Homeಮುಖಪುಟಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

- Advertisement -
- Advertisement -

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಖರಾತ್‌ನ ಮಾಜಿ ಉದ್ಯೋಗಿಯೊಬ್ಬರು ನೀಡಿದ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಾಗಿದ್ದು, ಆಧ್ಯಾತ್ಮಿಕ ಆಚರಣೆಗಳನ್ನು ಮಾಡುವ ನೆಪದಲ್ಲಿ ನವೆಂಬರ್ 2023ರಿಂದ ಡಿಸೆಂಬರ್ 2025ರ ಅವಧಿಯಲ್ಲಿ ನನ್ನ ಪತ್ನಿ ಮೇಲೆ ಖರಾತ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪತ್ನಿ ಏಳು ತಿಂಗಳ ಗರ್ಭಿಣಿಯಾಗಿದ್ದಾಗಲೂ ಆಕೆಯ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

2019ರಲ್ಲಿ ನಾನು ನಾಸಿಕ್ ನಗರದಲ್ಲಿರುವ ಖರಾತ್‌ನ ಆಸ್ತಿ ಅಭಿವೃದ್ಧಿ ಕಚೇರಿಗೆ ಕೆಲಸಕ್ಕೆ ಸೇರಿದ್ದೆ. ನಾನು ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆರೋಗ್ಯವಂತ ಮಗುವಿಗಾಗಿ ಆಶೀರ್ವದಿಸುವ ನೆಪದಲ್ಲಿ ಖರಾತ್ ನನ್ನ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪತ್ನಿಈ ವಿಷಯ ನನಗೆ ತಿಳಿಸಿದಾಗ ನಾನು ಆತನ ಚಟುವಟಿಕೆಗಳ ಬಗ್ಗೆ ಆಳವಾಗಿ ತನಿಖೆ ನಡೆಸಲು ನಿರ್ಧರಿಸಿದೆ. ಆತ ಮಹಿಳೆಯರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಕಚೇರಿ ಕ್ಯಾಬಿನ್‌ನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ತನ್ನ ಕಚೇರಿಗೆ ಭೇಟಿ ನೀಡುವ ಮಹಿಳೆಯರಿಗೆ ಅಘೋರಿ ಆಚರಣೆಯ ಭಾಗವೆಂದು ಅಮಲು ಪದಾರ್ಥ ಬೆರೆಸಿದ ಪಾನೀಯಗಳನ್ನು ಕುಡಿಯಲು ಖರಾತ್ ಬಲವಂತಪಡಿಸುತ್ತಿದ್ದ. ಅದನ್ನು ಕುಡಿದು ಮಹಿಳೆಯರು ಪ್ರಜ್ಞೆ ಕಳೆದುಕೊಂಡಾಗ ಅಥವಾ ಅಸಹಾಯಕರಾದಾಗ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂಬುವುದು ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ನಾನು ಖರಾತ್‌ನನ್ನು ಪ್ರಶ್ನಿಸಿದಾಗ ಕೆಲಸದಿಂದ ವಜಾಗೊಳಿಸಿದ್ದ. ನನ್ನ ಬಳಿ ಆತನ ಅಪರಾಧ ಕೃತ್ಯಗಳ ವಿಡಿಯೋ ಸಾಕ್ಷ್ಯವಿರುವುದು ತಿಳಿದಾಗ, ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಹಾಕಲು ಪ್ರಾರಂಭಿಸಿದ. ಆತನಿಗೆ ಹಿರಿಯ ರಾಜಕಾರಣಿಗಳೊಂದಿಗೆ ಇದ್ದ ಪ್ರಭಾವ ಮತ್ತು ಸಂಪರ್ಕದ ಕಾರಣದಿಂದ ನಾನು ಈ ಹಿಂದೆ ಪೊಲೀಸರಿಗೆ ದೂರು ನೀಡಿರಲಿಲ್ಲ. ಇತ್ತೀಚೆಗೆ ನಾಸಿಕ್ ಪೊಲೀಸರು ಆತನನ್ನು ಬಂಧಿಸಿದ ವಿಷಯ ಗೊತ್ತಾಗಿ ನಾನೂ ದೂರು ದಾಖಲಿಸಲು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಎರಡನೇ ಎಫ್‌ಐಆರ್‌ ಮಹಿಳೆಯೊಬ್ಬರ ದೂರಿನ ಮೇರೆಗೆ ದಾಖಲಾಗಿದೆ. ವಿಚ್ಛೇದನದ ನಂತರ ನನ್ನ ಭವಿಷ್ಯವನ್ನು ಉಜ್ವಲಗೊಳಿಸುವ ಭರವಸೆಯ ನೆಪದಲ್ಲಿ ಫೆಬ್ರವರಿ 2020ರಿಂದ ಈ ವರ್ಷದ ಮಾರ್ಚ್‌ವರೆಗೆ ಖರಾತ್ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಖರಾತ್‌ಗೆ ಮಹಿಳೆಗೆ ಅಮಲು ಪದಾರ್ಥ ನೀಡಿ ದೌರ್ಜನ್ಯವೆಸಗುತ್ತಿದ್ದ. ಆಕೆ ಗರ್ಭಿಣಿಯಾದ ವಿಷಯ ತಿಳಿಸಿದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಎಂದು ವರದಿಯಾಗಿದೆ.

ಸರ್ಕಾರವಾಡ ಪೊಲೀಸರು ಅತ್ಯಾಚಾರದ ಆರೋಪದ ಜೊತೆಗೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಮಹಾರಾಷ್ಟ್ರದ ನರಬಲಿ ಮತ್ತು ಇತರ ಅಮಾನವೀಯ, ದುಷ್ಟ ಮತ್ತು ಅಘೋರಿ ಆಚರಣೆಗಳು ಹಾಗೂ ಮಾಟಮಂತ್ರ ತಡೆಗಟ್ಟುವಿಕೆ ಮತ್ತು ನಿರ್ಮೂಲನೆ ಕಾಯ್ದೆಯ ಸೆಕ್ಷನ್ 3(1) ಮತ್ತು 3(2) ಅನ್ನು ಸಹ ಈ ಪ್ರಕರಣದಲ್ಲಿ ಅನ್ವಯಿಸಲಾಗಿದೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...