Homeಮುಖಪುಟಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರ ಹತ್ಯೆ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಯಲ್ಲಿರುವ ಹಳ್ಳಿಯೊಂದರಲ್ಲಿ ನಡೆದಿದೆ.

ಕಲಹ ಪೀಡಿತ ಮಣಿಪುರದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ.  ಇದೀಗ ಲೋಕಸಭೆ ಚುನಾವಣೆ 6 ದಿನಗಳು ಮಾತ್ರ ಬಾಕಿ ಇರುವಾಗ ಮತ್ತೆ ಹಿಂಸಾಚಾರ ನಡೆದಿದೆ. ಗುರುವಾರ ರಾತ್ರಿಯಿಂದ ಮೂರು ಪ್ರತ್ಯೇಕ ಹಿಂಸಾಚಾರದ ಘಟನೆಗಳು ವರದಿಯಾಗಿದೆ.

ಶುಕ್ರವಾರ, ತೆಂಗನೌಪಾಲ್‌ನಲ್ಲಿ ಸಶಸ್ತ್ರ ಗುಂಪಿನಿಂದ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದರು. ಸಂಜೆಯ ನಂತರ, ಬಿಷ್ಣುಪುರ ಜಿಲ್ಲೆಯಲ್ಲಿ ಮಣಿಪುರದ ಕಾಂಗ್ರೆಸ್ ಅಭ್ಯರ್ಥಿ ಬಿಮೋಲ್ ಅಕೋಯಿಜಮ್ ಅವರನ್ನು ಭೇಟಿ ಮಾಡಲು ಸೇರಿದ್ದ ಜನರ ಮೇಲೆ ಸಶಸ್ತ್ರ ದಾರಿ ಗುಂಪು ದಾಳಿ ನಡೆಸಿ ಅವರನ್ನು ಚದುರಿಸಿದ್ದರು.

ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಕುಕಿ ಮತ್ತು ಮೈತೈ ಗ್ರಾಮಗಳ ನಡುವಿನ ಗಡಿ ಪ್ರದೇಶದಲ್ಲಿ ಎರಡು ಕಡೆಯ ಸಶಸ್ತ್ರದಾರಿಗಳು ಗುಂಡಿನ ಚಕಮಕಿಯನ್ನು ನಡೆಸಿದ್ದಾರೆ. ಘಟನೆಯ ಹಿಂಸಾತ್ಮಕ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮೃತಪಟ್ಟವರು ಕಾಂಗ್ಪೋಕ್ಪಿ ಜಿಲ್ಲೆಯ ನಿವಾಸಿಗಳಾದ 23 ವರ್ಷದ ಕಮ್ಮಿನ್ ಲಾಲ್ ಲುಫೆಂಗ್ ಹಾಗೂ 22 ವರ್ಷದ ಕಾಮ್ಲೆಂಗ್ ಸ್ಯಾಟ್ ಲುಂಕಿಮ್ ಎಂದು ಕುಕಿ-ಝೋಮಿ ಸಂಘಟನೆಗಳು ಹೇಳಿದೆ. ಪೂರ್ವ ಇಂಫಾಲ ಹಾಗೂ ಕಾಂಗ್ಪೋಕ್ಪಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಮೂಲಗಳ ಪ್ರಕಾರ, ಬೆಳಗ್ಗೆ9 ಗಂಟೆಯ ವೇಳೆಗೆ ಎರಡು ಸಶಸ್ತ್ರ ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಪೂರ್ವ ಇಂಫಾಲ, ಕಾಂಗ್ಪೋಕ್ಪಿ ಹಾಗೂ ನಾಗಾ ಬಾಹುಳ್ಯದ ಉಖ್ರುಲ್ ಜಿಲ್ಲೆಗಳು ಸಂಧಿಸುವ ಪ್ರಾಂತ್ಯವಾದ ಮಫೌದಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಾವ ಗುಂಪು ಗುಂಡಿನ ಚಕಮಕಿಯನ್ನು ಮೊದಲು ಪ್ರಾರಂಭಿಸಿತು ಎಂಬುದರ ಕುರಿತು ಭದ್ರತಾ ಪಡೆಗಳು ಪ್ರತಿಕ್ರಿಯಿಸಲಿಲ್ಲ, ಆದರೆ ಗುಂಡಿನ ಚಕಮಕಿ ನಡೆದಿರುವುದನ್ನು ದೃಢಪಡಿಸಿದ್ದಾರೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

 

ಹತ್ಯಾ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆಯೆ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನೆಲೆಸಿರುವ ಕುಕಿ-ಝೋಮಿ ಗುಂಪಿನ ಬುಡಕಟ್ಟು ಒಕ್ಕೂಟ ಸಮಿತಿಯು ಜಿಲ್ಲೆಯಲ್ಲಿ 24 ಗಂಟೆಗಳ ಬಂದ್‌ಗೆ ಕರೆ ನೀಡಿದೆ.

 

ಈ ಘಟನೆಯು ಬಫರ್ ವಲಯದ ಮೇಲಿನ ಬೆಟ್ಟಗಳಲ್ಲಿ ಸಂಭವಿಸಿದ ಕಾರಣ ಮೃತದೇಹಗಳನ್ನು ಇನ್ನೂ ಸಂಗ್ರಹಿಸಲಾಗಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಇಂಫಾಲ್ ಪೂರ್ವ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಕಾರಣಗಳಿಂದ ನಾವು ಮೃತದೇಹಗಳನ್ನು ತಕ್ಷಣಕ್ಕೆ ಹಿಂಪಡೆಯಲು ಸಾಧ್ಯವಾಗಲಿಲ್ಲ, ಒಂದು ಅಲ್ಲಲ್ಲಿ ಗುಂಡಿನ ದಾಳಿ ನಡೆಯುತ್ತಿದೆ. ಎರಡನೆಯದು ಏಕೆಂದರೆ ಗುಂಡಿನ ಚಕಮಕಿಯು ಬಫರ್ ವಲಯದ ಮೇಲಿರುವ ಬೆಟ್ಟಗಳಲ್ಲಿ ಸಂಭವಿಸಿದೆ. ಈ ಹತ್ಯೆಯು ಭದ್ರತಾ ಪಡೆಗಳು ರಾಜ್ಯದಲ್ಲಿ ಸ್ಥಾಪಿಸಿದ್ದ ಶಾಂತಿಯನ್ನು ದುರ್ಬಲಗೊಳಿಸಿದೆ. ಕುಕಿಗಳು ಮತ್ತು ಮೈತೈಗಳ ನಡುವೆ ಮತ್ತೆ ಉದ್ವಿಗ್ನತೆಗೆ ಕಾರಣವಾಗಿದೆ. ಕಳೆದ ಏಪ್ರೀಲ್‌ನಿಂದ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ 221ಕ್ಕೆ ಏರಿಕೆಯಾಗಿದೆ.

 

ಇದನ್ನು ಓದಿ:ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...