Homeಅಂಕಣಗಳುಎರಡು ದುಃಖದ ಸಂಗತಿ ಎದುರಾದವಲ್ಲಾ

ಎರಡು ದುಃಖದ ಸಂಗತಿ ಎದುರಾದವಲ್ಲಾ

- Advertisement -
- Advertisement -

ಈವಾರ ಎರಡು ದುಃಖಕರ ಸಂಗತಿಗಳು ಹೊರಬಿದ್ದಿವೆಯಲ್ಲಾ. ಮೊದಲನೆಯದಾಗಿ ನಮ್ಮ ಸಭ್ಯರಾಜಕಾರಣಿ ಎಸ್.ಎಂ ಕೃಷ್ಣ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ನಿರ್ಧಾರಕ್ಕೆ ಬಿಜೆಪಿಗಳು ಕಿವಿ ಕೇಳದಂತಿರುವುದು ಸಹಜ. ಕೃಷ್ಣ ತಮ್ಮ ರಾಜಕಾರಣದ ಇತಿಹಾಸದಲ್ಲಿ ಎಂದೂ ಅಸಭ್ಯವಾಗಿ ನಡೆದುಕೊಂಡವರಲ್ಲ. ಅಸಂಬದ್ಧ ಮಾತನಾಡಿದವರಲ್ಲಾ. ಯಾರನ್ನೂ ಕಟುವಾಗಿ ಟೀಕಿಸಿದವರಲ್ಲ. ತಮ್ಮ ಕಾರಿನ ಡ್ರೈವರನ್ನು ಕೂಡ ಬಹುವಚನದಲ್ಲಿ ಮಾತನಾಡಿಸಿದ ವ್ಯಕ್ತಿ. ಎಲ್ಲಕ್ಕಿಂತ ಮುಖ್ಯವಾಗಿ ನರಹಂತಕ ವೀರಪ್ಪನ್‌ನನ್ನು, ’ವೀರಪ್ಪನ್‌ರವರೆ’ ಎಂದು ಸಂಭೋಧಿಸಿ “ಕಿಸ್ನ ನಲ್ಲ ಪೆರಿಯವರು” ಎಂಬ ಬಿರುದು ಪಡೆದವರು. ಕೃಷ್ಣರಲ್ಲಿರುವ ಈ ಗುಣಗಳಿಗಾಗಿ ಅವರು ಸುಮ್ಮನಾಗಬಹುದಿತ್ತು. ಅದುಬಿಟ್ಟು, ತಮ್ಮ ನಡವಳಿಕೆ ಭಾಷೆ ಮತ್ತು ಬುದ್ಧಿಯ ಸಮೀಪಕ್ಕೂ ಬಾರದ ಬಿಜೆಪಿ ಸೇರಿದ್ದು ಈ ಶತಮಾನದ ರಾಜಕೀಯ ದ್ರೋಹವಾಗಿ ಕಂಡಿತಂತಲ್ಲಾ. ಯಾರೋ ರಾಹುಲ್‌ಗಾಂಧಿಯವರನ್ನು ಕೇಳಿದಾಗ, ಇದು ಕೃಷ್ಣರ ಸಮಸ್ಯೆ, ಕಾಂಗ್ರೆಸ್ ಮತ್ತು ಬಿಜೆಪಿ ಸಮಸ್ಯೆಯಲ್ಲ; ಅಲ್ಲಿ ಯಾರೂ ಇವರನ್ನು ಕರೆದಿಲ್ಲ ಎಂದುಬಿಟ್ಟಿದ್ದರಲ್ಲಾ. ಆದರೇನು ಕೃಷ್ಣ ಎಲ್ಲವನ್ನು ಬಿಟ್ಟು ಬಿಜೆಪಿಯ ಬಾಗಿಲಿಗೆ ಹೋದರು. ಖಾಲಿಯಿದ್ದ ಒಂದು ಆರಾಮ ಕುರ್ಚಿಯಲ್ಲಿ ಕುಳಿತರು. ಯಾರೂ ಕ್ಯಾರೆ ಅನ್ನಲಿಲ್ಲ. ನಿಧಾನವಾಗಿ ಎದ್ದು ಬರ್ತಿನಿ ಇವುರೆ, ಬಹಳ ಹೊತ್ತು ಕೂರಕ್ಕೆ ವಯಸ್ಸು ಪರ್ಮಿಟ್ ಮಾಡ್ತ ಇಲ್ಲ ಎಂದು ನಿಧಾನವಾಗಿ ಎದ್ದು ಹೊರಟಾಗಲೂ ಯಾವ ಬಿಜೆಪಿಗಳೂ ಕೂಡ ಆಯ್ತು ಸರ್ ಹೋಗಿ ಬನ್ನಿ ಅನ್ನಲಿಲ್ಲವಂತಲ್ಲಾ, ಥೂತ್ತೇರಿ.

*******

ಎರಡನೆ ದುಃಖಪೂರಿತ ಸಂಗತಿ ಯಾವುದೆಂದರೇ ಗೃಹಮಂತ್ರಿ ಆರಗ ಜ್ಞಾನೇಂದ್ರ ಆತ್ಮಹತ್ಯೆಯ ಮಾತನಾಡಿರುವುದು. ಕರ್ನಾಟಕದ ರಾಜಕೀಯದ ಆಗಸದಲ್ಲಿ ಎಂದೆಂದೂ ಮಿನುಗುವ ನಕ್ಷತ್ರವಾಗುಳಿದಿರುವ ಶಾಂತವೇರಿ ಗೋಪಾಲಗೌಡರು ಆರಿಸಿ ಬಂದಿದ್ದ ತೀರ್ಥಹಳ್ಳಿಯನ್ನು ಪ್ರತಿನಿಧಿಸುತ್ತಿರುವ ಜ್ಞಾನೇಂದ್ರ ಅವರು ರಾಷ್ಟ್ರಕವಿ ಕುವೆಂಪು ವಿಚಾರಧಾರೆಗಳ ವಾಹಕನಾಗಿ ಬದುಕಲಾಗದೆ ಬಲವಂತವಾಗಿ ಎಂಬಂತೆ ಗೋಳವಲಕರ, ಹೆಡಗೆವಾರ, ಸಾವರಕರ ಇತ್ಯಾದಿ ಭಯಂಕರ ಹಿಂದೂವಾದಿಗಳ ಹಿಂಬಾಲಕರಾಗಿ, ಅವರ ಸಿದ್ಧಾಂತಗಳ ಪ್ರತಿಪಾದಕರಾಗಿ ಬದುಕಿದವರು. ಸದಾ ಶ್ವೇತವಸ್ತ್ರಧಾರಿಯಾಗಿ ಶುಭ್ರವಾಗಿ ಬದುಕಿದ್ದ ಅರಗರ ಪಕ್ಕ ಸ್ಯಾಂಟ್ರೊ ರವಿ ಅದೇ ಡ್ರೆಸ್ಸಿನಲ್ಲಿ ಬಂದು ನಿಂತಿದ್ದೂ ಅಲ್ಲದೆ, ಅರಗರ ಅರಿವಿಗೂ ಬರದೆ ಜೇಬಿಗೆ ಏನೊ ಇಟ್ಟು ಹೋದದ್ದು ಗಮನಕ್ಕೇ ಬರಲಿಲ್ಲವಂತಲ್ಲಾ. ಈಗ ನೋಡಿದರೆ ಸ್ಯಾಂಟ್ರೊ ರವಿ ಪೊಲೀಸ್ ವರ್ಗಾವಣೆಯಲ್ಲಿ ಪಡೆದ ಕಾಸಿನ ಕವಡೆಯನ್ನು ಅರಗರ ಜೇಬಿಗೆ ಹಾ ಹೋಗಿದ್ದಾನೆಂಬ ಸುದ್ದಿ ಹಬ್ಬಿದೆಯಲ್ಲಾ. ಇಂತಹ ಸುದ್ದಿಗಳ ಶೋಧನೆ ಮತ್ತು ಅನಾವರಣದಲ್ಲಿ ಎತ್ತಿದ ಕೈಯಾದ ಕುಮಾರಣ್ಣನವರು, ಆತ್ಮಹತ್ಯೆ ಬೇಡ ಆತ್ಮಸಾಕ್ಷಿಯಿದ್ದರೆ ಸಾಕು; ಆತ್ಮಹತ್ಯೆಯ ಹೆಸರೆತ್ತುವುದೂ ಅಪರಾಧವೇ, ಹಾಗೆ ರಾಜಕಾರಣಿಗಳು ಆತ್ಮಹತ್ಯೆ ಮಾಡಿಕೊಂಡರೆ ಇಡೀ ದೇಶದಲ್ಲಿ ರಾಜಕಾರಣಿಗಳೇ ಇಲ್ಲದಂತಾಗಿ ದೇಶವೇ ಅರಾಜಕ ಸ್ಥಿತಿಗೆ ಹೋಗುತ್ತದೆ ಎಂದಿಲ್ಲವಲ್ಲಾ, ಥೂತ್ತೇರಿ.

******

ಹಾವೇರಿ ಸಾಹಿತ್ಯ ಸಮ್ಮೇಳನ ಮುಗಿದಿದೆ. ಜೋಶಿಯ ಲೆಕ್ಕಾಚಾರಗಳು ಸಾಂಗವಾಗಿ ನಡೆದಿವೆ. ಈ ನಡುವೆ ಹಾವೇರಿಯ ಸಣ್ಣವೇದಿಕೆಯಿಂದ ದೊಡ್ಡ ಗಂಟಲಲ್ಲಿ ಅಬ್ಬರಿಸಿದ ದೊಡ್ಡರಂಗೇಗೌಡರ ದನಿ ನಾಡಿನ ಮೂಲೆಮೂಲೆಗೆ ತಲುಪಿ ತುಸು ಗೊಂದಲ ಮೂಡಿಸಿದೆಯಂತಲ್ಲಾ. ಕಳೆದ ಶತಮಾನದಲ್ಲಿ ಕುವೆಂಪು ಹೊಸ ತರುಣ ಜನಾಂಗಕ್ಕೆ ಆತ್ಮಶ್ರೀಗಾಗಿ ನಿರಂಕುಶ ಮತಿಗಳಾಗಿ ಎಂದರು. ಆ ಕೂಡಲೇ ಹಲವು ತರುಣರು ದೇವರು ದಿಂಡಿರನ್ನು ಮತ್ತು ಜ್ಯೋತಿಷಿಗಳನ್ನು ಬಿಟ್ಟು ಮಂತ್ರ ಮಾಂಗಲ್ಯದ ಮದುವೆಯಾದರು, ಉರಿಯುವ ಪಂಜುಗಳಾದರು. ಆದರೀಗ ದೊಡ್ಡರಂಗೇಗೌಡರ ದನಿಗೆ ಕಿವಿಯಾದ ಹುಡುಗರು ಯಾವ ರೂಪದ ಕ್ರಾಂತಿ ಮಾಡಬೇಕೆಂದು ಯೋಚಿಸುತ್ತಿದ್ದಾರಂತಲ್ಲಾ. ಏಕೆಂದರೆ ಗೌಡರು ಮಠೋಪಜೀವಿಯಂತಹ ಕವಿ. ಆದಿಚುಂಚನಗಿರಿ ಬೆಟ್ಟದ ಮೇಲೆ ನಿಂತು ಸೂರ್ಯೋದಯ ನೋಡಿದ ಫಲವಾಗಿ “ತೇರಾಏರಿ ಅಂಬರದಾಗ ನೇಸರು ನಗತಾನೆ ಮರಗಿಡ ಕೂಗ್ಯಾವೇ ಹಕ್ಕಿ ಹಾಡ್ಯಾವೇ” ಎಂದು ಬೇಂದ್ರೆ ತೋರಿದ ಬೆಳಗಿನ ಪ್ರತಿಯಾಗಿ ನೇಸರ ತೋರಿದ ಕವಿ. ಆದರೇನು ಶೂದ್ರ ಸಮೂಹದ ಬೆಟ್ಟಸಾಲಲ್ಲಿ ನಿಂತು ಅದ್ಯಾವಾಗ ಬಿಜೆಪಿ ಗುಡಾರಕ್ಕೆ ನೆಗೆದರೊ ಸ್ಥಾನ ಮಾನಗಳು ಹಿಂಬಾಲಿಸಿ ಬಂದವು. ಕೂಡಲೇ ಮೋದಿ ಬಗ್ಗೆ ಎಡೂರಪ್ಪನ ಬಗ್ಗೆಯೂ ಕವನ ಬರೆದು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆದರು. ಮುಂದೆ ಜೋಶಿಗೆ ತೋರುವ ಕೃತಜ್ಞತೆಯ ಫಲವಾಗಿ ಯಾವ ಕವನ ಉದ್ಭವವಾಗುತ್ತದೊ ಎಂಬ ಆತಂಕದ ನಡುವೆ ಇತ್ತ ಚೆಡ್ಡಿಗಳು, ಅತ್ತ ಚುಂಚನಗಿರಿ ಪ್ರಾಂತ್ಯದ ಹುಡುಗರು ಗೌಡರ ಕ್ರಾಂತಿ ಮಾತಿನಿಂದ ಗೊಂದಲಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಈಚೆಗೆ ಕೆಲವು ಮಠಾಧೀಶರು ಸಂಘಟಿತರಾಗಿ ಸರಕಾರಕ್ಕೆ ಸಲಹೆ ಕೊಡುವುದು ಸಾಮಾನ್ಯವಾಗಿದೆಯಂತಲ್ಲಾ. ಈಗವರ ಕಣ್ಣುಬಿದ್ದಿರುವುದು ಶಾಲಾ ಮಕ್ಕಳ ಆಹಾರದ ಬಗ್ಗೆ. ಸಾಮಾನ್ಯವಾಗಿ ಮಠಾಧೀಶರು, ಧರ್ಮವಂತರು, ನೀತಿವಂತರು, ಸತ್ಯವಂತರು. ತಾವು ಪ್ರತಿನಿಧಿಸುವ ಜಾತಿಯ ತಲೆಯ ಮೇಲೂ ಕುಳಿತವರು. ಇಂತಹ ಸ್ಥಾನದಲ್ಲಿರುವವರಿಗೆ ಸಾಮಾನ್ಯವಾಗಿ ಯಾವ ಶ್ರಮವೂ ಇರುವುದಿಲ್ಲ. ವಿಕಲಚೇತನ ಮಗುವಿಗೆ ತಾಯಿ ತಾನೇ ಆಹಾರ ನೀಡಿ ಸಾಕಿ ಸಲಹುವಂತೆ ಜನಾಂಗ ಈ ಜಗದ್ಗುರುಗಳನ್ನ ಸಾಕುತ್ತಿದೆ. ಹೀಗೆ ಸಾಕಿಸಿಕೊಂಡವರೆಲ್ಲಾ ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಮಾತನಾಡುತ್ತಿದ್ದಾರೆ. ಗುರುಗಳ ಭೋಜನದ ಬಗ್ಗೆ ’ಗುರು ಶಿಷ್ಯರು’ ಎಂಬ ಚಿತ್ರದ ತುಣುಕು ಹೇಳಿದರೆ ಅಪ್ರಸ್ತುತವಾಗಲಾರದು. ಉಂಡಾಡಿ ಗುರುವೊಬ್ಬರು ಗುರುವರ್ಯರ ಮನೆಗೆ ಬರುತ್ತಾರೆ. ಆಗ ಆಚಾರ್ಯರು ಅವರ ಕಾರ್ಯಕ್ರಮ ಕೇಳುತ್ತಾರೆ. ಆಗ ಅತಿಥಿಗಳು ಮುಂಜಾನೆ ಸ್ನಾನ, ಸಂಧ್ಯಾವಂದನೆ ಮತ್ತೆ ಉಪಾಹಾರ ಮಧ್ಯಾಹ್ನ ಭೋಜನ, ಶಯನ ನಂತರ ವಾಯುವಿಹಾರ, ರಾತ್ರಿ ಭೋಜನ ಮತ್ತು ಒಂದು ತಂಬಿಗೆ ಕ್ಷೀರ ಇದೇ ನನ್ನ ದಿನಚರಿ ಎನ್ನುತ್ತಾನೆ. ಹೀಗೆ ಬದುಕಿರುವ ನಮ್ಮ ಕೆಲವು ಜಗತ್ ಗುರುಗಳು ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಎಗ್ಗಿಲ್ಲದೆ ಸಲಹೆ ಕೊಡತೊಡಗಿದ್ದಾರೆ. ಇಂತಹವರ ಅವಗಾಹನೆಗೆ ತರುವ ವಿಷಯ ಯಾವುದೆಂದರೆ ಶೃಂಗೇರಿ, ಚುಂಚನಗಿರಿ, ಸಿದ್ಧಗಂಗಾ ಮಠ ಮತ್ತು ಇನ್ನಿತರ ಪ್ರಗತಿಪರ ಚಿಂತಕರನ್ನ ಪಡೆದಿರುವ ಮಠಗಳು ಎಂದೂ ಮಕ್ಕಳ ಆಹಾರ ಪದ್ಧತಿ ಬಗ್ಗೆ ಮಾತನಾಡಿಲ್ಲ. ಆಹಾರ ಅವರವರ ಜನ್ಮಸಿದ್ಧ ಹಕ್ಕು. ಆದ್ದರಿಂದ ತಮಗೆ ಬಿಟ್ಟಿ ಸಿಗುವ ದ್ರಾಕ್ಷಿ, ಉತ್ತುತ್ತೆ, ಗೋಡಂಬಿ ತಿಂದುಕೊಂಡು ಟಿವಿ ನೋಡುತ್ತ ಕಾಲ ಹಾಕಲು ಸಮಸ್ಯೆ ಏನು ಎಂದು ಕೇಳುವಂತೆ ಮಾತನಾಡುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...