Homeಮುಖಪುಟಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಜುಬೈರ್‌ ಜೊತೆಗೆ ಇವರ ಜೊತೆಗೆ ಇತರ ಎರಡು ಟ್ವಿಟ್ಟರ್ ಬಳಕೆದಾರರಾದ, @de_real_mask ಮತ್ತು syedsarwar20 ಎಂಬ ಬಳಕೆದಾರ ಹೆಸರುಗಳನ್ನು ಕೂಡಾ ಎಫ್‌ಐಆರ್‌ಗಳಲ್ಲಿ ಹೆಸರಿಸಲಾಗಿದೆ ಎಂದು NCPCR ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಟ್ವಿಟರ್ ಇಂಡಿಯಾ ಅವರಿಗೆ ಸಂಬಂಧಿತ ಮಾಹಿತಿಯನ್ನು ಒದಗಿಸಲು 10 ದಿನಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಜುಬೈರ್‌ ಅವರ ಪೋಸ್ಟ್‌‌ಗೆ ಇತರ ಎರಡು ಟ್ವಿಟ್ಟರ್‌ ಹ್ಯಾಂಡಲ್‌ಗಳು ಕಾಮೆಂಟ್ ಮಾಡಿದ್ದವು. ಇಷ್ಟಕ್ಕೆ ಈ ಮೂವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಇದನ್ನೂ ಓದಿ: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಈ ಬಗ್ಗೆ ಪ್ರತಿಕ್ರಿಯಿಸಿದ ರಾಯ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್, ಅದರಲ್ಲಿ ಕಿರುಕುಳ ಎಂದು ವರ್ಗೀಕರಿಸಬಹುದಾದ ಕೆಲವು ಕಾಮೆಂಟ್‌ಗಳಿವೆ. ನಾವು ಮೂರು ಟ್ವಿಟ್ಟರ್ ಹ್ಯಾಂಡಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಆದರೆ ತನಿಖೆ ಇನ್ನೂ ನಡೆಯುತ್ತಿವೆ ಎಂದು ಹೇಳಿದ್ದಾರೆ.

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಆಲ್ಟ್ ನ್ಯೂಸ್ ಜುಬೇರ್ ಅವರನ್ನು ಬೆಂಬಲಿಸಿ ನಿನ್ನೆ ಹೇಳಿಕೆ ಬಿಡುಗಡೆ ಮಾಡಿದೆ. “ಅವರ ವಿರುದ್ಧದ ಎಫ್‌ಐಆ‌ರ್‌, ಕಾನೂನುಗಳನ್ನು ದುರುಪಯೋಗ ಮಾಡುವ ಮೂಲಕ ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟವನ್ನು ತಡೆಯುವ ಪ್ರಯತ್ನವಾಗಿದೆ. ಜುಬೈರ್ ಸುಳ್ಳು ಸುದ್ದಿಗಳ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ಕೆಲಸವು ಸುಳ್ಳು ಸುದ್ದಿ ಹಬ್ಬಿಸುತ್ತಾ ಭಾರತದ ಪ್ರಜಾತಂತ್ರಕ್ಕೆ ಧಕ್ಕೆ ತರುತ್ತಿದ್ದವರಿಗೆ ಸಹಿಸಲು ಆಗದೇ ಈ ರೀತಿಯ ದೂರುಗಳನ್ನು ನೀಡಿದೆ” ಎಂದು ತಿಳಿಸಿದೆ.


ಓದಿ:  ಪಶ್ಚಿಮ ಬಂಗಾಳದಲ್ಲಿ  ಈ ಕಾಳಿ  ದೇವಿಯ  ಮೂರ್ತಿಯನ್ನು  ಮುಸ್ಲಿಮರು  ಸುಟ್ಟಿದ್ದು  ನಿಜವೆ? ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮ, ಕಾಳಿ, ದೇವಿಯ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...