Homeಕರ್ನಾಟಕಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

ಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯದ ಇಬ್ಬರು ಬಿಜೆಪಿಯ ಶಾಸಕರಿಗೆ ಜೈಲು ಶಿಕ್ಷೆಯಾಗಿದೆ. ಒಬ್ಬರು ಚೆಕ್‌ಬೌನ್ಸ್ ಪ್ರಕರಣದಲ್ಲಿ, ಮತ್ತೊಬ್ಬರು ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕುಟುಕಿದೆ.

ಬಿಜೆಪಿಯ ಇಬ್ಬರು ಶಾಸಕರು ಜೈಲು ಸೇರಿರುವದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ! ಒಬ್ಬ ಶಾಸಕ ಚೆಕ್‍ಬೌನ್ಸ್ ಕೇಸಲ್ಲಿ 4 ವರ್ಷ ಶಿಕ್ಷೆಗೆ ಗುರಿಯಾದರೆ, ಮತ್ತೊಬ್ಬ ವಂಚನೆ ಕೇಸಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ! ಸ್ವಯಂಘೋಷಿತ ಸುಸಂಸ್ಕೃತ ಪಕ್ಷ ಬಿಜೆಪಿಯ ತುಂಬಾ ಭ್ರಷ್ಟಾಚಾರಿಗಳು & ಕ್ರಿಮಿನಲ್‍ಗಳೇ ತುಂಬಿರುವುದು ನಾಚಿಕೆಗೇಡಿನ ಸಂಗತಿ” ಎಂದು ತಿಳಿಸಿದೆ.

ಚೆಕ್‌ಬೌನ್ಸ್ ಕೇಸ್‌ನಲ್ಲಿ ಮೂಡಿಗೆರೆ ಶಾಸಕನಿಗೆ 4 ವರ್ಷ ಜೈಲು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಚೆಕ್‌ಬೌನ್ಸ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಒಟ್ಟು ಎಂಟು ಚೆಕ್‌ಬೌನ್ಸ್‌ ಪ್ರಕರಣದಲ್ಲಿ 1.38 ಕೋಟಿ ರು. ಹಣ ಪಾವತಿಸಬೇಕು ಎಂದು ನ್ಯಾಯಾಲಯವು ತಿಳಿಸಿದೆ.

ಚಿಕ್ಕಮಗಳೂರು ನಗರದ ನಿವಾಸಿಯಾಗಿರುವ ಹೂವಪ್ಪಗೌಡ ಎಂಬುವರಿಂದ 1.35 ಕೋಟಿ ರೂ.ಗಳನ್ನು ಎಂ.ಪಿ.ಕುಮಾರಸ್ವಾಮಿ ಸಾಲ ಪಡೆದಿದ್ದರು. ಸಾಲ ಮರುಪಾವತಿಗೆ ಎಂಟು ಚೆಕ್‌ಗಳನ್ನು ನೀಡಿದ್ದರು. ಆದರೆ, ಎಲ್ಲ ಚೆಕ್‌ಗಳು ಬೌನ್ಸ್‌ ಆಗಿದ್ದವು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ ಹೂವಪ್ಪಗೌಡ ಎಂಟು ಪ್ರಕರಣಗಳನ್ನು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಎಂಟು ತಲಾ ಪ್ರಕರಣಗಳಿಗೆ ಆರು ತಿಂಗಳಂತೆ ಕುಮಾರಸ್ವಾಮಿ ಅವರಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ.

ಶಾಸಕ ಕುಮಾರಸ್ವಾಮಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ತಮ್ಮದೇಯಾದ ರೀತಿಯಲ್ಲಿ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿದ್ದರು. ದೂರುದಾರನ ಆರ್ಥಿಕ ಸಾಮರ್ಥ್ಯವನ್ನು ಪ್ರಶ್ನಿಸಿದ್ದು, ಚುನಾವಣಾ ಸಂದರ್ಭದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಮುಕ್ತಿ ಪಡೆಯಲು ದೂರುದಾರರಿಗೆ 1.40 ಕೋಟಿ ರೂಪಾಯಿಗಳನ್ನು ನೀಡಿದ್ದೆ ಎಂದು ಹೇಳುವ ಮಟ್ಟಕ್ಕೆ ಹೋಗಿದ್ದಾರೆ.

ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಷ್ಟೊಂದು ಹಣವನ್ನು ಕೊಡಲು ಹೇಗೆ ಸಾಧ್ಯ ಎಂದು ನ್ಯಾಯಾಲಯದಲ್ಲಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಇದು ಆರೋಪಿಯು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹೆಣೆಯುವ ಕಥೆ ಎಂದು ನ್ಯಾಯಾಲಯದ ಗಮನಕ್ಕೆ ಬಂದಿದೆ.

ಆರೋಪಿ ಕುಮಾರಸ್ವಾಮಿ ವಿರುದ್ಧ 2021ರಲ್ಲಿ ಎಚ್‌ಆರ್‌ ಹೂವಪ್ಪಗೌಡ ಅವರು ದೂರು ದಾಖಲಿಸಿದ್ದರು. ದೂರುದಾರರು ಮತ್ತು ಆರೋಪಿಗಳಿಬ್ಬರೂ ಪರಸ್ಪರ ಪರಿಚಿತರಾಗಿದ್ದಾರೆ. ದೂರುದಾರರಿಗೆ ಶಾಸಕ 1.38 ಕೋಟಿ ರೂಪಾಯಿ ಹಣ ನೀಡಬೇಕಿತ್ತು. ಇದೀಗ ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಾಸಕ ಕುಮಾರಸ್ವಾಮಿಗೆ ನ್ಯಾಯಾಲಯ ಆದೇಶ ನೀಡಿದೆ.

ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಹಾವೇರಿ ಶಾಸಕನಿಗೆ 2ವ‍ರ್ಷ ಜೈಲು

ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರೂ ಓಲೆಕಾರ್ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ 2 ವರ್ಷ ಜೈಲು‌ ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಶಾಸಕ ನೆಹರೂ ಓಲೆಕಾರ್ ಜೊತೆ ಅವರ ಇಬ್ಬರು ಮಕ್ಕಳಿಗೂ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರೂ ಓಲೆಕಾರ್ ಮಕ್ಕಳಾದ‌ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ, 2 ವರ್ಷ ಜೈಲು ಜೊತೆಗೆ 2 ಸಾವಿರ ರೂ. ದಂಡವನ್ನು ವಿಧಿಸಿ ಶಿಕ್ಷೆ ಪ್ರಕಟ ಮಾಡಲಾಗಿದೆ.

ಆರೋಪ ಏನು? 

ಶಾಸಕರ ಅನುದಾನದಲ್ಲಿ 1 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಶಾಸಕರ ಅನುದಾನವನ್ನು ಕಬಳಿಸುವ ಉದ್ದೇಶದಿಂದ 2010ರಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ತಮ್ಮ ಕ್ಷೇತ್ರದಲ್ಲಿ 50 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಅದರಂತೆ ಜಿಲ್ಲಾಧಿಕಾರಿ ಹಣವನ್ನು ಬಿಡುಗಡೆ ಮಾಡಿದ್ದಾರೆ. 10 ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಶಿಫಾರಸ್ಸು ಪತ್ರದಲ್ಲಿ ಪಟ್ಟಿ ಮಾಡಲಾಗಿದ್ದು, ಈ ಪೈಕಿ ನಾಲ್ಕು ಕಾಮಗಾರಿಗಳ ಗುತ್ತಿಗೆಗಳನ್ನು ಹಿರಿಯ ಮಗನಿಗೆ ಹಂಚಿಕೆ ಮಾಡಲಾಗಿತ್ತು. ಟೆಂಡರ್‌ ನೀಡುವ ವೇಳೆ ಶಾಸಕರು ಶಿಫಾರಸ್ಸಿನೊಂದಿಗೆ ತಮ್ಮ ಪ್ರಭಾವ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹಲವು ಲೋಕೋಪಯೋಗಿ ಗುತ್ತಿಗೆಗಳನ್ನು ಶಾಸಕರ ಕುಟುಂಬದವರೇ ಪಡೆದುಕೊಂಡಿದ್ದಾರೆ. ಎಂ.ಜಿ.ತಿಮ್ಮಾಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಗುತ್ತಿಗೆ ಪಡೆದಿದ್ದಾರೆ ಮತ್ತು ನೆಲೋಗಲ್ ಗ್ರಾಮ ಮತ್ತು ತೋಟದ ಯಲ್ಲಾಪುರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಗುತ್ತಿಗೆಯನ್ನು ಸಹ ಪಡೆದುಕೊಂಡಿದ್ದಾರೆ. ಹಾವೇರಿ ತಾಲೂಕಿನ ಗ್ರಾಮ ಹಾಗೂ ಸವಣೂರು ತಾಲೂಕಿನ ಹೊನ್ನಿಕೊಪ್ಪ ಗ್ರಾಮಗಳಲ್ಲಿ ಪ್ರತಿ ಗುತ್ತಿಗೆ ಅಂದಾಜು 5 ಲಕ್ಷ ರೂ.ನಂತೆ ಗುತ್ತಿಗೆ ಪಡೆದಿದ್ದಾರೆ. ಜೊತೆಗೆ, ಬೇರೊಬ್ಬರು ಯಾರೂ ಟೆಂಡರ್‌ನಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕಿದ್ದಾರೆ. ಕಾನೂನಿಗೆ ತಿಳಿದಿಲ್ಲದ ಇತರ ಯಾವುದೇ ವ್ಯಕ್ತಿಗೆ ಗುತ್ತಿಗೆಗಳನ್ನು ಪಡೆಯಲು ಅವಕಾಶ ನೀಡದೆ ಎಲ್ಲಾ ಸರ್ಕಾರಿ ಗುತ್ತಿಗೆಗಳನ್ನು ತಮ್ಮ ಮನೆಯವರೇ ಪಡೆದುಕೊಂಡು ನಿರ್ವಹಣೆ ಮಾಡಿದ್ದರು. ಇದರಲ್ಲಿ ಭಾರಿ ಪ್ರಮಾಣದ ಅಕ್ರಮ ಎಸಗಿದ್ದು, ಭ್ರಷ್ಟಾಚಾರದ ಆರೋಪ ಕೂಡ ಎದುರಾಗಿತ್ತು.

ಶಾಸಕರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆ ಹಾವೇರಿ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡು ಆರೋಪ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಇದಕ್ಕೆ ಸಂಬಂಧಿಸದಂತೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದಾಗ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಣದ ದುರುಪಯೋಗ ಹಾಗೂ ಅಧಿಕಾರ ದುರ್ಬಳಕೆ ಹಿನ್ನೆಲೆಯಲ್ಲಿ ಅವರಿಗೆ 2ವ‍ರ್ಷ ಜೈಲು ಶಿಕ್ಷೆ ವಿಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...