Homeಮುಖಪುಟಕುಕಿ ಬಂಡುಕೋರರಿಂದ ಅಪಹರಣಕ್ಕೊಳಗಾದ ಇಬ್ಬರು ಮೈತೆಯಿ ಯುವಕರ ಬಿಡುಗಡೆ

ಕುಕಿ ಬಂಡುಕೋರರಿಂದ ಅಪಹರಣಕ್ಕೊಳಗಾದ ಇಬ್ಬರು ಮೈತೆಯಿ ಯುವಕರ ಬಿಡುಗಡೆ

- Advertisement -
- Advertisement -

ಶಂಕಿತ ಕುಕಿ ಉಗ್ರಗಾಮಿಗಳಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ಮೈತೆಯಿ ಸಮುದಾಯದ ಯುವಕರನ್ನು ಗುರುವಾರ ಬೆಳಗ್ಗೆ ಯಾವುದೇ ಹಾನಿಯಿಲ್ಲದೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಮುದಾಯದ ಮೂವರು ಯುವಕರನ್ನು ಅಪಹರಣ ಮಾಡಲಾಗಿದೆ ಎಂದು ಈ ಹಿಂದೆ ವರದಿಯಾಗಿತ್ತು. ಕುಕಿ ಬಂಡುಕೋರರಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

11 ಕುಕಿ ಖೈದಿಗಳನ್ನು ಇಂಫಾಲ್‌ನ ಸಜಿವಾ ಜೈಲಿನಿಂದ ಚುರಾಚಂದ್‌ಪುರ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಬಿಡುಗಡೆಯ ಸಂಧಾನದ ವೇಳೆ ಕೇಳಿಕೊಳ್ಳಲಾಗಿತ್ತು. ಅಪಹರಣಕಾರರು ಬಿಡುಗಡೆಗಾಗಿ ನಿಗದಿಪಡಿಸಿದ ಹಲವಾರು ಪೂರ್ವಾಪೇಕ್ಷಿತ ಷರತ್ತುಗಳಲ್ಲಿ ಈ ಷರತ್ತು ಕೂಡಾ ಒಂದಾಗಿದೆ.

ಇದನ್ನೂಓದಿ: ‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

ಮೈತೇಯಿ ಯುವಕರ ಬಿಡುಗಡೆಗಾಗಿ ಶ್ರಮಿಸಿದವರಿಗೆ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಕೃತಜ್ಞತೆ ಸಲ್ಲಿಸಿದ್ದು, “ಸೆಪ್ಟೆಂಬರ್ 27 ರಂದು ಕಾಂಗ್‌ಪೋಕ್ಪಿಯಲ್ಲಿ ಅಪಹರಣಕ್ಕೊಳಗಾದ ಇಬ್ಬರು ಯುವಕರನ್ನು ಸುರಕ್ಷಿತವಾಗಿ ಮಣಿಪುರ ಪೊಲೀಸರ ಕಸ್ಟಡಿಗೆ ಹಿಂತಿರುಗಿಸಲಾಗಿದೆ. ಅವರ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಅವಿರತವಾಗಿ ಶ್ರಮಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರತಿಯೊಬ್ಬರನ್ನು ನಾನು ಪ್ರಾಮಾಣಿಕವಾಗಿ ಶ್ಲಾಘಿಸುತ್ತೇನೆ” ಎಂದು ಹೇಳಿದ್ದಾರೆ.

ಯುವಕರ ಬಿಡುಗಡೆಗಾಗಿ ಕುಕಿ ನಾಯಕರೊಂದಿಗೆ ಮಾತುಕತೆ ನಡೆಸಲು ರಾಜ್ಯ ಸರ್ಕಾರವು ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಅವರನ್ನು ಕಾಂಗ್ಪೊಕ್ಪಿಗೆ ಕಳುಹಿಸಿತ್ತು.ಕುಕಿ ಬಂಡುಕೋರರಿಂದ

ಮೈತೇಯಿ ಸಮುದಾಯದ ನಿಂಗೋಂಬಮ್ ಜಾನ್ಸನ್ ಸಿಂಗ್, ಓನಮ್ ಥೋಯಿಥೋಯ್ ಸಿಂಗ್ ಮತ್ತು ಥೋಕ್ಚೋಮ್ ಥೋಯಿಥೋಯ್ಬಾ ಸಿಂಗ್ ಇಂಫಾಲ್ ಪಶ್ಚಿಮದ ನ್ಯೂ ಕೀಥೆಲ್ಮನ್ಬಿಯಲ್ಲಿ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ತೌಬಲ್ ಜಿಲ್ಲೆಯ ತಮ್ಮ ಮನೆಗಳಿಂದ ತೆರಳಿದ್ದರು. ಅದರ ನಂತರ ಅವರು ಕಾಣೆಯಾಗಿದ್ದರು ಎಂದು ವರದಿಯಾಗಿದೆ.

ಅದರಲ್ಲಿ ಮೊದಲ ಯುವಕ ನಿಂಗೊಂಬಮ್ ಜಾನ್ಸನ್ ಸಿಂಗ್ ಅವರನ್ನು ಅದೇ ದಿನ ಯಾವುದೇ ಹಾನಿಯಿಲ್ಲದೆ ಬಿಡುಗಡೆ ಮಾಡಲಾಗಿತ್ತು.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...