Homeಮುಖಪುಟಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರ ಹತ್ಯೆ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಯಲ್ಲಿರುವ ಹಳ್ಳಿಯೊಂದರಲ್ಲಿ ನಡೆದಿದೆ.

ಕಲಹ ಪೀಡಿತ ಮಣಿಪುರದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ.  ಇದೀಗ ಲೋಕಸಭೆ ಚುನಾವಣೆ 6 ದಿನಗಳು ಮಾತ್ರ ಬಾಕಿ ಇರುವಾಗ ಮತ್ತೆ ಹಿಂಸಾಚಾರ ನಡೆದಿದೆ. ಗುರುವಾರ ರಾತ್ರಿಯಿಂದ ಮೂರು ಪ್ರತ್ಯೇಕ ಹಿಂಸಾಚಾರದ ಘಟನೆಗಳು ವರದಿಯಾಗಿದೆ.

ಶುಕ್ರವಾರ, ತೆಂಗನೌಪಾಲ್‌ನಲ್ಲಿ ಸಶಸ್ತ್ರ ಗುಂಪಿನಿಂದ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದರು. ಸಂಜೆಯ ನಂತರ, ಬಿಷ್ಣುಪುರ ಜಿಲ್ಲೆಯಲ್ಲಿ ಮಣಿಪುರದ ಕಾಂಗ್ರೆಸ್ ಅಭ್ಯರ್ಥಿ ಬಿಮೋಲ್ ಅಕೋಯಿಜಮ್ ಅವರನ್ನು ಭೇಟಿ ಮಾಡಲು ಸೇರಿದ್ದ ಜನರ ಮೇಲೆ ಸಶಸ್ತ್ರ ದಾರಿ ಗುಂಪು ದಾಳಿ ನಡೆಸಿ ಅವರನ್ನು ಚದುರಿಸಿದ್ದರು.

ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಕುಕಿ ಮತ್ತು ಮೈತೈ ಗ್ರಾಮಗಳ ನಡುವಿನ ಗಡಿ ಪ್ರದೇಶದಲ್ಲಿ ಎರಡು ಕಡೆಯ ಸಶಸ್ತ್ರದಾರಿಗಳು ಗುಂಡಿನ ಚಕಮಕಿಯನ್ನು ನಡೆಸಿದ್ದಾರೆ. ಘಟನೆಯ ಹಿಂಸಾತ್ಮಕ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮೃತಪಟ್ಟವರು ಕಾಂಗ್ಪೋಕ್ಪಿ ಜಿಲ್ಲೆಯ ನಿವಾಸಿಗಳಾದ 23 ವರ್ಷದ ಕಮ್ಮಿನ್ ಲಾಲ್ ಲುಫೆಂಗ್ ಹಾಗೂ 22 ವರ್ಷದ ಕಾಮ್ಲೆಂಗ್ ಸ್ಯಾಟ್ ಲುಂಕಿಮ್ ಎಂದು ಕುಕಿ-ಝೋಮಿ ಸಂಘಟನೆಗಳು ಹೇಳಿದೆ. ಪೂರ್ವ ಇಂಫಾಲ ಹಾಗೂ ಕಾಂಗ್ಪೋಕ್ಪಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಮೂಲಗಳ ಪ್ರಕಾರ, ಬೆಳಗ್ಗೆ9 ಗಂಟೆಯ ವೇಳೆಗೆ ಎರಡು ಸಶಸ್ತ್ರ ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಪೂರ್ವ ಇಂಫಾಲ, ಕಾಂಗ್ಪೋಕ್ಪಿ ಹಾಗೂ ನಾಗಾ ಬಾಹುಳ್ಯದ ಉಖ್ರುಲ್ ಜಿಲ್ಲೆಗಳು ಸಂಧಿಸುವ ಪ್ರಾಂತ್ಯವಾದ ಮಫೌದಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಾವ ಗುಂಪು ಗುಂಡಿನ ಚಕಮಕಿಯನ್ನು ಮೊದಲು ಪ್ರಾರಂಭಿಸಿತು ಎಂಬುದರ ಕುರಿತು ಭದ್ರತಾ ಪಡೆಗಳು ಪ್ರತಿಕ್ರಿಯಿಸಲಿಲ್ಲ, ಆದರೆ ಗುಂಡಿನ ಚಕಮಕಿ ನಡೆದಿರುವುದನ್ನು ದೃಢಪಡಿಸಿದ್ದಾರೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

 

ಹತ್ಯಾ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆಯೆ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನೆಲೆಸಿರುವ ಕುಕಿ-ಝೋಮಿ ಗುಂಪಿನ ಬುಡಕಟ್ಟು ಒಕ್ಕೂಟ ಸಮಿತಿಯು ಜಿಲ್ಲೆಯಲ್ಲಿ 24 ಗಂಟೆಗಳ ಬಂದ್‌ಗೆ ಕರೆ ನೀಡಿದೆ.

 

ಈ ಘಟನೆಯು ಬಫರ್ ವಲಯದ ಮೇಲಿನ ಬೆಟ್ಟಗಳಲ್ಲಿ ಸಂಭವಿಸಿದ ಕಾರಣ ಮೃತದೇಹಗಳನ್ನು ಇನ್ನೂ ಸಂಗ್ರಹಿಸಲಾಗಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಇಂಫಾಲ್ ಪೂರ್ವ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಕಾರಣಗಳಿಂದ ನಾವು ಮೃತದೇಹಗಳನ್ನು ತಕ್ಷಣಕ್ಕೆ ಹಿಂಪಡೆಯಲು ಸಾಧ್ಯವಾಗಲಿಲ್ಲ, ಒಂದು ಅಲ್ಲಲ್ಲಿ ಗುಂಡಿನ ದಾಳಿ ನಡೆಯುತ್ತಿದೆ. ಎರಡನೆಯದು ಏಕೆಂದರೆ ಗುಂಡಿನ ಚಕಮಕಿಯು ಬಫರ್ ವಲಯದ ಮೇಲಿರುವ ಬೆಟ್ಟಗಳಲ್ಲಿ ಸಂಭವಿಸಿದೆ. ಈ ಹತ್ಯೆಯು ಭದ್ರತಾ ಪಡೆಗಳು ರಾಜ್ಯದಲ್ಲಿ ಸ್ಥಾಪಿಸಿದ್ದ ಶಾಂತಿಯನ್ನು ದುರ್ಬಲಗೊಳಿಸಿದೆ. ಕುಕಿಗಳು ಮತ್ತು ಮೈತೈಗಳ ನಡುವೆ ಮತ್ತೆ ಉದ್ವಿಗ್ನತೆಗೆ ಕಾರಣವಾಗಿದೆ. ಕಳೆದ ಏಪ್ರೀಲ್‌ನಿಂದ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ 221ಕ್ಕೆ ಏರಿಕೆಯಾಗಿದೆ.

 

ಇದನ್ನು ಓದಿ:ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...