Homeಮುಖಪುಟಉತ್ತರ ಪ್ರದೇಶ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹ ಪತ್ತೆ; ಸಾಮೂಹಿಕ ಅತ್ಯಾಚಾರ...

ಉತ್ತರ ಪ್ರದೇಶ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹ ಪತ್ತೆ; ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಬಳಿಯ ಘಟಮ್ಪುರದಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಮರವೊಂದರಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಬಾಲಕಿಯರು ಕೆಲಸ ಮಾಡುತ್ತಿದ್ದ ಇಟ್ಟಿಗೆ ಕಾರ್ಖಾನೆ ಸಮೀಪದ ಹೊಲದಲ್ಲಿರುವ ಮರದಲ್ಲಿ ಮೃತದೇಹಗಳು ನೇತಾಡುತ್ತಿತ್ತು ಎಂದು ವರದಿಗಳು ಹೇಳಿವೆ. ಬಾಲಕಿಯರ ಮೇಲೆ ಕೆಲ ದಿನಗಳ ಹಿಂದೆ ಅತ್ಯಾಚಾರ ನಡೆದಿತ್ತು ಎಂದು ಆರೋಪಿಸಲಾಗಿದೆ.

ಕೆಲ ದಿನಗಳ ಹಿಂದೆ ಇಟ್ಟಿಗೆ ಕಾರ್ಖಾನೆಯ ಗುತ್ತಿಗೆದಾರ ರಾಮರೂಪ್ ನಿಶಾದ್ (48), ಆತನ ಮಗ ರಾಜು (18) ಮತ್ತು ಸೋದರಳಿಯ ಸಂಜಯ್ (19) ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೂವರು ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ಹೆಚ್ಚುವರಿ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರೀಶ್ ಚಂದ್ರ ತಿಳಿಸಿದ್ದಾರೆ.

ಮೃತ ಬಾಲಕಿಯರು ಬುಧವಾರ ನಾಪತ್ತೆಯಾಗಿದ್ದರು. ಅಂದು ಸಂಜೆ ಅವರ ದೇಹಗಳು ಇಟ್ಟಿಗೆ ಕಾರ್ಖಾನೆಯಿಂದ 400 ಮೀಟರ್ ದೂರದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಎಸಿಪಿ ಮಾಹಿತಿ ನೀಡಿದ್ದಾರೆ.

“ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯ ನಿವಾಸಿಗಳಾಗಿರುವ ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನಾವು ಆರೋಪಿಗಳ ಮೊಬೈಲ್‌ಗಳಿಂದ ಬಾಲಕಿಯರ ಫೋಟೋ, ವಿಡಿಯೋಗಳನ್ನು ವಶಪಡಿಸಿಕೊಂಡಿದ್ದೇವೆ. ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು” ಎಂದು ಎಸಿಪಿ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ), 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸಿಪಿ ತಿಳಿಸಿದ್ದಾರೆ.

ಬಾಲಕಿಯರ ಸಾವಿನ ನಿಖರವಾದ ಕಾರಣ ಕಂಡುಹಿಡಿಯಲು ಮತ್ತು ಸಾಮೂಹಿಕ ಅತ್ಯಾಚಾರದ ಆರೋಪಗಳ ಕುರಿತು ಪರಿಶೀಲಿಸಲು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬಾಲಕಿಯ ಸಾವಿನ ಕುರಿತು ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, “ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಮರಕ್ಕೆ ನೇತು ಹಾಕಲಾಗಿದೆ. ಇದು ಬಿಜೆಪಿ ಆಡಳಿತದ ಯುಪಿಯಲ್ಲಿ ಆಗಿರುವುದರಿಂದ ಯಾವುದೇ ಮಹಿಳಾ ಆಯೋಗ, ಎಸ್‌ಸಿ ಆಯೋಗ, ಎನ್‌ಹೆಚ್‌ಆರ್‌ಸಿ ಮತ್ತು ಮಕ್ಕಳ ಆಯೋಗ ಘಟನಾ ಸ್ಥಳಕ್ಕೆ ಧಾವಿಸಿಲ್ಲ. ಬಾಲಕಿಯರ ನ್ಯಾಯಕ್ಕಾಗಿ ನಾವೇನಾದರು ಆಗ್ರಹಿಸಿದರೆ ಯುಎಪಿಎ ಅಡಿ ಪ್ರಕರಣ ದಾಖಲಿಸಬಹುದು. ಗೋದಿ ಮಾಧ್ಯಮಗಳೂ ಮೌನವಹಿಸಿವೆ” ಎಂದಿದ್ದಾರೆ.

ತಂಬ್‌ನೈಲ್‌ ಫೋಟೋ ಸಾಂಧರ್ಬಿಕ

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...