Homeಮುಖಪುಟಎರಡು ಆಸ್ಕರ್ ಕಥೆಗಳು!

ಎರಡು ಆಸ್ಕರ್ ಕಥೆಗಳು!

- Advertisement -
- Advertisement -

ಫೆಬ್ರವರಿ 13ರಂದು ಭಾರತೀಯ ಮಾಧ್ಯಮಗಳು, ಭಾರತ ಮೂಲದ ಎರಡು ಸಿನಿಮಾಗಳು ಎರಡು ವಿಭಾಗಗಳಲ್ಲಿ ಪಡೆದ ಆಸ್ಕರ್ ಪ್ರಶಸ್ತಿಯ ಸಲುವಾಗಿ ಇನ್ನಿಲ್ಲದಂತೆ ಸಂಭ್ರಮಾಚರಣೆಯಲ್ಲಿದ್ದವು. ಅಮೆರಿಕ ಮೂಲದ ಈ ಪ್ರಶಸ್ತಿ ಅಷ್ಟು ಜನಪ್ರಿಯತೆ ಪಡೆದುಕೊಂಡಿರುವುದು ನಿಜವೇ! ಹಾಲಿವುಡ್‌ನ ಸಾಧಾರಣ ಸಿನಿಮಾವನ್ನು ಜತ್ತಿನಾದ್ಯಂತ ’ಶ್ರೇಷ್ಠ’ ಎಂಬಂತೆ ಬಿಂಬಿಸುವ ಅಮೆರಿಕದ ಪ್ರಚಾರ ಯಂತ್ರಾಂಗ ಆಸ್ಕರ್ ಪ್ರಶಸ್ತಿಗಳನ್ನೂ ಜಾಗತಿಕವಾಗಿ ಜನಪ್ರಿಯಗೊಳಿಸಿದೆ. ಜೊತೆಗೆ, ಹಲವು ಅತ್ಯುತ್ತಮ ಸಿನಿಮಾಗಳಿಗೂ ಪ್ರಶಸ್ತಿ ನೀಡಿ ಒಂದು ಮಟ್ಟದ ’ಹೆಸರು’ ಉಳಿಸಿಕೊಂಡಿರುವ ’ಆಸ್ಕರ್’ ಅಮೆರಿಕದ ಶ್ರೇಷ್ಠತೆಯನ್ನು ಪ್ರಚಾರ ಮಾಡುವ ಸಿನಿಮಾಗಳಿಗೂ (ಉದಾಹರಣೆಗೆ ಯುದ್ಧೋನ್ಮಾದದ) ಪ್ರಶಸ್ತಿ ನೀಡಿ ಟೀಕೆಗೂ ಗುರಿಯಾಗಿದೆ. ಆದರೂ, ಅತ್ಯುತ್ತಮ ವಿದೇಶಿ ಚಿತ್ರ ವಿಭಾಗಕ್ಕೆ ಹಲವು ದೇಶಗಳು ಒಂದು ಸಿನಿಮಾವನ್ನು ನಾಮಾಂಕಿತ ಮಾಡುವ ಪರಿಪಾಠವನ್ನು ಉಳಿಸಿಕೊಂಡಿವೆ. ಆಲ್ಟರ್‌ನೇಟಿವ್ ಎನ್ನಬಹುದಾದ (ಕಥೆ, ನಿರೂಪಣೆ ಮುಂತಾದವುಗಳಲ್ಲಿ), ಕೇವಲ ಜನಪ್ರಿಯತೆಯನ್ನೇ ಮಾನದಂಡವನ್ನಾಗಿಟ್ಟುಕೊಳ್ಳದ, ಸಿನಿಮಾದ ವಿವಿಧ ವಿಭಾಗಗಳಲ್ಲಿ ಗಂಭೀರತೆಯನ್ನು ತೊಡಗಿಸಿಕೊಂಡ, ಸಮಕಾಲೀನ ಸಂದರ್ಭವನ್ನು ವಿಮರ್ಶಾತ್ಮಕವಾಗಿ ಚಿತ್ರಿಸುವ ಸಿನಿಮಾಗಳು ಈ ವಿಭಾಗದಲ್ಲಿ ಹೆಚ್ಚು ಪ್ರಶಸ್ತಿ ಪಡೆಯುವುದರಿಂದ, ಭಾರತದಲ್ಲಿ ಕೂಡ ’ಕಲಾತ್ಮಕ’ ಚಿತ್ರಗಳು ಎಂದು ಪರಿಗಣಿಸಲಾಗುವ ಚಿತ್ರಗಳನ್ನು ಈ ವಿಭಾಗಕ್ಕೆ ಕಳುಹಿಸುವುದು ವಾಡಿಕೆ. ಅದರಂತೆಯೇ ಈ ಬಾರಿ ’ಚ್ಚೆಲ್ಲೋ ಶೋ’ ಎಂಬ ಗುಜರಾತಿ ಭಾಷೆಯ ಸಿನಿಮಾವನ್ನು ಆಸ್ಕರ್‌ನ ’ವಿದೇಶಿ ಅತ್ಯುತ್ತಮ ಸಿನಿಮಾ’ ವಿಭಾಗದ ಸ್ಪರ್ಧೆಗೆ ಕಳುಹಿಸಲಾಗಿತ್ತು.

ಆದರೆ ಇದರ ಕೆಲವು ದಿನಗಳ ನಂತರ ಶುರುವಾಯಿತು ನೋಡಿ; ತೀವ್ರ ಪ್ರತಿಗಾಮಿ ಸಿನಿಮಾವಾದ ’ದ ಕಾಶ್ಮೀರ್ ಫೈಲ್ಸ್’, ಅತಿ ಸಾಧಾರಣ ಮತ್ತು ಸನಾತನ ನಂಬಿಕೆಗಳನ್ನು ಪ್ರತಿಪಾದಿಸುವ ’ಆರ್‌ಆರ್‌ಆರ್’ ಸಿನಿಮಾಗಳನ್ನು ಆಸ್ಕರ್‌ಗೆ ಕಳುಹಿಸಬೇಕಿತ್ತೆಂಬ ಗುಲ್ಲನ್ನು ಎಬ್ಬಿಸಲಾಯಿತು. ನಂತರ ಈ ಚಿತ್ರಗಳನ್ನು ಅದರ ನಿರ್ಮಾಪಕರೇ ಖಾಸಗಿಯಾಗಿ ಅರ್ಜಿ ತುಂಬಿ ಆಸ್ಕರ್ ಪ್ರಶಸ್ತಿಗಳಿಗೆ ಕಳುಹಿಸಿದರು. ’ಆರ್‌ಆರ್‌ಆರ್’ ಅಂತೂ ಅಮೆರಿಕದಲ್ಲಿ ಸಿನಿಮಾ ಪ್ರಮೋಟರ್ ಸಂಸ್ಥೆಯೊಂದನ್ನು ತೊಡಗಿಸಿಕೊಂಡು ಬಹುಶಃ ಹಿಂದೆಂದೂ ಕಾಣದಷ್ಟು ಹಣ ವಿನಿಯೋಗಿಸಿ ಪ್ರಚಾರದಲ್ಲಿ ತೊಡಗಿಸಿಕೊಂಡಿತು. ಹಲವು ವಿಭಾಗಗಳಲ್ಲಿ ಈ ಸಿನಿಮಾ ನಾಮನಿರ್ದೇಶನಗೊಂಡರೂ, ’ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಮಾತ್ರ ’ಆರ್‌ಆರ್‌ಆರ್‌’ ’ನಾಟುನಾಟು’ ಹಾಡು ಕೊನೆ ಹಂತದವರೆಗೂ ಉಳಿದುಕೊಂಡಿತ್ತು ಮತ್ತು ಅದರಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಮೆರಿಕದಲ್ಲಿ ಈ ಪ್ರಚಾರಕ್ಕಾಗಿ ಮಾಡಿದ ಖರ್ಚಿನಲ್ಲಿ ಬಹುಶಃ ಸುಮಾರು ಹತ್ತು ಅತ್ಯುತ್ತಮ ಸಿನಿಮಾಗಳನ್ನು ತೆಗೆಯಬಹುದಿತ್ತು ಎಂಬ ನಗೆ ಚಟಾಕಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತೇಲಿಹೋದವು. ಒಟ್ಟಿನಲ್ಲಿ ಈಗ ಆರ್‌ಎಸ್‌ಎಸ್ ಬಗೆಗೆ ಸಿನಿಮಾ ಮಾಡುವುದಕ್ಕೆ ಸನ್ನದ್ಧರಾಗುತ್ತಿರುವ ’ಆರ್‌ಆರ್‌ಆರ್’ ಸಿನಿಮಾದ ನಿರ್ದೇಶಕ ರಾಜಮೌಳಿ ಈ ಪ್ರಶಸ್ತಿಯನ್ನು ಮತ್ತಷ್ಟು ಪ್ರದರ್ಶನ ಮಾಡಿಕೊಳ್ಳುವುದಂತೂ ನಿಜ. ಈ ಸಿನಿಮಾಗೆ ಸಂಗೀತ ನೀಡಿದ ಕೀರವಾಣಿಯವರು ಹಿಂದೆ ಬಸವಣ್ಣನ ವಚನಗಳಿಗೆ ಸಂಗೀತ ನೀಡಿ ಹಾಡಿದ ಆಲ್ಬಂ ಕೂಡ ಈ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ್ದು ವಿಶೇಷ.

ಇನ್ನು ಅಷ್ಟು ಅಬ್ಬರವಿಲ್ಲದೆ ಭಾರತದಲ್ಲಿ ತಯಾರಾದ ಕಿರು ಸಾಕ್ಷ್ಯಚಿತ್ರವೊಂದು ಆಸ್ಕರ್ ಪ್ರಶಸ್ತಿ ಪಡೆದು ದೇಶದ ಸಿನಿಮಾ ರಸಿಕರ ಗಮನ ಸೆಳೆಯಿತು. ’ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದ ’ದ ಎಲಿಫೆಂಟ್ ವಿಸ್ಪರರ್ಸ್’ನ ನಿರ್ದೇಶಕಿ ಕಾರ್ತಿಕಿ ಗೋನ್ಸೇವ್ಸ್. ತಮಿಳುನಾಡಿದ ಮಧುಮಲೈ ಹುಲಿ ಸಂರಕ್ಷಣಾ ಅಭಯಾರಣ್ಯದ ತೆಪ್ಪಕಾಡು ಎಂಬ ಬೆಟ್ಟಗಾಡು ಪ್ರದೇಶದಲ್ಲಿ ಹಿಂಡಿನಿಂದ ತಪ್ಪಿಸಿಕೊಂಡ ಆನೆ ಮರಿಗಳನ್ನು ರಕ್ಷಿಸಿ ಸಾಕುವ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಅವರ ಮತ್ತು ಅವರು ಸಾಕುವ ಎರಡು ಆನೆಗಳ ಒಡನಾಟದ ಭಾವನಾತ್ಮಕ ಕಥೆ ಇದು. ತಮಿಳಿನಲ್ಲಿ ಈ ಸಾಕ್ಷ್ಯಚಿತ್ರ ನಿರೂಪಿತವಾಗಿದ್ದರೂ, ನಡುನಡುವೆ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಮಾತನಾಡುವ ಆ ಭಾಗದ ಕನ್ನಡ ಮಿಶ್ರಿತ ಭಾಷೆ ವಿಶೇಷವೆನಿಸುತ್ತದೆ. ಮರಿಯಾನೆಗಳನ್ನು ತಮ್ಮ ಸ್ವಂತ ಮಕ್ಕಳಂತೆ ಸಾಕಿ ಕಾಪಾಡುವ ಈ ಭಾವನಾತ್ಮಕ ಕಥೆ ’ಫೀಲ್ ಗುಡ್’ ಸಿನಿಮಾವೆನ್ನಬಹುದು. ಸಾಮಾನ್ಯವಾಗಿ ಇಂತಹ ಫೀಲ್ ಗುಡ್ ಸಿನಿಮಾಗಳನ್ನು ಹೆಚ್ಚು ಆಸ್ಕರ್ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದ್ದಿದೆ. ರಘು ಮತ್ತು ಅಮ್ಮು ಎಂಬ ಎರಡು ಆನೆಗಳ ಜೊತೆಗಿನ ಒಡನಾಟದ ದೃಶ್ಯಗಳು ಆ ಬೆಟ್ಟಗಾಡಿನ ಪರಿಸರದಲ್ಲಿ ಮನಮೋಹಕವಾಗಿ ಚಿತ್ರಿಸಲ್ಪಟ್ಟಿವೆ. ಕಾಡು ಪರಿಸರದ ಜೊತೆಗೆ ಮನುಷ್ಯ ಹೊಂದಿರಬೇಕಾದ ಸಂಬಂಧದ ಬಗ್ಗೆ ಈ ಸಿನಿಮಾ ಪರೋಕ್ಷವಾಗಿ ನುಡಿಯುತ್ತದೆ. ಆದರೆ, ಮನುಷ್ಯನ ಅಭಿವೃದ್ಧಿ ಕಲ್ಪನೆಗಳಿಂದ ಪರಿಸರದಲ್ಲಿ ಆಗುತ್ತಿರುವ ಅನಾಹುತಗಳ ಬಗ್ಗೆ, ಅದರಿಂದ ಹುಟ್ಟುತ್ತಿರುವ ಕಾಡುಪ್ರಾಣಿಗಳ ಜೊತೆಗಿನ ಸಂಘರ್ಷದ ಬಗ್ಗೆ ಇನ್ನೂ ಪರಿಣಾಮಕಾರಿಯಾಗಿ ಮಾತನಾಡುವ ಅವಕಾಶವನ್ನು ಸಿನಿಮಾ ಕೈಚೆಲ್ಲಿದೆ. ಆದರೂ, ಕೋಟ್ಯಾನುಗಟ್ಟಲೆ ಪ್ರಚಾರಕ್ಕಾಗಿ ಸುರಿದ ’ಆರ್‌ಆರ್‌ಆರ್’ ಸಿನಿಮಾಗಿಂತಲೂ ಹತ್ತಾರು ಪಟ್ಟು ಉತ್ತಮ ಸಿನಿಮಾ ಇದು ಎನ್ನಲಡ್ಡಿಯಿಲ್ಲ. ಮಕ್ಕಳ ಜೊತೆಗೆ ಕೂತು ’ದ ಎಲಿಫೆಂಟ್ ವಿಸ್ಪರರ್ಸ್’ ನೋಡುವುದು ಒಂದು ಒಳ್ಳೆಯ ಅನುಭವವಾದೀತು. ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಇದು ವೀಕ್ಷಣೆಗೆ ಲಭ್ಯವಿದೆ.


ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...