Homeಕರ್ನಾಟಕಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

ಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯದ ಇಬ್ಬರು ಬಿಜೆಪಿಯ ಶಾಸಕರಿಗೆ ಜೈಲು ಶಿಕ್ಷೆಯಾಗಿದೆ. ಒಬ್ಬರು ಚೆಕ್‌ಬೌನ್ಸ್ ಪ್ರಕರಣದಲ್ಲಿ, ಮತ್ತೊಬ್ಬರು ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕುಟುಕಿದೆ.

ಬಿಜೆಪಿಯ ಇಬ್ಬರು ಶಾಸಕರು ಜೈಲು ಸೇರಿರುವದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ! ಒಬ್ಬ ಶಾಸಕ ಚೆಕ್‍ಬೌನ್ಸ್ ಕೇಸಲ್ಲಿ 4 ವರ್ಷ ಶಿಕ್ಷೆಗೆ ಗುರಿಯಾದರೆ, ಮತ್ತೊಬ್ಬ ವಂಚನೆ ಕೇಸಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ! ಸ್ವಯಂಘೋಷಿತ ಸುಸಂಸ್ಕೃತ ಪಕ್ಷ ಬಿಜೆಪಿಯ ತುಂಬಾ ಭ್ರಷ್ಟಾಚಾರಿಗಳು & ಕ್ರಿಮಿನಲ್‍ಗಳೇ ತುಂಬಿರುವುದು ನಾಚಿಕೆಗೇಡಿನ ಸಂಗತಿ” ಎಂದು ತಿಳಿಸಿದೆ.

ಚೆಕ್‌ಬೌನ್ಸ್ ಕೇಸ್‌ನಲ್ಲಿ ಮೂಡಿಗೆರೆ ಶಾಸಕನಿಗೆ 4 ವರ್ಷ ಜೈಲು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಚೆಕ್‌ಬೌನ್ಸ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಒಟ್ಟು ಎಂಟು ಚೆಕ್‌ಬೌನ್ಸ್‌ ಪ್ರಕರಣದಲ್ಲಿ 1.38 ಕೋಟಿ ರು. ಹಣ ಪಾವತಿಸಬೇಕು ಎಂದು ನ್ಯಾಯಾಲಯವು ತಿಳಿಸಿದೆ.

ಚಿಕ್ಕಮಗಳೂರು ನಗರದ ನಿವಾಸಿಯಾಗಿರುವ ಹೂವಪ್ಪಗೌಡ ಎಂಬುವರಿಂದ 1.35 ಕೋಟಿ ರೂ.ಗಳನ್ನು ಎಂ.ಪಿ.ಕುಮಾರಸ್ವಾಮಿ ಸಾಲ ಪಡೆದಿದ್ದರು. ಸಾಲ ಮರುಪಾವತಿಗೆ ಎಂಟು ಚೆಕ್‌ಗಳನ್ನು ನೀಡಿದ್ದರು. ಆದರೆ, ಎಲ್ಲ ಚೆಕ್‌ಗಳು ಬೌನ್ಸ್‌ ಆಗಿದ್ದವು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ ಹೂವಪ್ಪಗೌಡ ಎಂಟು ಪ್ರಕರಣಗಳನ್ನು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಎಂಟು ತಲಾ ಪ್ರಕರಣಗಳಿಗೆ ಆರು ತಿಂಗಳಂತೆ ಕುಮಾರಸ್ವಾಮಿ ಅವರಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ.

ಶಾಸಕ ಕುಮಾರಸ್ವಾಮಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ತಮ್ಮದೇಯಾದ ರೀತಿಯಲ್ಲಿ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿದ್ದರು. ದೂರುದಾರನ ಆರ್ಥಿಕ ಸಾಮರ್ಥ್ಯವನ್ನು ಪ್ರಶ್ನಿಸಿದ್ದು, ಚುನಾವಣಾ ಸಂದರ್ಭದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಮುಕ್ತಿ ಪಡೆಯಲು ದೂರುದಾರರಿಗೆ 1.40 ಕೋಟಿ ರೂಪಾಯಿಗಳನ್ನು ನೀಡಿದ್ದೆ ಎಂದು ಹೇಳುವ ಮಟ್ಟಕ್ಕೆ ಹೋಗಿದ್ದಾರೆ.

ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಷ್ಟೊಂದು ಹಣವನ್ನು ಕೊಡಲು ಹೇಗೆ ಸಾಧ್ಯ ಎಂದು ನ್ಯಾಯಾಲಯದಲ್ಲಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಇದು ಆರೋಪಿಯು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹೆಣೆಯುವ ಕಥೆ ಎಂದು ನ್ಯಾಯಾಲಯದ ಗಮನಕ್ಕೆ ಬಂದಿದೆ.

ಆರೋಪಿ ಕುಮಾರಸ್ವಾಮಿ ವಿರುದ್ಧ 2021ರಲ್ಲಿ ಎಚ್‌ಆರ್‌ ಹೂವಪ್ಪಗೌಡ ಅವರು ದೂರು ದಾಖಲಿಸಿದ್ದರು. ದೂರುದಾರರು ಮತ್ತು ಆರೋಪಿಗಳಿಬ್ಬರೂ ಪರಸ್ಪರ ಪರಿಚಿತರಾಗಿದ್ದಾರೆ. ದೂರುದಾರರಿಗೆ ಶಾಸಕ 1.38 ಕೋಟಿ ರೂಪಾಯಿ ಹಣ ನೀಡಬೇಕಿತ್ತು. ಇದೀಗ ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಾಸಕ ಕುಮಾರಸ್ವಾಮಿಗೆ ನ್ಯಾಯಾಲಯ ಆದೇಶ ನೀಡಿದೆ.

ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಹಾವೇರಿ ಶಾಸಕನಿಗೆ 2ವ‍ರ್ಷ ಜೈಲು

ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರೂ ಓಲೆಕಾರ್ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ 2 ವರ್ಷ ಜೈಲು‌ ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಶಾಸಕ ನೆಹರೂ ಓಲೆಕಾರ್ ಜೊತೆ ಅವರ ಇಬ್ಬರು ಮಕ್ಕಳಿಗೂ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರೂ ಓಲೆಕಾರ್ ಮಕ್ಕಳಾದ‌ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ, 2 ವರ್ಷ ಜೈಲು ಜೊತೆಗೆ 2 ಸಾವಿರ ರೂ. ದಂಡವನ್ನು ವಿಧಿಸಿ ಶಿಕ್ಷೆ ಪ್ರಕಟ ಮಾಡಲಾಗಿದೆ.

ಆರೋಪ ಏನು? 

ಶಾಸಕರ ಅನುದಾನದಲ್ಲಿ 1 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಶಾಸಕರ ಅನುದಾನವನ್ನು ಕಬಳಿಸುವ ಉದ್ದೇಶದಿಂದ 2010ರಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ತಮ್ಮ ಕ್ಷೇತ್ರದಲ್ಲಿ 50 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಅದರಂತೆ ಜಿಲ್ಲಾಧಿಕಾರಿ ಹಣವನ್ನು ಬಿಡುಗಡೆ ಮಾಡಿದ್ದಾರೆ. 10 ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಶಿಫಾರಸ್ಸು ಪತ್ರದಲ್ಲಿ ಪಟ್ಟಿ ಮಾಡಲಾಗಿದ್ದು, ಈ ಪೈಕಿ ನಾಲ್ಕು ಕಾಮಗಾರಿಗಳ ಗುತ್ತಿಗೆಗಳನ್ನು ಹಿರಿಯ ಮಗನಿಗೆ ಹಂಚಿಕೆ ಮಾಡಲಾಗಿತ್ತು. ಟೆಂಡರ್‌ ನೀಡುವ ವೇಳೆ ಶಾಸಕರು ಶಿಫಾರಸ್ಸಿನೊಂದಿಗೆ ತಮ್ಮ ಪ್ರಭಾವ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹಲವು ಲೋಕೋಪಯೋಗಿ ಗುತ್ತಿಗೆಗಳನ್ನು ಶಾಸಕರ ಕುಟುಂಬದವರೇ ಪಡೆದುಕೊಂಡಿದ್ದಾರೆ. ಎಂ.ಜಿ.ತಿಮ್ಮಾಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಗುತ್ತಿಗೆ ಪಡೆದಿದ್ದಾರೆ ಮತ್ತು ನೆಲೋಗಲ್ ಗ್ರಾಮ ಮತ್ತು ತೋಟದ ಯಲ್ಲಾಪುರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಗುತ್ತಿಗೆಯನ್ನು ಸಹ ಪಡೆದುಕೊಂಡಿದ್ದಾರೆ. ಹಾವೇರಿ ತಾಲೂಕಿನ ಗ್ರಾಮ ಹಾಗೂ ಸವಣೂರು ತಾಲೂಕಿನ ಹೊನ್ನಿಕೊಪ್ಪ ಗ್ರಾಮಗಳಲ್ಲಿ ಪ್ರತಿ ಗುತ್ತಿಗೆ ಅಂದಾಜು 5 ಲಕ್ಷ ರೂ.ನಂತೆ ಗುತ್ತಿಗೆ ಪಡೆದಿದ್ದಾರೆ. ಜೊತೆಗೆ, ಬೇರೊಬ್ಬರು ಯಾರೂ ಟೆಂಡರ್‌ನಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕಿದ್ದಾರೆ. ಕಾನೂನಿಗೆ ತಿಳಿದಿಲ್ಲದ ಇತರ ಯಾವುದೇ ವ್ಯಕ್ತಿಗೆ ಗುತ್ತಿಗೆಗಳನ್ನು ಪಡೆಯಲು ಅವಕಾಶ ನೀಡದೆ ಎಲ್ಲಾ ಸರ್ಕಾರಿ ಗುತ್ತಿಗೆಗಳನ್ನು ತಮ್ಮ ಮನೆಯವರೇ ಪಡೆದುಕೊಂಡು ನಿರ್ವಹಣೆ ಮಾಡಿದ್ದರು. ಇದರಲ್ಲಿ ಭಾರಿ ಪ್ರಮಾಣದ ಅಕ್ರಮ ಎಸಗಿದ್ದು, ಭ್ರಷ್ಟಾಚಾರದ ಆರೋಪ ಕೂಡ ಎದುರಾಗಿತ್ತು.

ಶಾಸಕರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆ ಹಾವೇರಿ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡು ಆರೋಪ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಇದಕ್ಕೆ ಸಂಬಂಧಿಸದಂತೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದಾಗ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಣದ ದುರುಪಯೋಗ ಹಾಗೂ ಅಧಿಕಾರ ದುರ್ಬಳಕೆ ಹಿನ್ನೆಲೆಯಲ್ಲಿ ಅವರಿಗೆ 2ವ‍ರ್ಷ ಜೈಲು ಶಿಕ್ಷೆ ವಿಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...