Homeಕಥೆಇಬ್ಬರು ಹೆಣ್ಣುಗಳು : ಅಕ್ಷತಾ .ಕೆ ಅವರ ಕಥೆ

ಇಬ್ಬರು ಹೆಣ್ಣುಗಳು : ಅಕ್ಷತಾ .ಕೆ ಅವರ ಕಥೆ

- Advertisement -
- Advertisement -

ರಾಜೀವ್ ಸತ್ತು ಹದಿನೈದು ದಿನ ಆಗಿತ್ತು.

`ಸರ್ ಅಕ್ಕನ ಬಳಿ ನೀವಾಗಿದ್ದಕ್ಕೆ ನೋಡಿ ಮನೆಯ ಕೀ ವಸೂಲು ಮಾಡಿದ್ರಿ. ಇಲ್ಲ ಅಂದಿದ್ದರೆ ಸರ್ ಮನೆಗೊಮ್ಮೆ ಹೋಗಿ ಅವರ ಚೂರು-ಪಾರುಗಳನ್ನು ಹೆಕ್ಕುವ ನನ್ನ ಆಸೆ ಹಾಗೆಯೇ ಉಳಿದುಬಿಡ್ತಿತ್ತು ಎಂದಳು ಸರಳೆ.

`ಅದಕ್ಕೆ ಅಷ್ಟೆಲ್ಲ ಕಷ್ಟ ಪಡಬೇಕಾಗ್ಲಿಲ್ಲ. ಕೆಲಸದವಳೊಬ್ಬಳು ಸಿಕ್ಕಿದ್ದಾಳೆ ಮನೆ ಸ್ವಚ್ಛಮಾಡಿಸಿಕೊಡ್ತೀನಿ ಕೀ ಕೊಟ್ಟರೆ ಅಂದ’. `ಬಹಳ ಥ್ಯಾಂಕ್ಸ್ ಅಪರ್ಣೆ, ಮನೆ ಮಾರಾಟ ಮಾಡೋಣ ಅಂತಿದ್ದೇನೆ ಸ್ವಚ್ಚ ಮಾಡಿಸಿಕೊಟ್ಟರೆ ಬಹಳ ಉಪಕಾರ ಆಗ್ತದೆ’ ಎಂದು ಕೊಟ್ಟರು. ಅವರಿಗೆ ನಿಮ್ಮ ಸರ್ ಎಲ್ಲಿ ಮನೆಯನ್ನು ನನ್ನ ಗಂಡನ ಹೆಸರಿಗೆ ಬರೆದಿದ್ದಾರೋ ಎಂದು ಅನುಮಾನ.. ನೇರಾನೇರ ಕೇಳುವುದಿಲ್ಲ. ನಾನೆ ಮತ್ತೆ ಮತ್ತೆ ಹೇಳ್ತೇನೆ `ತಗೊಳ್ಳೊದಾದರೆ ರಾಜೀವ್ ಮನೆಯಿಂದ ಒಂದಿಷ್ಟು ಪುಸ್ತಕ ತಗೊಳ್ತೀವಿ ಮತ್ತೇನು ಬೇಡ ಅಂತ. ಅದಿರಲಿ, ಅದೇನು ಚೂರು-ಪಾರು ಹೆಕ್ಕುವುದು?

`ಸರ್, ಒಂದು ಕಾಲದಲ್ಲಿ ನನ್ನ ಕಣ್ಣಲ್ಲಿ ಎಲ್ಲ ಆಗಿದ್ದರಲ್ಲ ಅಕ್ಕ, ಆಗ ಒಂದು ಅಭ್ಯಾಸ ಬೆಳೀತು, ಅವರ ಅರೆಬರೆ ಬರೆದ ನೋಟ್ ಪ್ಯಾಡ್ ಕದಿಯೋದು, ಅವರು ಬಳಸಿದ ಪೆನ್ನು ಕದಿಯೋದು, ಬಳಸಿದ ಸೋಪು ಕದಿಯೋದು, ಶೇವಿಂಗ್ ಕ್ರೀಂ ಕದಿಯೋದು, ಮತ್ತೆ ಅದನ್ನು ನಾನು ಬಳಸ್ತಿರಲಿಲ್ಲ. ಎಲ್ಲ ಜೋಪಾನವಾಗಿಡೋದು. ಆಗಾಗ ತೆಗೆದು ಮೆತ್ತಗೆ ಸವರಿ ಮತ್ತೆ ಗಂಟುಕಟ್ಟಿ ಜೋಪಾನ ಮಾಡೋದು. ಒಮ್ಮೆಯಂತೂ ಅಕ್ಕ, ಅವರ ರೀಡಿಂಗ್ ಗ್ಲಾಸ್ ಕದ್ದುಬಿಟ್ಟು ಅವರು ಓದಲಾಗದೆ ಒದ್ದಾಡೋದು ನೋಡಿ ಹುಡುಕಿದಂತೆ ಮಾಡಿ ಮರಳಿ ತಂದುಕೊಟ್ಟಿದ್ದೆ’.

`ಈ ರೀತಿ ಎಲ್ಲ ಹುಚ್ಚುತನ ನನ್ನಿಂದ ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ ಸರಳಾ.’

ಅಕ್ಕ , ನಾನು ಸರ್‍ಗೆ ಬರೆದ ಪತ್ರಗಳನ್ನು ಹುಡುಕಿ ತೆಗೆದುಕೊಳ್ಳಲಾ? ನನಗೆ ಅವು ಬೇಕು?

`ಹೆಣ್ಣುಮಕ್ಕಳ ಜಾಣತನ ಎಷ್ಟಲ್ವಾ… ನಮ್ಮ ಪ್ರೇಮದ ನಿಶಾನಿಗಳು ಯಾರಿಗೂ ಕಾಣಬಾರದು ಅಂತ ಬಯಸುತ್ತೇವೆ. ಮುಟ್ಟಿನ ಬಟ್ಟೆಗಳ ರೀತಿ.’

`ಹಾಗೇನೂ ಇಲ್ಲ ಅಕ್ಕ ಪ್ರೀತಿಸಿದ್ದೆ ಇದೆಯಂತೆ… ಗೊತ್ತಾಗಬಾರದು ಅಂತ ಅದು ಸರ್ ಇಲ್ಲದ ಈ ಹೊತ್ತಲ್ಲಿ ಏಕೆ ಬಯಸಲಿ? ಇದನ್ನೆಲ್ಲ ಪ್ರಶ್ನೆ ಮಾಡುವವರು ಕೂಡಾ ನನ್ನಷ್ಟೆ ಬದುಕಿನಲ್ಲಿ ಜಡಗೊಂಡಿದ್ದಾರೆ. ನಾ ಬರೆದ ಪತ್ರಗಳು ಈಗಿನ ಜಡಗೊಂಡ ಬದುಕಿನಲ್ಲಿ ಆಸರೆಯಾಗುತ್ತವಾ ಅಂತ ಎಲ್ಲೋ ಆಸೆ.’

`ಮದ್ವೆ ಮಾಡಿಕೊಳ್ಳಬೇಕಿತ್ತು ನಿನ್ನ ಸರ್‌ನ… ಯಾಕೆ ಎರೆಡರಡು ಸರ್ತಿ ಇನ್ನೇನು ಮದ್ವೆ ಆಗಿಯೇಬಿಟ್ಟೆ ಎಂದು ನಿರ್ಧಾರ ಪ್ರಕಟಿಸಿ ಮತ್ತೆ ಹಿಂಜರಿದೆ? ನೀನು ಮದ್ವೆ ಆಗಿದ್ರೆ ರಾಜೀವ್ ಇನ್ನತ್ತು ವರ್ಷ ಬದುಕಿರುತ್ತಿದ್ದರು. ಹೀಗೆ 52ನೇ ವರ್ಷದಲ್ಲಿ ಸಾಯೋದು ಬರ್ತಿರಲಿಲ್ಲ..’

`ಅಕ್ಕ , ಅಷ್ಟು ಕಟು ಆಗ್ಬೇಡಿ. ನಾನು ಒಮ್ಮೆ ಮದುವೆಯಾಗುವ ನಿರ್ಧಾರ ಮಾಡಿದಾಗ ಸರ್ ಹಿಂಜರಿದರು ಅಕ್ಕ. ನೀನಿನ್ನು ಚಿಕ್ಕವಳು. ಮದ್ವೆ ಬಂಧನಕ್ಕೆ ಇಷ್ಟು ಬೇಗ ಸಿಲುಕಿದ್ರೆ ನಾಶವಾಗ್ತಿಯ.. ನಿನ್ನಿಷ್ಟದ ನಟನೆ ಬಿಡಬೇಡ, ಕೆಲಸ ಹಿಡಿ, ಆದರೆ ನನ್ನಿಷ್ಟದ ಹುಡುಗಿ ನೀನು. ನಿನಗೆ ಬೇಕಾದಷ್ಟು ದಿನ ನನ್ನ ಮನೆಯಲ್ಲಿ ಬಂದಿರು. ನಂಗೂ ಖುಷಿನೆ. ಮದ್ವೆ ಬಗ್ಗೆ ಮಾತ್ರ ಮಾತು ಬೇಡ ಎಂದರು.’

`ನೀನು ಬರ್ತಿದ್ಯ ಆಗ.. ರಾಜೀವ್ ಆಗಲೇ ನನಗೆ ಪರಿಚಯವಾಗಿದ್ದು, ನಿನ್ನ ವಿಷಯ ಅವರು ಹೇಳಿದ್ರು. ಆದರೆ ನಿನಗೆ ಅವರು ಬರ್ತಿರು ಅಂದಿದ್ದನ್ನು ಹೇಳಲಿಲ್ಲ, ಅದು ಬಿಟ್ಟು ಬೇರೆಲ್ಲವನ್ನು ಹೇಳಿದ್ರು.

`ಕೆಲಸ ಸಿಕ್ಕು ಗುಲ್ಬರ್ಗಕ್ಕೆ ಹೋದವಳು ಐದು ವರ್ಷ ಸರ್‍ನ ನೋಡ್ಲೆ ಇಲ್ಲ. ಮದುವೆ ಬೇಡ ನೀನು ಬೇಕು ಎಂದವರ ಮೇಲೆ ನನಗೆ ಸಿಟ್ಟು ಉಕ್ಕಿತ್ತು ಅಕ್ಕ. ಆದರೆ ಅವರ ಅನುಪಸ್ಥಿತಿಯಲ್ಲಿ ಅವರ ಮೇಲಿನ ಪ್ರೇಮ ಬಲಿಯುತ್ತಾ ಹೋಯಿತು.. ಚೂರು ಕಡಿಮೆ ಆಗ್ಲಿಲ್ಲ. ನೂರಾರು ಪತ್ರ ಬರೀತಿದ್ದೆ. ಅವರು ಉತ್ತರವೇ ಬರೀತಿರಲಿಲ್ಲ…ಆದರೂ ನಾ ಬರೀತಿದ್ದೆ.’

`ತಪ್ಪು ತಿಳಿಬೇಡ. ರಾಜೀವ್‍ಗೆ ಪತ್ರ ಬರೀತಿದ್ದೆಯಲ್ಲ ಅದೆಲ್ಲವನ್ನು ಓದಿದ್ದೇನೆ.. ಆದರೆ ನಿನ್ನ ಮೂವತ್ತು, ನಲವತ್ತು ಪತ್ರದಲ್ಲಿ ಒಂದೂ ಪ್ರೇಮಪತ್ರ ಅನ್ನಿಸಲೇ ಇಲ್ಲ. ಎಲ್ಲದರಲ್ಲೂ `ಸರ್ ನಾನು ಇದನ್ನು ಓದಿದೆ, ನನಗೆ ಕುವೆಂಪು ಹೋಗುವೆನು ಮಲೆಯನಾಡಿಗೆ ಅನ್ನೋದು, ಬೇಂದ್ರೆ ಬಾರೋ ಸಾಧನಕೇರಿಗೆ ಅನ್ನೋದು ಎರಡೂ ಒಂದೆ ಧ್ವನಿಯಾ ಬೇರೇನಾ ಚೂರು ವಿವರಿಸ್ತೀರಾ? ತನ್ನ ಸಮಕಾಲೀನರು ಹೆಣ್ಣಿನ ಬಗ್ಗೆ ಅಷ್ಟು ಸಂಪ್ರದಾಯಸ್ಥವಾಗೇ ಯೋಚಿಸ್ತಿದ್ದಾಗ (ಎಂತ ಹೆಸರು ಅವನದು ಹಾಂ ನೆನಪಾಯ್ತು,) ಶಾಂತಿನಾಥ ದೇಸಾಯಿ ಎಂಬ ಕಥೆಗಾರನಿಗೆ ಅಷ್ಟು ಆಧುನಿಕಳಾದ ಹೆಣ್ಣನ್ನು ಚಿತ್ರಿಸಲಿಕ್ಕೆ ಹೇಗೆ ಸಾಧ್ಯವಾಯಿತು? ನಾನು ಮೊನ್ನೆ ಬುದ್ದಧಾಮಕ್ಕೆ ಹೋಗಿದ್ದೆ, ನಿಮ್ಮನ್ನು ಇಲ್ಲಿಗೆ ಕರೆತಂದು ನಿಮ್ಮಿಂದ ಅಂಬೇಡ್ಕರ್ ಯಾಕೆ ಬೌದ್ಧಧರ್ಮವನ್ನೆ ಆಯ್ಕೆ ಮಾಡಿಕೊಂಡರು ಅಂತ ಕೇಳೋ ಮನಸಾಗುತಿದೆ….’ `ಓ ಇಂಥದ್ದೇ ಅಲ್ಲ ನೀನು ಬರೀತಾ ಇದ್ದಿದ್ದು’ ನಾನು ರಾಜೀವ್‍ಗೆ ಅಣಕಿಸತೊಡಗಿದ್ದೆ `ನಿಮ್ಮ ಶಿಷ್ಯೆಗೆ ಯಾವ ಕವಿ ಪುಂಗವರ ಕಾವ್ಯವನ್ನು ನಿಮ್ಮಿಂದ ಓದಿಸಲಿಕ್ಕಿದೆಯಂತೆ?’ ಅಂತೆಲ್ಲ. ಕೊನೆಯ ಸಾಲಿನಲ್ಲು ವಿತ್ ಲವ್ ಅಂತ ಬರೆದು ಯುವರ್ಸ್ ಒಬಿಡಿಯಂಟ್ಲಿ ಅಂತ ಬರೀತಿದ್ದೆಯಲ್ಲ?…ನನಗಂತೂ ಅವೆಲ್ಲ ಓದ್ತಿದ್ರೆ ಭಲೆ ನಗು ಬರೋದು… ಆದರೂ ನಿನ್ನ ಪತ್ರ ಓದೋಕೇನೋ ಆಸಕ್ತಿ…ಹತ್ತಾರು ಸರ್ತಿ ಓದಿದಮೇಲೆ ಆ ಎಲ್ಲ ಸಾಹಿತಿಗಳ ಹೆಸ್ರು ಬಾಯಿಪಾಠ ಆಗಿದೆ ನೋಡು. ನಾನಂತೂ ತುಂಬಾ ಜನರ ಹೆಸರೂ ಕೇಳಿರಲಿಲ್ಲ.

`ಅಕ್ಕ, ಆದರೆ ಆ ರೀತಿ ಪತ್ರಗಳನ್ನು ಬರೀತಿದ್ದ ಕಾಲದಲ್ಲಿ ನಾನು ಪ್ರೇಮದಲ್ಲಿ ಮುಳುಗಿಹೋಗಿದ್ದೇನೆ ಎಂದು ಭಾವಿಸಿದ್ದೆ. ಸರ್ ಬಿಟ್ಟರೆ ಬೇರೊಂದು ಗಂಡು ಜೀವಕ್ಕೆ ನನ್ನಲ್ಲಿ ಪ್ರವೇಶವೇ ಇರಲಿಲ್ಲ. ನನ್ನ ಓದು, ಬರಹ, ಮಾತು ಸರ್‍ಗೆ ಅರ್ಥವಾಗೋ ಹಾಗೆ ನನ್ನ ಲೋಕದ ಯಾರಿಗೂ ಅರ್ಥವೇ ಆಗ್ತಿರಲಿಲ್ಲ. ನನಗೆ ಸರ್ ಜೊತೆ ಮಾತಾಡೋ, ಅವರನ್ನು ಆಲಿಸುವ ತಹತಹ ಎಷ್ಟರಮಟ್ಟಿಗಿತ್ತು ಅಂದ್ರೆ…, ಎಷ್ಟೋ ಸರ್ತಿ ಕೆಲಸಕ್ಕೆ ರಾಜೀನಾಮೆ ಎಸೆದು ಸರ್ ಜೊತೆ ಬಂದು ಇದ್ಬಿಡೋಣ ಅನಿಸೋದು… ಆದರೆ ಸರ್‍ಗೆ ಎಂದಿಗೂ ಆಶ್ರಯದಾತರಾಗಲು ಸಾಧ್ಯವಿಲ್ಲ ಎಂದೂ ನನಗನಿಸುತ್ತಿತ್ತು.

`ಐದು ವರ್ಷದನಂತರ ನಿನ್ನ ಸರ್ ಆಯಿತು ಮದುವೆ ಮಾಡಿಕೊಳ್ಳೋಣ ಬಾ’ ಎಂದಾಗ ಒಪ್ಪಿ ಬಂದು ಅವರ ಮನೆಯಲ್ಲೇ ಮೂರು ದಿನ ಕಳೆದು ನಮ್ಮ ಮನೆಗೂ ಬಂದು ಇನ್ನು ಮದುವೆ ಆಗಿಯೇಬಿಟ್ಟಿತು ಅಂತೆಲ್ಲ ಘೋಷಿಸಿ.. ನಾವು ಗಂಡಹೆಂಡತಿ ನಿಮ್ಮಿಬ್ಬರಿಗೂ ಒಂದು ಪಾರ್ಟಿ ಕೊಟ್ಟು ಎಲ್ಲ ಆದಮೇಲೆ… ನೀನು ವಾಪಾಸ್ ಹೋದವಳು ಮದುವೆ ಸಾಧ್ಯವೆ ಇಲ್ಲ ಎಂದು ಪತ್ರ ಹಾಕಿ ಸುಮ್ಮನಾಗಿದ್ದೆ. ಆಗಂತೂ ರಾಜೀವ್, ನಿನ್ನ ಪ್ರೇಮದಲ್ಲಿ ಹುಚ್ಚಾಗಿ ನಿನ್ನ ಮನೆಗೆ ಬಂದು ಕಾಲು ಹಿಡಿದು ಕೇಳಿದ್ದರೂ ಒಪ್ಪಿರಲಿಲ್ಲ’…

`ತಪ್ಪು ತಿಳಿಬೇಡಿ ಅಕ್ಕ. ಸರ್ ಜೊತೆಗಿದ್ದ ಮೂರು ದಿನಗಳಲ್ಲಿ ನನಗೆ ಖಚಿತವಾಗಿದ್ದು, ಸರ್ ನನ್ನನ್ನಲ್ಲ ನಿಮ್ಮನ್ನು ಪ್ರೀತಿಸ್ತಿದ್ದಾರೆ. ಮತ್ತೆ ನಿಮ್ಮಿಬ್ಬರ ಸಂಬಂಧದ ಸರಾಗತೆಗೆ ನನ್ನನ್ನು ಬಳಸಿಕೊಳ್ಳಲಾಗ್ತಿದೆ ಅಂತ. ನಿಮ್ಮ ಬಗೆಗಿನ ಅವರ ಪ್ರೇಮ ಕಣ್ಣಲ್ಲಿ ಕಾಣುವಷ್ಟು ಡಾಳಾಗಿತ್ತು.

`ನಿನಗೆ ತಲೆ ಕೆಟ್ಟಿದ್ಯಾ? ನನಗೆ ಮದುವೆಯಾಗಿದೆ. ಪ್ರೀತಿಸುವ ಗಂಡ, ಮುದ್ದಾದ ಮಗು ಎಲ್ಲ ಇದ್ದರು ನನಗೆ.

`ಅಕ್ಕ, ಈಗಲಾದ್ರೂ ನಾವು ಪರಸ್ಪರರಿಗೆ ಸುಳ್ಳು ಹೇಳೋದು ಬೇಡ. ಸರ್‍ಗೆ ಹತ್ತಿರವಾಗಲು ತಾನೇ ನೀವು ಇಷ್ಟು ದೂರ ವರ್ಗ ಮಾಡಿಸಿಕೊಂಡು ಬಂದ್ರಿ. ನಿಮ್ಮ ಪತಿಗೆ ವರ್ಗಾವಣೆ ಇಲ್ಲದ ಕಾರಣಕ್ಕೆ ಅವರು ಅವರ ಕೆಲಸವನ್ನೇ ಬಿಟ್ಟು ಬೇರೆ ಕೆಲಸ ಹುಡುಕಬೇಕಾಯಿತು’. ನಾನು ಸರ್ ಜೊತೆಗಿದ್ದ ಆ ಮೂರು ದಿನದಲ್ಲಿ ನನಗೆ ಸ್ಪಷ್ಟವಾಗಿದ್ದು ನನ್ನಲ್ಲಿ ಸರ್ ನಿಮ್ಮನ್ನು ಹುಡುಕುತಿದ್ದಾರೆ ಅಂತ.’

`ನಿನಗೆ ಹೇಳಿಬಿಡ್ತೇನೆ… ನಾನೇ ನಿನ್ನನ್ನು ಕರೆಸಲು ರಾಜೀವ್‍ಗೆ ಒತ್ತಾಯಿಸಿದ್ದೆ, ನನಗೆ ಅವನ ಜೊತೆಗಿನ ಸಂಬಂಧದಿಂದ ಬಿಡಿಸಿಕೊಳ್ಳಬೇಕಿತ್ತು. ಸುಸ್ತಾಗಿದ್ದೆ ನಾನು. ಸಾಗರ್ ಜೊತೆ ರಾಜೀವ್ ಸರಿಯಾಗಿ ಮುಖ ಕೊಟ್ಟು ಮಾತಾಡದೇ ಕಣ್ತಪ್ಪಿಸುತ್ತಿರುವುದು ನನ್ನ ಅರಿವಿಗೆ ಬಂದು ಹಿಂಸೆಯಾಗುತಿತ್ತು. ಎಲ್ಲ ಕೊಡವಿಹೋಗಲೂ ಸಾಧ್ಯವಿರಲಿಲ್ಲ. ಸಂಸಾರವೊಂದಿಗಳು… ಮನೆಯಿಂದ ಹೊರಬೀಳಬೇಕಾದರೆ ಮನೆಯ ದೇಖರೇಖಿಯಿಂದ ಹಿಡಿದು, ಹಾಲಿಗೆ ಹೆಪ್ಪಿಟ್ಟು ನನ್ನ ಅನುಪಸ್ಥಿತಿಯಲ್ಲಿ ಮೊಸರಿಗೆ ಸಹ ಕೊರತೆಯಾಗದಂತೆ ವ್ಯವಸ್ಥೆ ಮಾಡಿಟ್ಟುಹೋಗುವ ಜವಾಬ್ದಾರಿ ಯಾರೂ ಹೇಳದಿದ್ದರೂ ಮೈಗೂಡಿತ್ತು. ಮತ್ತೊಂದೆಡೆ ಯಾವುದೇ ಸಂಬಂಧವು ತೀವ್ರವಾಗಿದ್ದಷ್ಟು ಅದರ ದೀರ್ಘತೆಯಲ್ಲಿ ಸುಸ್ತು ಜಾಸ್ತಿ. ಹಾಗೆ ನೀನು ರಾಜೀವ್ ಮದುವೆಯಾದರೆ ನಾನು ನಿರಾಳವಾಗಬಹುದೆಂದು ತಿಳಿದಿದ್ದೆ… ನಿಮ್ಮಿಬ್ಬರಿಗಿಂತ ನನಗೆ ನಿಮ್ಮ ಮದುವೆ ಬೇಕಿತ್ತು.’

`ಅಕ್ಕ, ಆಮೇಲೂ ಸರ್ ಜೊತೆ ನೀವು ತುಂಬಾ ಚೆನ್ನಾಗಿಯೇ ಇದ್ರಿ ಅಲ್ವ? ಸಾಯುವ ಕೊನೆಗಳಿಗೆಯವರೆಗೂ ನೀವೆ ಸರ್ ಜೊತೆ ಇದ್ರಿ. ನೀವು ದಂಪತಿಗಳು ಇಲ್ಲದಿದ್ದರೆ ನನ್ನ ತಮ್ಮನಿಗೆ ಧಾತಾರರು ಯಾರೂ ಇರಲಿಲ್ಲ ಎಂದು ಅವರಕ್ಕ ಆ ದಿನ ನಿಮ್ಮ ಕೈ ಹಿಡಿದು ಅಳುತಿದ್ದರು.’

‘ನಿಮ್ಮಿಬ್ಬರ ಮದುವೆ ಆಗಲಿಲ್ಲ. ಆದರೆ ನಾನು ಮತ್ತೆ ರಾಜೀವ್‍ಗೆ ಹತ್ತಿರವಾಗದಷ್ಟು ದೂರವಾಗಿಬಿಟ್ಟಿದ್ದೆ… ಈ ನಡುವೆ ಮತ್ತೊಂದು ವಿಚಿತ್ರ ನಡೆಯಿತು. ರಾಜೀವ್‍ಗೆ ಸಾಗರ್ ಹತ್ತಿರವಾಗತೊಡಗಿದ್ದ. ನಿಮ್ಮ ಮದುವೆ ಮುರಿದುಬಿದ್ದಿದ್ದೇ ನೆಪವಾಯಿತೇನೋ ಸಾಗರ್ ರಾಜೀವ್‍ರನ್ನು ಬಹಳ ಕಾಳಜಿ, ಸ್ನೇಹದಲ್ಲಿ ನೋಡಿಕೊಳ್ಳತೊಡಗಿದ. ಪ್ರೇಮದಲ್ಲಿ ಸೋತ ಗಂಡಸಿಗೆ ಅನುಕಂಪ ಹೆಚ್ಚೇ ದೊರೆಯುತ್ತದೆ… ರಾಜೀವ್‍ಗೆ ಊಟ, ತಿಂಡಿ ಎಲ್ಲ ನಮ್ಮ ಮನೆಯಿಂದಲೇ ಹೋಗುವ ವ್ಯವಸ್ಥೆ ಮಾಡಿದ. ಸಂಜೆ ಹೊತ್ತು ಅವರಿಬ್ಬರು ಒಟ್ಟಿಗೆ ಕಳೆಯತೊಡಗಿದರು. ಹಬ್ಬದ ದಿನದಲ್ಲಿ ಮೊದಲೇ ಅವರಿಗೆ ಕರೆಹೋಗುತಿತ್ತು.. ಮಗುವನ್ನು ಕರೆದುಕೊಂಡು ಪ್ರತಿ ಭಾನುವಾರ ಅವರಿಬ್ಬರು ಹೊರಗೆ ಹೋಗಿ ಸಮಯ ಕಳೆದು ಬರುವುದು ಸಾಮಾನ್ಯವಾಯಿತು. ಅವರು ಮೂರು ಜನರದ್ದೇ ಒಂದು ತಂಡವಾಗಿ ನಾನೇ ಹೊರಗಿನವಳು ಎನಿಸುತಿತ್ತು… ಆದರೆ ಎಲ್ಲವು ಅಷ್ಟು ಸರಾಗವಿರಲಿಲ್ಲ..

ರಾಜೀವ್ ನನ್ನ ಕಡೆಗೆ ಯಾಚನೆಯ ಕಣ್ಣರಳಿಸುತಿದ್ದುದು ಕಾಣುತಿತ್ತು… ಆದರೆ ನಾನು ನಿರ್ಲಕ್ಷಿಸಿ ನಡೆಯುತಿದ್ದೆ… ನನ್ನ ಕಟುವರ್ತನೆಯನ್ನು ಅವರಿಗೆ ಸಹಿಸಿಕೊಳ್ಳಲಾಗಲಿಲ್ಲ..’ ಕೊನೆಯ ವಾಕ್ಯ ಹೇಳುತ್ತಾ ಅವಳ ಗಂಟಲು ಬಿಗಿದಿತ್ತು… ಎದುರಿದ್ದವಳ ಕಣ್ಣಲ್ಲೂ ನೀರಿತ್ತು.


ಇದನ್ನು ಓದಿ: ‘ಎಜುಕೇಟೆಡ್ ಗರ್ಲ್ಸ್’ : ಎಡೆಯೂರು ಪಲ್ಲವಿ ಅವರ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...