Homeಮುಖಪುಟಮೋದಿ ಸರ್ಕಾರಕ್ಕಾದ ಎರಡು ಭಾರಿ ಹಿನ್ನಡೆಗಳು: ಆದರವು ಹಿನ್ನಡೆ ಅನಿಸುತ್ತಿಲ್ಲ!

ಮೋದಿ ಸರ್ಕಾರಕ್ಕಾದ ಎರಡು ಭಾರಿ ಹಿನ್ನಡೆಗಳು: ಆದರವು ಹಿನ್ನಡೆ ಅನಿಸುತ್ತಿಲ್ಲ!

ಕೃಷಿ ಕಾಯ್ದೆಗಳನ್ನು ತಡೆಯುವ ಮತ್ತು ಸಿಎಎ ಪ್ರಕ್ರಿಯೆ ಆರಂಭಿಸದಿರುವ ಎರಡೂ ನಿದರ್ಶನಗಳು ಸರ್ಕಾರದ ಹಿನ್ನಡೆಗಳೇ ಆಗಿವೆ. ಆದರೆ ಅವು ಹಿನ್ನಡೆಗಳಂತೆ ಕಾಣುತ್ತಿಲ್ಲವೇಕೆ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ, ಅವರು ತಮ್ಮ ಮೊದಲ ಪ್ರಯತ್ನಗಳಲ್ಲಿ ಒಂದನ್ನು ಹಿಂದಕ್ಕೆ ಪಡೆದರು. ಕೈಗಾರಿಕೆಗಳಿಗೆ ಭೂಸ್ವಾಧೀನ ಕಾನೂನನ್ನು ತಿದ್ದುಪಡಿ ಮಾಡುವುದು ಆ ಮೊದಲ ಪ್ರಯತ್ನವಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ಸರ್ಕಾರವನ್ನು ಕಟ್ಟಿ ಹಾಕಲು ಯಶಸ್ವಿಯಾದ ಅಪರೂಪದ ಕ್ಷಣವೆಂದು ಇಂದಿಗೂ ಈ ಕ್ರಮವನ್ನು ಪರಿಗಣಿಸಲಾಗಿದೆ. ಮೋದಿಯವರನ್ನು “ಸೂಟ್-ಬೂಟ್ ಸರ್ಕಾರ್” ಎಂದು ಕರೆದಿದ್ದ ರಾಹುಲ್, ಇದು ಕಾರ್ಪೊರೇಟ್ ಭಾರತದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಮತ್ತು ಜನಸಾಮಾನ್ಯರ ಹಿತಾಸಕ್ತಿಗಲ್ಲ ಎಂದು ಪ್ರಬಲ ವಿರೋಧ ವ್ಯಕ್ತ ಮಾಡಿದ್ದರು.

ಎರಡನೆಯ ಅವಧಿಯಲ್ಲಿ, ಮೋದಿಯವರು ಈಗಾಗಲೇ ಅಂತಹ ಎರಡು ರೀತಿಯ ಹಿನ್ನಡೆಗಳನ್ನು ಕಂಡಿದ್ದಾರೆ, ಆದರೆ ಅವು ಹಿನ್ನಡೆಗಳಂತೆ ಕಾಣದ ರೀತಿಯಲ್ಲಿ ಮ್ಯಾನೇಜ್ ಮಾಡಿದ್ದಾರೆ.

ಕೃಷಿ ಕಾನೂನು ಪ್ರಕರಣದಲ್ಲಿ ಅರ್ಜಿದಾರರೊಬ್ಬರ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, ಕೃಷಿ ಕಾನೂನುಗಳ ಅನುಷ್ಠಾನವನ್ನು ತಡೆಯುವ ಸುಪ್ರೀಂ ಕೋರ್ಟ್‌ನ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದರು. ಸ್ಥಗಿತವನ್ನು “ರಾಜಕೀಯ ವಿಜಯ” ಎಂದು ನೋಡಬಾರದು ಮತ್ತು ಪ್ರತಿಭಟನಾಕಾರರು ತಾವು “ಈ ಸುತ್ತನ್ನು ಗೆದ್ದಿದ್ದೇವೆ” ಎಂದು ಭಾವಿಸಬಾರದು ಎಂದು ಹೇಳಿದರು.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಕೃಷಿ ಕಾನೂನುಗಳನ್ನು ಅಮಾನತುಗೊಳಿಸುವುದರ ಬಗ್ಗೆ ಸಾಳ್ವೆಯವರಿಗೆ ಹೆಚ್ಚಿನ ಚಿಂತೆಯಿಲ್ಲ, ಆದರೆ ಹಾಗೆ ಮಾಡಿದರೆ ಭಾರತದ ರೈತರು ಅದನ್ನು ‘ಗೆಲುವು” ಎಂದು ನೋಡುತ್ತಾರೆ ಎಂಬುದು ಅವರ ಚಿಂತೆ. ಅಂದರೆ ಅದು ಸರ್ಕಾರಕ್ಕಾದ ಮುಖಭಂಗ ಎಂಬುದು ಅವರ ಚಿಂತೆಯ ಮೂಲ.

ಕೃಷಿ ಕಾನೂನುಗಳು ಶೀಘ್ರದಲ್ಲೇ ಜಾರಿಯಾಗುತ್ತಿಲ್ಲ. ಅನುಷ್ಠಾನವನ್ನು ಒಂದೂವರೆ ವರ್ಷಗಳವರೆಗೆ ಸ್ಥಗಿತಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಲಾಗಿದೆ. ಇದು ಸರ್ಕಾರಕ್ಕೆ ಹಿನ್ನಡೆಯಂತೆ ಕಾಣದಿರಲು ಕಾರಣ, ಕಾನೂನುಗಳನ್ನು ರದ್ದುಗೊಳಿಸಲಾಗಿಲ್ಲ. ಅವನ್ನು ಹಿಂದಕ್ಕೆ ಪಡೆಯುವ ಮಾತನ್ನು ಆಡಿಲ್ಲ. ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಪ್ರತಿಭಟಿಸುತ್ತಿರುವವರ ಬೇಡಿಕೆಯ ಮುಂದೆ ರಾಜಕೀಯವಾಗಿ ಶರಣಾಗಲಿಲ್ಲ ಎಂದು ಸರ್ಕಾರ ಹೇಳಬಹುದು. ಈ ಸಂದರ್ಭದಲ್ಲಿ ರೈತರು ಬಿಗಿ ನಿಲುವಿಗೆ ಅಂಟಿಕೊಂಡಿದ್ದರೂ ಕೂಡ ಎರಡೂ ಕಡೆಯವರು ಗೆದ್ದೆವು ಎಂದು ಅಂದುಕೊಳ್ಳಬಹುದು.
ಮುಖ ಉಳಿಸಿಕೊಳ್ಳುವ ಸರ್ಕಾರದ ಈ ನಿರ್ಗಮನವು ಒಂದು ಹಿನ್ನಡೆಯೇ ಆಗಿದೆ. ವಾಸ್ತವದ ಸಂಗತಿಯೆಂದರೆ, ಹೊಸ ಕೃಷಿ ಕಾನೂನುಗಳಿಂದ ತೊಂದರೆಗೊಳಗಾದ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಂಡಿಗಳನ್ನು ನಾವು ನೋಡಲು ಹೋಗುವುದಿಲ್ಲ. ಕೃಷಿ ಮಾರಾಟವನ್ನು ಖಾಸಗೀಕರಣಗೊಳಿಸುವುದು ಸರ್ಕಾರದ ಉದ್ದೇಶವಾಗಿದ್ದರೆ, ಅದು ಆಗುತ್ತಿಲ್ಲ. ಕನಿಷ್ಠ 2021 ರಲ್ಲಿ ಅಂತೂ ಸಾಧ್ಯವಿಲ್ಲ. ಕನಿಷ್ಠ ಫೆಬ್ರವರಿ-ಮಾರ್ಚ್ 2022 ರಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಯವರೆಗೂ ಅದು ಸಂಭವಿಸಲಾರದು. ತದನಂತರ ಲೋಕಸಭಾ ಚುನಾವಣೆಯು ತುಂಬಾ ಹತ್ತಿರದಲ್ಲಿರುತ್ತದೆ.

ಸಿಎಎ, ಕೊರೊನಾ: ಅಸ್ಸಾಂ-ಬಂಗಾಳ ಚುನಾವಣೆ

ಅಂತೆಯೇ, 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಈಗ ರಾಜಕೀಯ ಚರ್ಚೆಯಿಂದ ಹೊರಬಂದಿದೆ. ಇದು ಕೂಡ ಮಹತ್ವದ ಕಾನೂನೇ. ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕೂಡ ಹಿನ್ನಡೆ ಅನುಭವಿಸಿದೆ. ಕೋವಿಡ್ ಕಾರಣಕ್ಕೆ ಕೇವಲ ಎನ್‌ಪಿಆರ್ ಮಾತ್ರವಲ್ಲ ಜನಗಣತಿಯನ್ನು ಕೂಡ ನಿಲ್ಲಿಸಿದ್ದಾರೆ.

ಎನ್‌ಆರ್‌ಸಿ-ಎನ್‌ಪಿಆರ್-ಸಿಎಎ ಕಾನೂನುಗಳ ವಿರುದ್ಧ 2019 ರಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ನಡೆಸುವ ಉದ್ದೇಶವನ್ನು ಎಂದಿಗೂ ಹೊಂದಿಲ್ಲ ಎಂದು ಸರ್ಕಾರ ನಟಿಸಿತು. ಆದರೆ ಈಗ ಅವರು ಸಿಎಎಗೆ ಹಿಂದಿರುಗಿದ್ದಾರೆಂದು ತೋರುತ್ತದೆಯಾದರೂ ಅದರ ಲಕ್ಷಣಗಳು ದಟ್ಟವಾಗಿಲ್ಲ. ಕೃಷಿ ಕಾನೂನುಗಳಂತೆ, ಸಿಎಎ ಕಾನೂನಾಗಿ ಉಳಿಯುತ್ತದೆ. ಕಾನೂನನ್ನು ಕಾರ್ಯಗತಗೊಳಿಸಲು ಸರ್ಕಾರವು ನಿಯಮಗಳನ್ನು ಬಿಡುಗಡೆ ಮಾಡದ ಕಾರಣ ಅದನ್ನೇನೂ ಕಾನೂನು ದಸ್ತಾವೇಜಿನಿಂದ ಪುಸ್ತಕಗಳಿಂದ ತೆಗೆದುಹಾಕಬೇಕಾಗಿಲ್ಲ.

ಇದನ್ನೂ ಓದಿ:  ಸಿಎಎ ಜಾರಿ ವಿಳಂಬ: ನಿಯಮ ರೂಪಿಸುವಲ್ಲಿ ವಿಫಲವಾದ ಕೇಂದ್ರ ಸರ್ಕಾರ

ಆದ್ದರಿಂದ, ಸೈದ್ಧಾಂತಿಕವಾಗಿ, ಸರ್ಕಾರವು ಯಾವುದೇ ಹೊತ್ತಿನಲ್ಲಿ ಸಿಎಎ ನಿಯಮಗಳನ್ನು ತರಬಹುದು. ಆದರೆ ಅದು ಅಸ್ಸಾಂ, ಪಶ್ಚಿಮ ಬಂಗಾಳ ಚುನಾವಣೆಗಳಲ್ಲಿ ತಿರುಗುಬಾಣ ಆಗಬಹುದು ಎಂಬ ಭಯದಲ್ಲಿ ಸರ್ಕಾರವಿದೆ.

ಗೃಹ ಸಚಿವ ಅಮಿತ್ ಶಾ ಡಿಸೆಂಬರ್‌ನಲ್ಲಿ, “ಸಿಎಎ ನಿಯಮಗಳನ್ನು ಇನ್ನೂ ರೂಪಿಸಿಲ್ಲ, ಏಕೆಂದರೆ ಕೊರೊನಾ ಕಾರಣದಿಂದಾಗಿ ಇಂತಹ ಬೃಹತ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ವ್ಯಾಕ್ಸಿನೇಷನ್ ಪ್ರಾರಂಭವಾದ ತಕ್ಷಣ ನಾವು ಅದನ್ನು ಪರಿಗಣಿಸುತ್ತೇವೆ” ಎಂದಿದ್ದನ್ನು ಗಮನಿಸಿ.

ಪ್ರತಿಭಟನೆಯ ಶಕ್ತಿ

ಕೃಷಿ ಕಾಯ್ದೆಗಳನ್ನು ತಡೆಯುವ ಮತ್ತು ಸಿಎಎ ಪ್ರಕ್ರಿಯೆ ಆರಂಭಿಸದಿರುವ ಎರಡೂ ನಿದರ್ಶನಗಳು ಸರ್ಕಾರದ ಹಿನ್ನಡೆಗಳೇ ಆಗಿವೆ. ಈ ಹಿನ್ನಡೆಗಳಿಗೆ ಕಾರಣ ಅಂತಾ ಒಂದಿದ್ದರೆ ಅದು ಸಾರ್ವಜನಿಕರ ಪ್ರತಿಭಟನೆಯಾಗಿದೆ. ಸಂಸತ್ತು, ಪ್ರತಿಪಕ್ಷಗಳು, ಮಾಧ್ಯಮಗಳು, ನ್ಯಾಯಾಂಗ – ಇಂದು ಯಾವುದೇ ಸಂಸ್ಥೆಗಳು ಸಮತೋಲನದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಇದಕ್ಕಾಗಿಯೇ ಪ್ರತಿಭಟನೆ – ಶಾಂತಿಯುತ ಪ್ರತಿಭಟನೆ – ಪ್ರಜಾಪ್ರಭುತ್ವದ ಕೇಂದ್ರಬಿಂದುವಾಗಿದೆ, ಮತ್ತು ಇದಕ್ಕಾಗಿಯೇ ಪ್ರತಿಭಟನಾಕಾರರನ್ನು ಅತ್ಯಂತ ಕಠಿಣ ಕಾನೂನುಗಳ ಅಡಿಯಲ್ಲಿ ಗುರುತಿಸಿ ಅನೇಕ ಪ್ರಕರಣಗಳೊಂದಿಗೆ ತಳುಕು ಹಾಕಿ ಬಂಧನ ಮಾಡಲಾಗುತ್ತಿದೆ.

ಕೃಪೆ: ಶಿವಂ ವಿಜ್ (ದಿ ಪ್ರಿಂಟ್)


ಇದನ್ನೂ ಓದಿ: ಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...