Homeಮುಖಪುಟಪಿ.ಲಂಕೇಶ್‌ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಭವಿಸಿದ ಎರಡು ಘಟನೆಗಳು!

ಪಿ.ಲಂಕೇಶ್‌ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಭವಿಸಿದ ಎರಡು ಘಟನೆಗಳು!

ಶಂಕರಪ್ಪ ನಡೆಸುವ ಸಮ್ಮೇಳನ ಹಾಸ್ಯಾಸ್ಪದ ಚಟುವಟಿಕೆಗಳಿಂದ ಮುಕ್ತವಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲನೆಯದಾಗಿ ಕುವೆಂಪು ರಂಗಮಂದಿರದ ಆವರಣ ಬುಕ್‌ಸ್ಟಾಲ್‌ಗಳಿಲ್ಲದೆ ಬಿಕೋ ಎನ್ನುತ್ತಿದ್ದವು.

- Advertisement -
- Advertisement -

ಕಳೆದವಾರ ಶಿವಮೊಗ್ಗದಲ್ಲಿ ಎರಡು ಘಟನೆ ಸಂಭವಿಸಿವೆ. ಒಂದು ಲಂಕೇಶರ ದೂರದ ಸಂಬಂಧಿಯಾದ ಡಿ.ಬಿ.ಶಂಕರಪ್ಪ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವುದರಿಂದ, ನಡೆಸಿದ ಸಾಹಿತ್ಯ ಸಮ್ಮೇಳನ! ಇನ್ನೊಂದು ಡಿವಿಎಸ್ ಕಾಲೇಜಿನ ರೀಡರ್‍ಸ್ ಕ್ಲಬ್ ಏರ್ಪಡಿಸಿದ್ದ “ಲಂಕೇಶ್ ಹೊಸ ತಲೆಮಾರಿಗೆ’ ಎಂಬ ಕಾರ್ಯಕ್ರಮ.

ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಖ್ಯಾತ ಮನೋವೈದ್ಯ ಶ್ರೀಧರ್‌ವರ ಪತ್ನಿ ವಿಜಯಾ ಆಯ್ಕೆಯಾಗಿದ್ದರು. ಇವರ ಮೇಲಿರುವ ಆಪಾದನೆ, ಅದೂ ಗುರುತರ ಆಪಾದನೆಗಳೆಂದರೆ ವಿಜಯಾ ಅವರು ರಾಘವೇಶ್ವರ ಸ್ವಾಮಿಯ ರಾಸಲೀಲೆ ಪರವಾಗಿದ್ದಾರೆ ಎಂಬುದು. ಇನ್ನೊಂದು, ಇವರ ಸಾಹಿತ್ಯದಲ್ಲಿ ಹೆಣ್ಣಿನ ಶೋಷಣೆಯ ಯಾವ ವಿವರವೂ ಇಲ್ಲ ಎಂಬುದು ಸಹ್ಯಾದ್ರಿ ಕಾಲೇಜಿನ ಡಾ. ಹಾಲಮ್ಮ ಅವರ ಅಭಿಮತ.

ಡಿ.ಬಿ.ಶಂಕರಪ್ಪ

ಈ ಆಪಾದನೆಗಳನ್ನ ಬಿಟ್ಟರೆ ವಿಜಯಾ ದೇವರಂತಹ ಮಹಿಳೆ. ಅದಕ್ಕೇ ಏನೋ, ಏನಿದೆ ಅದನ್ನು ವಿಮರ್ಶೆ ಮಾಡಿ ಹೇಳಬೇಕಾದ ವಿದ್ವಾಂಸರನೇಕರು, ವಿಜಯಕ್ಕ, ವಿಜಯಕ್ಕ ಎನ್ನುತ್ತಿದ್ದರು. ವಿಜಯಕ್ಕ ಎಂದಕೂಡಲೇ ಅದರ ಸಾಹಿತ್ಯದಲ್ಲಿ ಕಂಡದ್ದನ್ನು ಹೇಳದೆ ಮರೆಮಾಚಬೇಕಾಗುತ್ತದೆ ಎಂಬ ಸರಳ ಸಿದ್ಧಾಂತ ಈ ಮೂರ್ಖ ವಿದ್ವಾಂಸರಿಗೆ ಹೊಳೆಯದಿದ್ದುದು ಸಹಜವೇ ಸರಿ.

ಶಂಕರಪ್ಪ ನಡೆಸುವ ಸಮ್ಮೇಳನ ಹಾಸ್ಯಾಸ್ಪದ ಚಟುವಟಿಕೆಗಳಿಂದ ಮುಕ್ತವಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲನೆಯದಾಗಿ ಕುವೆಂಪು ರಂಗಮಂದಿರದ ಆವರಣ ಬುಕ್‌ಸ್ಟಾಲ್‌ಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ವಿಚಾರಿಸಲಾಗಿ, ಶಂಕರಪ್ಪನ ಟೀಮು ಒಂದು ಸ್ಟಾಲಿಗೆ ಆರು ಸಾವಿರ ರೂ. ಕೇಳಿತಂತೆ. ಪುಸ್ತಕ ವಿರೋಧಿಗಳು ಮಾತ್ರ ಇಂತಹ ಶರತ್ತು ಹಾಕಬಲ್ಲರು. ಶಿವಮೊಗ್ಗದಲ್ಲಿ ಅಕ್ಷತಾ ನಡೆಸುವ ಅಹರ್ನಿಶಿ ಪ್ರಕಾಶನ, ಗೀತಾಂಜಲಿ ಪ್ರಕಾಶನ, ಪುಸ್ತಕಮನೆ ಇತ್ಯಾದಿ ನಾಡಿನಲ್ಲೇ ಹೆಸರಾದ ಪ್ರಕಾಶನಗಳಾಗಿವೆ. ಇವು ಕುವೆಂಪು ರಂಗಮಂದಿರದ ಆವರಣಕ್ಕೆ ಸಂಭ್ರಮವುಂಟುಮಾಡುತ್ತವೆ. ನಿರರ್ಥಕ ಗೋಷ್ಠಿಯಲ್ಲಿ ಕೂರಲಾಗದವರು ಈ ಪುಸ್ತಕ ಮಳಿಗೆಯಲ್ಲಿ ಸುತ್ತುತ್ತಾರೆ. ಇಂತಹ ವಾತಾವರಣವೇ ಇಲ್ಲದಂತೆ ಮಾಡಿದ್ದ ಶಂಕರಪ್ಪನ ಟೀಮು ಮೂರು ದಿನ ಜನಗಳೇ ಇಲ್ಲದ ನೀರಸ ಸಮ್ಮೇಳನ ನಡೆಸಿ ನಿರ್ಗಮಿಸಿತು.

ಗೋಷ್ಠಿಯಲ್ಲಿ ಮಾತನಾಡುವವರು ಒಂಬತ್ತು ಜನರಿದ್ದರೆ, ಅದನ್ನು ನಿರ್ವಹಿಸಲು ನಾಲ್ಕು ಜನರಿದ್ದುದರಿಂದ ವೇದಿಕೆ ಮೇಲೆ ಕನಿಷ್ಠ ಹದಿನೈದು ಜನರಿರುತ್ತಿದ್ದರು. ವೇದಿಕೆ ಉದ್ದ ಸಾಕಾಗದೆ ಅಡ್ಡ ಕುರ್ಚಿಗಳನ್ನು ಹಾಕುತ್ತಿದ್ದರು. ಇನ್ನು ಎಂಟುನೂರು ಸೀಟಿನ ಕುವೆಂಪು ರಂಗಮಂದಿರದಲ್ಲಿ ಎಪ್ಪತ್ತೈದರಿಂದ ನೂರ ಇಪ್ಪತ್ತೈದು ಜನರವರೆಗೆ ರಂಗಮಂದಿರ ಕಿಕ್ಕಿರಿದಿತ್ತು! ಎರಡನೇ ದಿನ ಕವಿಗೋಷ್ಠಿಗೆ ಜಿಲ್ಲೆಯ ದಶದಿಕ್ಕಿನಿಂದ ಕೆಲ ಕವಿಗಳು ದಾಳಿಯಿಟ್ಟು ಹೊಸದಾಗಿ ಹೆಸರು ಸೇರಿಸಿದ್ದರಿಂದ, ಹೆದರಿಕೊಂಡ ಶಂಕರಪ್ಪ ಹೊಸದಾಗಿ ಸೇರ್ಪಡೆಯಾದ ಕವಿಗಳಿಗೆ, ಪುರಸ್ಕಾರದ ಹಾರ ಶಾಲು ಇಲ್ಲದೇ ಇರುವುದರಿಂದ, ಅನುಸರಿಸಿಕೊಂಡು ಮುಂದಿನ ಬಾರಿ ಪಡೆಯಬೇಕು ಎಂದರು. ಅದರಬದಲು ಆನಂತರ ಅಥವಾ ಮರುದಿನ ಎನ್ನಬಹುದಿತ್ತು.

ಇನ್ನು ಕವಿಗೋಷ್ಠಿ ಆರಂಭವಾಗುತ್ತಿದ್ದಂತೆ, ಊಟ ಬಂದಿದ್ದರಿಂದ ಸಭಾಂಗಣದ ಜನ ಆ ಕಡೆ ಓಡಿದರು. ಆದರೂ ಪ್ರಯೋಜನವಾಗಲಿಲ್ಲ. ಅದ್ಯಾರೊ ಏನೊ ಬಂದು ತಿಂದು ಮುಗಿಸಿದ್ದರಿಂದ, ಸಿಟ್ಟಾದ ಕೆಲವರು ಮನೆಯ ಕಡೆ ಹೋದರು. ಶಂಕರಪ್ಪ ಸಮಯಾಭಾವದಿಂದ ಊಟದ ಬಿಡುವಿಲ್ಲದಂತೆ ನಿರಂತರ ಗೋಷ್ಠಿಗಳನ್ನು ನಡೆಸಿದರು. ಈ ಮಧ್ಯೆ ಒಂದಷ್ಟು ದಲಿತರು ಪ್ರತಿಭಟಿಸಿ ನಮಗೇಕೆ ಅವಕಾಶ ಕೊಟ್ಟಿಲ್ಲ ಎಂದು ತಕರಾರು ತೆಗೆದರು. ಶಂಕರಪ್ಪ ಮುಂದೆ ಕೊಡಲಾಗುತ್ತೆ ಎಂದು ಆಶ್ವಾಸನೆ ಕೊಟ್ಟರು.

ಇನ್ನ ನಮ್ಮ ಜಿಲ್ಲೆ ನಮ್ಮ ನೆಲೆ ಎಂಬ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಇಬ್ಬರು ಬೃಹಸ್ಪತಿಗಳ ಪೈಕಿ ಒಬ್ಬ ತರ್ಕಗಳು, ಪ್ರಶ್ನೆಗಳು ಇಲ್ಲದಿದ್ದರೆ ಈ ನಾಡು ಶಾಂತವಾಗಿರುತ್ತದೆ ಎಂದ. ಮತ್ತೊಬ್ಬ ದೇವಸ್ಥಾನಗಳು ನಮ್ಮ ಸಂಸ್ಕೃತಿ ಕೇಂದ್ರಗಳು. ಅವು ಚೆನ್ನಾಗಿರಬೇಕು ಎಂದ. ಸೂಕ್ಷ್ಮವಾಗಿ ನೋಡಿದರೆ ಅವು ಪುರೋಹಿತ ಪಿಂಡಗಳಾಗಿದ್ದುದ್ದು ಆಶ್ಚರ್ಯವಾಗಲಿಲ್ಲ. ಇಂಥವು ಶಂಕರಪ್ಪನ ತಲೆಗೆ ಹೋಗುವುದಿಲ್ಲ. ಮಗಳ ಮದುವೆಗೆ ಇಡೀ ನಾಡೇ ಬಂದಿತ್ತು, ಕರೆದವರೆಲ್ಲ ಬಂದು ಉಂಡರೆಂಬ ತೃಪ್ತಿಭಾವದ ಶಂಕರಪ್ಪನಿಗೆ ಸಾಹಿತ್ಯದ ಸೂಕ್ಷ್ಮಗಳು, ಜಾತ್ಯತೀತ ಮನಸ್ಸುಗಳು, ಸಾಹಿತ್ಯ ಸಮ್ಮೇಳನ ಹೇಗಿರಬೇಕೆಂಬ ಕಲ್ಪನೆಯೇ ಇಲ್ಲ. ಅದಕ್ಕಾಗಿಯೇ ಸಾಹಿತ್ಯ ಸಮ್ಮೇಳನವೂ ಸಾಮಾಜಿಕ ನ್ಯಾಯದ ಸಮಸ್ಯೆಗೆ ತುತ್ತಾಗಿ, ವೇದಿಕೆ ಮೇಲೆ ಒಂದು ಡಜನ್ ವಿದ್ವಾಂಸರು ಕೂರುವುದು. ಇನ್ನು ಅವರ ಆಹ್ವಾನ ಪತ್ರಿಕೆ ನೋಡಿದರೆ ಭಯವಾಗುತ್ತದೆ. ಅದರಲ್ಲಿರುವ ಹೆಸರುಗಳನ್ನು ನೋಡಿದರೆ, ಓಟರ್ ಲಿಸ್ಟು ನೋಡಿದಂತಾಗುತ್ತದೆ. ಇದು ಶಂಕರಪ್ಪನ ಕತೆಯಾದರೆ, ಕೇಂದ್ರ ಸ್ಥಾನದ ಅಧ್ಯಕ್ಷ ಮನು ಬಳಿಗಾರ್ ಎಂಬ ಸರಕಾರಿ ಆಸಾಮಿಗೆ ಕನ್ನಡ ಸಾಹಿತ್ಯದ ಆಳ ಅಗಲ ಗೊತ್ತಿದ್ದಿದ್ದರೆ, ಈ ದೇಶ ಕಂಡ ಅಪರೂಪದ ಸಂಶೋಧಕ ಶ.ಷಟ್ಟರ್ ಸಮ್ಮೇಳನದ ಅಧ್ಯಕ್ಷರಾಗುತ್ತಿದ್ದರು.

ಸದ್ಯಕ್ಕೆ ನಮ್ಮ ಸಮಾಜ ಕ್ಷೋಭೆಯಿಂದ ಕುದಿಯುತ್ತಿದೆ. ಎಲ್ಲಿ ನೋಡಿದರೂ ಗಲಾಟೆಯ ಶಬ್ದವೇ ತುಂಬಿದೆ. ಸಂಗೀತವೂ ಗಲಭೆಯಂತೆ ಕೇಳುತ್ತಿದೆ. ಆಶ್ಚರ್ಯವೆಂದರೆ, ಇದರೊಳಕ್ಕೆ ಸಾಹಿತ್ಯ ಸಮ್ಮೇಳನವೂ ಸೇರಿಕೊಂಡಿವೆ. ಸಭೆಯಲ್ಲಿ ಪ್ರಾರ್ಥನೆ ಮಾಡುವ, ಸ್ವಾಗತ ಮಾಡುವ, ನಿರೂಪಣೆ ಮಾಡುವ, ವಂದನಾರ್ಪಣೆ ಮಾಡುವಾಗ ಹಾರತುರಾಯಿ ಶಾಲು ತಂದು ಎಸೆಯುವ ಎಲ್ಲರೂ ಗಲಭೆಗೆ ತುತ್ತಾದವರಂತೆ ಕಾಣುತ್ತಿದ್ದಾರೆ. ನಿಜಕ್ಕೂ ಸಾಹಿತ್ಯ ಸಮ್ಮೇಳನ ಇಂತಹ ಗಲಭೆ ಸೃಷ್ಟಿಸಬಾರದು. ಭೀಕರವಾದ ಸೌಂಡ್ ಬಾಕ್ಸು, ಮೈಕುಗಳಿಂದ ಉಂಟಾಗುವ ಶಬ್ದಗಳಿಂದ ಮುಕ್ತವಾಗಿ ಸಾಂತ್ವನದಂತಿರುವಂತೆ ನೋಡಿಕೊಳ್ಳಬೇಕು.

ಇಂತಹ ಹೊತ್ತಿನಲ್ಲಿ ಡಿವಿಎಸ್‌ನಲ್ಲಿ ನಡೆದ ಲಂಕೇಶರ ಹುಟ್ಟುಹಬ್ಬರ ಸೆಮಿನಾರನ್ನು ಶಂಕರಪ್ಪ ಬಂದು ನೋಡಬೇಕಿತ್ತು. ಅಲ್ಲಿಗೆ ಲಂಕೇಶರ ನೀಲು ಕಾವ್ಯಕ್ಕೆ ಚಿತ್ರ ಬರೆದಿದ್ದ, ಮತ್ತವರಿಗೆ ಕುತೂಹಲ ಕೆರಳಿಸಿದ್ದ ಎಂ.ಎಸ್.ಮೂರ್ತಿ ಬಂದಿದ್ದರು. ಲಂಕೇಶರ ನಾಟಕಗಳನ್ನು ಪರಿಣಾಮಕಾರಿಯಾಗಿ ನಿರ್ದೇಶಿಸಿದ್ದ ನಟರಾಜ್ ಹೊನ್ನವಳ್ಳಿ ಆಗಮಿಸಿದ್ದರು. ಜೊತೆಗೆ ಲಂಕೇಶರ ಒಡನಾಡಿಯಾಗಿದ್ದ ಬಿ.ಚಂದ್ರೇಗೌಡರು ಆಶಯ ಭಾಷಣ ಮಾಡಿದರು. ವೇದಿಕೆಯ ಮೇಲೆ ಮೂವರು ಮಾತನಾಡುವವರಿದ್ದರೆ, ಸಭಾಂಗಣದಲ್ಲಿ ನೂರಿಪ್ಪತ್ತೈದು ವಿದ್ಯಾರ್ಥಿಗಳಿದ್ದರು.

ಈ ಹೊಸ ತಲೆಮಾರಿಗೆ ಮಾತನಾಡಿದವರೆಲ್ಲ ಸಾಧ್ಯವಾದಷ್ಟು ಲಂಕೇಶರನ್ನು ತಲುಪಿಸಿದರು. ಕಡೆಯಲ್ಲಿ ಕವಿಯತ್ರಿ ಅಕ್ಷತಾ ಹುಂಚದಕಟ್ಟೆ ಲಂಕೇಶರನ್ನು ತುಂಬಾ ಪರಿಣಾಮಕಾರಿಯಾಗಿ ನಿರೂಪಿಸಿ ವಿದ್ಯಾರ್ಥಿಗಳಿಂದ ಚಪ್ಪಾಳೆ ಗಿಟ್ಟಿಸಿದರು. ಅವರು ಓದಿದ ನೀಲು ಕವನ ವಿದ್ಯಾರ್ಥಿಗಳಿಗೆ ತುಂಬಾ ಪ್ರೇರಣೆ ನೀಡಿತು.

ಅಕ್ಷತಾ ಹುಂಚದಕಟ್ಟೆ

 

ನಟರಾಜ ಹೊನ್ನವಳ್ಳಿ ನಿರ್ದೇಶಿಸಿದ್ದ ಗುಣಮುಖ ನಾಟಕದ ಕಡೆ ದೃಶ್ಯಗಳನ್ನು ಹೊಂಗಿರಣದ ಮತ್ತು ನಾದಿರ್ ಶಾ ಪಾತ್ರವನ್ನು ಅದ್ಭುತವಾಗಿ ಅಭಿನಯಿಸುವ ಸಾಸ್ವೆಹಳ್ಳಿ ಸತೀಶ್ ಮತ್ತು ಕೊಟ್ರಪ್ಪ ವಾಚಿಸಿದರು. ಸಭೆಯಲ್ಲಿ ಪ್ರಸ್ತಾಪವಾದ ಸಾರಾ ಅಬೂಬಕರ್ ವಿಷಯ ಕೇಳಿ ಪ್ರೇರಣೆಗೊಂಡ ಮುಸ್ಲಿಂ ಹೆಣ್ಣುಮಗಳೊಬ್ಬಳು, “ನಾನು ಬರೀತಾಯಿದ್ದೀನಿ. ಆದ್ರೆ ಉರ್ದುವಿನಲ್ಲಿ ಬರೀತಿನಿ. ಇನ್ನುಮುಂದೆ ಕನ್ನಡದಲ್ಲಿ ಬರೀಬೇಕು” ಎಂದಳು. ಖಂಡಿತ ನೀನು ಬರೀಲೇಬೇಕು, ಸಾರಾ, ಬಾನು ಬರವಣಿಗೆ ನಿಲ್ಲುಸ್ತಾಯಿದಾರೆ. ಮುಸ್ಲಿಂ ಹೆಣ್ಣುಮಕ್ಕಳಲ್ಲಿ ಬರಹಗಾರ್ತಿಯರೇ ಇಲ್ಲ, ನೀನು ಬರಿಬೇಕು ಎಂದಾಗ ಚಿಟ್ಟೆಯಾಕಾರದ ಚೂಡಿದಾರ್ ಹಾಕಿದ್ದ ಆಕೆ ಅದೆಲ್ಲೊ ಮಡಗಿದ್ದ ಬುರ್ಖಾ ಧರಿಸಿಕೊಂಡು ಹೊರಟಳು! ಆಕೆ ಏನಾದರೂ ಬರೆಯಬಹುದು. ಲಂಕೇಶ್ ಅಂತಹವರ ಪ್ರೇರಣೆಯಾಗಿದ್ದರು. ಮುಂದೂ ಕೂಡಾ ಆಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...