Homeಕರ್ನಾಟಕಬೆಂಗಳೂರು| ಮುಸ್ಲಿಂ ಯುವಕರ ಮೇಲೆ ಹಲ್ಲೆ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯ: ಆರೋಪ

ಬೆಂಗಳೂರು| ಮುಸ್ಲಿಂ ಯುವಕರ ಮೇಲೆ ಹಲ್ಲೆ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯ: ಆರೋಪ

- Advertisement -
- Advertisement -

ಬೆಂಗಳೂರಿನ ಸಂಪಿಗೆಹಳ್ಳಿ ಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿದ ಗುಂಪೊಂದು, ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ.

ಉತ್ತರ ಬೆಂಗಳೂರಿನ ಸಂಪಿಗೆಹಳ್ಳಿ ಪ್ರದೇಶದಲ್ಲಿ ಜೂನ್ 22ರಂದು ಭಾನುವಾರ ಘಟನೆ ನಡೆದಿದೆ. ಸುಮಾರು ಏಳು ಮಂದಿಯ ಗುಂಪು ಹಲ್ಲೆ ನಡೆಸಿದೆ. ಇದರಿಂದ ಹೆಗ್ಡೆ ನಗರದ ಮೆಕ್ಯಾನಿಕ್ ವಸೀಮ್ ಅಹ್ಮದ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು thenewsminute.com ವರದಿ ಮಾಡಿದೆ.

ವಸೀಮ್ ಜೊತೆಗಿದ್ದ ಸಹ ಮೆಕ್ಯಾನಿಕ್ ಝಮೀರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ಇಬ್ಬರು ಸಂಪಿಗೆಹಳ್ಳಿ ಮುಖ್ಯ ರಸ್ತೆ ಮೂಲಕ ಚೊಕ್ಕನಹಳ್ಳಿಗೆ ಪ್ರಯಾಣಿಸುತ್ತಿದ್ದಾಗ ಸಂಜೆ 4.30 ರಿಂದ 5.30 ರ ನಡುವೆ ಹಲ್ಲೆ ನಡೆದಿದೆ ಎಂದು ಝಮೀರ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

“ನಾವು ಆಟೋ ನಿಲ್ಲಿಸಿದ್ದಾಗ ಅಲ್ಲಿಗೆ ಬಂದ ಐದಾರು ಮಂದಿಯ ಗುಂಪು, ನೀವೇಕೆ ಇಲ್ಲಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ವಸೀಮ್ ಅವರಿಗೆ ಮರುಪ್ರಶ್ನೆ ಹಾಕಿದ್ದಾರೆ. ಈ ವೇಳೆ ಆ ಗುಂಪು ವಸೀಮ್‌ಗೆ ಥಳಿಸಲು ಪ್ರಾರಂಭಿಸಿದೆ. ವಸೀಮ್ ನೋವು ಮತ್ತು ಭಯದಿಂದ ‘ಅಲ್ಲಾಹ್’ ಎಂದಾಗ, ಅವರು ಬೆದರಿಸಿದರು. ಜೈಶ್ರೀರಾಮ್ ಕೂಗುವಂತೆ ಒತ್ತಾಯಿಸಿದರು. ನಾನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಆದರೆ, ಅವರು ವಸೀಮ್ ಮೇಲೆ ಕೋಲಿನಿಂದ ಹಲ್ಲೆ ನಡೆಸುತ್ತಿದ್ದರು” ಎಂದು ಝಮೀರ್ ದೂರಿನಲ್ಲಿ ತಿಳಿಸಿದ್ದಾಗಿ thenewsminute.com ವಿವರಿಸಿದೆ.

ಘಟನೆ ಸಂಬಂಧ ಸಂಪಿಗೆಹಳ್ಳಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2), 118(1), 299, 352 ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದಿದೆ.

ಆರೋಪ ಅಲ್ಲಗಳೆದ ಪೊಲೀಸರು

ಜೈಶ್ರೀರಾಮ್ ಕೂಗುವಂತೆ ಒತ್ತಾಯಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ಅಲ್ಲಗಳೆದಿದ್ದಾರೆ ಎಂದು deccanherald.com ವರದಿ ಮಾಡಿದೆ.

ದೂರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿರುವ ಬಗ್ಗೆ ಉಲ್ಲೇಖಿಸಿಲ್ಲ. ಘಟನಾ ಸ್ಥಳದ ಹತ್ತಿರದಲ್ಲಿ ಇದ್ದ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಸಾಕ್ಷಿಗಳು ಹಲ್ಲೆ ನಡೆಸಿದವರು ಜೈಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿರುವ ಬಗ್ಗೆ ಖಚಿತಪಡಿಸಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಸಜೀತ್ ವಿ.ಜೆ ಹೇಳಿದ್ದಾಗಿ ವರದಿ ತಿಳಿಸಿದೆ.

“ನಾವು ಇನ್ನೂ ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಆದರೆ, ಪ್ರಾಥಮಿಕ ತನಿಖೆಯಲ್ಲಿ ವೈರಲ್ ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಮಾಡಿರುವ ಆರೋಪಗಳು ತಾಳೆಯಾಗಿಲ್ಲ.
ನಾವು ಅವರ ವಿಡಿಯೋ ಹೇಳಿಕೆಯನ್ನು ಕೂಡ ಪಡೆದುಕೊಂಡಿದ್ದೇವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾಗಿ deccanherald.com ಹೇಳಿದೆ.

ಡಿಸಿಪಿ ಪ್ರಕಾರ, ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದು, ಘಟನೆಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದಿದೆ.

ಚಾಮರಾಜನಗರ | ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...

ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್

"ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ" ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು...

14 ವರ್ಷದೊಳಗಿನ ಶಾಲಾ ಬಾಲಕಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಆಸ್ಟ್ರಿಯಾ

14 ವರ್ಷದೊಳಗಿನ ಹುಡುಗಿಯರು ಶಾಲೆಗಳಲ್ಲಿ ಶಿರಸ್ತ್ರಾಣ ಧರಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಕಾನೂನನ್ನು ಆಸ್ಟ್ರಿಯಾದ ಸಂಸತ್ತು ಅಂಗೀಕರಿಸಿದೆ. ಸಂಪ್ರದಾಯವಾದಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಬೆಂಬಲಿಸಿದ ಈ ಕ್ರಮವು ತಕ್ಷಣವೇ ಟೀಕೆಗೆ ಗುರಿಯಾಗಿದೆ. ಇದು ತಾರತಮ್ಯ...

ಜುಬೀನ್ ಗರ್ಗ್ ‘ಹತ್ಯೆ’ ಪ್ರಕರಣ: ಅಸ್ಸಾಂ ಸಿಐಡಿಯಿಂದ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಗುವಾಹಟಿ: ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಸಿಐಡಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಗುವಾಹಟಿಯ ನ್ಯಾಯಾಲಯದಲ್ಲಿ 3,500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ ಅಸ್ಸಾಂ...

ನೆಹರು ಮೇಲೆ ಕೇಂದ್ರ ಸಚಿವರ ಆರೋಪ: ಸರ್ದಾರ್ ಪಟೇಲ್ ಮಗಳ ಡೈರಿಯನ್ನು ರಾಜನಾಥ್‌ಗೆ ನೀಡಿದ ಜೈರಾಮ್ ರಮೇಶ್

'ಬಾಬರಿ ಮಸೀದಿ ನಿರ್ಮಾಣಕ್ಕೆ ನೆಹರು ಸಾರ್ವಜನಿಕ ಹಣ ಬಳಸಿದ್ದರು' ಎಂದಿದ್ದ ರಕ್ಷಣಾ ಸಚಿವರು ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ರಿ ಮಣಿಬೆನ್ ಪಟೇಲ್ ಅವರ ಡೈರಿ ನಮೂದುಗಳನ್ನು...