Homeಮುಖಪುಟಪಿ.ಲಂಕೇಶ್‌ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಭವಿಸಿದ ಎರಡು ಘಟನೆಗಳು!

ಪಿ.ಲಂಕೇಶ್‌ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಭವಿಸಿದ ಎರಡು ಘಟನೆಗಳು!

ಶಂಕರಪ್ಪ ನಡೆಸುವ ಸಮ್ಮೇಳನ ಹಾಸ್ಯಾಸ್ಪದ ಚಟುವಟಿಕೆಗಳಿಂದ ಮುಕ್ತವಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲನೆಯದಾಗಿ ಕುವೆಂಪು ರಂಗಮಂದಿರದ ಆವರಣ ಬುಕ್‌ಸ್ಟಾಲ್‌ಗಳಿಲ್ಲದೆ ಬಿಕೋ ಎನ್ನುತ್ತಿದ್ದವು.

- Advertisement -
- Advertisement -

ಕಳೆದವಾರ ಶಿವಮೊಗ್ಗದಲ್ಲಿ ಎರಡು ಘಟನೆ ಸಂಭವಿಸಿವೆ. ಒಂದು ಲಂಕೇಶರ ದೂರದ ಸಂಬಂಧಿಯಾದ ಡಿ.ಬಿ.ಶಂಕರಪ್ಪ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವುದರಿಂದ, ನಡೆಸಿದ ಸಾಹಿತ್ಯ ಸಮ್ಮೇಳನ! ಇನ್ನೊಂದು ಡಿವಿಎಸ್ ಕಾಲೇಜಿನ ರೀಡರ್‍ಸ್ ಕ್ಲಬ್ ಏರ್ಪಡಿಸಿದ್ದ “ಲಂಕೇಶ್ ಹೊಸ ತಲೆಮಾರಿಗೆ’ ಎಂಬ ಕಾರ್ಯಕ್ರಮ.

ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಖ್ಯಾತ ಮನೋವೈದ್ಯ ಶ್ರೀಧರ್‌ವರ ಪತ್ನಿ ವಿಜಯಾ ಆಯ್ಕೆಯಾಗಿದ್ದರು. ಇವರ ಮೇಲಿರುವ ಆಪಾದನೆ, ಅದೂ ಗುರುತರ ಆಪಾದನೆಗಳೆಂದರೆ ವಿಜಯಾ ಅವರು ರಾಘವೇಶ್ವರ ಸ್ವಾಮಿಯ ರಾಸಲೀಲೆ ಪರವಾಗಿದ್ದಾರೆ ಎಂಬುದು. ಇನ್ನೊಂದು, ಇವರ ಸಾಹಿತ್ಯದಲ್ಲಿ ಹೆಣ್ಣಿನ ಶೋಷಣೆಯ ಯಾವ ವಿವರವೂ ಇಲ್ಲ ಎಂಬುದು ಸಹ್ಯಾದ್ರಿ ಕಾಲೇಜಿನ ಡಾ. ಹಾಲಮ್ಮ ಅವರ ಅಭಿಮತ.

ಡಿ.ಬಿ.ಶಂಕರಪ್ಪ

ಈ ಆಪಾದನೆಗಳನ್ನ ಬಿಟ್ಟರೆ ವಿಜಯಾ ದೇವರಂತಹ ಮಹಿಳೆ. ಅದಕ್ಕೇ ಏನೋ, ಏನಿದೆ ಅದನ್ನು ವಿಮರ್ಶೆ ಮಾಡಿ ಹೇಳಬೇಕಾದ ವಿದ್ವಾಂಸರನೇಕರು, ವಿಜಯಕ್ಕ, ವಿಜಯಕ್ಕ ಎನ್ನುತ್ತಿದ್ದರು. ವಿಜಯಕ್ಕ ಎಂದಕೂಡಲೇ ಅದರ ಸಾಹಿತ್ಯದಲ್ಲಿ ಕಂಡದ್ದನ್ನು ಹೇಳದೆ ಮರೆಮಾಚಬೇಕಾಗುತ್ತದೆ ಎಂಬ ಸರಳ ಸಿದ್ಧಾಂತ ಈ ಮೂರ್ಖ ವಿದ್ವಾಂಸರಿಗೆ ಹೊಳೆಯದಿದ್ದುದು ಸಹಜವೇ ಸರಿ.

ಶಂಕರಪ್ಪ ನಡೆಸುವ ಸಮ್ಮೇಳನ ಹಾಸ್ಯಾಸ್ಪದ ಚಟುವಟಿಕೆಗಳಿಂದ ಮುಕ್ತವಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲನೆಯದಾಗಿ ಕುವೆಂಪು ರಂಗಮಂದಿರದ ಆವರಣ ಬುಕ್‌ಸ್ಟಾಲ್‌ಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ವಿಚಾರಿಸಲಾಗಿ, ಶಂಕರಪ್ಪನ ಟೀಮು ಒಂದು ಸ್ಟಾಲಿಗೆ ಆರು ಸಾವಿರ ರೂ. ಕೇಳಿತಂತೆ. ಪುಸ್ತಕ ವಿರೋಧಿಗಳು ಮಾತ್ರ ಇಂತಹ ಶರತ್ತು ಹಾಕಬಲ್ಲರು. ಶಿವಮೊಗ್ಗದಲ್ಲಿ ಅಕ್ಷತಾ ನಡೆಸುವ ಅಹರ್ನಿಶಿ ಪ್ರಕಾಶನ, ಗೀತಾಂಜಲಿ ಪ್ರಕಾಶನ, ಪುಸ್ತಕಮನೆ ಇತ್ಯಾದಿ ನಾಡಿನಲ್ಲೇ ಹೆಸರಾದ ಪ್ರಕಾಶನಗಳಾಗಿವೆ. ಇವು ಕುವೆಂಪು ರಂಗಮಂದಿರದ ಆವರಣಕ್ಕೆ ಸಂಭ್ರಮವುಂಟುಮಾಡುತ್ತವೆ. ನಿರರ್ಥಕ ಗೋಷ್ಠಿಯಲ್ಲಿ ಕೂರಲಾಗದವರು ಈ ಪುಸ್ತಕ ಮಳಿಗೆಯಲ್ಲಿ ಸುತ್ತುತ್ತಾರೆ. ಇಂತಹ ವಾತಾವರಣವೇ ಇಲ್ಲದಂತೆ ಮಾಡಿದ್ದ ಶಂಕರಪ್ಪನ ಟೀಮು ಮೂರು ದಿನ ಜನಗಳೇ ಇಲ್ಲದ ನೀರಸ ಸಮ್ಮೇಳನ ನಡೆಸಿ ನಿರ್ಗಮಿಸಿತು.

ಗೋಷ್ಠಿಯಲ್ಲಿ ಮಾತನಾಡುವವರು ಒಂಬತ್ತು ಜನರಿದ್ದರೆ, ಅದನ್ನು ನಿರ್ವಹಿಸಲು ನಾಲ್ಕು ಜನರಿದ್ದುದರಿಂದ ವೇದಿಕೆ ಮೇಲೆ ಕನಿಷ್ಠ ಹದಿನೈದು ಜನರಿರುತ್ತಿದ್ದರು. ವೇದಿಕೆ ಉದ್ದ ಸಾಕಾಗದೆ ಅಡ್ಡ ಕುರ್ಚಿಗಳನ್ನು ಹಾಕುತ್ತಿದ್ದರು. ಇನ್ನು ಎಂಟುನೂರು ಸೀಟಿನ ಕುವೆಂಪು ರಂಗಮಂದಿರದಲ್ಲಿ ಎಪ್ಪತ್ತೈದರಿಂದ ನೂರ ಇಪ್ಪತ್ತೈದು ಜನರವರೆಗೆ ರಂಗಮಂದಿರ ಕಿಕ್ಕಿರಿದಿತ್ತು! ಎರಡನೇ ದಿನ ಕವಿಗೋಷ್ಠಿಗೆ ಜಿಲ್ಲೆಯ ದಶದಿಕ್ಕಿನಿಂದ ಕೆಲ ಕವಿಗಳು ದಾಳಿಯಿಟ್ಟು ಹೊಸದಾಗಿ ಹೆಸರು ಸೇರಿಸಿದ್ದರಿಂದ, ಹೆದರಿಕೊಂಡ ಶಂಕರಪ್ಪ ಹೊಸದಾಗಿ ಸೇರ್ಪಡೆಯಾದ ಕವಿಗಳಿಗೆ, ಪುರಸ್ಕಾರದ ಹಾರ ಶಾಲು ಇಲ್ಲದೇ ಇರುವುದರಿಂದ, ಅನುಸರಿಸಿಕೊಂಡು ಮುಂದಿನ ಬಾರಿ ಪಡೆಯಬೇಕು ಎಂದರು. ಅದರಬದಲು ಆನಂತರ ಅಥವಾ ಮರುದಿನ ಎನ್ನಬಹುದಿತ್ತು.

ಇನ್ನು ಕವಿಗೋಷ್ಠಿ ಆರಂಭವಾಗುತ್ತಿದ್ದಂತೆ, ಊಟ ಬಂದಿದ್ದರಿಂದ ಸಭಾಂಗಣದ ಜನ ಆ ಕಡೆ ಓಡಿದರು. ಆದರೂ ಪ್ರಯೋಜನವಾಗಲಿಲ್ಲ. ಅದ್ಯಾರೊ ಏನೊ ಬಂದು ತಿಂದು ಮುಗಿಸಿದ್ದರಿಂದ, ಸಿಟ್ಟಾದ ಕೆಲವರು ಮನೆಯ ಕಡೆ ಹೋದರು. ಶಂಕರಪ್ಪ ಸಮಯಾಭಾವದಿಂದ ಊಟದ ಬಿಡುವಿಲ್ಲದಂತೆ ನಿರಂತರ ಗೋಷ್ಠಿಗಳನ್ನು ನಡೆಸಿದರು. ಈ ಮಧ್ಯೆ ಒಂದಷ್ಟು ದಲಿತರು ಪ್ರತಿಭಟಿಸಿ ನಮಗೇಕೆ ಅವಕಾಶ ಕೊಟ್ಟಿಲ್ಲ ಎಂದು ತಕರಾರು ತೆಗೆದರು. ಶಂಕರಪ್ಪ ಮುಂದೆ ಕೊಡಲಾಗುತ್ತೆ ಎಂದು ಆಶ್ವಾಸನೆ ಕೊಟ್ಟರು.

ಇನ್ನ ನಮ್ಮ ಜಿಲ್ಲೆ ನಮ್ಮ ನೆಲೆ ಎಂಬ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಇಬ್ಬರು ಬೃಹಸ್ಪತಿಗಳ ಪೈಕಿ ಒಬ್ಬ ತರ್ಕಗಳು, ಪ್ರಶ್ನೆಗಳು ಇಲ್ಲದಿದ್ದರೆ ಈ ನಾಡು ಶಾಂತವಾಗಿರುತ್ತದೆ ಎಂದ. ಮತ್ತೊಬ್ಬ ದೇವಸ್ಥಾನಗಳು ನಮ್ಮ ಸಂಸ್ಕೃತಿ ಕೇಂದ್ರಗಳು. ಅವು ಚೆನ್ನಾಗಿರಬೇಕು ಎಂದ. ಸೂಕ್ಷ್ಮವಾಗಿ ನೋಡಿದರೆ ಅವು ಪುರೋಹಿತ ಪಿಂಡಗಳಾಗಿದ್ದುದ್ದು ಆಶ್ಚರ್ಯವಾಗಲಿಲ್ಲ. ಇಂಥವು ಶಂಕರಪ್ಪನ ತಲೆಗೆ ಹೋಗುವುದಿಲ್ಲ. ಮಗಳ ಮದುವೆಗೆ ಇಡೀ ನಾಡೇ ಬಂದಿತ್ತು, ಕರೆದವರೆಲ್ಲ ಬಂದು ಉಂಡರೆಂಬ ತೃಪ್ತಿಭಾವದ ಶಂಕರಪ್ಪನಿಗೆ ಸಾಹಿತ್ಯದ ಸೂಕ್ಷ್ಮಗಳು, ಜಾತ್ಯತೀತ ಮನಸ್ಸುಗಳು, ಸಾಹಿತ್ಯ ಸಮ್ಮೇಳನ ಹೇಗಿರಬೇಕೆಂಬ ಕಲ್ಪನೆಯೇ ಇಲ್ಲ. ಅದಕ್ಕಾಗಿಯೇ ಸಾಹಿತ್ಯ ಸಮ್ಮೇಳನವೂ ಸಾಮಾಜಿಕ ನ್ಯಾಯದ ಸಮಸ್ಯೆಗೆ ತುತ್ತಾಗಿ, ವೇದಿಕೆ ಮೇಲೆ ಒಂದು ಡಜನ್ ವಿದ್ವಾಂಸರು ಕೂರುವುದು. ಇನ್ನು ಅವರ ಆಹ್ವಾನ ಪತ್ರಿಕೆ ನೋಡಿದರೆ ಭಯವಾಗುತ್ತದೆ. ಅದರಲ್ಲಿರುವ ಹೆಸರುಗಳನ್ನು ನೋಡಿದರೆ, ಓಟರ್ ಲಿಸ್ಟು ನೋಡಿದಂತಾಗುತ್ತದೆ. ಇದು ಶಂಕರಪ್ಪನ ಕತೆಯಾದರೆ, ಕೇಂದ್ರ ಸ್ಥಾನದ ಅಧ್ಯಕ್ಷ ಮನು ಬಳಿಗಾರ್ ಎಂಬ ಸರಕಾರಿ ಆಸಾಮಿಗೆ ಕನ್ನಡ ಸಾಹಿತ್ಯದ ಆಳ ಅಗಲ ಗೊತ್ತಿದ್ದಿದ್ದರೆ, ಈ ದೇಶ ಕಂಡ ಅಪರೂಪದ ಸಂಶೋಧಕ ಶ.ಷಟ್ಟರ್ ಸಮ್ಮೇಳನದ ಅಧ್ಯಕ್ಷರಾಗುತ್ತಿದ್ದರು.

ಸದ್ಯಕ್ಕೆ ನಮ್ಮ ಸಮಾಜ ಕ್ಷೋಭೆಯಿಂದ ಕುದಿಯುತ್ತಿದೆ. ಎಲ್ಲಿ ನೋಡಿದರೂ ಗಲಾಟೆಯ ಶಬ್ದವೇ ತುಂಬಿದೆ. ಸಂಗೀತವೂ ಗಲಭೆಯಂತೆ ಕೇಳುತ್ತಿದೆ. ಆಶ್ಚರ್ಯವೆಂದರೆ, ಇದರೊಳಕ್ಕೆ ಸಾಹಿತ್ಯ ಸಮ್ಮೇಳನವೂ ಸೇರಿಕೊಂಡಿವೆ. ಸಭೆಯಲ್ಲಿ ಪ್ರಾರ್ಥನೆ ಮಾಡುವ, ಸ್ವಾಗತ ಮಾಡುವ, ನಿರೂಪಣೆ ಮಾಡುವ, ವಂದನಾರ್ಪಣೆ ಮಾಡುವಾಗ ಹಾರತುರಾಯಿ ಶಾಲು ತಂದು ಎಸೆಯುವ ಎಲ್ಲರೂ ಗಲಭೆಗೆ ತುತ್ತಾದವರಂತೆ ಕಾಣುತ್ತಿದ್ದಾರೆ. ನಿಜಕ್ಕೂ ಸಾಹಿತ್ಯ ಸಮ್ಮೇಳನ ಇಂತಹ ಗಲಭೆ ಸೃಷ್ಟಿಸಬಾರದು. ಭೀಕರವಾದ ಸೌಂಡ್ ಬಾಕ್ಸು, ಮೈಕುಗಳಿಂದ ಉಂಟಾಗುವ ಶಬ್ದಗಳಿಂದ ಮುಕ್ತವಾಗಿ ಸಾಂತ್ವನದಂತಿರುವಂತೆ ನೋಡಿಕೊಳ್ಳಬೇಕು.

ಇಂತಹ ಹೊತ್ತಿನಲ್ಲಿ ಡಿವಿಎಸ್‌ನಲ್ಲಿ ನಡೆದ ಲಂಕೇಶರ ಹುಟ್ಟುಹಬ್ಬರ ಸೆಮಿನಾರನ್ನು ಶಂಕರಪ್ಪ ಬಂದು ನೋಡಬೇಕಿತ್ತು. ಅಲ್ಲಿಗೆ ಲಂಕೇಶರ ನೀಲು ಕಾವ್ಯಕ್ಕೆ ಚಿತ್ರ ಬರೆದಿದ್ದ, ಮತ್ತವರಿಗೆ ಕುತೂಹಲ ಕೆರಳಿಸಿದ್ದ ಎಂ.ಎಸ್.ಮೂರ್ತಿ ಬಂದಿದ್ದರು. ಲಂಕೇಶರ ನಾಟಕಗಳನ್ನು ಪರಿಣಾಮಕಾರಿಯಾಗಿ ನಿರ್ದೇಶಿಸಿದ್ದ ನಟರಾಜ್ ಹೊನ್ನವಳ್ಳಿ ಆಗಮಿಸಿದ್ದರು. ಜೊತೆಗೆ ಲಂಕೇಶರ ಒಡನಾಡಿಯಾಗಿದ್ದ ಬಿ.ಚಂದ್ರೇಗೌಡರು ಆಶಯ ಭಾಷಣ ಮಾಡಿದರು. ವೇದಿಕೆಯ ಮೇಲೆ ಮೂವರು ಮಾತನಾಡುವವರಿದ್ದರೆ, ಸಭಾಂಗಣದಲ್ಲಿ ನೂರಿಪ್ಪತ್ತೈದು ವಿದ್ಯಾರ್ಥಿಗಳಿದ್ದರು.

ಈ ಹೊಸ ತಲೆಮಾರಿಗೆ ಮಾತನಾಡಿದವರೆಲ್ಲ ಸಾಧ್ಯವಾದಷ್ಟು ಲಂಕೇಶರನ್ನು ತಲುಪಿಸಿದರು. ಕಡೆಯಲ್ಲಿ ಕವಿಯತ್ರಿ ಅಕ್ಷತಾ ಹುಂಚದಕಟ್ಟೆ ಲಂಕೇಶರನ್ನು ತುಂಬಾ ಪರಿಣಾಮಕಾರಿಯಾಗಿ ನಿರೂಪಿಸಿ ವಿದ್ಯಾರ್ಥಿಗಳಿಂದ ಚಪ್ಪಾಳೆ ಗಿಟ್ಟಿಸಿದರು. ಅವರು ಓದಿದ ನೀಲು ಕವನ ವಿದ್ಯಾರ್ಥಿಗಳಿಗೆ ತುಂಬಾ ಪ್ರೇರಣೆ ನೀಡಿತು.

ಅಕ್ಷತಾ ಹುಂಚದಕಟ್ಟೆ

 

ನಟರಾಜ ಹೊನ್ನವಳ್ಳಿ ನಿರ್ದೇಶಿಸಿದ್ದ ಗುಣಮುಖ ನಾಟಕದ ಕಡೆ ದೃಶ್ಯಗಳನ್ನು ಹೊಂಗಿರಣದ ಮತ್ತು ನಾದಿರ್ ಶಾ ಪಾತ್ರವನ್ನು ಅದ್ಭುತವಾಗಿ ಅಭಿನಯಿಸುವ ಸಾಸ್ವೆಹಳ್ಳಿ ಸತೀಶ್ ಮತ್ತು ಕೊಟ್ರಪ್ಪ ವಾಚಿಸಿದರು. ಸಭೆಯಲ್ಲಿ ಪ್ರಸ್ತಾಪವಾದ ಸಾರಾ ಅಬೂಬಕರ್ ವಿಷಯ ಕೇಳಿ ಪ್ರೇರಣೆಗೊಂಡ ಮುಸ್ಲಿಂ ಹೆಣ್ಣುಮಗಳೊಬ್ಬಳು, “ನಾನು ಬರೀತಾಯಿದ್ದೀನಿ. ಆದ್ರೆ ಉರ್ದುವಿನಲ್ಲಿ ಬರೀತಿನಿ. ಇನ್ನುಮುಂದೆ ಕನ್ನಡದಲ್ಲಿ ಬರೀಬೇಕು” ಎಂದಳು. ಖಂಡಿತ ನೀನು ಬರೀಲೇಬೇಕು, ಸಾರಾ, ಬಾನು ಬರವಣಿಗೆ ನಿಲ್ಲುಸ್ತಾಯಿದಾರೆ. ಮುಸ್ಲಿಂ ಹೆಣ್ಣುಮಕ್ಕಳಲ್ಲಿ ಬರಹಗಾರ್ತಿಯರೇ ಇಲ್ಲ, ನೀನು ಬರಿಬೇಕು ಎಂದಾಗ ಚಿಟ್ಟೆಯಾಕಾರದ ಚೂಡಿದಾರ್ ಹಾಕಿದ್ದ ಆಕೆ ಅದೆಲ್ಲೊ ಮಡಗಿದ್ದ ಬುರ್ಖಾ ಧರಿಸಿಕೊಂಡು ಹೊರಟಳು! ಆಕೆ ಏನಾದರೂ ಬರೆಯಬಹುದು. ಲಂಕೇಶ್ ಅಂತಹವರ ಪ್ರೇರಣೆಯಾಗಿದ್ದರು. ಮುಂದೂ ಕೂಡಾ ಆಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...