Homeಮುಖಪುಟಎರಡು ಆಸ್ಕರ್ ಕಥೆಗಳು!

ಎರಡು ಆಸ್ಕರ್ ಕಥೆಗಳು!

- Advertisement -
- Advertisement -

ಫೆಬ್ರವರಿ 13ರಂದು ಭಾರತೀಯ ಮಾಧ್ಯಮಗಳು, ಭಾರತ ಮೂಲದ ಎರಡು ಸಿನಿಮಾಗಳು ಎರಡು ವಿಭಾಗಗಳಲ್ಲಿ ಪಡೆದ ಆಸ್ಕರ್ ಪ್ರಶಸ್ತಿಯ ಸಲುವಾಗಿ ಇನ್ನಿಲ್ಲದಂತೆ ಸಂಭ್ರಮಾಚರಣೆಯಲ್ಲಿದ್ದವು. ಅಮೆರಿಕ ಮೂಲದ ಈ ಪ್ರಶಸ್ತಿ ಅಷ್ಟು ಜನಪ್ರಿಯತೆ ಪಡೆದುಕೊಂಡಿರುವುದು ನಿಜವೇ! ಹಾಲಿವುಡ್‌ನ ಸಾಧಾರಣ ಸಿನಿಮಾವನ್ನು ಜತ್ತಿನಾದ್ಯಂತ ’ಶ್ರೇಷ್ಠ’ ಎಂಬಂತೆ ಬಿಂಬಿಸುವ ಅಮೆರಿಕದ ಪ್ರಚಾರ ಯಂತ್ರಾಂಗ ಆಸ್ಕರ್ ಪ್ರಶಸ್ತಿಗಳನ್ನೂ ಜಾಗತಿಕವಾಗಿ ಜನಪ್ರಿಯಗೊಳಿಸಿದೆ. ಜೊತೆಗೆ, ಹಲವು ಅತ್ಯುತ್ತಮ ಸಿನಿಮಾಗಳಿಗೂ ಪ್ರಶಸ್ತಿ ನೀಡಿ ಒಂದು ಮಟ್ಟದ ’ಹೆಸರು’ ಉಳಿಸಿಕೊಂಡಿರುವ ’ಆಸ್ಕರ್’ ಅಮೆರಿಕದ ಶ್ರೇಷ್ಠತೆಯನ್ನು ಪ್ರಚಾರ ಮಾಡುವ ಸಿನಿಮಾಗಳಿಗೂ (ಉದಾಹರಣೆಗೆ ಯುದ್ಧೋನ್ಮಾದದ) ಪ್ರಶಸ್ತಿ ನೀಡಿ ಟೀಕೆಗೂ ಗುರಿಯಾಗಿದೆ. ಆದರೂ, ಅತ್ಯುತ್ತಮ ವಿದೇಶಿ ಚಿತ್ರ ವಿಭಾಗಕ್ಕೆ ಹಲವು ದೇಶಗಳು ಒಂದು ಸಿನಿಮಾವನ್ನು ನಾಮಾಂಕಿತ ಮಾಡುವ ಪರಿಪಾಠವನ್ನು ಉಳಿಸಿಕೊಂಡಿವೆ. ಆಲ್ಟರ್‌ನೇಟಿವ್ ಎನ್ನಬಹುದಾದ (ಕಥೆ, ನಿರೂಪಣೆ ಮುಂತಾದವುಗಳಲ್ಲಿ), ಕೇವಲ ಜನಪ್ರಿಯತೆಯನ್ನೇ ಮಾನದಂಡವನ್ನಾಗಿಟ್ಟುಕೊಳ್ಳದ, ಸಿನಿಮಾದ ವಿವಿಧ ವಿಭಾಗಗಳಲ್ಲಿ ಗಂಭೀರತೆಯನ್ನು ತೊಡಗಿಸಿಕೊಂಡ, ಸಮಕಾಲೀನ ಸಂದರ್ಭವನ್ನು ವಿಮರ್ಶಾತ್ಮಕವಾಗಿ ಚಿತ್ರಿಸುವ ಸಿನಿಮಾಗಳು ಈ ವಿಭಾಗದಲ್ಲಿ ಹೆಚ್ಚು ಪ್ರಶಸ್ತಿ ಪಡೆಯುವುದರಿಂದ, ಭಾರತದಲ್ಲಿ ಕೂಡ ’ಕಲಾತ್ಮಕ’ ಚಿತ್ರಗಳು ಎಂದು ಪರಿಗಣಿಸಲಾಗುವ ಚಿತ್ರಗಳನ್ನು ಈ ವಿಭಾಗಕ್ಕೆ ಕಳುಹಿಸುವುದು ವಾಡಿಕೆ. ಅದರಂತೆಯೇ ಈ ಬಾರಿ ’ಚ್ಚೆಲ್ಲೋ ಶೋ’ ಎಂಬ ಗುಜರಾತಿ ಭಾಷೆಯ ಸಿನಿಮಾವನ್ನು ಆಸ್ಕರ್‌ನ ’ವಿದೇಶಿ ಅತ್ಯುತ್ತಮ ಸಿನಿಮಾ’ ವಿಭಾಗದ ಸ್ಪರ್ಧೆಗೆ ಕಳುಹಿಸಲಾಗಿತ್ತು.

ಆದರೆ ಇದರ ಕೆಲವು ದಿನಗಳ ನಂತರ ಶುರುವಾಯಿತು ನೋಡಿ; ತೀವ್ರ ಪ್ರತಿಗಾಮಿ ಸಿನಿಮಾವಾದ ’ದ ಕಾಶ್ಮೀರ್ ಫೈಲ್ಸ್’, ಅತಿ ಸಾಧಾರಣ ಮತ್ತು ಸನಾತನ ನಂಬಿಕೆಗಳನ್ನು ಪ್ರತಿಪಾದಿಸುವ ’ಆರ್‌ಆರ್‌ಆರ್’ ಸಿನಿಮಾಗಳನ್ನು ಆಸ್ಕರ್‌ಗೆ ಕಳುಹಿಸಬೇಕಿತ್ತೆಂಬ ಗುಲ್ಲನ್ನು ಎಬ್ಬಿಸಲಾಯಿತು. ನಂತರ ಈ ಚಿತ್ರಗಳನ್ನು ಅದರ ನಿರ್ಮಾಪಕರೇ ಖಾಸಗಿಯಾಗಿ ಅರ್ಜಿ ತುಂಬಿ ಆಸ್ಕರ್ ಪ್ರಶಸ್ತಿಗಳಿಗೆ ಕಳುಹಿಸಿದರು. ’ಆರ್‌ಆರ್‌ಆರ್’ ಅಂತೂ ಅಮೆರಿಕದಲ್ಲಿ ಸಿನಿಮಾ ಪ್ರಮೋಟರ್ ಸಂಸ್ಥೆಯೊಂದನ್ನು ತೊಡಗಿಸಿಕೊಂಡು ಬಹುಶಃ ಹಿಂದೆಂದೂ ಕಾಣದಷ್ಟು ಹಣ ವಿನಿಯೋಗಿಸಿ ಪ್ರಚಾರದಲ್ಲಿ ತೊಡಗಿಸಿಕೊಂಡಿತು. ಹಲವು ವಿಭಾಗಗಳಲ್ಲಿ ಈ ಸಿನಿಮಾ ನಾಮನಿರ್ದೇಶನಗೊಂಡರೂ, ’ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಮಾತ್ರ ’ಆರ್‌ಆರ್‌ಆರ್‌’ ’ನಾಟುನಾಟು’ ಹಾಡು ಕೊನೆ ಹಂತದವರೆಗೂ ಉಳಿದುಕೊಂಡಿತ್ತು ಮತ್ತು ಅದರಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಮೆರಿಕದಲ್ಲಿ ಈ ಪ್ರಚಾರಕ್ಕಾಗಿ ಮಾಡಿದ ಖರ್ಚಿನಲ್ಲಿ ಬಹುಶಃ ಸುಮಾರು ಹತ್ತು ಅತ್ಯುತ್ತಮ ಸಿನಿಮಾಗಳನ್ನು ತೆಗೆಯಬಹುದಿತ್ತು ಎಂಬ ನಗೆ ಚಟಾಕಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತೇಲಿಹೋದವು. ಒಟ್ಟಿನಲ್ಲಿ ಈಗ ಆರ್‌ಎಸ್‌ಎಸ್ ಬಗೆಗೆ ಸಿನಿಮಾ ಮಾಡುವುದಕ್ಕೆ ಸನ್ನದ್ಧರಾಗುತ್ತಿರುವ ’ಆರ್‌ಆರ್‌ಆರ್’ ಸಿನಿಮಾದ ನಿರ್ದೇಶಕ ರಾಜಮೌಳಿ ಈ ಪ್ರಶಸ್ತಿಯನ್ನು ಮತ್ತಷ್ಟು ಪ್ರದರ್ಶನ ಮಾಡಿಕೊಳ್ಳುವುದಂತೂ ನಿಜ. ಈ ಸಿನಿಮಾಗೆ ಸಂಗೀತ ನೀಡಿದ ಕೀರವಾಣಿಯವರು ಹಿಂದೆ ಬಸವಣ್ಣನ ವಚನಗಳಿಗೆ ಸಂಗೀತ ನೀಡಿ ಹಾಡಿದ ಆಲ್ಬಂ ಕೂಡ ಈ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ್ದು ವಿಶೇಷ.

ಇನ್ನು ಅಷ್ಟು ಅಬ್ಬರವಿಲ್ಲದೆ ಭಾರತದಲ್ಲಿ ತಯಾರಾದ ಕಿರು ಸಾಕ್ಷ್ಯಚಿತ್ರವೊಂದು ಆಸ್ಕರ್ ಪ್ರಶಸ್ತಿ ಪಡೆದು ದೇಶದ ಸಿನಿಮಾ ರಸಿಕರ ಗಮನ ಸೆಳೆಯಿತು. ’ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದ ’ದ ಎಲಿಫೆಂಟ್ ವಿಸ್ಪರರ್ಸ್’ನ ನಿರ್ದೇಶಕಿ ಕಾರ್ತಿಕಿ ಗೋನ್ಸೇವ್ಸ್. ತಮಿಳುನಾಡಿದ ಮಧುಮಲೈ ಹುಲಿ ಸಂರಕ್ಷಣಾ ಅಭಯಾರಣ್ಯದ ತೆಪ್ಪಕಾಡು ಎಂಬ ಬೆಟ್ಟಗಾಡು ಪ್ರದೇಶದಲ್ಲಿ ಹಿಂಡಿನಿಂದ ತಪ್ಪಿಸಿಕೊಂಡ ಆನೆ ಮರಿಗಳನ್ನು ರಕ್ಷಿಸಿ ಸಾಕುವ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಅವರ ಮತ್ತು ಅವರು ಸಾಕುವ ಎರಡು ಆನೆಗಳ ಒಡನಾಟದ ಭಾವನಾತ್ಮಕ ಕಥೆ ಇದು. ತಮಿಳಿನಲ್ಲಿ ಈ ಸಾಕ್ಷ್ಯಚಿತ್ರ ನಿರೂಪಿತವಾಗಿದ್ದರೂ, ನಡುನಡುವೆ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಮಾತನಾಡುವ ಆ ಭಾಗದ ಕನ್ನಡ ಮಿಶ್ರಿತ ಭಾಷೆ ವಿಶೇಷವೆನಿಸುತ್ತದೆ. ಮರಿಯಾನೆಗಳನ್ನು ತಮ್ಮ ಸ್ವಂತ ಮಕ್ಕಳಂತೆ ಸಾಕಿ ಕಾಪಾಡುವ ಈ ಭಾವನಾತ್ಮಕ ಕಥೆ ’ಫೀಲ್ ಗುಡ್’ ಸಿನಿಮಾವೆನ್ನಬಹುದು. ಸಾಮಾನ್ಯವಾಗಿ ಇಂತಹ ಫೀಲ್ ಗುಡ್ ಸಿನಿಮಾಗಳನ್ನು ಹೆಚ್ಚು ಆಸ್ಕರ್ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದ್ದಿದೆ. ರಘು ಮತ್ತು ಅಮ್ಮು ಎಂಬ ಎರಡು ಆನೆಗಳ ಜೊತೆಗಿನ ಒಡನಾಟದ ದೃಶ್ಯಗಳು ಆ ಬೆಟ್ಟಗಾಡಿನ ಪರಿಸರದಲ್ಲಿ ಮನಮೋಹಕವಾಗಿ ಚಿತ್ರಿಸಲ್ಪಟ್ಟಿವೆ. ಕಾಡು ಪರಿಸರದ ಜೊತೆಗೆ ಮನುಷ್ಯ ಹೊಂದಿರಬೇಕಾದ ಸಂಬಂಧದ ಬಗ್ಗೆ ಈ ಸಿನಿಮಾ ಪರೋಕ್ಷವಾಗಿ ನುಡಿಯುತ್ತದೆ. ಆದರೆ, ಮನುಷ್ಯನ ಅಭಿವೃದ್ಧಿ ಕಲ್ಪನೆಗಳಿಂದ ಪರಿಸರದಲ್ಲಿ ಆಗುತ್ತಿರುವ ಅನಾಹುತಗಳ ಬಗ್ಗೆ, ಅದರಿಂದ ಹುಟ್ಟುತ್ತಿರುವ ಕಾಡುಪ್ರಾಣಿಗಳ ಜೊತೆಗಿನ ಸಂಘರ್ಷದ ಬಗ್ಗೆ ಇನ್ನೂ ಪರಿಣಾಮಕಾರಿಯಾಗಿ ಮಾತನಾಡುವ ಅವಕಾಶವನ್ನು ಸಿನಿಮಾ ಕೈಚೆಲ್ಲಿದೆ. ಆದರೂ, ಕೋಟ್ಯಾನುಗಟ್ಟಲೆ ಪ್ರಚಾರಕ್ಕಾಗಿ ಸುರಿದ ’ಆರ್‌ಆರ್‌ಆರ್’ ಸಿನಿಮಾಗಿಂತಲೂ ಹತ್ತಾರು ಪಟ್ಟು ಉತ್ತಮ ಸಿನಿಮಾ ಇದು ಎನ್ನಲಡ್ಡಿಯಿಲ್ಲ. ಮಕ್ಕಳ ಜೊತೆಗೆ ಕೂತು ’ದ ಎಲಿಫೆಂಟ್ ವಿಸ್ಪರರ್ಸ್’ ನೋಡುವುದು ಒಂದು ಒಳ್ಳೆಯ ಅನುಭವವಾದೀತು. ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಇದು ವೀಕ್ಷಣೆಗೆ ಲಭ್ಯವಿದೆ.


ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....