Homeಮುಖಪುಟಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಜುಬೈರ್‌ ಜೊತೆಗೆ ಇವರ ಜೊತೆಗೆ ಇತರ ಎರಡು ಟ್ವಿಟ್ಟರ್ ಬಳಕೆದಾರರಾದ, @de_real_mask ಮತ್ತು syedsarwar20 ಎಂಬ ಬಳಕೆದಾರ ಹೆಸರುಗಳನ್ನು ಕೂಡಾ ಎಫ್‌ಐಆರ್‌ಗಳಲ್ಲಿ ಹೆಸರಿಸಲಾಗಿದೆ ಎಂದು NCPCR ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಟ್ವಿಟರ್ ಇಂಡಿಯಾ ಅವರಿಗೆ ಸಂಬಂಧಿತ ಮಾಹಿತಿಯನ್ನು ಒದಗಿಸಲು 10 ದಿನಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಜುಬೈರ್‌ ಅವರ ಪೋಸ್ಟ್‌‌ಗೆ ಇತರ ಎರಡು ಟ್ವಿಟ್ಟರ್‌ ಹ್ಯಾಂಡಲ್‌ಗಳು ಕಾಮೆಂಟ್ ಮಾಡಿದ್ದವು. ಇಷ್ಟಕ್ಕೆ ಈ ಮೂವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಇದನ್ನೂ ಓದಿ: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಈ ಬಗ್ಗೆ ಪ್ರತಿಕ್ರಿಯಿಸಿದ ರಾಯ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್, ಅದರಲ್ಲಿ ಕಿರುಕುಳ ಎಂದು ವರ್ಗೀಕರಿಸಬಹುದಾದ ಕೆಲವು ಕಾಮೆಂಟ್‌ಗಳಿವೆ. ನಾವು ಮೂರು ಟ್ವಿಟ್ಟರ್ ಹ್ಯಾಂಡಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಆದರೆ ತನಿಖೆ ಇನ್ನೂ ನಡೆಯುತ್ತಿವೆ ಎಂದು ಹೇಳಿದ್ದಾರೆ.

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಆಲ್ಟ್ ನ್ಯೂಸ್ ಜುಬೇರ್ ಅವರನ್ನು ಬೆಂಬಲಿಸಿ ನಿನ್ನೆ ಹೇಳಿಕೆ ಬಿಡುಗಡೆ ಮಾಡಿದೆ. “ಅವರ ವಿರುದ್ಧದ ಎಫ್‌ಐಆ‌ರ್‌, ಕಾನೂನುಗಳನ್ನು ದುರುಪಯೋಗ ಮಾಡುವ ಮೂಲಕ ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟವನ್ನು ತಡೆಯುವ ಪ್ರಯತ್ನವಾಗಿದೆ. ಜುಬೈರ್ ಸುಳ್ಳು ಸುದ್ದಿಗಳ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ಕೆಲಸವು ಸುಳ್ಳು ಸುದ್ದಿ ಹಬ್ಬಿಸುತ್ತಾ ಭಾರತದ ಪ್ರಜಾತಂತ್ರಕ್ಕೆ ಧಕ್ಕೆ ತರುತ್ತಿದ್ದವರಿಗೆ ಸಹಿಸಲು ಆಗದೇ ಈ ರೀತಿಯ ದೂರುಗಳನ್ನು ನೀಡಿದೆ” ಎಂದು ತಿಳಿಸಿದೆ.


ಓದಿ:  ಪಶ್ಚಿಮ ಬಂಗಾಳದಲ್ಲಿ  ಈ ಕಾಳಿ  ದೇವಿಯ  ಮೂರ್ತಿಯನ್ನು  ಮುಸ್ಲಿಮರು  ಸುಟ್ಟಿದ್ದು  ನಿಜವೆ? ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮ, ಕಾಳಿ, ದೇವಿಯ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...