Homeಮುಖಪುಟಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಜುಬೈರ್‌ ಜೊತೆಗೆ ಇವರ ಜೊತೆಗೆ ಇತರ ಎರಡು ಟ್ವಿಟ್ಟರ್ ಬಳಕೆದಾರರಾದ, @de_real_mask ಮತ್ತು syedsarwar20 ಎಂಬ ಬಳಕೆದಾರ ಹೆಸರುಗಳನ್ನು ಕೂಡಾ ಎಫ್‌ಐಆರ್‌ಗಳಲ್ಲಿ ಹೆಸರಿಸಲಾಗಿದೆ ಎಂದು NCPCR ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಟ್ವಿಟರ್ ಇಂಡಿಯಾ ಅವರಿಗೆ ಸಂಬಂಧಿತ ಮಾಹಿತಿಯನ್ನು ಒದಗಿಸಲು 10 ದಿನಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಜುಬೈರ್‌ ಅವರ ಪೋಸ್ಟ್‌‌ಗೆ ಇತರ ಎರಡು ಟ್ವಿಟ್ಟರ್‌ ಹ್ಯಾಂಡಲ್‌ಗಳು ಕಾಮೆಂಟ್ ಮಾಡಿದ್ದವು. ಇಷ್ಟಕ್ಕೆ ಈ ಮೂವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಇದನ್ನೂ ಓದಿ: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಈ ಬಗ್ಗೆ ಪ್ರತಿಕ್ರಿಯಿಸಿದ ರಾಯ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್, ಅದರಲ್ಲಿ ಕಿರುಕುಳ ಎಂದು ವರ್ಗೀಕರಿಸಬಹುದಾದ ಕೆಲವು ಕಾಮೆಂಟ್‌ಗಳಿವೆ. ನಾವು ಮೂರು ಟ್ವಿಟ್ಟರ್ ಹ್ಯಾಂಡಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಆದರೆ ತನಿಖೆ ಇನ್ನೂ ನಡೆಯುತ್ತಿವೆ ಎಂದು ಹೇಳಿದ್ದಾರೆ.

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಆಲ್ಟ್ ನ್ಯೂಸ್ ಜುಬೇರ್ ಅವರನ್ನು ಬೆಂಬಲಿಸಿ ನಿನ್ನೆ ಹೇಳಿಕೆ ಬಿಡುಗಡೆ ಮಾಡಿದೆ. “ಅವರ ವಿರುದ್ಧದ ಎಫ್‌ಐಆ‌ರ್‌, ಕಾನೂನುಗಳನ್ನು ದುರುಪಯೋಗ ಮಾಡುವ ಮೂಲಕ ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟವನ್ನು ತಡೆಯುವ ಪ್ರಯತ್ನವಾಗಿದೆ. ಜುಬೈರ್ ಸುಳ್ಳು ಸುದ್ದಿಗಳ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ಕೆಲಸವು ಸುಳ್ಳು ಸುದ್ದಿ ಹಬ್ಬಿಸುತ್ತಾ ಭಾರತದ ಪ್ರಜಾತಂತ್ರಕ್ಕೆ ಧಕ್ಕೆ ತರುತ್ತಿದ್ದವರಿಗೆ ಸಹಿಸಲು ಆಗದೇ ಈ ರೀತಿಯ ದೂರುಗಳನ್ನು ನೀಡಿದೆ” ಎಂದು ತಿಳಿಸಿದೆ.


ಓದಿ:  ಪಶ್ಚಿಮ ಬಂಗಾಳದಲ್ಲಿ  ಈ ಕಾಳಿ  ದೇವಿಯ  ಮೂರ್ತಿಯನ್ನು  ಮುಸ್ಲಿಮರು  ಸುಟ್ಟಿದ್ದು  ನಿಜವೆ? ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮ, ಕಾಳಿ, ದೇವಿಯ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...