Homeಮುಖಪುಟಸಿಂಗಾಪುರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಮೇಲೆ ಹಲ್ಲೆ-ದರೋಡೆ: ಇಬ್ಬರು ಭಾರತೀಯ ಪ್ರವಾಸಿಗರಿಗೆ ಜೈಲು ಶಿಕ್ಷೆ

ಸಿಂಗಾಪುರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಮೇಲೆ ಹಲ್ಲೆ-ದರೋಡೆ: ಇಬ್ಬರು ಭಾರತೀಯ ಪ್ರವಾಸಿಗರಿಗೆ ಜೈಲು ಶಿಕ್ಷೆ

- Advertisement -
- Advertisement -

ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾಗ ಹೋಟೆಲ್ ಕೋಣೆಗಳಲ್ಲಿ ಇಬ್ಬರು ಲೈಂಗಿಕ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಆರೋಪ ಹೊತ್ತಿರುವ ಭಾರತದ ಇಬ್ಬರು ಪುರುಷರಿಗೆ ಶುಕ್ರವಾರ ತಲಾ ಐದು ವರ್ಷ ಜೈಲು ಶಿಕ್ಷೆಯ ಜೊತೆಗೆ 12 ಬೆತ್ತದ ಹೊಡೆತದ ಶಿಕ್ಷೆ ವಿಧಿಸಲಾಯಿತು.

23 ವರ್ಷದ ಅರೋಕ್ಯಸಾಮಿ ಡೈಸನ್ ಮತ್ತು 27 ವರ್ಷದ ರಾಜೇಂದ್ರನ್ ಮಯಿಲರಸನ್ ಎಂಬುವವರು ಬಲಿಪಶುಗಳ ದರೋಡೆ ಮಾಡಿ, ನೋವುಂಟು ಮಾಡಿದ್ದಕ್ಕಾಗಿ ಸ್ವಯಂಪ್ರೇರಣೆಯಿಂದ ತಪ್ಪೊಪ್ಪಿಕೊಂಡರು ಎಂದು ‘ದಿ ಸ್ಟ್ರೈಟ್ಸ್ ಟೈಮ್ಸ್’ ವರದಿ ಮಾಡಿದೆ.

ಅರೋಕ್ಯಸಾಮಿ ಮತ್ತು ರಾಜೇಂದ್ರನ್ ಏಪ್ರಿಲ್ 24 ರಂದು ರಜೆಗಾಗಿ ಭಾರತದಿಂದ ಸಿಂಗಾಪುರಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ನಂತರ, ಲಿಟಲ್ ಇಂಡಿಯಾ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ಅವರನ್ನು ಸಂಪರ್ಕಿಸಿ ಲೈಂಗಿಕ ಸೇವೆಗಳಿಗಾಗಿ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳಲು ಆಸಕ್ತಿ ಹೊಂದಿದ್ದೀರಾ ಎಂದು ಕೇಳಿದರು. ನಂತರ, ಆ ವ್ಯಕ್ತಿ ಹೊರಡುವ ಮೊದಲು ಇಬ್ಬರು ಮಹಿಳೆಯರ ಸಂಪರ್ಕ ಮಾಹಿತಿಯನ್ನು ಅವರಿಗೆ ಒದಗಿಸಿದರು.

ಅರೋಕ್ಯಸಾಮಿಯು ರಾಜೇಂದ್ರನ್ ಅವರಿಗೆ ಹಣದ ಅಗತ್ಯವಿದೆ ಎಂದು ಹೇಳಿದರು. ಮಹಿಳೆಯರನ್ನು ಸಂಪರ್ಕಿಸಿ ಹೋಟೆಲ್ ಕೋಣೆಯಲ್ಲಿ ದರೋಡೆ ಮಾಡಲು ಸೂಚಿಸಿದರು, ರಾಜೇಂದ್ರನ್ ಅದಕ್ಕೆ ಒಪ್ಪಿದರು. ಆ ದಿನ ಸಂಜೆ 6 ಗಂಟೆಯ ಸುಮಾರಿಗೆ ಹೋಟೆಲ್ ಕೋಣೆಯಲ್ಲಿ ಒಬ್ಬ ಮಹಿಳೆಯನ್ನು ಭೇಟಿಯಾಗಲು ಅವರು ವ್ಯವಸ್ಥೆ ಮಾಡಿಕೊಂಡರು.

ಕೋಣೆಯೊಳಗೆ ಪ್ರವೇಶಿಸಿದ ಅವರು, ಬಲಿಪಶುವಿನ ಕೈಕಾಲುಗಳನ್ನು ಬಟ್ಟೆಯಿಂದ ಕಟ್ಟಿ, ಆಕೆಗೆ ಕಪಾಳಮೋಕ್ಷ ಮಾಡಿದರು. ಆಕೆಯ ಆಭರಣಗಳು, 2,000 ಸಿಂಗಾಪುರ ಡಾಲರ್ ನಗದು, ಪಾಸ್‌ಪೋರ್ಟ್ ಮತ್ತು ಬ್ಯಾಂಕ್ ಕಾರ್ಡ್‌ಗಳನ್ನು ದೋಚಿದರು.

ಆ ರಾತ್ರಿ, ರಾತ್ರಿ 11 ಗಂಟೆ ಸುಮಾರಿಗೆ, ಅವರು ಮತ್ತೊಂದು ಹೋಟೆಲ್‌ನಲ್ಲಿ ಎರಡನೇ ಮಹಿಳೆಯ ಭೇಟಿಗೆ ಸಮಯ ನಿಗದಿ ಮಾಡಿದರು. ಆಕೆ ಬಂದಾಗ ದರೋಡೆ ಮಾಡಿದರು. ರಾಜೇಂದ್ರನ್ ಆಕೆಯ ಕಿರುಚಾಟವನ್ನು ತಡೆಯಲು ಆಕೆಯ ಬಾಯಿಯನ್ನು ಮುಚ್ಚಿದ್ದಾನೆ.

ಅವರು 800 ಸಿಂಗಾಪುರ ಡಾಲರ್ ನಗದು, ಎರಡು ಮೊಬೈಲ್ ಫೋನ್‌ಗಳು ಮತ್ತು ಪಾಸ್‌ಪೋರ್ಟ್ ಅನ್ನು ಕದ್ದರು, ಅವರು ಹಿಂತಿರುಗುವವರೆಗೆ ಕೋಣೆಯಿಂದ ಹೊರಹೋಗದಂತೆ ಬೆದರಿಕೆ ಹಾಕಿದರು ಎಂದು ವರದಿಯಾಗಿದೆ.

ಮರುದಿನ, ಬಲಿಪಶು ವ್ಯಕ್ತಿಯೊಂದಿಗೆ ಈ ಬಗ್ಗೆ ಮಾತನಾಡಿದ್ದಾರೆ. ಬಳಿಕ, ಅರೋಕ್ಯಸಾಮಿ ಮತ್ತು ರಾಜೇಂದ್ರನ್ ಅವರ ಕೃತ್ಯಗಳು ಬಹಿರಂಗಗೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಇಬ್ಬರೂ ಪುರುಷರು ನ್ಯಾಯಾಧೀಶರಲ್ಲಿ ಕಡಿಮೆ ಶಿಕ್ಷೆಗೆಮನವಿ ಮಾಡಿದರು.

“ನನ್ನ ತಂದೆ ಕಳೆದ ವರ್ಷ ನಿಧನರಾದರು. ನನಗೆ ಮೂವರು ಸಹೋದರಿಯರಿದ್ದಾರೆ, ಅವರಲ್ಲಿ ಒಬ್ಬರಿಗೆ ಮದುವೆಯಾಗಿದೆ, ನಮ್ಮ ಬಳಿ ಹಣವಿಲ್ಲ. ಅದಕ್ಕಾಗಿಯೇ ನಾವು ಇದನ್ನು ಮಾಡಿದ್ದೇವೆ” ಎಂದು ದುಭಾಷಿಯೊಬ್ಬರ ಮೂಲಕ ಮಾತನಾಡಿದ ಅರೋಕ್ಯಸಾಮಿ, “ನನ್ನ ಹೆಂಡತಿ ಮತ್ತು ಮಗು ಭಾರತದಲ್ಲಿ ಒಂಟಿಯಾಗಿದ್ದಾರೆ, ಅವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ” ಎಂದು ಹೇಳಿದರು.

ದರೋಡೆಯ ಸಮಯದಲ್ಲಿ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವವರಿಗೆ ಐದರಿಂದ 20 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 12 ಬೆತ್ತದ ಹೊಡೆತಗಳನ್ನು ಎದುರಿಸಬೇಕಾಗುತ್ತದೆ ಎಂದು ಸಿಂಗಾಪುರ್ ಡೈಲಿ ವರದಿ ಮಾಡಿದೆ.

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ‘ಸನೇ ತಕೈಚಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...