Homeಕರ್ನಾಟಕಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ: ಯಾವ ಜಿಲ್ಲೆಗಳಲ್ಲಿ ಯಾವಾಗ ಚುನಾವಣೆ ಇಲ್ಲಿದೆ ಮಾಹಿತಿ...

ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ: ಯಾವ ಜಿಲ್ಲೆಗಳಲ್ಲಿ ಯಾವಾಗ ಚುನಾವಣೆ ಇಲ್ಲಿದೆ ಮಾಹಿತಿ…

- Advertisement -
- Advertisement -

ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್‌4 ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದಿನಿಂದಲೇ ಅಂದರೆ ಮಾ.16ರಿಂದ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಲಿದ್ದು, ಏಪ್ರಿಲ್ 26ರಂದು ಮೊದಲ ಹಂತದ ಮತದಾನ ಮತ್ತು ಮೇ 7ರಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಜಿಲ್ಲೆಗಳು: 

ಮೊದಲ ಹಂತದಲ್ಲಿ ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರ ಉತ್ತರ, ಬೆಂಗಳೂರು ದಕ್ಷಿಣ, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಕೇಂದ್ರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಕೋಲಾರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದ ಚುನಾವಣೆ ನಡೆಯಲಿರುವ ಜಿಲ್ಲೆಗಳು:

ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರ್ಗಿ, ಬೀದರ್‌, ಧಾರವಾಡ, ಕೊಪ್ಪಳ

ರಾಯಚೂರು, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ 2ನೇ ಹಂತದ ಮತದಾನ ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ರಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024 ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

10 ಲಕ್ಷದ 5 ಸಾವಿರ ಮತಗಟ್ಟೆಗಳ ರ್ಸತಾಪನೆ ಮಾಡಲಾಗಿದೆ. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗಿದೆ. 1.5ಕೋಟಿ ಅಧಿಕಾರಿಗಳು ಭದ್ರತಾ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. 49.7ಕೋಟಿ ಪುರುಷ ಮತದಾರರಿದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 47.1ಕೋಟಿ ಮಹಿಳಾ ಮತದಾರರಿದ್ದಾರೆ.  85 ವರ್ಷಕ್ಕಿಂತ ಮೇಲ್ಪಟ್ಟ 82 ಲಕ್ಷ  ಮತದಾರರಿದ್ದಾರೆ. 19.74 ಯುವ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪುರುಷ ಮತದಾರರಿಗಿಂತ ಹೆಚ್ಚಿನ ಮಹಿಳೆಯರನ್ನು ಹೊಂದಿವೆ ಎಂದು ಹೇಳಿದ್ದಾರೆ.

ಮತಗಟ್ಟೆಗಳಲ್ಲಿ ವ್ಜೀಲ್ ಚೇರ್‌, ಹೆಲ್ಪ್‌ ಡೆಸ್ಕ್‌ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು,  40%ಕ್ಕೂ ಅಧಿಕ ವಿಕಲಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಅಕ್ರಮವಾಗಿ ಹಣ ಸಾಗಿಸಿದರೆ, ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರಿಂದ ಚೆಕ್‌ ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಿ-ವಿಜಿಲ್ ಆ್ಯಪ್‌ನಲ್ಲಿ ನಾಗರಿಕರು ಯಾವುದೇ ಮತದಾನ ಸಂಬಂಧಿತ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು. ಪರಿಸ್ಥಿತಿಯನ್ನು ಅವಲೋಕಿಸಲು 100 ನಿಮಿಷಗಳಲ್ಲಿ ಚುನಾವಣಾ ಆಯೋಗ ತಂಡವನ್ನು ಕಳುಹಿಸಲಿದೆ. ಚುನಾವಣಾ ಸಮಯದಲ್ಲಿ ಯಾವುದೇ ಹಿಂಸಾಚಾರ ಸಂಭವಿಸದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ, ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಸೂರ್ಯಾಸ್ತದ ಬಳಿಕ ಎಟಿಎಂ ವಾಹನ ಸಂಚಾರಕ್ಕೆ ಅನುಮತಿ ಇಲ್ಲ,  ಸುಳ್ಳು ಮಾಹಿತಿಯನ್ನು ರವಾನೆ ಮಾಡುವಂತಿಲ್ಲ, 24 ಗಂಟೆ ಪೊಲೀಸ್‌ ಕಂಟ್ರೋಲ್‌ ರೂಂ ಕಾರ್ಯಾಚರಣೆ ಇರಲಿದೆ, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಿದ್ದೇವೆ, ಜನರನ್ನು ಪ್ರಚೋದನೆ, ಇಬ್ಬಾಗ ಮಾಡುವಂತಿಲ್ಲ, ದ್ವೇಷ ಭಾಷಣ ಮಾಡುವಂತಿಲ್ಲ, ಸುಳ್ಳು ಜಾಹೀರಾತನ್ನು ಪ್ರಸಾರ ಮಾಡುವಂತಿಲ್ಲ, ವೈಯಕ್ತಿಕ ಟೀಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...