Homeಮುಖಪುಟಎರಡು ಆಸ್ಕರ್ ಕಥೆಗಳು!

ಎರಡು ಆಸ್ಕರ್ ಕಥೆಗಳು!

- Advertisement -
- Advertisement -

ಫೆಬ್ರವರಿ 13ರಂದು ಭಾರತೀಯ ಮಾಧ್ಯಮಗಳು, ಭಾರತ ಮೂಲದ ಎರಡು ಸಿನಿಮಾಗಳು ಎರಡು ವಿಭಾಗಗಳಲ್ಲಿ ಪಡೆದ ಆಸ್ಕರ್ ಪ್ರಶಸ್ತಿಯ ಸಲುವಾಗಿ ಇನ್ನಿಲ್ಲದಂತೆ ಸಂಭ್ರಮಾಚರಣೆಯಲ್ಲಿದ್ದವು. ಅಮೆರಿಕ ಮೂಲದ ಈ ಪ್ರಶಸ್ತಿ ಅಷ್ಟು ಜನಪ್ರಿಯತೆ ಪಡೆದುಕೊಂಡಿರುವುದು ನಿಜವೇ! ಹಾಲಿವುಡ್‌ನ ಸಾಧಾರಣ ಸಿನಿಮಾವನ್ನು ಜತ್ತಿನಾದ್ಯಂತ ’ಶ್ರೇಷ್ಠ’ ಎಂಬಂತೆ ಬಿಂಬಿಸುವ ಅಮೆರಿಕದ ಪ್ರಚಾರ ಯಂತ್ರಾಂಗ ಆಸ್ಕರ್ ಪ್ರಶಸ್ತಿಗಳನ್ನೂ ಜಾಗತಿಕವಾಗಿ ಜನಪ್ರಿಯಗೊಳಿಸಿದೆ. ಜೊತೆಗೆ, ಹಲವು ಅತ್ಯುತ್ತಮ ಸಿನಿಮಾಗಳಿಗೂ ಪ್ರಶಸ್ತಿ ನೀಡಿ ಒಂದು ಮಟ್ಟದ ’ಹೆಸರು’ ಉಳಿಸಿಕೊಂಡಿರುವ ’ಆಸ್ಕರ್’ ಅಮೆರಿಕದ ಶ್ರೇಷ್ಠತೆಯನ್ನು ಪ್ರಚಾರ ಮಾಡುವ ಸಿನಿಮಾಗಳಿಗೂ (ಉದಾಹರಣೆಗೆ ಯುದ್ಧೋನ್ಮಾದದ) ಪ್ರಶಸ್ತಿ ನೀಡಿ ಟೀಕೆಗೂ ಗುರಿಯಾಗಿದೆ. ಆದರೂ, ಅತ್ಯುತ್ತಮ ವಿದೇಶಿ ಚಿತ್ರ ವಿಭಾಗಕ್ಕೆ ಹಲವು ದೇಶಗಳು ಒಂದು ಸಿನಿಮಾವನ್ನು ನಾಮಾಂಕಿತ ಮಾಡುವ ಪರಿಪಾಠವನ್ನು ಉಳಿಸಿಕೊಂಡಿವೆ. ಆಲ್ಟರ್‌ನೇಟಿವ್ ಎನ್ನಬಹುದಾದ (ಕಥೆ, ನಿರೂಪಣೆ ಮುಂತಾದವುಗಳಲ್ಲಿ), ಕೇವಲ ಜನಪ್ರಿಯತೆಯನ್ನೇ ಮಾನದಂಡವನ್ನಾಗಿಟ್ಟುಕೊಳ್ಳದ, ಸಿನಿಮಾದ ವಿವಿಧ ವಿಭಾಗಗಳಲ್ಲಿ ಗಂಭೀರತೆಯನ್ನು ತೊಡಗಿಸಿಕೊಂಡ, ಸಮಕಾಲೀನ ಸಂದರ್ಭವನ್ನು ವಿಮರ್ಶಾತ್ಮಕವಾಗಿ ಚಿತ್ರಿಸುವ ಸಿನಿಮಾಗಳು ಈ ವಿಭಾಗದಲ್ಲಿ ಹೆಚ್ಚು ಪ್ರಶಸ್ತಿ ಪಡೆಯುವುದರಿಂದ, ಭಾರತದಲ್ಲಿ ಕೂಡ ’ಕಲಾತ್ಮಕ’ ಚಿತ್ರಗಳು ಎಂದು ಪರಿಗಣಿಸಲಾಗುವ ಚಿತ್ರಗಳನ್ನು ಈ ವಿಭಾಗಕ್ಕೆ ಕಳುಹಿಸುವುದು ವಾಡಿಕೆ. ಅದರಂತೆಯೇ ಈ ಬಾರಿ ’ಚ್ಚೆಲ್ಲೋ ಶೋ’ ಎಂಬ ಗುಜರಾತಿ ಭಾಷೆಯ ಸಿನಿಮಾವನ್ನು ಆಸ್ಕರ್‌ನ ’ವಿದೇಶಿ ಅತ್ಯುತ್ತಮ ಸಿನಿಮಾ’ ವಿಭಾಗದ ಸ್ಪರ್ಧೆಗೆ ಕಳುಹಿಸಲಾಗಿತ್ತು.

ಆದರೆ ಇದರ ಕೆಲವು ದಿನಗಳ ನಂತರ ಶುರುವಾಯಿತು ನೋಡಿ; ತೀವ್ರ ಪ್ರತಿಗಾಮಿ ಸಿನಿಮಾವಾದ ’ದ ಕಾಶ್ಮೀರ್ ಫೈಲ್ಸ್’, ಅತಿ ಸಾಧಾರಣ ಮತ್ತು ಸನಾತನ ನಂಬಿಕೆಗಳನ್ನು ಪ್ರತಿಪಾದಿಸುವ ’ಆರ್‌ಆರ್‌ಆರ್’ ಸಿನಿಮಾಗಳನ್ನು ಆಸ್ಕರ್‌ಗೆ ಕಳುಹಿಸಬೇಕಿತ್ತೆಂಬ ಗುಲ್ಲನ್ನು ಎಬ್ಬಿಸಲಾಯಿತು. ನಂತರ ಈ ಚಿತ್ರಗಳನ್ನು ಅದರ ನಿರ್ಮಾಪಕರೇ ಖಾಸಗಿಯಾಗಿ ಅರ್ಜಿ ತುಂಬಿ ಆಸ್ಕರ್ ಪ್ರಶಸ್ತಿಗಳಿಗೆ ಕಳುಹಿಸಿದರು. ’ಆರ್‌ಆರ್‌ಆರ್’ ಅಂತೂ ಅಮೆರಿಕದಲ್ಲಿ ಸಿನಿಮಾ ಪ್ರಮೋಟರ್ ಸಂಸ್ಥೆಯೊಂದನ್ನು ತೊಡಗಿಸಿಕೊಂಡು ಬಹುಶಃ ಹಿಂದೆಂದೂ ಕಾಣದಷ್ಟು ಹಣ ವಿನಿಯೋಗಿಸಿ ಪ್ರಚಾರದಲ್ಲಿ ತೊಡಗಿಸಿಕೊಂಡಿತು. ಹಲವು ವಿಭಾಗಗಳಲ್ಲಿ ಈ ಸಿನಿಮಾ ನಾಮನಿರ್ದೇಶನಗೊಂಡರೂ, ’ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಮಾತ್ರ ’ಆರ್‌ಆರ್‌ಆರ್‌’ ’ನಾಟುನಾಟು’ ಹಾಡು ಕೊನೆ ಹಂತದವರೆಗೂ ಉಳಿದುಕೊಂಡಿತ್ತು ಮತ್ತು ಅದರಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಮೆರಿಕದಲ್ಲಿ ಈ ಪ್ರಚಾರಕ್ಕಾಗಿ ಮಾಡಿದ ಖರ್ಚಿನಲ್ಲಿ ಬಹುಶಃ ಸುಮಾರು ಹತ್ತು ಅತ್ಯುತ್ತಮ ಸಿನಿಮಾಗಳನ್ನು ತೆಗೆಯಬಹುದಿತ್ತು ಎಂಬ ನಗೆ ಚಟಾಕಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತೇಲಿಹೋದವು. ಒಟ್ಟಿನಲ್ಲಿ ಈಗ ಆರ್‌ಎಸ್‌ಎಸ್ ಬಗೆಗೆ ಸಿನಿಮಾ ಮಾಡುವುದಕ್ಕೆ ಸನ್ನದ್ಧರಾಗುತ್ತಿರುವ ’ಆರ್‌ಆರ್‌ಆರ್’ ಸಿನಿಮಾದ ನಿರ್ದೇಶಕ ರಾಜಮೌಳಿ ಈ ಪ್ರಶಸ್ತಿಯನ್ನು ಮತ್ತಷ್ಟು ಪ್ರದರ್ಶನ ಮಾಡಿಕೊಳ್ಳುವುದಂತೂ ನಿಜ. ಈ ಸಿನಿಮಾಗೆ ಸಂಗೀತ ನೀಡಿದ ಕೀರವಾಣಿಯವರು ಹಿಂದೆ ಬಸವಣ್ಣನ ವಚನಗಳಿಗೆ ಸಂಗೀತ ನೀಡಿ ಹಾಡಿದ ಆಲ್ಬಂ ಕೂಡ ಈ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ್ದು ವಿಶೇಷ.

ಇನ್ನು ಅಷ್ಟು ಅಬ್ಬರವಿಲ್ಲದೆ ಭಾರತದಲ್ಲಿ ತಯಾರಾದ ಕಿರು ಸಾಕ್ಷ್ಯಚಿತ್ರವೊಂದು ಆಸ್ಕರ್ ಪ್ರಶಸ್ತಿ ಪಡೆದು ದೇಶದ ಸಿನಿಮಾ ರಸಿಕರ ಗಮನ ಸೆಳೆಯಿತು. ’ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದ ’ದ ಎಲಿಫೆಂಟ್ ವಿಸ್ಪರರ್ಸ್’ನ ನಿರ್ದೇಶಕಿ ಕಾರ್ತಿಕಿ ಗೋನ್ಸೇವ್ಸ್. ತಮಿಳುನಾಡಿದ ಮಧುಮಲೈ ಹುಲಿ ಸಂರಕ್ಷಣಾ ಅಭಯಾರಣ್ಯದ ತೆಪ್ಪಕಾಡು ಎಂಬ ಬೆಟ್ಟಗಾಡು ಪ್ರದೇಶದಲ್ಲಿ ಹಿಂಡಿನಿಂದ ತಪ್ಪಿಸಿಕೊಂಡ ಆನೆ ಮರಿಗಳನ್ನು ರಕ್ಷಿಸಿ ಸಾಕುವ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಅವರ ಮತ್ತು ಅವರು ಸಾಕುವ ಎರಡು ಆನೆಗಳ ಒಡನಾಟದ ಭಾವನಾತ್ಮಕ ಕಥೆ ಇದು. ತಮಿಳಿನಲ್ಲಿ ಈ ಸಾಕ್ಷ್ಯಚಿತ್ರ ನಿರೂಪಿತವಾಗಿದ್ದರೂ, ನಡುನಡುವೆ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಮಾತನಾಡುವ ಆ ಭಾಗದ ಕನ್ನಡ ಮಿಶ್ರಿತ ಭಾಷೆ ವಿಶೇಷವೆನಿಸುತ್ತದೆ. ಮರಿಯಾನೆಗಳನ್ನು ತಮ್ಮ ಸ್ವಂತ ಮಕ್ಕಳಂತೆ ಸಾಕಿ ಕಾಪಾಡುವ ಈ ಭಾವನಾತ್ಮಕ ಕಥೆ ’ಫೀಲ್ ಗುಡ್’ ಸಿನಿಮಾವೆನ್ನಬಹುದು. ಸಾಮಾನ್ಯವಾಗಿ ಇಂತಹ ಫೀಲ್ ಗುಡ್ ಸಿನಿಮಾಗಳನ್ನು ಹೆಚ್ಚು ಆಸ್ಕರ್ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದ್ದಿದೆ. ರಘು ಮತ್ತು ಅಮ್ಮು ಎಂಬ ಎರಡು ಆನೆಗಳ ಜೊತೆಗಿನ ಒಡನಾಟದ ದೃಶ್ಯಗಳು ಆ ಬೆಟ್ಟಗಾಡಿನ ಪರಿಸರದಲ್ಲಿ ಮನಮೋಹಕವಾಗಿ ಚಿತ್ರಿಸಲ್ಪಟ್ಟಿವೆ. ಕಾಡು ಪರಿಸರದ ಜೊತೆಗೆ ಮನುಷ್ಯ ಹೊಂದಿರಬೇಕಾದ ಸಂಬಂಧದ ಬಗ್ಗೆ ಈ ಸಿನಿಮಾ ಪರೋಕ್ಷವಾಗಿ ನುಡಿಯುತ್ತದೆ. ಆದರೆ, ಮನುಷ್ಯನ ಅಭಿವೃದ್ಧಿ ಕಲ್ಪನೆಗಳಿಂದ ಪರಿಸರದಲ್ಲಿ ಆಗುತ್ತಿರುವ ಅನಾಹುತಗಳ ಬಗ್ಗೆ, ಅದರಿಂದ ಹುಟ್ಟುತ್ತಿರುವ ಕಾಡುಪ್ರಾಣಿಗಳ ಜೊತೆಗಿನ ಸಂಘರ್ಷದ ಬಗ್ಗೆ ಇನ್ನೂ ಪರಿಣಾಮಕಾರಿಯಾಗಿ ಮಾತನಾಡುವ ಅವಕಾಶವನ್ನು ಸಿನಿಮಾ ಕೈಚೆಲ್ಲಿದೆ. ಆದರೂ, ಕೋಟ್ಯಾನುಗಟ್ಟಲೆ ಪ್ರಚಾರಕ್ಕಾಗಿ ಸುರಿದ ’ಆರ್‌ಆರ್‌ಆರ್’ ಸಿನಿಮಾಗಿಂತಲೂ ಹತ್ತಾರು ಪಟ್ಟು ಉತ್ತಮ ಸಿನಿಮಾ ಇದು ಎನ್ನಲಡ್ಡಿಯಿಲ್ಲ. ಮಕ್ಕಳ ಜೊತೆಗೆ ಕೂತು ’ದ ಎಲಿಫೆಂಟ್ ವಿಸ್ಪರರ್ಸ್’ ನೋಡುವುದು ಒಂದು ಒಳ್ಳೆಯ ಅನುಭವವಾದೀತು. ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಇದು ವೀಕ್ಷಣೆಗೆ ಲಭ್ಯವಿದೆ.


ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...