Homeಕರ್ನಾಟಕರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ-ಎಚ್.ಡಿಕುಮಾರಸ್ವಾಮಿ

- Advertisement -
- Advertisement -

ಕೊರೊನಾ ಎರಡನೇ ಅಲೆ ನಡುವೆ ಬ್ಲಾಕ್​​ ಫಂಗಸ್​​ ಕೂಡ ದೇಶದ ಜನರನ್ನು ಹಿಂಸಿಸುತ್ತಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಬ್ಲಾಕ್ ಫಂಗಸ್ ರೋಗದ ಪ್ರಕರಣಗಳಿದ್ದರೂ ಇತರ ರಾಜ್ಯಗಳಲ್ಲೂ ಹಲವು ಕೇಸ್ ದಾಖಲಾಗುತ್ತಿವೆ. ರಾಜ್ಯದಲ್ಲಿ ಭಾನುವಾರ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಲವಾರು ಬ್ಲಾಕ್​ ಫಂಗಸ್ ಕೇಸ್‌​ಗಳು ಕಂಡು ಬಂದ ಬೆನ್ನಲ್ಲೇ 64 ವರ್ಷದ ವೃದ್ಧ ಹಾಗೂ 57 ವರ್ಷದ ಮಹಿಳೆ ಬ್ಲಾಕ್​ ಫಂಗಸ್​ನಿಂದ ಮೃತಪಟ್ಟಿರುವುದು ರಾಜ್ಯದ ಜನರನ್ನು ಆತಂಕಕ್ಕೆ ದೂಡಿದೆ. ಚಿಕ್ಕಪೇಟೆ ಹಾಗೂ ಕೊಟಾಲಂ‌ ನಿವಾಸಿಗಳಾದ ಮೃತರು ಕೊರೊನಾ ಸೋಂಕಿಗೆ ಒಳಗಾಗಿ, ನಂತರ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 14 ಮಂದಿಯಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದೆ. ಇಬ್ಬರು ಮೃತಪಟ್ಟಿದ್ದು, 5 ಮಂದಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 7 ಮಂದಿಗೆ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಳೆದ ವಾರ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ 38 ಮಂದಿಯಲ್ಲಿ ಈ ರೋಗ ಪತ್ತೆಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ಈ ಬ್ಲಾಕ್​ ಫಂಗಸ್ ರೋಗಕ್ಕೆ ನೀಡುವ ಲಿಪೋಸೋಮಲ್ ಆಂಪೋಟೆರಿಸಿನ್ ಬಿ (Liposomal Amphotericin B) ಔಷಧದ ಕೊರತೆ ಹೆಚ್ಚಾಗಿದೆ ಎಂಬುದನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಒಪ್ಪಿಕೊಂಡಿದ್ದಾರೆ.

“ರಾಜ್ಯ ಸರ್ಕಾರ ಈಗಾಗಲೇ 20 ಸಾವಿರ ವಯಲ್​ಗಳಷ್ಟು ಬ್ಲಾಕ್ ಫಂಗಸ್ ಔಷಧ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದಗೌಡರ ಜೊತೆ ಸಂಪರ್ಕದಲ್ಲಿ ಇದ್ದೇನೆ. ಕೇಂದ್ರ ಆರೋಗ್ಯ ಸಚಿವರ ಜೊತೆಯೂ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರೂ ಆತ‌ಂಕ ಪಡೋ ಅಗತ್ಯ ಇಲ್ಲ” ಎಂದು ಆರೋಗ್ಯ ಸಚಿವ ಸುಧಾಕರ್‌ ತಿಳಿಸಿದ್ದಾರೆ.

“ರಾಜ್ಯದಲ್ಲಿ ಎಷ್ಟು ಜನ ಬ್ಲಾಕ್ ಫಂಗಸ್ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ನಿಖರ ಮಾಹಿತಿಯಿಲ್ಲ. ಖಾಸಗಿ ಆಸ್ಪತ್ರೆಯಲ್ಲಿಯೂ ಅನೇಕರು ದಾಖಲಾಗಿದ್ದಾರೆ, ಹೀಗಾಗಿ ಖಚಿತ ಮಾಹಿತಿ ಲಭ್ಯವಿಲ್ಲ. ಇದಕ್ಕಾಗಿ ನಾವು ತಜ್ಞರ ಸಮಿತಿ ರಚನೆ ಮಾಡ್ತಿದ್ದೇವೆ. ಅಂಕಿ ಅಂಶಗಳು, ಚಿಕಿತ್ಸೆ ವಿಧಾನದ ಬಗ್ಗೆ ಸಮಿತಿ ನಮಗೆ ಮಾರ್ಗದರ್ಶನ ಈ ಸಮಿತಿ ನೀಡುತ್ತೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆ, ಲಸಿಕೆ ಪಡೆಯಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ- UIDAI

“ಬ್ಲಾಕ್ ಫಂಗಸ್ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

“Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಮೇ 24 ಬಳಿಕ ಲಾಕ್‌ಡೌನ್ ವಿಸ್ತರಣೆಯಾಗಬೇಕು- ಕಂದಾಯ ಸಚಿವ ಆರ್‌.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...