Homeಕರ್ನಾಟಕರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ-ಎಚ್.ಡಿಕುಮಾರಸ್ವಾಮಿ

- Advertisement -
- Advertisement -

ಕೊರೊನಾ ಎರಡನೇ ಅಲೆ ನಡುವೆ ಬ್ಲಾಕ್​​ ಫಂಗಸ್​​ ಕೂಡ ದೇಶದ ಜನರನ್ನು ಹಿಂಸಿಸುತ್ತಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಬ್ಲಾಕ್ ಫಂಗಸ್ ರೋಗದ ಪ್ರಕರಣಗಳಿದ್ದರೂ ಇತರ ರಾಜ್ಯಗಳಲ್ಲೂ ಹಲವು ಕೇಸ್ ದಾಖಲಾಗುತ್ತಿವೆ. ರಾಜ್ಯದಲ್ಲಿ ಭಾನುವಾರ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಲವಾರು ಬ್ಲಾಕ್​ ಫಂಗಸ್ ಕೇಸ್‌​ಗಳು ಕಂಡು ಬಂದ ಬೆನ್ನಲ್ಲೇ 64 ವರ್ಷದ ವೃದ್ಧ ಹಾಗೂ 57 ವರ್ಷದ ಮಹಿಳೆ ಬ್ಲಾಕ್​ ಫಂಗಸ್​ನಿಂದ ಮೃತಪಟ್ಟಿರುವುದು ರಾಜ್ಯದ ಜನರನ್ನು ಆತಂಕಕ್ಕೆ ದೂಡಿದೆ. ಚಿಕ್ಕಪೇಟೆ ಹಾಗೂ ಕೊಟಾಲಂ‌ ನಿವಾಸಿಗಳಾದ ಮೃತರು ಕೊರೊನಾ ಸೋಂಕಿಗೆ ಒಳಗಾಗಿ, ನಂತರ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 14 ಮಂದಿಯಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದೆ. ಇಬ್ಬರು ಮೃತಪಟ್ಟಿದ್ದು, 5 ಮಂದಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 7 ಮಂದಿಗೆ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಳೆದ ವಾರ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ 38 ಮಂದಿಯಲ್ಲಿ ಈ ರೋಗ ಪತ್ತೆಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ಈ ಬ್ಲಾಕ್​ ಫಂಗಸ್ ರೋಗಕ್ಕೆ ನೀಡುವ ಲಿಪೋಸೋಮಲ್ ಆಂಪೋಟೆರಿಸಿನ್ ಬಿ (Liposomal Amphotericin B) ಔಷಧದ ಕೊರತೆ ಹೆಚ್ಚಾಗಿದೆ ಎಂಬುದನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಒಪ್ಪಿಕೊಂಡಿದ್ದಾರೆ.

“ರಾಜ್ಯ ಸರ್ಕಾರ ಈಗಾಗಲೇ 20 ಸಾವಿರ ವಯಲ್​ಗಳಷ್ಟು ಬ್ಲಾಕ್ ಫಂಗಸ್ ಔಷಧ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದಗೌಡರ ಜೊತೆ ಸಂಪರ್ಕದಲ್ಲಿ ಇದ್ದೇನೆ. ಕೇಂದ್ರ ಆರೋಗ್ಯ ಸಚಿವರ ಜೊತೆಯೂ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರೂ ಆತ‌ಂಕ ಪಡೋ ಅಗತ್ಯ ಇಲ್ಲ” ಎಂದು ಆರೋಗ್ಯ ಸಚಿವ ಸುಧಾಕರ್‌ ತಿಳಿಸಿದ್ದಾರೆ.

“ರಾಜ್ಯದಲ್ಲಿ ಎಷ್ಟು ಜನ ಬ್ಲಾಕ್ ಫಂಗಸ್ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ನಿಖರ ಮಾಹಿತಿಯಿಲ್ಲ. ಖಾಸಗಿ ಆಸ್ಪತ್ರೆಯಲ್ಲಿಯೂ ಅನೇಕರು ದಾಖಲಾಗಿದ್ದಾರೆ, ಹೀಗಾಗಿ ಖಚಿತ ಮಾಹಿತಿ ಲಭ್ಯವಿಲ್ಲ. ಇದಕ್ಕಾಗಿ ನಾವು ತಜ್ಞರ ಸಮಿತಿ ರಚನೆ ಮಾಡ್ತಿದ್ದೇವೆ. ಅಂಕಿ ಅಂಶಗಳು, ಚಿಕಿತ್ಸೆ ವಿಧಾನದ ಬಗ್ಗೆ ಸಮಿತಿ ನಮಗೆ ಮಾರ್ಗದರ್ಶನ ಈ ಸಮಿತಿ ನೀಡುತ್ತೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆ, ಲಸಿಕೆ ಪಡೆಯಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ- UIDAI

“ಬ್ಲಾಕ್ ಫಂಗಸ್ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

“Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಮೇ 24 ಬಳಿಕ ಲಾಕ್‌ಡೌನ್ ವಿಸ್ತರಣೆಯಾಗಬೇಕು- ಕಂದಾಯ ಸಚಿವ ಆರ್‌.ಅಶೋಕ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...