Homeಮುಖಪುಟಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು...

ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ.  ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

 

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

ಇದನ್ನೂ ಓದಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

‘ಹೌಲೌಟ್’, ‘ಹೌ ಡು ಯು ಮೆಷರ್ ಎ ಇಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’ ಮತ್ತು ‘ಸ್ಟ್ರೇಂಜರ್ ಅಟ್ ದಿ ಗೇಟ್’ ಕಿರು ಚಿತ್ರಗಳೊಡನೆ ಸ್ಪರ್ಧಿಸಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಪಡೆದುಕೊಂಡಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ನಿರ್ದೇಶನ ಮಾಡಿರುವ ಕಾರ್ತಿಕಿ ಗೊನ್ಸಾಲ್ವೆಸ್ ಅವರು ಮೂಲತಃ ತಮಿಳುನಾಡಿನ ಊಟಿಯವರು. ಡಾಕ್ಯುಮೆಂಟರಿ ಫಿಲ್ಮ್‌ ಮೇಕರ್ ಆಗಿರುವ ಕಾರ್ತಿಕಿ, ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಈ ಹಿಂದೆ ಕ್ಯಾಮೆರಾ ಅಪರೇಟರ್ ಆಗಿ ಅನಿಮಲ್ ಪ್ಲಾನೆಟ್ ಮತ್ತು ಡಿಸ್ಕವರಿ ಚಾನೆಲ್‌ಗಳಿಗೆ ಕಾರ್ತಿಕಿ ಕೆಲಸ ಮಾಡಿದ್ದಾರೆ. ಇದೀಗ 41 ನಿಮಿಷಗಳ ‘ದಿ ಎಲಿಫೆಂಟ್ ವಿಸ್ಪರರ್ಸ್’ ಮೂಲಕ ಆಸ್ಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಸಮಾರಂಭದಲ್ಲಿ ಈ ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...