Homeಮುಖಪುಟಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

ಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

- Advertisement -
- Advertisement -

ನಮ್ಮ ನೆಲ ಮೂಲದ ಪ್ರತಿಭೆ ಸಿದ್ದಗಂಗಯ್ಯ ಕಂಬಾಳು ನಿರ್ಗಮಿಸಿದ್ದಾರೆ. ನಿಸರ್ಗಪ್ರಿಯ ಎಂಬ ಹೆಸರಿನಿಂದ ಬರೆಯುತ್ತಿದ್ದ ಕಂಬಾಳು ತಮ್ಮ ವಿಶಿಷ್ಟ ಪ್ರತಿಭೆಯಿಂದ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದರು. ಅವರು ಸಾಹಿತ್ಯ ಪ್ರಕಾರದ ಎಲ್ಲಾ ಕ್ಷೇತ್ರಗಳಲ್ಲೂ ಕೃಷಿ ಮಾಡಿದ್ದರು. ಅವರ ಕೃಷಿಯ ಹೂರಣವೇ ನೆಲ ಮೂಲವಾಗಿದ್ದರಿಂದ ನಿಸರ್ಗಪ್ರಿಯ ಎಂಬ ಗೌಪ್ಯನಾಮಕ್ಕೆ ಗೌರವ ತಂದಿದ್ದರು. ಕ್ರಮೇಣ ಈ ನಿಸರ್ಗಪ್ರಿಯ ಯಾರು ಅಲ್ಲ ನಮ್ಮ ನಡುವೆ ಬಡಬೇಸಾಯಗಾರನಂತೆ ಕಾಣುವ ಸಿದ್ದಗಂಗಯ್ಯ ಕಂಬಾಳು ಎಂಬುದು ನಮ್ಮೆಲ್ಲರ ಅರಿವಿಗೆ ಬಂತು. ಅದೇ ಹೆಸರಿನಲ್ಲವರು ’ಮೈಥಲಿ’ ಎಂಬ ರಾಮಾಯಣ ಧಾರಾವಾಹಿಯನ್ನು ಸುಧಾ ವಾರಪತ್ರಿಕೆಯಲ್ಲಿ ಆರಂಭಿಸಿದರು. ಆಗ ಸೀತೆಯ ಬಗ್ಗೆ ಕನಿಕರಗೊಂಡಿದ್ದ ಮನಸ್ಸುಗಳೆಲ್ಲಾ ದಂಗುಬಡಿದು ಹೋದವು. ನಮ್ಮ ಮಹಿಳಾ ಹೋರಾಟಗಾರ್ತಿಯರಿಗೆ ಸೀತೆಯ ಅಂತರಾಳದ ನೋವುಗಳು ಅರಿವಿಗೆ ಬಂದು ಯಾರೀ ಸಿದ್ದಗಂಗಯ್ಯ ಎನ್ನುವಂತಾಯ್ತು. ಅದಾದ ಮೇಲೆ ಸಿದ್ದಗಂಗಯ್ಯನವರ ಮೇಲೆ ಪೇಜಾವರ ಶ್ರೀಗಳ ಕಣ್ಣು ಬಿತ್ತು.

ಹಿಂದೂ ಧರ್ಮದ ಗರ್ಭಗುಡಿಯೊಳಗಿದ್ದ ಪೇಜಾವರಶ್ರೀಗಳು ತಾವು ಪೂಜಿಸುವ ಯಾವುದೇ ದೇವರ ಬಗ್ಗೆ ಸಣ್ಣ ಅಪಸ್ವರ ಟೀಕೆ ಬಂದರೂ ಅವರನ್ನು ವಿಚಾರಣೆಗೊಳಪಡಿಸುವ ಹಕ್ಕನ್ನು ತಮಗೆ ತಾವೇ ಆರೋಪಿಸಿಕೊಂಡಿದ್ದರು. ಆದ್ದರಿಂದ ಸಿದ್ದಗಂಗಯ್ಯನವರಿಗೆ ಪೇಜಾವರಶ್ರೀಗಳಿಂದ ಬುಲಾವ್ ಬಂತು. ಧರ್ಮನಿಂದನೆಯ ವಿಚಾರಣೆ ನಡೆಯುವ ಸ್ಥಳ ಯಾವುದೆಂದು ವಿಚಾರಿಸಿದರು. ಅದು ನಡೆಯುವುದು ವಿದ್ಯಾಪೀಠದಲ್ಲೆಂದು ತಿಳಿದು ಬಂತು. ಶ್ರೀನಿವಾಸನಗರದ ಬಸ್‌ಸ್ಟಾಪಿನಲ್ಲಿಳಿದು ಅಡ್ರೆಸ್ ಕೇಳಿಕೊಂಡು ವಿದ್ಯಾಪೀಠ ತಲುಪಿದರು. ಪೀಠದ ವರಾಂಡದಲ್ಲಿ ಅಡ್ಡಾಡುತ್ತಿದ್ದ ಮಾಣಿಗಳನ್ನು ವಿಚಾರಿಸಲಾಗಿ ಅವರು ಪೇಜಾವರ ಶ್ರೀ ಬಳಿ ಕರೆದುಕೊಂಡು ಹೋದರು. ಈಗಾಗಲೇ ಪುರುಷೋತ್ತಮರನ್ನ ಹೀಯಾಳಿಸಿದರು ಎಂಬ ಆರೋಪದ ಕಾರಣವಾಗಿ ಜೀವ ಬೆದರಿಕೆಗೆ ತುತ್ತಾಗಿರುವ ಭಗವಾನರ ಇನ್ನೊಂದು ಅವತಾರದಂತೆ ಕಾಣಬೇಕಿದ್ದ ಸಿದ್ದಗಂಗಯ್ಯ ತಪ್ಪಿಸಿಕೊಂಡ ಹಸು ಹುಡುಕುತ್ತ ಬಂದ ಬಡವನಂತೆ ಕಾಣುತ್ತಿದ್ದುದು ಮಠೋಪಜೀವಿಗಳಿಗೆ ಅಚ್ಚರಿಯುಂಟುಮಾಡಿತ್ತು. ಸಿದ್ದಗಂಗಯ್ಯನವರು ಪೇಜಾವರಶ್ರೀಗಳ ಪೀಠದೆದುರು ನಿಂತು ತಮ್ಮನ್ನು ಕರೆಸಿದ ಕಾರಣ ಕೇಳಿದರು.

“ನೋಡಿ ಸ್ವಾಮಿ ನಮ್ಮ ಆರಾಧ್ಯ ದೈವಗಳಾದ ರಾಮ ಕೃಷ್ಣರ ಬಗ್ಗೆ ಹಗುರವಾಗಿ ಮಾತನಾಡಿದ್ದೀರಿ, ಇದು ಕೂಡದು” ಎಂದರು.

“ನೋಡಿ ಸ್ವಾಮಿ ಕೃಷ್ಣ ನಮ್ಮವನು. ರಾಮ ಕ್ಷತ್ರಿಯ, ನೀವು ಬ್ರಾಹ್ಮಣರು, ನಿಮಗೂ ಅವರಿಗೂ ಏನು ಸಂಬಂಧ” ಎಂದರು. ಪೇಜಾವರಶ್ರೀ ಈ ಅನಿರೀಕ್ಷಿತ ಪ್ರಶ್ನೆಯಿಂದ ಗಲಿಬಿಲಿಯಾದರು.

“ಹಾಗಲ್ಲ ಅವರು ಸರ್ವಜನಾಂಗಕ್ಕೂ ಪೂಜನೀಯ ದೇವರುಗಳು. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಬರೆಯುವುದು ನಾವು ಸಹಿಸುವುದಿಲ್ಲ” ಎಂದರು.

“ಅಲ್ಲಾ ಸ್ವಾಮಿ ನಾನಂದ ಮಾತ ಪುನಃ ಅನ್ನಬೇಕಾಗುತ್ತೆ. ಕೃಷ್ಣ ಗೊಲ್ಲರವನು, ಅಂದ್ರೆ ನಮ್ಮವನು. ರಾಮ ಕ್ಷತ್ರಿಯ. ರಾಜನ ತಪ್ಪನ್ನ ಪ್ರಶ್ನೆ ಮಾಡೋ ಅಂತ ಹಕ್ಕನ್ನ ರಾಮನೆ ಕೊಟ್ಟಿದ್ದ. ಇನ್ನ ರಾಮಾಂಜನೇಯರಿಗೆ ಯುದ್ಧ ಆದಾಗ ರಾಮ ಎಷ್ಟೇ ಆಗಲಿ ನೀವು ಕಪಿಗಳು ಅಂತ ಮೂದಲಿಸಿದ. ಆಗ ಆಂಜನೇಯ ಆ ಕಪಿಗಳೇ ಅಲ್ಲವ ಯುದ್ಧ ಮಾಡಿ ಸೀತೆಯನ್ನು ತಂದು ನಿಮಗೊಪ್ಪಿಸಿದ್ದು ಪ್ರಭು ಅಂದ. ರಾಮ ಸತ್ಯಸಂಗತಿಗಳ ಒಪ್ಪಿಗತಿದ್ದ. ಅದಕೆ ಅಲವ ಅವನು ಪುರುಷೋತ್ತಮನಾಗಿದ್ದು. ಇವ್ಲೆಲ್ಲ ನಿಮಗೆ ಗೊತ್ತಿರಬೇಕು” ಅಂದರು. ಪೇಜಾವರ ವಿಚಾರಣಾ ಸಭೆ ದಂಗುಬಡಿದುಹೋಯ್ತು. ಕೃಷ್ಣ ನಮ್ಮವನು ಎಂದ ಈತ ಗೊಲ್ಲರವನಿರಬೇಕೆಂದು ಜಗದ್ಗುರುಗಳು ಗಲಿಬಿಲಿಗೊಳಗಾದರು.

“ನೋಡಿ ಹೀಗೆಲ್ಲ ಮಾತನಾಡುವುದು ಬೇಡ. ನೀವು ನಮ್ಮ ದೈವಗಳ ಬಗ್ಗೆ ಹಗುರವಾಗಿ ವಾದಿಸುವುದು ಬೇಡ, ಈಗ ಹೋಗಿ” ಎಂದುಬಿಟ್ಟರು. ಪೇಜಾವರರು ಹಾಗನ್ನಬೇಕಾದರೆ, ಈ ಮನುಷ್ಯ ಮತ್ತೆ ಕೆದಕುವಂತೆ ಕೃಷ್ಣ ರಾಮರ ಮತ್ತು ತಮ್ಮ ಸಂಬಂಧದ ವಿಷಯ ಹೇಳುವಂತೆ ಸವಾಲಾಕಲು ತಯಾರಾಗುವಂತೆ ಕಂಡರು. ಆದ್ದರಿಂದ ಬೇಗ ಸಾಗಹಾಕಲು ಪೇಜಾವರರು ಹವಣಿಸಿದರು. ತಾವಾಡಿದ ಮಾತು ಪೇಜಾವರರಿಗೆ ತಾಕಿದೆ ಇಷ್ಟು ಸಾಕು ಎಂದು ಗ್ರಹಿಸಿದ ಕಂಬಾಳರು ಅಲ್ಲಿಂದ ನಿರ್ಗಮಿಸಿದರು.

ನಾನು ಗಮನಿಸಿದಂತೆ ಕಂಬಾಳರು ಈ ಪ್ರಸಂಗವನ್ನು ಎಲ್ಲೂ ಹೇಳಿಕೊಳ್ಳಲಿಲ್ಲ. ಆ ರೂಪದ ಪ್ರಚಾರವೂ ಅವರಿಗೆ ಬೇಕಿರಲಿಲ್ಲ. ಆ ದಿನ ನಾಗತಿಹಳ್ಳಿ ಚಂದ್ರಶೇಖರನ ಆಫೀಸಿನಲ್ಲಿ ಕುಳಿತು ಅವಿದ್ಯಾವಂತರ ಅವಿವೇಕವನ್ನು ಹೇಳಿದಂತೆ ಸಹಜವಾಗಿ ಹೇಳಿದ್ದರು. ಅವತ್ತು ನಾಗತಿಹಳ್ಳಿ ಚಂದ್ರಶೇಖರನ ಕೋರಿಕೆಯಂತೆ ಕರಿಭಂಟ ಎನ್ನುವ ಜನಪದ ನಾಟಕ ಬರೆದುಕೊಟ್ಟರು. ಅದೊಂದು ಅದ್ಭುತ ನಾಟಕ; ನಾಗರಿಕ ಜಗತ್ತಿನ ನರರನ್ನು ಕಂಡರಾಗದ ಕಾಡಿನ ಜನರು ಅವರ ವಾಸನೆಗೂ ಕೆರಳುವಂತೆ ವ್ಯಗ್ರಗೊಳ್ಳುವ ಕಥಾವಸ್ತು. ಇವತ್ತಿಗೂ ನಮ್ಮ ಕಾಡೊಳಗಿನ ಅದಿವಾಸಿಗಳು ಹೆದರುವುದು ಕಾಡುಪ್ರಾಣಿಗಳಿಗಲ್ಲ ಬದಲಿಗೆ ಕಾಡಿನ ಇಲಾಖೆಯ ಜನರಿಗೆ. ಇಂತಹ ವಸ್ತುವಿದ್ದ ನಾಟಕವನ್ನು ನಾಗತಿಹಳ್ಳಿ ಹೆಣ್ಣುಮಕ್ಕಳು ಮನಮುಟ್ಟುವಂತೆ ಅಭಿನಯಿಸಿ ದೆಹಲಿಯವರೆಗೂ ಹೋಗಿಬಂದರು. ಮನೆಯ ಹೊಸಲಿಂದ ಈಚೆ ಬರದಂತಿದ್ದ ಹೆಣ್ಣುಮಕ್ಕಳೆಲ್ಲಾ ಮನಬಿಚ್ಚಿ ಅಭಿನಯಿಸಿದ್ದು ಒಂದು ದಾಖಲೆಯಾಗಿತ್ತು. ತಾನು ಬರೆದದ್ದನ್ನು ಈ ಲೋಕಕ್ಕೆ ಅರ್ಪಿಸಿದ ನಂತರ ಸಿದ್ದಗಂಗಯ್ಯ ಅತ್ತ ಸುಳಿಯುತ್ತಿರಲಿಲ್ಲ. ಅದೇನಿದ್ದರೂ ಈಗ ಆ ಲೋಕಕ್ಕೆ ಸೇರಿದ್ದು ಎನ್ನುವಂತಿದ್ದರು. ಈಗ ನಮ್ಮೆಲ್ಲಾ ಪ್ರತಿಭಾವಂತರನ್ನು, ದೇವರುಗಳನ್ನು ಮತ್ತು ಐತಿಹಾಸಿಕ ವ್ಯಕ್ತಿಗಳನ್ನ ಅಪಹರಿಸಿ ತಮ್ಮವರನ್ನಾಗಿಸಿಕೊಳ್ಳುತ್ತಿರುವವರ ವಿರುದ್ಧ ಕಂಬಾಳರಂತೆ ಪ್ರಶ್ನೆಮಾಡಿ ದಕ್ಕಿಸಿಕೊಳ್ಳಬೇಕಿದೆ. ಅದು ನಾವು ಸಿದ್ದಗಂಗಯ್ಯನವರಿಗೆ ಸಲ್ಲಿಸುವ ಗೌರವ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...