Homeಕರ್ನಾಟಕಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

ಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯದ ಇಬ್ಬರು ಬಿಜೆಪಿಯ ಶಾಸಕರಿಗೆ ಜೈಲು ಶಿಕ್ಷೆಯಾಗಿದೆ. ಒಬ್ಬರು ಚೆಕ್‌ಬೌನ್ಸ್ ಪ್ರಕರಣದಲ್ಲಿ, ಮತ್ತೊಬ್ಬರು ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕುಟುಕಿದೆ.

ಬಿಜೆಪಿಯ ಇಬ್ಬರು ಶಾಸಕರು ಜೈಲು ಸೇರಿರುವದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ! ಒಬ್ಬ ಶಾಸಕ ಚೆಕ್‍ಬೌನ್ಸ್ ಕೇಸಲ್ಲಿ 4 ವರ್ಷ ಶಿಕ್ಷೆಗೆ ಗುರಿಯಾದರೆ, ಮತ್ತೊಬ್ಬ ವಂಚನೆ ಕೇಸಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ! ಸ್ವಯಂಘೋಷಿತ ಸುಸಂಸ್ಕೃತ ಪಕ್ಷ ಬಿಜೆಪಿಯ ತುಂಬಾ ಭ್ರಷ್ಟಾಚಾರಿಗಳು & ಕ್ರಿಮಿನಲ್‍ಗಳೇ ತುಂಬಿರುವುದು ನಾಚಿಕೆಗೇಡಿನ ಸಂಗತಿ” ಎಂದು ತಿಳಿಸಿದೆ.

ಚೆಕ್‌ಬೌನ್ಸ್ ಕೇಸ್‌ನಲ್ಲಿ ಮೂಡಿಗೆರೆ ಶಾಸಕನಿಗೆ 4 ವರ್ಷ ಜೈಲು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಚೆಕ್‌ಬೌನ್ಸ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಒಟ್ಟು ಎಂಟು ಚೆಕ್‌ಬೌನ್ಸ್‌ ಪ್ರಕರಣದಲ್ಲಿ 1.38 ಕೋಟಿ ರು. ಹಣ ಪಾವತಿಸಬೇಕು ಎಂದು ನ್ಯಾಯಾಲಯವು ತಿಳಿಸಿದೆ.

ಚಿಕ್ಕಮಗಳೂರು ನಗರದ ನಿವಾಸಿಯಾಗಿರುವ ಹೂವಪ್ಪಗೌಡ ಎಂಬುವರಿಂದ 1.35 ಕೋಟಿ ರೂ.ಗಳನ್ನು ಎಂ.ಪಿ.ಕುಮಾರಸ್ವಾಮಿ ಸಾಲ ಪಡೆದಿದ್ದರು. ಸಾಲ ಮರುಪಾವತಿಗೆ ಎಂಟು ಚೆಕ್‌ಗಳನ್ನು ನೀಡಿದ್ದರು. ಆದರೆ, ಎಲ್ಲ ಚೆಕ್‌ಗಳು ಬೌನ್ಸ್‌ ಆಗಿದ್ದವು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ ಹೂವಪ್ಪಗೌಡ ಎಂಟು ಪ್ರಕರಣಗಳನ್ನು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಎಂಟು ತಲಾ ಪ್ರಕರಣಗಳಿಗೆ ಆರು ತಿಂಗಳಂತೆ ಕುಮಾರಸ್ವಾಮಿ ಅವರಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ.

ಶಾಸಕ ಕುಮಾರಸ್ವಾಮಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ತಮ್ಮದೇಯಾದ ರೀತಿಯಲ್ಲಿ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿದ್ದರು. ದೂರುದಾರನ ಆರ್ಥಿಕ ಸಾಮರ್ಥ್ಯವನ್ನು ಪ್ರಶ್ನಿಸಿದ್ದು, ಚುನಾವಣಾ ಸಂದರ್ಭದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಮುಕ್ತಿ ಪಡೆಯಲು ದೂರುದಾರರಿಗೆ 1.40 ಕೋಟಿ ರೂಪಾಯಿಗಳನ್ನು ನೀಡಿದ್ದೆ ಎಂದು ಹೇಳುವ ಮಟ್ಟಕ್ಕೆ ಹೋಗಿದ್ದಾರೆ.

ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಷ್ಟೊಂದು ಹಣವನ್ನು ಕೊಡಲು ಹೇಗೆ ಸಾಧ್ಯ ಎಂದು ನ್ಯಾಯಾಲಯದಲ್ಲಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಇದು ಆರೋಪಿಯು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹೆಣೆಯುವ ಕಥೆ ಎಂದು ನ್ಯಾಯಾಲಯದ ಗಮನಕ್ಕೆ ಬಂದಿದೆ.

ಆರೋಪಿ ಕುಮಾರಸ್ವಾಮಿ ವಿರುದ್ಧ 2021ರಲ್ಲಿ ಎಚ್‌ಆರ್‌ ಹೂವಪ್ಪಗೌಡ ಅವರು ದೂರು ದಾಖಲಿಸಿದ್ದರು. ದೂರುದಾರರು ಮತ್ತು ಆರೋಪಿಗಳಿಬ್ಬರೂ ಪರಸ್ಪರ ಪರಿಚಿತರಾಗಿದ್ದಾರೆ. ದೂರುದಾರರಿಗೆ ಶಾಸಕ 1.38 ಕೋಟಿ ರೂಪಾಯಿ ಹಣ ನೀಡಬೇಕಿತ್ತು. ಇದೀಗ ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಾಸಕ ಕುಮಾರಸ್ವಾಮಿಗೆ ನ್ಯಾಯಾಲಯ ಆದೇಶ ನೀಡಿದೆ.

ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಹಾವೇರಿ ಶಾಸಕನಿಗೆ 2ವ‍ರ್ಷ ಜೈಲು

ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರೂ ಓಲೆಕಾರ್ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ 2 ವರ್ಷ ಜೈಲು‌ ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಶಾಸಕ ನೆಹರೂ ಓಲೆಕಾರ್ ಜೊತೆ ಅವರ ಇಬ್ಬರು ಮಕ್ಕಳಿಗೂ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರೂ ಓಲೆಕಾರ್ ಮಕ್ಕಳಾದ‌ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ, 2 ವರ್ಷ ಜೈಲು ಜೊತೆಗೆ 2 ಸಾವಿರ ರೂ. ದಂಡವನ್ನು ವಿಧಿಸಿ ಶಿಕ್ಷೆ ಪ್ರಕಟ ಮಾಡಲಾಗಿದೆ.

ಆರೋಪ ಏನು? 

ಶಾಸಕರ ಅನುದಾನದಲ್ಲಿ 1 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಶಾಸಕರ ಅನುದಾನವನ್ನು ಕಬಳಿಸುವ ಉದ್ದೇಶದಿಂದ 2010ರಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ತಮ್ಮ ಕ್ಷೇತ್ರದಲ್ಲಿ 50 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಅದರಂತೆ ಜಿಲ್ಲಾಧಿಕಾರಿ ಹಣವನ್ನು ಬಿಡುಗಡೆ ಮಾಡಿದ್ದಾರೆ. 10 ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಶಿಫಾರಸ್ಸು ಪತ್ರದಲ್ಲಿ ಪಟ್ಟಿ ಮಾಡಲಾಗಿದ್ದು, ಈ ಪೈಕಿ ನಾಲ್ಕು ಕಾಮಗಾರಿಗಳ ಗುತ್ತಿಗೆಗಳನ್ನು ಹಿರಿಯ ಮಗನಿಗೆ ಹಂಚಿಕೆ ಮಾಡಲಾಗಿತ್ತು. ಟೆಂಡರ್‌ ನೀಡುವ ವೇಳೆ ಶಾಸಕರು ಶಿಫಾರಸ್ಸಿನೊಂದಿಗೆ ತಮ್ಮ ಪ್ರಭಾವ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹಲವು ಲೋಕೋಪಯೋಗಿ ಗುತ್ತಿಗೆಗಳನ್ನು ಶಾಸಕರ ಕುಟುಂಬದವರೇ ಪಡೆದುಕೊಂಡಿದ್ದಾರೆ. ಎಂ.ಜಿ.ತಿಮ್ಮಾಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಗುತ್ತಿಗೆ ಪಡೆದಿದ್ದಾರೆ ಮತ್ತು ನೆಲೋಗಲ್ ಗ್ರಾಮ ಮತ್ತು ತೋಟದ ಯಲ್ಲಾಪುರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಗುತ್ತಿಗೆಯನ್ನು ಸಹ ಪಡೆದುಕೊಂಡಿದ್ದಾರೆ. ಹಾವೇರಿ ತಾಲೂಕಿನ ಗ್ರಾಮ ಹಾಗೂ ಸವಣೂರು ತಾಲೂಕಿನ ಹೊನ್ನಿಕೊಪ್ಪ ಗ್ರಾಮಗಳಲ್ಲಿ ಪ್ರತಿ ಗುತ್ತಿಗೆ ಅಂದಾಜು 5 ಲಕ್ಷ ರೂ.ನಂತೆ ಗುತ್ತಿಗೆ ಪಡೆದಿದ್ದಾರೆ. ಜೊತೆಗೆ, ಬೇರೊಬ್ಬರು ಯಾರೂ ಟೆಂಡರ್‌ನಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕಿದ್ದಾರೆ. ಕಾನೂನಿಗೆ ತಿಳಿದಿಲ್ಲದ ಇತರ ಯಾವುದೇ ವ್ಯಕ್ತಿಗೆ ಗುತ್ತಿಗೆಗಳನ್ನು ಪಡೆಯಲು ಅವಕಾಶ ನೀಡದೆ ಎಲ್ಲಾ ಸರ್ಕಾರಿ ಗುತ್ತಿಗೆಗಳನ್ನು ತಮ್ಮ ಮನೆಯವರೇ ಪಡೆದುಕೊಂಡು ನಿರ್ವಹಣೆ ಮಾಡಿದ್ದರು. ಇದರಲ್ಲಿ ಭಾರಿ ಪ್ರಮಾಣದ ಅಕ್ರಮ ಎಸಗಿದ್ದು, ಭ್ರಷ್ಟಾಚಾರದ ಆರೋಪ ಕೂಡ ಎದುರಾಗಿತ್ತು.

ಶಾಸಕರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆ ಹಾವೇರಿ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡು ಆರೋಪ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಇದಕ್ಕೆ ಸಂಬಂಧಿಸದಂತೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದಾಗ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಣದ ದುರುಪಯೋಗ ಹಾಗೂ ಅಧಿಕಾರ ದುರ್ಬಳಕೆ ಹಿನ್ನೆಲೆಯಲ್ಲಿ ಅವರಿಗೆ 2ವ‍ರ್ಷ ಜೈಲು ಶಿಕ್ಷೆ ವಿಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...