ನಲ್ಲಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದು ಹಾಸ್ಟೆಲ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಆ ಸಮಯದಲ್ಲಿ ಅವರು ಹಲ್ಲೆಗೊಳಗಾಗಿ ರಕ್ತ ಸುರಿಸುತ್ತಾ ಆಸ್ಪತ್ರೆಯ ಹಾದಿಯಲ್ಲಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಎಡ ಒಕ್ಕೂಟದ ವಿದ್ಯಾರ್ಥಿಗಳು ಎಬಿವಿಪಿ ಮೇಲೆ ದಾಳಿಯ ಆರೋಪ ಹೊರಿಸಿ ನೀಡಿರುವ ಹಲವರು ದೂರುಗಳನ್ನು ಒಟ್ಟುಗೂಡಿಸಿ ಒಂದೇ ದೂರು ದಾಖಲಿಸಿರುವ ಪೊಲೀಸರು ಯಾವೊಬ್ಬ ಎಬಿವಿಪಿಯ ಸದಸ್ಯನ ಹೆಸರನ್ನು ಹೆಸರಿಸದೇ ಅನಾಮಧೇಯರು ಎಂದು ಉಲ್ಲೇಖಸಿದ್ದಾರೆ.

ಐಶೆ ಮತ್ತು ಇತರ 26 ವಿದ್ಯಾರ್ಥಿಗಳ ಮೇಲೆ ಜನವರಿ 1 ಮತ್ತು 4 ರಂದು ಎರಡು ಬಾರಿ ವಿಶ್ವವಿದ್ಯಾಲಯದ ಸರ್ವರ್ ಕೊಠಡಿಯನ್ನು ಧ್ವಂಸಗೊಳಿಸಿದ ಆರೋಪ ಮತ್ತು ಚಳಿಗಾಲದ ಸೆಮಿಸ್ಟರ್‌ಗೆ ವಿದ್ಯಾರ್ಥಿಗಳ ನೋಂದಣಿ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ.

ವಿದ್ಯಾರ್ಥಿಗಳು “ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಅಪರಾಧದ ಉದ್ದೇಶದಿಂದ ವಿಶ್ವವಿದ್ಯಾನಿಲಯದ ಆಸ್ತಿಯನ್ನು ಅಕ್ರಮವಾಗಿ ಅತಿಕ್ರಮಿಸಿದ್ದಾರೆ. ಅವರು ಸರ್ವರ್‌ಗಳನ್ನು ಹಾನಿಗೊಳಿಸಿದರು ಮತ್ತು ಅದನ್ನು ನಿಷ್ಕ್ರಿಯಗೊಳಿಸಿದರು. ಅವರು ಫೈಬರ್ ಆಪ್ಟಿಕ್ ವಿದ್ಯುತ್ ಸರಬರಾಜುಗಳನ್ನು ಸಹ ಹಾನಿಗೊಳಿಸಿದರು ಮತ್ತು ಕೋಣೆಯೊಳಗಿನ ಬಯೋಮೆಟ್ರಿಕ್ ವ್ಯವಸ್ಥೆಗಳನ್ನು ಮುರಿದರು” ಎಂದು ವಿಶ್ವವಿದ್ಯಾಲಯವು ದೂರು ನೀಡಿತ್ತು.

ಮುಸುಕು ಧರಿಸಿದ್ದ ಗೂಂಡಾಗಳು ಎಬಿವಿಪಿಯವರೆ ಆಗಿದ್ದಾರೆ. ಅವರು ಕ್ಯಾಂಪಸ್‌ನಿಂದ ದಾಳಿಯ ನಂತರ ಹೊರಹೋಗಲು ಪೊಲೀಸರೇ ಸಹಕರಿಸಿದ್ದಾರೆ. ಹಲವು ಫೋಟೊ ಮತ್ತು ವಿಡಿಯೋಗಳಲ್ಲಿ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ಗಳಲ್ಲಿ ಅವರ ಹೆಸರು ಮತ್ತು ಮುಖವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿದೆ. ಆದರೂ ಪೊಲೀಸರು ಪಕ್ಷಪಾತವಾಗಿ ವರ್ತಿಸುತ್ತಿದ್ದು ಅವರ ಬಂಧನಕ್ಕೆ ಮುಂದಾಗಿಲ್ಲ. ಒಂದು ರೀತಿಯಲ್ಲಿ ಆರೋಪಿಗಳಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂದು JNUSU ಉಪಾಧ್ಯಕ್ಷ ಸಾಕೇತ್‌ ಮೂನ್‌ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಲ್ಲೆಗೆ ಒಳಗಾದವರ ಮೇಲೆಯೇ ದೂರು ದಾಖಲಿಸಿರುವುದು ಪೂರ್ವ ನಿಯೋಜಿತ ಸಂಚು.

  2. ದೇಶದ ಭವಿಷ್ಯವನ್ನು ರೂಪಿಸುವವರನು ನಾವು ಚುನಾಯಿಸಿದ ಕಾರಣ ಈ ರೀತಿ ದೇಶದ ನಾಗರಿಕರು ಈ ರೀತಿ ದುರಾಡಳಿತಕ್ಕೆ ಒಳಪಡಬೇಕಾಗುತ್ತದೆ ಎಂದರೆ ತಪ್ಪಾಗಲಾರದು ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...