Homeಮುಖಪುಟಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

ಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

- Advertisement -
- Advertisement -

ನಮ್ಮ ನೆಲ ಮೂಲದ ಪ್ರತಿಭೆ ಸಿದ್ದಗಂಗಯ್ಯ ಕಂಬಾಳು ನಿರ್ಗಮಿಸಿದ್ದಾರೆ. ನಿಸರ್ಗಪ್ರಿಯ ಎಂಬ ಹೆಸರಿನಿಂದ ಬರೆಯುತ್ತಿದ್ದ ಕಂಬಾಳು ತಮ್ಮ ವಿಶಿಷ್ಟ ಪ್ರತಿಭೆಯಿಂದ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದರು. ಅವರು ಸಾಹಿತ್ಯ ಪ್ರಕಾರದ ಎಲ್ಲಾ ಕ್ಷೇತ್ರಗಳಲ್ಲೂ ಕೃಷಿ ಮಾಡಿದ್ದರು. ಅವರ ಕೃಷಿಯ ಹೂರಣವೇ ನೆಲ ಮೂಲವಾಗಿದ್ದರಿಂದ ನಿಸರ್ಗಪ್ರಿಯ ಎಂಬ ಗೌಪ್ಯನಾಮಕ್ಕೆ ಗೌರವ ತಂದಿದ್ದರು. ಕ್ರಮೇಣ ಈ ನಿಸರ್ಗಪ್ರಿಯ ಯಾರು ಅಲ್ಲ ನಮ್ಮ ನಡುವೆ ಬಡಬೇಸಾಯಗಾರನಂತೆ ಕಾಣುವ ಸಿದ್ದಗಂಗಯ್ಯ ಕಂಬಾಳು ಎಂಬುದು ನಮ್ಮೆಲ್ಲರ ಅರಿವಿಗೆ ಬಂತು. ಅದೇ ಹೆಸರಿನಲ್ಲವರು ’ಮೈಥಲಿ’ ಎಂಬ ರಾಮಾಯಣ ಧಾರಾವಾಹಿಯನ್ನು ಸುಧಾ ವಾರಪತ್ರಿಕೆಯಲ್ಲಿ ಆರಂಭಿಸಿದರು. ಆಗ ಸೀತೆಯ ಬಗ್ಗೆ ಕನಿಕರಗೊಂಡಿದ್ದ ಮನಸ್ಸುಗಳೆಲ್ಲಾ ದಂಗುಬಡಿದು ಹೋದವು. ನಮ್ಮ ಮಹಿಳಾ ಹೋರಾಟಗಾರ್ತಿಯರಿಗೆ ಸೀತೆಯ ಅಂತರಾಳದ ನೋವುಗಳು ಅರಿವಿಗೆ ಬಂದು ಯಾರೀ ಸಿದ್ದಗಂಗಯ್ಯ ಎನ್ನುವಂತಾಯ್ತು. ಅದಾದ ಮೇಲೆ ಸಿದ್ದಗಂಗಯ್ಯನವರ ಮೇಲೆ ಪೇಜಾವರ ಶ್ರೀಗಳ ಕಣ್ಣು ಬಿತ್ತು.

ಹಿಂದೂ ಧರ್ಮದ ಗರ್ಭಗುಡಿಯೊಳಗಿದ್ದ ಪೇಜಾವರಶ್ರೀಗಳು ತಾವು ಪೂಜಿಸುವ ಯಾವುದೇ ದೇವರ ಬಗ್ಗೆ ಸಣ್ಣ ಅಪಸ್ವರ ಟೀಕೆ ಬಂದರೂ ಅವರನ್ನು ವಿಚಾರಣೆಗೊಳಪಡಿಸುವ ಹಕ್ಕನ್ನು ತಮಗೆ ತಾವೇ ಆರೋಪಿಸಿಕೊಂಡಿದ್ದರು. ಆದ್ದರಿಂದ ಸಿದ್ದಗಂಗಯ್ಯನವರಿಗೆ ಪೇಜಾವರಶ್ರೀಗಳಿಂದ ಬುಲಾವ್ ಬಂತು. ಧರ್ಮನಿಂದನೆಯ ವಿಚಾರಣೆ ನಡೆಯುವ ಸ್ಥಳ ಯಾವುದೆಂದು ವಿಚಾರಿಸಿದರು. ಅದು ನಡೆಯುವುದು ವಿದ್ಯಾಪೀಠದಲ್ಲೆಂದು ತಿಳಿದು ಬಂತು. ಶ್ರೀನಿವಾಸನಗರದ ಬಸ್‌ಸ್ಟಾಪಿನಲ್ಲಿಳಿದು ಅಡ್ರೆಸ್ ಕೇಳಿಕೊಂಡು ವಿದ್ಯಾಪೀಠ ತಲುಪಿದರು. ಪೀಠದ ವರಾಂಡದಲ್ಲಿ ಅಡ್ಡಾಡುತ್ತಿದ್ದ ಮಾಣಿಗಳನ್ನು ವಿಚಾರಿಸಲಾಗಿ ಅವರು ಪೇಜಾವರ ಶ್ರೀ ಬಳಿ ಕರೆದುಕೊಂಡು ಹೋದರು. ಈಗಾಗಲೇ ಪುರುಷೋತ್ತಮರನ್ನ ಹೀಯಾಳಿಸಿದರು ಎಂಬ ಆರೋಪದ ಕಾರಣವಾಗಿ ಜೀವ ಬೆದರಿಕೆಗೆ ತುತ್ತಾಗಿರುವ ಭಗವಾನರ ಇನ್ನೊಂದು ಅವತಾರದಂತೆ ಕಾಣಬೇಕಿದ್ದ ಸಿದ್ದಗಂಗಯ್ಯ ತಪ್ಪಿಸಿಕೊಂಡ ಹಸು ಹುಡುಕುತ್ತ ಬಂದ ಬಡವನಂತೆ ಕಾಣುತ್ತಿದ್ದುದು ಮಠೋಪಜೀವಿಗಳಿಗೆ ಅಚ್ಚರಿಯುಂಟುಮಾಡಿತ್ತು. ಸಿದ್ದಗಂಗಯ್ಯನವರು ಪೇಜಾವರಶ್ರೀಗಳ ಪೀಠದೆದುರು ನಿಂತು ತಮ್ಮನ್ನು ಕರೆಸಿದ ಕಾರಣ ಕೇಳಿದರು.

“ನೋಡಿ ಸ್ವಾಮಿ ನಮ್ಮ ಆರಾಧ್ಯ ದೈವಗಳಾದ ರಾಮ ಕೃಷ್ಣರ ಬಗ್ಗೆ ಹಗುರವಾಗಿ ಮಾತನಾಡಿದ್ದೀರಿ, ಇದು ಕೂಡದು” ಎಂದರು.

“ನೋಡಿ ಸ್ವಾಮಿ ಕೃಷ್ಣ ನಮ್ಮವನು. ರಾಮ ಕ್ಷತ್ರಿಯ, ನೀವು ಬ್ರಾಹ್ಮಣರು, ನಿಮಗೂ ಅವರಿಗೂ ಏನು ಸಂಬಂಧ” ಎಂದರು. ಪೇಜಾವರಶ್ರೀ ಈ ಅನಿರೀಕ್ಷಿತ ಪ್ರಶ್ನೆಯಿಂದ ಗಲಿಬಿಲಿಯಾದರು.

“ಹಾಗಲ್ಲ ಅವರು ಸರ್ವಜನಾಂಗಕ್ಕೂ ಪೂಜನೀಯ ದೇವರುಗಳು. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಬರೆಯುವುದು ನಾವು ಸಹಿಸುವುದಿಲ್ಲ” ಎಂದರು.

“ಅಲ್ಲಾ ಸ್ವಾಮಿ ನಾನಂದ ಮಾತ ಪುನಃ ಅನ್ನಬೇಕಾಗುತ್ತೆ. ಕೃಷ್ಣ ಗೊಲ್ಲರವನು, ಅಂದ್ರೆ ನಮ್ಮವನು. ರಾಮ ಕ್ಷತ್ರಿಯ. ರಾಜನ ತಪ್ಪನ್ನ ಪ್ರಶ್ನೆ ಮಾಡೋ ಅಂತ ಹಕ್ಕನ್ನ ರಾಮನೆ ಕೊಟ್ಟಿದ್ದ. ಇನ್ನ ರಾಮಾಂಜನೇಯರಿಗೆ ಯುದ್ಧ ಆದಾಗ ರಾಮ ಎಷ್ಟೇ ಆಗಲಿ ನೀವು ಕಪಿಗಳು ಅಂತ ಮೂದಲಿಸಿದ. ಆಗ ಆಂಜನೇಯ ಆ ಕಪಿಗಳೇ ಅಲ್ಲವ ಯುದ್ಧ ಮಾಡಿ ಸೀತೆಯನ್ನು ತಂದು ನಿಮಗೊಪ್ಪಿಸಿದ್ದು ಪ್ರಭು ಅಂದ. ರಾಮ ಸತ್ಯಸಂಗತಿಗಳ ಒಪ್ಪಿಗತಿದ್ದ. ಅದಕೆ ಅಲವ ಅವನು ಪುರುಷೋತ್ತಮನಾಗಿದ್ದು. ಇವ್ಲೆಲ್ಲ ನಿಮಗೆ ಗೊತ್ತಿರಬೇಕು” ಅಂದರು. ಪೇಜಾವರ ವಿಚಾರಣಾ ಸಭೆ ದಂಗುಬಡಿದುಹೋಯ್ತು. ಕೃಷ್ಣ ನಮ್ಮವನು ಎಂದ ಈತ ಗೊಲ್ಲರವನಿರಬೇಕೆಂದು ಜಗದ್ಗುರುಗಳು ಗಲಿಬಿಲಿಗೊಳಗಾದರು.

“ನೋಡಿ ಹೀಗೆಲ್ಲ ಮಾತನಾಡುವುದು ಬೇಡ. ನೀವು ನಮ್ಮ ದೈವಗಳ ಬಗ್ಗೆ ಹಗುರವಾಗಿ ವಾದಿಸುವುದು ಬೇಡ, ಈಗ ಹೋಗಿ” ಎಂದುಬಿಟ್ಟರು. ಪೇಜಾವರರು ಹಾಗನ್ನಬೇಕಾದರೆ, ಈ ಮನುಷ್ಯ ಮತ್ತೆ ಕೆದಕುವಂತೆ ಕೃಷ್ಣ ರಾಮರ ಮತ್ತು ತಮ್ಮ ಸಂಬಂಧದ ವಿಷಯ ಹೇಳುವಂತೆ ಸವಾಲಾಕಲು ತಯಾರಾಗುವಂತೆ ಕಂಡರು. ಆದ್ದರಿಂದ ಬೇಗ ಸಾಗಹಾಕಲು ಪೇಜಾವರರು ಹವಣಿಸಿದರು. ತಾವಾಡಿದ ಮಾತು ಪೇಜಾವರರಿಗೆ ತಾಕಿದೆ ಇಷ್ಟು ಸಾಕು ಎಂದು ಗ್ರಹಿಸಿದ ಕಂಬಾಳರು ಅಲ್ಲಿಂದ ನಿರ್ಗಮಿಸಿದರು.

ನಾನು ಗಮನಿಸಿದಂತೆ ಕಂಬಾಳರು ಈ ಪ್ರಸಂಗವನ್ನು ಎಲ್ಲೂ ಹೇಳಿಕೊಳ್ಳಲಿಲ್ಲ. ಆ ರೂಪದ ಪ್ರಚಾರವೂ ಅವರಿಗೆ ಬೇಕಿರಲಿಲ್ಲ. ಆ ದಿನ ನಾಗತಿಹಳ್ಳಿ ಚಂದ್ರಶೇಖರನ ಆಫೀಸಿನಲ್ಲಿ ಕುಳಿತು ಅವಿದ್ಯಾವಂತರ ಅವಿವೇಕವನ್ನು ಹೇಳಿದಂತೆ ಸಹಜವಾಗಿ ಹೇಳಿದ್ದರು. ಅವತ್ತು ನಾಗತಿಹಳ್ಳಿ ಚಂದ್ರಶೇಖರನ ಕೋರಿಕೆಯಂತೆ ಕರಿಭಂಟ ಎನ್ನುವ ಜನಪದ ನಾಟಕ ಬರೆದುಕೊಟ್ಟರು. ಅದೊಂದು ಅದ್ಭುತ ನಾಟಕ; ನಾಗರಿಕ ಜಗತ್ತಿನ ನರರನ್ನು ಕಂಡರಾಗದ ಕಾಡಿನ ಜನರು ಅವರ ವಾಸನೆಗೂ ಕೆರಳುವಂತೆ ವ್ಯಗ್ರಗೊಳ್ಳುವ ಕಥಾವಸ್ತು. ಇವತ್ತಿಗೂ ನಮ್ಮ ಕಾಡೊಳಗಿನ ಅದಿವಾಸಿಗಳು ಹೆದರುವುದು ಕಾಡುಪ್ರಾಣಿಗಳಿಗಲ್ಲ ಬದಲಿಗೆ ಕಾಡಿನ ಇಲಾಖೆಯ ಜನರಿಗೆ. ಇಂತಹ ವಸ್ತುವಿದ್ದ ನಾಟಕವನ್ನು ನಾಗತಿಹಳ್ಳಿ ಹೆಣ್ಣುಮಕ್ಕಳು ಮನಮುಟ್ಟುವಂತೆ ಅಭಿನಯಿಸಿ ದೆಹಲಿಯವರೆಗೂ ಹೋಗಿಬಂದರು. ಮನೆಯ ಹೊಸಲಿಂದ ಈಚೆ ಬರದಂತಿದ್ದ ಹೆಣ್ಣುಮಕ್ಕಳೆಲ್ಲಾ ಮನಬಿಚ್ಚಿ ಅಭಿನಯಿಸಿದ್ದು ಒಂದು ದಾಖಲೆಯಾಗಿತ್ತು. ತಾನು ಬರೆದದ್ದನ್ನು ಈ ಲೋಕಕ್ಕೆ ಅರ್ಪಿಸಿದ ನಂತರ ಸಿದ್ದಗಂಗಯ್ಯ ಅತ್ತ ಸುಳಿಯುತ್ತಿರಲಿಲ್ಲ. ಅದೇನಿದ್ದರೂ ಈಗ ಆ ಲೋಕಕ್ಕೆ ಸೇರಿದ್ದು ಎನ್ನುವಂತಿದ್ದರು. ಈಗ ನಮ್ಮೆಲ್ಲಾ ಪ್ರತಿಭಾವಂತರನ್ನು, ದೇವರುಗಳನ್ನು ಮತ್ತು ಐತಿಹಾಸಿಕ ವ್ಯಕ್ತಿಗಳನ್ನ ಅಪಹರಿಸಿ ತಮ್ಮವರನ್ನಾಗಿಸಿಕೊಳ್ಳುತ್ತಿರುವವರ ವಿರುದ್ಧ ಕಂಬಾಳರಂತೆ ಪ್ರಶ್ನೆಮಾಡಿ ದಕ್ಕಿಸಿಕೊಳ್ಳಬೇಕಿದೆ. ಅದು ನಾವು ಸಿದ್ದಗಂಗಯ್ಯನವರಿಗೆ ಸಲ್ಲಿಸುವ ಗೌರವ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...