Homeಮುಖಪುಟಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು 'ರಿಪಬ್ಲಿಕ್ ಟಿವಿ' ಪತ್ರಕರ್ತರ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

- Advertisement -
- Advertisement -

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ.

ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇರಾನ್‌ನ ಐರಿಸ್ ದೇನಾ ಯುದ್ಧ ನೌಕೆ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿದ ಹಿನ್ನೆಲೆ, ಮತ್ತೊಂದು ನೌಕೆ ಐರಿಸ್ ಲಾವನ್‌ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿದೆ. ಈ ಪ್ರದೇಶ ಅತಿ ಭದ್ರತಾ ವಲಯವಾಗಿದ್ದು, ಹಾಗಾಗಿ ಅನಧಿಕೃತವಾಗಿ ಇಲ್ಲಿಗೆ ಪ್ರವೇಶಿಸಿದ ಇಬ್ಬರು ಪತ್ರಕರ್ತರು ಮತ್ತು ಅವರನ್ನು ಅಲ್ಲಿಗೆ ಕರೆದೊಯ್ದ ಬೋಟ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು onmanorama.com ವರದಿ ಉಲ್ಲೇಖಿಸಿದೆ.

ರಿಪಬ್ಲಿಕ್ ಟಿವಿಯ ವರದಿಗಾರ ಸಿಜಿ ಶಂಕರ್, ಕ್ಯಾಮಾರಾ ಮ್ಯಾನ್ ಎಸ್. ಮಣಿ ಮತ್ತು ಬೋಟ್ ನಡೆಸುವ ಪಿ. ವಿಜಯ್‌ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು thenewsminute.com ವರದಿ ಹೇಳಿದೆ.

ಬಂಧಿತರು ಕೊಚ್ಚಿ ಮೆರೈನ್ ಡ್ರೈವ್‌ನಿಂದ ಬೋಟ್ ಮೂಲಕ ಬಂದರು ಪ್ರದೇಶಕ್ಕೆ ತೆರಳಿ ಇರಾನ್‌ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಬಂದರಿನ ಭದ್ರತೆ ನೋಡಿಕೊಳ್ಳುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಅನಧಿಕೃತವಾಗಿ ಬೋಟ್ ಪ್ರವೇಶಿಸಿರುವುದನ್ನು ಗಮನಿಸಿ ತಡೆದಿದ್ದಾರೆ. ಬಳಿಕ ಮೂವರನ್ನು ವಿಚಾರಣೆ ನಡೆಸಿ ಹಾರ್ಬರ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಬಂದರು ವಲಯದಲ್ಲಿ ಭದ್ರತಾ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಔಪಚಾರಿಕ ಕಾರ್ಯವಿಧಾನಗಳು ಪೂರ್ಣಗೊಂಡ ನಂತರ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಹಡಗುಗಳು ಮತ್ತು ಕಾರ್ಯತಂತ್ರದ ಸಂಸ್ಥೆಗಳ ದೃಶ್ಯಗಳನ್ನು ಸೆರೆ ಹಿಡಿಯಲು ಅಥವಾ ಪ್ರಕಟಿಸಲು ಭದ್ರತಾ ಸಂಸ್ಥೆಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ಅಧಿಕಾರಿಗಳು ಮಾಧ್ಯಮ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

ಗೌಪ್ಯತಾ ಕಾಯ್ದೆಯ ಸೆಕ್ಷನ್ 3(1)(ಎ) ಮತ್ತು 5ರ ಅಡಿಯಲ್ಲಿ ಮತ್ತು ಬಿಎನ್‌ಎಸ್ ಕಾಯ್ದೆಯಡಿ ಕ್ರಿಮಿನಲ್ ಅತಿಕ್ರಮಣ ಸೆಕ್ಷನ್‌ ಅಡಿ ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣ ಎಫ್‌ಐಆರ್ ಪ್ರತಿಯನ್ನು ಪೊಲೀಸರು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಬಳಿಕ, ಅದನ್ನು ತೆಗೆದು ಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೊಚ್ಚಿ ನಗರ ಡಿಸಿಪಿ ಅಶ್ವತಿ ಜಿಜಿ, ಆಕಸ್ಮಿಕವಾಗಿ ಎಫ್‌ಐಆರ್ ಪ್ರತಿಯನ್ನು ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಲಾಗಿತ್ತು. ಪ್ರಕರಣ ಸೂಕ್ಷ್ಮ ಸ್ವರೂಪದಿಂದ ಕೂಡಿರುವ ಹಿನ್ನೆಲೆ, ಅದನ್ನು ತೆಗೆದುಹಾಕಲಾಗಿದೆ ಎಂದು ಹೇಳಿರುವುದಾಗಿ ಆನ್ ಮನೋರಮಾ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...