Homeಮುಖಪುಟಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ...

ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

- Advertisement -
- Advertisement -

ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೊಂದು ಹೆಸರು ಸೇರ್ಪಡೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಬೀಳುತ್ತಿರುವ ದೊಡ್ಡ ಹೊಡೆತಗಳಲ್ಲಿ ಇದೂ ಒಂದಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಬಿಜೆಪಿ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಆದರೆ, ಕಮಲ್ ನಾಥ್ ಅಥವಾ ನಕುಲ್ ನಾಥ್ ಅವರಿಂದ ಅಧಿಕೃತ ದೃಢೀಕರಣವಿಲ್ಲ.

ಈ ಬೆಳವಣಿಗೆಯ ಬಗ್ಗೆ ಊಹಾಪೋಹಗಳನ್ನು ಹೆಚ್ಚಿಸಿದ ಬಿಜೆಪಿ ವಕ್ತಾರ ಮತ್ತು ಕಮಲ್ ನಾಥ್ ಅವರ ಮಾಜಿ ಮಾಧ್ಯಮ ಸಲಹೆಗಾರ ನರೇಂದ್ರ ಸಲೂಜಾ ಅವರು, ಭೋಪಾಲ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಅವರ ಪುತ್ರನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಜೈ ಶ್ರೀ ರಾಮ್” ಎಂದು ಶೀರ್ಷಿಕೆ ನೀಡಿದ್ದಾರೆ.

ಈ ಬೆಳವಣಿಗೆಗಗಳ ನಡುವೆ, ಛಿಂದ್ವಾರಾದ ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಎಕ್ಸ್‌ನಲ್ಲಿನ ತಮ್ಮ ಪ್ರೊಫೈಲ್ ಬಯೋದಿಂದ ‘ಕಾಂಗ್ರೆಸ್’ ಅನ್ನು ತೆಗೆದುಹಾಕಿದ್ದಾರೆ. ತಂದೆ-ಮಗ ಇಬ್ಬರೂ ಇಂದು ದೆಹಲಿಗೆ ಆಗಮಿಸಲಿದ್ದಾರೆ.

ಊಹಾಪೋಹಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಶುಕ್ರವಾರ ರಾತ್ರಿ ಕಮಲ್ ನಾಥ್ ಅವರೊಂದಿಗೆ ಮಾತನಾಡಿದ್ದಾರೆ. ‘ನೆಹರು-ಗಾಂಧಿ ಕುಟುಂಬದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ವ್ಯಕ್ತಿಯಿಂದ ನಾವು ಇದನ್ನು ಹೇಗೆ ನಿರೀಕ್ಷಿಸಬಹುದು’ ಎಂದು ಹೇಳಿದ್ದಾರೆ. ನಾವು ಅಂತಹದನ್ನು ನಿರೀಕ್ಷಿಸಬಾರದು ಎಂದು ಅವರು ಹೇಳಿದರು.

ಮಧ್ಯಪ್ರದೇಶದ ಸೋನ್‌ಕಾಚ್‌ನ ಕಾಂಗ್ರೆಸ್ ಶಾಸಕ ಸಜ್ಜನ್ ಸಿಂಗ್ ವರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಪ್ರೊಫೈಲ್‌ಗಳಿಂದ ಪಕ್ಷದ ಲೋಗೋವನ್ನು ತೆಗೆದುಹಾಕಿದ್ದಾರೆ ಎಂದು ವರದಿಯಾಗಿದೆ. ವರ್ಮಾ ಅವರನ್ನು ಕಮಲ್ ನಾಥ್ ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ ಇತ್ತೀಚಿನ ಊಹಾಪೋಹಗಳು ಬಂದಿತ್ತು. ಅವರು ‘ಗ್ರ್ಯಾಂಡ್ ಓಲ್ಡ್ ಪಾರ್ಟಿ’ಯಿಂದ ಇತ್ತೀಚಿಗೆ ಹೊರಬಂದ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದಾರೆ.

ನಾಲ್ಕು ದಶಕಗಳ ಕಾಲ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದ ಚವಾಣ್ ಅವರು ಎಲ್ಲ ಪಕ್ಷದ ಹುದ್ದೆಗಳಿಗೆ ಮತ್ತು ಭೋಕರ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ಫೆಬ್ರವರಿ 12 ರಂದು ರಾಜೀನಾಮೆ ನೀಡಿದರು. ಮರುದಿನ, 65 ವರ್ಷದ ನಾಯಕ ಬಿಜೆಪಿ ಸೇರಿದರು. ಫೆಬ್ರವರಿ 15 ರಂದು ಅವರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕ್ ಮತ್ತು ಮಿಲಿಂದ್ ದಿಯೋರಾ ಕೂಡ ಪಕ್ಷವನ್ನು ತೊರೆದ ನಂತರ ಚವಾಣ್ ಅವರು ಕಾಂಗ್ರೆಸ್ ತೊರೆದಿದ್ದಾರೆ. ಸಿದ್ದಿಕ್ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣವನ್ನು ಸೇರಿದರೆ, ದಿಯೋರಾ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಬಣವನ್ನು ಸೇರಿದರು.

ಇದನ್ನೂ ಓದಿ; ‘ಅಧಿಕಾರ ಶಾಶ್ವತವಲ್ಲ; ನಮ್ಮ ಸಿದ್ಧಾಂತ ಶಾಶ್ವತ..’; ಅಜಿತ್ ವಿರುದ್ಧ ಶರದ್ ಪವಾರ್‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...