Homeಕರ್ನಾಟಕರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ-ಎಚ್.ಡಿಕುಮಾರಸ್ವಾಮಿ

- Advertisement -
- Advertisement -

ಕೊರೊನಾ ಎರಡನೇ ಅಲೆ ನಡುವೆ ಬ್ಲಾಕ್​​ ಫಂಗಸ್​​ ಕೂಡ ದೇಶದ ಜನರನ್ನು ಹಿಂಸಿಸುತ್ತಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಬ್ಲಾಕ್ ಫಂಗಸ್ ರೋಗದ ಪ್ರಕರಣಗಳಿದ್ದರೂ ಇತರ ರಾಜ್ಯಗಳಲ್ಲೂ ಹಲವು ಕೇಸ್ ದಾಖಲಾಗುತ್ತಿವೆ. ರಾಜ್ಯದಲ್ಲಿ ಭಾನುವಾರ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಲವಾರು ಬ್ಲಾಕ್​ ಫಂಗಸ್ ಕೇಸ್‌​ಗಳು ಕಂಡು ಬಂದ ಬೆನ್ನಲ್ಲೇ 64 ವರ್ಷದ ವೃದ್ಧ ಹಾಗೂ 57 ವರ್ಷದ ಮಹಿಳೆ ಬ್ಲಾಕ್​ ಫಂಗಸ್​ನಿಂದ ಮೃತಪಟ್ಟಿರುವುದು ರಾಜ್ಯದ ಜನರನ್ನು ಆತಂಕಕ್ಕೆ ದೂಡಿದೆ. ಚಿಕ್ಕಪೇಟೆ ಹಾಗೂ ಕೊಟಾಲಂ‌ ನಿವಾಸಿಗಳಾದ ಮೃತರು ಕೊರೊನಾ ಸೋಂಕಿಗೆ ಒಳಗಾಗಿ, ನಂತರ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 14 ಮಂದಿಯಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದೆ. ಇಬ್ಬರು ಮೃತಪಟ್ಟಿದ್ದು, 5 ಮಂದಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 7 ಮಂದಿಗೆ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಳೆದ ವಾರ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ 38 ಮಂದಿಯಲ್ಲಿ ಈ ರೋಗ ಪತ್ತೆಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ಈ ಬ್ಲಾಕ್​ ಫಂಗಸ್ ರೋಗಕ್ಕೆ ನೀಡುವ ಲಿಪೋಸೋಮಲ್ ಆಂಪೋಟೆರಿಸಿನ್ ಬಿ (Liposomal Amphotericin B) ಔಷಧದ ಕೊರತೆ ಹೆಚ್ಚಾಗಿದೆ ಎಂಬುದನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಒಪ್ಪಿಕೊಂಡಿದ್ದಾರೆ.

“ರಾಜ್ಯ ಸರ್ಕಾರ ಈಗಾಗಲೇ 20 ಸಾವಿರ ವಯಲ್​ಗಳಷ್ಟು ಬ್ಲಾಕ್ ಫಂಗಸ್ ಔಷಧ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದಗೌಡರ ಜೊತೆ ಸಂಪರ್ಕದಲ್ಲಿ ಇದ್ದೇನೆ. ಕೇಂದ್ರ ಆರೋಗ್ಯ ಸಚಿವರ ಜೊತೆಯೂ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರೂ ಆತ‌ಂಕ ಪಡೋ ಅಗತ್ಯ ಇಲ್ಲ” ಎಂದು ಆರೋಗ್ಯ ಸಚಿವ ಸುಧಾಕರ್‌ ತಿಳಿಸಿದ್ದಾರೆ.

“ರಾಜ್ಯದಲ್ಲಿ ಎಷ್ಟು ಜನ ಬ್ಲಾಕ್ ಫಂಗಸ್ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ನಿಖರ ಮಾಹಿತಿಯಿಲ್ಲ. ಖಾಸಗಿ ಆಸ್ಪತ್ರೆಯಲ್ಲಿಯೂ ಅನೇಕರು ದಾಖಲಾಗಿದ್ದಾರೆ, ಹೀಗಾಗಿ ಖಚಿತ ಮಾಹಿತಿ ಲಭ್ಯವಿಲ್ಲ. ಇದಕ್ಕಾಗಿ ನಾವು ತಜ್ಞರ ಸಮಿತಿ ರಚನೆ ಮಾಡ್ತಿದ್ದೇವೆ. ಅಂಕಿ ಅಂಶಗಳು, ಚಿಕಿತ್ಸೆ ವಿಧಾನದ ಬಗ್ಗೆ ಸಮಿತಿ ನಮಗೆ ಮಾರ್ಗದರ್ಶನ ಈ ಸಮಿತಿ ನೀಡುತ್ತೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆ, ಲಸಿಕೆ ಪಡೆಯಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ- UIDAI

“ಬ್ಲಾಕ್ ಫಂಗಸ್ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

“Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಮೇ 24 ಬಳಿಕ ಲಾಕ್‌ಡೌನ್ ವಿಸ್ತರಣೆಯಾಗಬೇಕು- ಕಂದಾಯ ಸಚಿವ ಆರ್‌.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....