Homeಮುಖಪುಟಕೋಟಾದಲ್ಲಿ ಮತ್ತೆ ಇಬ್ಬರು ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ

ಕೋಟಾದಲ್ಲಿ ಮತ್ತೆ ಇಬ್ಬರು ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ಮತ್ತೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ದೇಶದ ಮಹತ್ವಾಕಾಂಕ್ಷಿ ಕೋರ್ಸ್‌ಗಳಾದ ಎಂಜಿನಿಯರ್‌, ವೈದ್ಯಕೀಯ ಪ್ರವೇಶಾತಿ ಪರೀಕ್ಷೆ  ಮತ್ತು ನಾಗರಿಕ ಸೇವೆಗಳ ಪರೀಕ್ಷೆಗಳ ತರಬೇತಿಯ ಕೇಂದ್ರವಾದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ  ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನೀಟ್‌ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಅವಿಷ್ಕರ್ ಶುಭಾಂಗಿ ಮತ್ತು  ಬಿಹಾರದ ವಿದ್ಯಾರ್ಥಿ ಆದರ್ಶ್ ಆತ್ಮಹತ್ಯೆ ಮಾಡಿಕೊಂಡವರು.

ಅವಿಷ್ಕರ್ ಶುಭಾಂಗಿ ಮಹಾರಾಷ್ಟ್ರ ಮೂಲದವರಾಗಿದ್ದು, ಕೋಟಾದಲ್ಲಿ ತನ್ನ ಅಜ್ಜಿಯೊಂದಿಗೆ ನೆಲೆಸಿದ್ದರು. ಪರೀಕ್ಷೆ ಬರೆದ ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಆರನೇ ಮಹಡಿಯಿಂದ ಜಿಗಿದಿದ್ದ ಅವಿಷ್ಕರ್  ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು  ಪೊಲೀಸರು ತಿಳಿಸಿದ್ದಾರೆ.

ಸಂಜೆ ಕೋಟಾದ ಕುಣಡ್ಡಿಯಲ್ಲಿ ಬಿಹಾರ ಮೂಲದ ವಿದ್ಯಾರ್ಥಿ ಆದರ್ಶ್ ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ ಈ ವರ್ಷ  23 ಕ್ಕೆ  ಏರಿಕೆಯಾಗಿದೆ. ಕಳೆದ ವಾರ  ಜ್ವರದ 15 ಮಾತ್ರೆಗಳನ್ನು ಸೇವಿಸಿದ ನಂತರ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದನು. ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ನಂತರ ಅವರು ಖಿನ್ನತೆಗೆ ಒಳಗಾಗಿದ್ದ ಎಂದು ಅವರ ಸ್ನೇಹಿತ ಹೇಳಿದ್ದಾರೆ.

ಕೋಟಾದಲ್ಲಿನ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ  ಬಾಲ್ಕನಿಗಳಲ್ಲಿ  ಬಲೆಗಳನ್ನು ಅಳವಡಿಸಲಾಗುತ್ತಿದೆ.  ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇಡುವ ಜೊತೆಗೆ ಕೌನ್ಸಿಲಿಂಗ್ ಕೂಡ ಮಾಡಲಾಗುತ್ತಿದೆ.

ಕೋವಿಡ್ ಬಳಿಕ ಕೋಟಾದಲ್ಲಿ ಆತ್ಮಹತ್ಯೆಗಳು ಶೇಕಡಾ 60 ರಷ್ಟು ಹೆಚ್ಚಾಗಿದೆ ಎಂದು ಇತ್ತೀಚಿನ ಡೇಟಾ ತೋರಿಸುತ್ತಿದೆ ಎಂದು ಎನ್ ಡಿಟಿವಿ ವರದಿ  ಮಾಡಿದೆ.

 ಇದನ್ನು ಓದಿ: ಮಹಾರಾಷ್ಟ್ರ; ನಾಲ್ವರು ದಲಿತ ಯುವಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...