Homeಮುಖಪುಟಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

ಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

- Advertisement -
- Advertisement -

ನಮ್ಮ ನೆಲ ಮೂಲದ ಪ್ರತಿಭೆ ಸಿದ್ದಗಂಗಯ್ಯ ಕಂಬಾಳು ನಿರ್ಗಮಿಸಿದ್ದಾರೆ. ನಿಸರ್ಗಪ್ರಿಯ ಎಂಬ ಹೆಸರಿನಿಂದ ಬರೆಯುತ್ತಿದ್ದ ಕಂಬಾಳು ತಮ್ಮ ವಿಶಿಷ್ಟ ಪ್ರತಿಭೆಯಿಂದ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದರು. ಅವರು ಸಾಹಿತ್ಯ ಪ್ರಕಾರದ ಎಲ್ಲಾ ಕ್ಷೇತ್ರಗಳಲ್ಲೂ ಕೃಷಿ ಮಾಡಿದ್ದರು. ಅವರ ಕೃಷಿಯ ಹೂರಣವೇ ನೆಲ ಮೂಲವಾಗಿದ್ದರಿಂದ ನಿಸರ್ಗಪ್ರಿಯ ಎಂಬ ಗೌಪ್ಯನಾಮಕ್ಕೆ ಗೌರವ ತಂದಿದ್ದರು. ಕ್ರಮೇಣ ಈ ನಿಸರ್ಗಪ್ರಿಯ ಯಾರು ಅಲ್ಲ ನಮ್ಮ ನಡುವೆ ಬಡಬೇಸಾಯಗಾರನಂತೆ ಕಾಣುವ ಸಿದ್ದಗಂಗಯ್ಯ ಕಂಬಾಳು ಎಂಬುದು ನಮ್ಮೆಲ್ಲರ ಅರಿವಿಗೆ ಬಂತು. ಅದೇ ಹೆಸರಿನಲ್ಲವರು ’ಮೈಥಲಿ’ ಎಂಬ ರಾಮಾಯಣ ಧಾರಾವಾಹಿಯನ್ನು ಸುಧಾ ವಾರಪತ್ರಿಕೆಯಲ್ಲಿ ಆರಂಭಿಸಿದರು. ಆಗ ಸೀತೆಯ ಬಗ್ಗೆ ಕನಿಕರಗೊಂಡಿದ್ದ ಮನಸ್ಸುಗಳೆಲ್ಲಾ ದಂಗುಬಡಿದು ಹೋದವು. ನಮ್ಮ ಮಹಿಳಾ ಹೋರಾಟಗಾರ್ತಿಯರಿಗೆ ಸೀತೆಯ ಅಂತರಾಳದ ನೋವುಗಳು ಅರಿವಿಗೆ ಬಂದು ಯಾರೀ ಸಿದ್ದಗಂಗಯ್ಯ ಎನ್ನುವಂತಾಯ್ತು. ಅದಾದ ಮೇಲೆ ಸಿದ್ದಗಂಗಯ್ಯನವರ ಮೇಲೆ ಪೇಜಾವರ ಶ್ರೀಗಳ ಕಣ್ಣು ಬಿತ್ತು.

ಹಿಂದೂ ಧರ್ಮದ ಗರ್ಭಗುಡಿಯೊಳಗಿದ್ದ ಪೇಜಾವರಶ್ರೀಗಳು ತಾವು ಪೂಜಿಸುವ ಯಾವುದೇ ದೇವರ ಬಗ್ಗೆ ಸಣ್ಣ ಅಪಸ್ವರ ಟೀಕೆ ಬಂದರೂ ಅವರನ್ನು ವಿಚಾರಣೆಗೊಳಪಡಿಸುವ ಹಕ್ಕನ್ನು ತಮಗೆ ತಾವೇ ಆರೋಪಿಸಿಕೊಂಡಿದ್ದರು. ಆದ್ದರಿಂದ ಸಿದ್ದಗಂಗಯ್ಯನವರಿಗೆ ಪೇಜಾವರಶ್ರೀಗಳಿಂದ ಬುಲಾವ್ ಬಂತು. ಧರ್ಮನಿಂದನೆಯ ವಿಚಾರಣೆ ನಡೆಯುವ ಸ್ಥಳ ಯಾವುದೆಂದು ವಿಚಾರಿಸಿದರು. ಅದು ನಡೆಯುವುದು ವಿದ್ಯಾಪೀಠದಲ್ಲೆಂದು ತಿಳಿದು ಬಂತು. ಶ್ರೀನಿವಾಸನಗರದ ಬಸ್‌ಸ್ಟಾಪಿನಲ್ಲಿಳಿದು ಅಡ್ರೆಸ್ ಕೇಳಿಕೊಂಡು ವಿದ್ಯಾಪೀಠ ತಲುಪಿದರು. ಪೀಠದ ವರಾಂಡದಲ್ಲಿ ಅಡ್ಡಾಡುತ್ತಿದ್ದ ಮಾಣಿಗಳನ್ನು ವಿಚಾರಿಸಲಾಗಿ ಅವರು ಪೇಜಾವರ ಶ್ರೀ ಬಳಿ ಕರೆದುಕೊಂಡು ಹೋದರು. ಈಗಾಗಲೇ ಪುರುಷೋತ್ತಮರನ್ನ ಹೀಯಾಳಿಸಿದರು ಎಂಬ ಆರೋಪದ ಕಾರಣವಾಗಿ ಜೀವ ಬೆದರಿಕೆಗೆ ತುತ್ತಾಗಿರುವ ಭಗವಾನರ ಇನ್ನೊಂದು ಅವತಾರದಂತೆ ಕಾಣಬೇಕಿದ್ದ ಸಿದ್ದಗಂಗಯ್ಯ ತಪ್ಪಿಸಿಕೊಂಡ ಹಸು ಹುಡುಕುತ್ತ ಬಂದ ಬಡವನಂತೆ ಕಾಣುತ್ತಿದ್ದುದು ಮಠೋಪಜೀವಿಗಳಿಗೆ ಅಚ್ಚರಿಯುಂಟುಮಾಡಿತ್ತು. ಸಿದ್ದಗಂಗಯ್ಯನವರು ಪೇಜಾವರಶ್ರೀಗಳ ಪೀಠದೆದುರು ನಿಂತು ತಮ್ಮನ್ನು ಕರೆಸಿದ ಕಾರಣ ಕೇಳಿದರು.

“ನೋಡಿ ಸ್ವಾಮಿ ನಮ್ಮ ಆರಾಧ್ಯ ದೈವಗಳಾದ ರಾಮ ಕೃಷ್ಣರ ಬಗ್ಗೆ ಹಗುರವಾಗಿ ಮಾತನಾಡಿದ್ದೀರಿ, ಇದು ಕೂಡದು” ಎಂದರು.

“ನೋಡಿ ಸ್ವಾಮಿ ಕೃಷ್ಣ ನಮ್ಮವನು. ರಾಮ ಕ್ಷತ್ರಿಯ, ನೀವು ಬ್ರಾಹ್ಮಣರು, ನಿಮಗೂ ಅವರಿಗೂ ಏನು ಸಂಬಂಧ” ಎಂದರು. ಪೇಜಾವರಶ್ರೀ ಈ ಅನಿರೀಕ್ಷಿತ ಪ್ರಶ್ನೆಯಿಂದ ಗಲಿಬಿಲಿಯಾದರು.

“ಹಾಗಲ್ಲ ಅವರು ಸರ್ವಜನಾಂಗಕ್ಕೂ ಪೂಜನೀಯ ದೇವರುಗಳು. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಬರೆಯುವುದು ನಾವು ಸಹಿಸುವುದಿಲ್ಲ” ಎಂದರು.

“ಅಲ್ಲಾ ಸ್ವಾಮಿ ನಾನಂದ ಮಾತ ಪುನಃ ಅನ್ನಬೇಕಾಗುತ್ತೆ. ಕೃಷ್ಣ ಗೊಲ್ಲರವನು, ಅಂದ್ರೆ ನಮ್ಮವನು. ರಾಮ ಕ್ಷತ್ರಿಯ. ರಾಜನ ತಪ್ಪನ್ನ ಪ್ರಶ್ನೆ ಮಾಡೋ ಅಂತ ಹಕ್ಕನ್ನ ರಾಮನೆ ಕೊಟ್ಟಿದ್ದ. ಇನ್ನ ರಾಮಾಂಜನೇಯರಿಗೆ ಯುದ್ಧ ಆದಾಗ ರಾಮ ಎಷ್ಟೇ ಆಗಲಿ ನೀವು ಕಪಿಗಳು ಅಂತ ಮೂದಲಿಸಿದ. ಆಗ ಆಂಜನೇಯ ಆ ಕಪಿಗಳೇ ಅಲ್ಲವ ಯುದ್ಧ ಮಾಡಿ ಸೀತೆಯನ್ನು ತಂದು ನಿಮಗೊಪ್ಪಿಸಿದ್ದು ಪ್ರಭು ಅಂದ. ರಾಮ ಸತ್ಯಸಂಗತಿಗಳ ಒಪ್ಪಿಗತಿದ್ದ. ಅದಕೆ ಅಲವ ಅವನು ಪುರುಷೋತ್ತಮನಾಗಿದ್ದು. ಇವ್ಲೆಲ್ಲ ನಿಮಗೆ ಗೊತ್ತಿರಬೇಕು” ಅಂದರು. ಪೇಜಾವರ ವಿಚಾರಣಾ ಸಭೆ ದಂಗುಬಡಿದುಹೋಯ್ತು. ಕೃಷ್ಣ ನಮ್ಮವನು ಎಂದ ಈತ ಗೊಲ್ಲರವನಿರಬೇಕೆಂದು ಜಗದ್ಗುರುಗಳು ಗಲಿಬಿಲಿಗೊಳಗಾದರು.

“ನೋಡಿ ಹೀಗೆಲ್ಲ ಮಾತನಾಡುವುದು ಬೇಡ. ನೀವು ನಮ್ಮ ದೈವಗಳ ಬಗ್ಗೆ ಹಗುರವಾಗಿ ವಾದಿಸುವುದು ಬೇಡ, ಈಗ ಹೋಗಿ” ಎಂದುಬಿಟ್ಟರು. ಪೇಜಾವರರು ಹಾಗನ್ನಬೇಕಾದರೆ, ಈ ಮನುಷ್ಯ ಮತ್ತೆ ಕೆದಕುವಂತೆ ಕೃಷ್ಣ ರಾಮರ ಮತ್ತು ತಮ್ಮ ಸಂಬಂಧದ ವಿಷಯ ಹೇಳುವಂತೆ ಸವಾಲಾಕಲು ತಯಾರಾಗುವಂತೆ ಕಂಡರು. ಆದ್ದರಿಂದ ಬೇಗ ಸಾಗಹಾಕಲು ಪೇಜಾವರರು ಹವಣಿಸಿದರು. ತಾವಾಡಿದ ಮಾತು ಪೇಜಾವರರಿಗೆ ತಾಕಿದೆ ಇಷ್ಟು ಸಾಕು ಎಂದು ಗ್ರಹಿಸಿದ ಕಂಬಾಳರು ಅಲ್ಲಿಂದ ನಿರ್ಗಮಿಸಿದರು.

ನಾನು ಗಮನಿಸಿದಂತೆ ಕಂಬಾಳರು ಈ ಪ್ರಸಂಗವನ್ನು ಎಲ್ಲೂ ಹೇಳಿಕೊಳ್ಳಲಿಲ್ಲ. ಆ ರೂಪದ ಪ್ರಚಾರವೂ ಅವರಿಗೆ ಬೇಕಿರಲಿಲ್ಲ. ಆ ದಿನ ನಾಗತಿಹಳ್ಳಿ ಚಂದ್ರಶೇಖರನ ಆಫೀಸಿನಲ್ಲಿ ಕುಳಿತು ಅವಿದ್ಯಾವಂತರ ಅವಿವೇಕವನ್ನು ಹೇಳಿದಂತೆ ಸಹಜವಾಗಿ ಹೇಳಿದ್ದರು. ಅವತ್ತು ನಾಗತಿಹಳ್ಳಿ ಚಂದ್ರಶೇಖರನ ಕೋರಿಕೆಯಂತೆ ಕರಿಭಂಟ ಎನ್ನುವ ಜನಪದ ನಾಟಕ ಬರೆದುಕೊಟ್ಟರು. ಅದೊಂದು ಅದ್ಭುತ ನಾಟಕ; ನಾಗರಿಕ ಜಗತ್ತಿನ ನರರನ್ನು ಕಂಡರಾಗದ ಕಾಡಿನ ಜನರು ಅವರ ವಾಸನೆಗೂ ಕೆರಳುವಂತೆ ವ್ಯಗ್ರಗೊಳ್ಳುವ ಕಥಾವಸ್ತು. ಇವತ್ತಿಗೂ ನಮ್ಮ ಕಾಡೊಳಗಿನ ಅದಿವಾಸಿಗಳು ಹೆದರುವುದು ಕಾಡುಪ್ರಾಣಿಗಳಿಗಲ್ಲ ಬದಲಿಗೆ ಕಾಡಿನ ಇಲಾಖೆಯ ಜನರಿಗೆ. ಇಂತಹ ವಸ್ತುವಿದ್ದ ನಾಟಕವನ್ನು ನಾಗತಿಹಳ್ಳಿ ಹೆಣ್ಣುಮಕ್ಕಳು ಮನಮುಟ್ಟುವಂತೆ ಅಭಿನಯಿಸಿ ದೆಹಲಿಯವರೆಗೂ ಹೋಗಿಬಂದರು. ಮನೆಯ ಹೊಸಲಿಂದ ಈಚೆ ಬರದಂತಿದ್ದ ಹೆಣ್ಣುಮಕ್ಕಳೆಲ್ಲಾ ಮನಬಿಚ್ಚಿ ಅಭಿನಯಿಸಿದ್ದು ಒಂದು ದಾಖಲೆಯಾಗಿತ್ತು. ತಾನು ಬರೆದದ್ದನ್ನು ಈ ಲೋಕಕ್ಕೆ ಅರ್ಪಿಸಿದ ನಂತರ ಸಿದ್ದಗಂಗಯ್ಯ ಅತ್ತ ಸುಳಿಯುತ್ತಿರಲಿಲ್ಲ. ಅದೇನಿದ್ದರೂ ಈಗ ಆ ಲೋಕಕ್ಕೆ ಸೇರಿದ್ದು ಎನ್ನುವಂತಿದ್ದರು. ಈಗ ನಮ್ಮೆಲ್ಲಾ ಪ್ರತಿಭಾವಂತರನ್ನು, ದೇವರುಗಳನ್ನು ಮತ್ತು ಐತಿಹಾಸಿಕ ವ್ಯಕ್ತಿಗಳನ್ನ ಅಪಹರಿಸಿ ತಮ್ಮವರನ್ನಾಗಿಸಿಕೊಳ್ಳುತ್ತಿರುವವರ ವಿರುದ್ಧ ಕಂಬಾಳರಂತೆ ಪ್ರಶ್ನೆಮಾಡಿ ದಕ್ಕಿಸಿಕೊಳ್ಳಬೇಕಿದೆ. ಅದು ನಾವು ಸಿದ್ದಗಂಗಯ್ಯನವರಿಗೆ ಸಲ್ಲಿಸುವ ಗೌರವ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...