Homeಮುಖಪುಟಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಜುಬೈರ್‌ ಜೊತೆಗೆ ಇವರ ಜೊತೆಗೆ ಇತರ ಎರಡು ಟ್ವಿಟ್ಟರ್ ಬಳಕೆದಾರರಾದ, @de_real_mask ಮತ್ತು syedsarwar20 ಎಂಬ ಬಳಕೆದಾರ ಹೆಸರುಗಳನ್ನು ಕೂಡಾ ಎಫ್‌ಐಆರ್‌ಗಳಲ್ಲಿ ಹೆಸರಿಸಲಾಗಿದೆ ಎಂದು NCPCR ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಟ್ವಿಟರ್ ಇಂಡಿಯಾ ಅವರಿಗೆ ಸಂಬಂಧಿತ ಮಾಹಿತಿಯನ್ನು ಒದಗಿಸಲು 10 ದಿನಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಜುಬೈರ್‌ ಅವರ ಪೋಸ್ಟ್‌‌ಗೆ ಇತರ ಎರಡು ಟ್ವಿಟ್ಟರ್‌ ಹ್ಯಾಂಡಲ್‌ಗಳು ಕಾಮೆಂಟ್ ಮಾಡಿದ್ದವು. ಇಷ್ಟಕ್ಕೆ ಈ ಮೂವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಇದನ್ನೂ ಓದಿ: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಈ ಬಗ್ಗೆ ಪ್ರತಿಕ್ರಿಯಿಸಿದ ರಾಯ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್, ಅದರಲ್ಲಿ ಕಿರುಕುಳ ಎಂದು ವರ್ಗೀಕರಿಸಬಹುದಾದ ಕೆಲವು ಕಾಮೆಂಟ್‌ಗಳಿವೆ. ನಾವು ಮೂರು ಟ್ವಿಟ್ಟರ್ ಹ್ಯಾಂಡಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಆದರೆ ತನಿಖೆ ಇನ್ನೂ ನಡೆಯುತ್ತಿವೆ ಎಂದು ಹೇಳಿದ್ದಾರೆ.

ತನ್ನ ಮೇಲಿನ ದೂರನ್ನು ಸಂಪೂರ್ಣ ನಿಷ್ಪ್ರಯೋಜಕ ಎಂದಿರುವ ಜುಬೇರ್‌, ಅದಕ್ಕೆ ತಾನು ಕಾನೂನುಬದ್ಧವಾಗಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಆಲ್ಟ್ ನ್ಯೂಸ್ ಜುಬೇರ್ ಅವರನ್ನು ಬೆಂಬಲಿಸಿ ನಿನ್ನೆ ಹೇಳಿಕೆ ಬಿಡುಗಡೆ ಮಾಡಿದೆ. “ಅವರ ವಿರುದ್ಧದ ಎಫ್‌ಐಆ‌ರ್‌, ಕಾನೂನುಗಳನ್ನು ದುರುಪಯೋಗ ಮಾಡುವ ಮೂಲಕ ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟವನ್ನು ತಡೆಯುವ ಪ್ರಯತ್ನವಾಗಿದೆ. ಜುಬೈರ್ ಸುಳ್ಳು ಸುದ್ದಿಗಳ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ಕೆಲಸವು ಸುಳ್ಳು ಸುದ್ದಿ ಹಬ್ಬಿಸುತ್ತಾ ಭಾರತದ ಪ್ರಜಾತಂತ್ರಕ್ಕೆ ಧಕ್ಕೆ ತರುತ್ತಿದ್ದವರಿಗೆ ಸಹಿಸಲು ಆಗದೇ ಈ ರೀತಿಯ ದೂರುಗಳನ್ನು ನೀಡಿದೆ” ಎಂದು ತಿಳಿಸಿದೆ.


ಓದಿ:  ಪಶ್ಚಿಮ ಬಂಗಾಳದಲ್ಲಿ  ಈ ಕಾಳಿ  ದೇವಿಯ  ಮೂರ್ತಿಯನ್ನು  ಮುಸ್ಲಿಮರು  ಸುಟ್ಟಿದ್ದು  ನಿಜವೆ? ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮ, ಕಾಳಿ, ದೇವಿಯ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...