Homeಕರ್ನಾಟಕರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ-ಎಚ್.ಡಿಕುಮಾರಸ್ವಾಮಿ

- Advertisement -
- Advertisement -

ಕೊರೊನಾ ಎರಡನೇ ಅಲೆ ನಡುವೆ ಬ್ಲಾಕ್​​ ಫಂಗಸ್​​ ಕೂಡ ದೇಶದ ಜನರನ್ನು ಹಿಂಸಿಸುತ್ತಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಬ್ಲಾಕ್ ಫಂಗಸ್ ರೋಗದ ಪ್ರಕರಣಗಳಿದ್ದರೂ ಇತರ ರಾಜ್ಯಗಳಲ್ಲೂ ಹಲವು ಕೇಸ್ ದಾಖಲಾಗುತ್ತಿವೆ. ರಾಜ್ಯದಲ್ಲಿ ಭಾನುವಾರ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಲವಾರು ಬ್ಲಾಕ್​ ಫಂಗಸ್ ಕೇಸ್‌​ಗಳು ಕಂಡು ಬಂದ ಬೆನ್ನಲ್ಲೇ 64 ವರ್ಷದ ವೃದ್ಧ ಹಾಗೂ 57 ವರ್ಷದ ಮಹಿಳೆ ಬ್ಲಾಕ್​ ಫಂಗಸ್​ನಿಂದ ಮೃತಪಟ್ಟಿರುವುದು ರಾಜ್ಯದ ಜನರನ್ನು ಆತಂಕಕ್ಕೆ ದೂಡಿದೆ. ಚಿಕ್ಕಪೇಟೆ ಹಾಗೂ ಕೊಟಾಲಂ‌ ನಿವಾಸಿಗಳಾದ ಮೃತರು ಕೊರೊನಾ ಸೋಂಕಿಗೆ ಒಳಗಾಗಿ, ನಂತರ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 14 ಮಂದಿಯಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದೆ. ಇಬ್ಬರು ಮೃತಪಟ್ಟಿದ್ದು, 5 ಮಂದಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 7 ಮಂದಿಗೆ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಳೆದ ವಾರ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ 38 ಮಂದಿಯಲ್ಲಿ ಈ ರೋಗ ಪತ್ತೆಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ಈ ಬ್ಲಾಕ್​ ಫಂಗಸ್ ರೋಗಕ್ಕೆ ನೀಡುವ ಲಿಪೋಸೋಮಲ್ ಆಂಪೋಟೆರಿಸಿನ್ ಬಿ (Liposomal Amphotericin B) ಔಷಧದ ಕೊರತೆ ಹೆಚ್ಚಾಗಿದೆ ಎಂಬುದನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಒಪ್ಪಿಕೊಂಡಿದ್ದಾರೆ.

“ರಾಜ್ಯ ಸರ್ಕಾರ ಈಗಾಗಲೇ 20 ಸಾವಿರ ವಯಲ್​ಗಳಷ್ಟು ಬ್ಲಾಕ್ ಫಂಗಸ್ ಔಷಧ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದಗೌಡರ ಜೊತೆ ಸಂಪರ್ಕದಲ್ಲಿ ಇದ್ದೇನೆ. ಕೇಂದ್ರ ಆರೋಗ್ಯ ಸಚಿವರ ಜೊತೆಯೂ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರೂ ಆತ‌ಂಕ ಪಡೋ ಅಗತ್ಯ ಇಲ್ಲ” ಎಂದು ಆರೋಗ್ಯ ಸಚಿವ ಸುಧಾಕರ್‌ ತಿಳಿಸಿದ್ದಾರೆ.

“ರಾಜ್ಯದಲ್ಲಿ ಎಷ್ಟು ಜನ ಬ್ಲಾಕ್ ಫಂಗಸ್ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ನಿಖರ ಮಾಹಿತಿಯಿಲ್ಲ. ಖಾಸಗಿ ಆಸ್ಪತ್ರೆಯಲ್ಲಿಯೂ ಅನೇಕರು ದಾಖಲಾಗಿದ್ದಾರೆ, ಹೀಗಾಗಿ ಖಚಿತ ಮಾಹಿತಿ ಲಭ್ಯವಿಲ್ಲ. ಇದಕ್ಕಾಗಿ ನಾವು ತಜ್ಞರ ಸಮಿತಿ ರಚನೆ ಮಾಡ್ತಿದ್ದೇವೆ. ಅಂಕಿ ಅಂಶಗಳು, ಚಿಕಿತ್ಸೆ ವಿಧಾನದ ಬಗ್ಗೆ ಸಮಿತಿ ನಮಗೆ ಮಾರ್ಗದರ್ಶನ ಈ ಸಮಿತಿ ನೀಡುತ್ತೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆ, ಲಸಿಕೆ ಪಡೆಯಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ- UIDAI

“ಬ್ಲಾಕ್ ಫಂಗಸ್ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

“Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಮೇ 24 ಬಳಿಕ ಲಾಕ್‌ಡೌನ್ ವಿಸ್ತರಣೆಯಾಗಬೇಕು- ಕಂದಾಯ ಸಚಿವ ಆರ್‌.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...