Homeಮುಖಪುಟಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ...

ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

- Advertisement -
- Advertisement -

ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೊಂದು ಹೆಸರು ಸೇರ್ಪಡೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಬೀಳುತ್ತಿರುವ ದೊಡ್ಡ ಹೊಡೆತಗಳಲ್ಲಿ ಇದೂ ಒಂದಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಬಿಜೆಪಿ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಆದರೆ, ಕಮಲ್ ನಾಥ್ ಅಥವಾ ನಕುಲ್ ನಾಥ್ ಅವರಿಂದ ಅಧಿಕೃತ ದೃಢೀಕರಣವಿಲ್ಲ.

ಈ ಬೆಳವಣಿಗೆಯ ಬಗ್ಗೆ ಊಹಾಪೋಹಗಳನ್ನು ಹೆಚ್ಚಿಸಿದ ಬಿಜೆಪಿ ವಕ್ತಾರ ಮತ್ತು ಕಮಲ್ ನಾಥ್ ಅವರ ಮಾಜಿ ಮಾಧ್ಯಮ ಸಲಹೆಗಾರ ನರೇಂದ್ರ ಸಲೂಜಾ ಅವರು, ಭೋಪಾಲ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಅವರ ಪುತ್ರನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಜೈ ಶ್ರೀ ರಾಮ್” ಎಂದು ಶೀರ್ಷಿಕೆ ನೀಡಿದ್ದಾರೆ.

ಈ ಬೆಳವಣಿಗೆಗಗಳ ನಡುವೆ, ಛಿಂದ್ವಾರಾದ ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಎಕ್ಸ್‌ನಲ್ಲಿನ ತಮ್ಮ ಪ್ರೊಫೈಲ್ ಬಯೋದಿಂದ ‘ಕಾಂಗ್ರೆಸ್’ ಅನ್ನು ತೆಗೆದುಹಾಕಿದ್ದಾರೆ. ತಂದೆ-ಮಗ ಇಬ್ಬರೂ ಇಂದು ದೆಹಲಿಗೆ ಆಗಮಿಸಲಿದ್ದಾರೆ.

ಊಹಾಪೋಹಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಶುಕ್ರವಾರ ರಾತ್ರಿ ಕಮಲ್ ನಾಥ್ ಅವರೊಂದಿಗೆ ಮಾತನಾಡಿದ್ದಾರೆ. ‘ನೆಹರು-ಗಾಂಧಿ ಕುಟುಂಬದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ವ್ಯಕ್ತಿಯಿಂದ ನಾವು ಇದನ್ನು ಹೇಗೆ ನಿರೀಕ್ಷಿಸಬಹುದು’ ಎಂದು ಹೇಳಿದ್ದಾರೆ. ನಾವು ಅಂತಹದನ್ನು ನಿರೀಕ್ಷಿಸಬಾರದು ಎಂದು ಅವರು ಹೇಳಿದರು.

ಮಧ್ಯಪ್ರದೇಶದ ಸೋನ್‌ಕಾಚ್‌ನ ಕಾಂಗ್ರೆಸ್ ಶಾಸಕ ಸಜ್ಜನ್ ಸಿಂಗ್ ವರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಪ್ರೊಫೈಲ್‌ಗಳಿಂದ ಪಕ್ಷದ ಲೋಗೋವನ್ನು ತೆಗೆದುಹಾಕಿದ್ದಾರೆ ಎಂದು ವರದಿಯಾಗಿದೆ. ವರ್ಮಾ ಅವರನ್ನು ಕಮಲ್ ನಾಥ್ ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ ಇತ್ತೀಚಿನ ಊಹಾಪೋಹಗಳು ಬಂದಿತ್ತು. ಅವರು ‘ಗ್ರ್ಯಾಂಡ್ ಓಲ್ಡ್ ಪಾರ್ಟಿ’ಯಿಂದ ಇತ್ತೀಚಿಗೆ ಹೊರಬಂದ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದಾರೆ.

ನಾಲ್ಕು ದಶಕಗಳ ಕಾಲ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದ ಚವಾಣ್ ಅವರು ಎಲ್ಲ ಪಕ್ಷದ ಹುದ್ದೆಗಳಿಗೆ ಮತ್ತು ಭೋಕರ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ಫೆಬ್ರವರಿ 12 ರಂದು ರಾಜೀನಾಮೆ ನೀಡಿದರು. ಮರುದಿನ, 65 ವರ್ಷದ ನಾಯಕ ಬಿಜೆಪಿ ಸೇರಿದರು. ಫೆಬ್ರವರಿ 15 ರಂದು ಅವರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕ್ ಮತ್ತು ಮಿಲಿಂದ್ ದಿಯೋರಾ ಕೂಡ ಪಕ್ಷವನ್ನು ತೊರೆದ ನಂತರ ಚವಾಣ್ ಅವರು ಕಾಂಗ್ರೆಸ್ ತೊರೆದಿದ್ದಾರೆ. ಸಿದ್ದಿಕ್ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣವನ್ನು ಸೇರಿದರೆ, ದಿಯೋರಾ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಬಣವನ್ನು ಸೇರಿದರು.

ಇದನ್ನೂ ಓದಿ; ‘ಅಧಿಕಾರ ಶಾಶ್ವತವಲ್ಲ; ನಮ್ಮ ಸಿದ್ಧಾಂತ ಶಾಶ್ವತ..’; ಅಜಿತ್ ವಿರುದ್ಧ ಶರದ್ ಪವಾರ್‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...