Homeಅಂಕಣಗಳುಎರಡು ದುಃಖದ ಸಂಗತಿ ಎದುರಾದವಲ್ಲಾ

ಎರಡು ದುಃಖದ ಸಂಗತಿ ಎದುರಾದವಲ್ಲಾ

- Advertisement -
- Advertisement -

ಈವಾರ ಎರಡು ದುಃಖಕರ ಸಂಗತಿಗಳು ಹೊರಬಿದ್ದಿವೆಯಲ್ಲಾ. ಮೊದಲನೆಯದಾಗಿ ನಮ್ಮ ಸಭ್ಯರಾಜಕಾರಣಿ ಎಸ್.ಎಂ ಕೃಷ್ಣ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ನಿರ್ಧಾರಕ್ಕೆ ಬಿಜೆಪಿಗಳು ಕಿವಿ ಕೇಳದಂತಿರುವುದು ಸಹಜ. ಕೃಷ್ಣ ತಮ್ಮ ರಾಜಕಾರಣದ ಇತಿಹಾಸದಲ್ಲಿ ಎಂದೂ ಅಸಭ್ಯವಾಗಿ ನಡೆದುಕೊಂಡವರಲ್ಲ. ಅಸಂಬದ್ಧ ಮಾತನಾಡಿದವರಲ್ಲಾ. ಯಾರನ್ನೂ ಕಟುವಾಗಿ ಟೀಕಿಸಿದವರಲ್ಲ. ತಮ್ಮ ಕಾರಿನ ಡ್ರೈವರನ್ನು ಕೂಡ ಬಹುವಚನದಲ್ಲಿ ಮಾತನಾಡಿಸಿದ ವ್ಯಕ್ತಿ. ಎಲ್ಲಕ್ಕಿಂತ ಮುಖ್ಯವಾಗಿ ನರಹಂತಕ ವೀರಪ್ಪನ್‌ನನ್ನು, ’ವೀರಪ್ಪನ್‌ರವರೆ’ ಎಂದು ಸಂಭೋಧಿಸಿ “ಕಿಸ್ನ ನಲ್ಲ ಪೆರಿಯವರು” ಎಂಬ ಬಿರುದು ಪಡೆದವರು. ಕೃಷ್ಣರಲ್ಲಿರುವ ಈ ಗುಣಗಳಿಗಾಗಿ ಅವರು ಸುಮ್ಮನಾಗಬಹುದಿತ್ತು. ಅದುಬಿಟ್ಟು, ತಮ್ಮ ನಡವಳಿಕೆ ಭಾಷೆ ಮತ್ತು ಬುದ್ಧಿಯ ಸಮೀಪಕ್ಕೂ ಬಾರದ ಬಿಜೆಪಿ ಸೇರಿದ್ದು ಈ ಶತಮಾನದ ರಾಜಕೀಯ ದ್ರೋಹವಾಗಿ ಕಂಡಿತಂತಲ್ಲಾ. ಯಾರೋ ರಾಹುಲ್‌ಗಾಂಧಿಯವರನ್ನು ಕೇಳಿದಾಗ, ಇದು ಕೃಷ್ಣರ ಸಮಸ್ಯೆ, ಕಾಂಗ್ರೆಸ್ ಮತ್ತು ಬಿಜೆಪಿ ಸಮಸ್ಯೆಯಲ್ಲ; ಅಲ್ಲಿ ಯಾರೂ ಇವರನ್ನು ಕರೆದಿಲ್ಲ ಎಂದುಬಿಟ್ಟಿದ್ದರಲ್ಲಾ. ಆದರೇನು ಕೃಷ್ಣ ಎಲ್ಲವನ್ನು ಬಿಟ್ಟು ಬಿಜೆಪಿಯ ಬಾಗಿಲಿಗೆ ಹೋದರು. ಖಾಲಿಯಿದ್ದ ಒಂದು ಆರಾಮ ಕುರ್ಚಿಯಲ್ಲಿ ಕುಳಿತರು. ಯಾರೂ ಕ್ಯಾರೆ ಅನ್ನಲಿಲ್ಲ. ನಿಧಾನವಾಗಿ ಎದ್ದು ಬರ್ತಿನಿ ಇವುರೆ, ಬಹಳ ಹೊತ್ತು ಕೂರಕ್ಕೆ ವಯಸ್ಸು ಪರ್ಮಿಟ್ ಮಾಡ್ತ ಇಲ್ಲ ಎಂದು ನಿಧಾನವಾಗಿ ಎದ್ದು ಹೊರಟಾಗಲೂ ಯಾವ ಬಿಜೆಪಿಗಳೂ ಕೂಡ ಆಯ್ತು ಸರ್ ಹೋಗಿ ಬನ್ನಿ ಅನ್ನಲಿಲ್ಲವಂತಲ್ಲಾ, ಥೂತ್ತೇರಿ.

*******

ಎರಡನೆ ದುಃಖಪೂರಿತ ಸಂಗತಿ ಯಾವುದೆಂದರೇ ಗೃಹಮಂತ್ರಿ ಆರಗ ಜ್ಞಾನೇಂದ್ರ ಆತ್ಮಹತ್ಯೆಯ ಮಾತನಾಡಿರುವುದು. ಕರ್ನಾಟಕದ ರಾಜಕೀಯದ ಆಗಸದಲ್ಲಿ ಎಂದೆಂದೂ ಮಿನುಗುವ ನಕ್ಷತ್ರವಾಗುಳಿದಿರುವ ಶಾಂತವೇರಿ ಗೋಪಾಲಗೌಡರು ಆರಿಸಿ ಬಂದಿದ್ದ ತೀರ್ಥಹಳ್ಳಿಯನ್ನು ಪ್ರತಿನಿಧಿಸುತ್ತಿರುವ ಜ್ಞಾನೇಂದ್ರ ಅವರು ರಾಷ್ಟ್ರಕವಿ ಕುವೆಂಪು ವಿಚಾರಧಾರೆಗಳ ವಾಹಕನಾಗಿ ಬದುಕಲಾಗದೆ ಬಲವಂತವಾಗಿ ಎಂಬಂತೆ ಗೋಳವಲಕರ, ಹೆಡಗೆವಾರ, ಸಾವರಕರ ಇತ್ಯಾದಿ ಭಯಂಕರ ಹಿಂದೂವಾದಿಗಳ ಹಿಂಬಾಲಕರಾಗಿ, ಅವರ ಸಿದ್ಧಾಂತಗಳ ಪ್ರತಿಪಾದಕರಾಗಿ ಬದುಕಿದವರು. ಸದಾ ಶ್ವೇತವಸ್ತ್ರಧಾರಿಯಾಗಿ ಶುಭ್ರವಾಗಿ ಬದುಕಿದ್ದ ಅರಗರ ಪಕ್ಕ ಸ್ಯಾಂಟ್ರೊ ರವಿ ಅದೇ ಡ್ರೆಸ್ಸಿನಲ್ಲಿ ಬಂದು ನಿಂತಿದ್ದೂ ಅಲ್ಲದೆ, ಅರಗರ ಅರಿವಿಗೂ ಬರದೆ ಜೇಬಿಗೆ ಏನೊ ಇಟ್ಟು ಹೋದದ್ದು ಗಮನಕ್ಕೇ ಬರಲಿಲ್ಲವಂತಲ್ಲಾ. ಈಗ ನೋಡಿದರೆ ಸ್ಯಾಂಟ್ರೊ ರವಿ ಪೊಲೀಸ್ ವರ್ಗಾವಣೆಯಲ್ಲಿ ಪಡೆದ ಕಾಸಿನ ಕವಡೆಯನ್ನು ಅರಗರ ಜೇಬಿಗೆ ಹಾ ಹೋಗಿದ್ದಾನೆಂಬ ಸುದ್ದಿ ಹಬ್ಬಿದೆಯಲ್ಲಾ. ಇಂತಹ ಸುದ್ದಿಗಳ ಶೋಧನೆ ಮತ್ತು ಅನಾವರಣದಲ್ಲಿ ಎತ್ತಿದ ಕೈಯಾದ ಕುಮಾರಣ್ಣನವರು, ಆತ್ಮಹತ್ಯೆ ಬೇಡ ಆತ್ಮಸಾಕ್ಷಿಯಿದ್ದರೆ ಸಾಕು; ಆತ್ಮಹತ್ಯೆಯ ಹೆಸರೆತ್ತುವುದೂ ಅಪರಾಧವೇ, ಹಾಗೆ ರಾಜಕಾರಣಿಗಳು ಆತ್ಮಹತ್ಯೆ ಮಾಡಿಕೊಂಡರೆ ಇಡೀ ದೇಶದಲ್ಲಿ ರಾಜಕಾರಣಿಗಳೇ ಇಲ್ಲದಂತಾಗಿ ದೇಶವೇ ಅರಾಜಕ ಸ್ಥಿತಿಗೆ ಹೋಗುತ್ತದೆ ಎಂದಿಲ್ಲವಲ್ಲಾ, ಥೂತ್ತೇರಿ.

******

ಹಾವೇರಿ ಸಾಹಿತ್ಯ ಸಮ್ಮೇಳನ ಮುಗಿದಿದೆ. ಜೋಶಿಯ ಲೆಕ್ಕಾಚಾರಗಳು ಸಾಂಗವಾಗಿ ನಡೆದಿವೆ. ಈ ನಡುವೆ ಹಾವೇರಿಯ ಸಣ್ಣವೇದಿಕೆಯಿಂದ ದೊಡ್ಡ ಗಂಟಲಲ್ಲಿ ಅಬ್ಬರಿಸಿದ ದೊಡ್ಡರಂಗೇಗೌಡರ ದನಿ ನಾಡಿನ ಮೂಲೆಮೂಲೆಗೆ ತಲುಪಿ ತುಸು ಗೊಂದಲ ಮೂಡಿಸಿದೆಯಂತಲ್ಲಾ. ಕಳೆದ ಶತಮಾನದಲ್ಲಿ ಕುವೆಂಪು ಹೊಸ ತರುಣ ಜನಾಂಗಕ್ಕೆ ಆತ್ಮಶ್ರೀಗಾಗಿ ನಿರಂಕುಶ ಮತಿಗಳಾಗಿ ಎಂದರು. ಆ ಕೂಡಲೇ ಹಲವು ತರುಣರು ದೇವರು ದಿಂಡಿರನ್ನು ಮತ್ತು ಜ್ಯೋತಿಷಿಗಳನ್ನು ಬಿಟ್ಟು ಮಂತ್ರ ಮಾಂಗಲ್ಯದ ಮದುವೆಯಾದರು, ಉರಿಯುವ ಪಂಜುಗಳಾದರು. ಆದರೀಗ ದೊಡ್ಡರಂಗೇಗೌಡರ ದನಿಗೆ ಕಿವಿಯಾದ ಹುಡುಗರು ಯಾವ ರೂಪದ ಕ್ರಾಂತಿ ಮಾಡಬೇಕೆಂದು ಯೋಚಿಸುತ್ತಿದ್ದಾರಂತಲ್ಲಾ. ಏಕೆಂದರೆ ಗೌಡರು ಮಠೋಪಜೀವಿಯಂತಹ ಕವಿ. ಆದಿಚುಂಚನಗಿರಿ ಬೆಟ್ಟದ ಮೇಲೆ ನಿಂತು ಸೂರ್ಯೋದಯ ನೋಡಿದ ಫಲವಾಗಿ “ತೇರಾಏರಿ ಅಂಬರದಾಗ ನೇಸರು ನಗತಾನೆ ಮರಗಿಡ ಕೂಗ್ಯಾವೇ ಹಕ್ಕಿ ಹಾಡ್ಯಾವೇ” ಎಂದು ಬೇಂದ್ರೆ ತೋರಿದ ಬೆಳಗಿನ ಪ್ರತಿಯಾಗಿ ನೇಸರ ತೋರಿದ ಕವಿ. ಆದರೇನು ಶೂದ್ರ ಸಮೂಹದ ಬೆಟ್ಟಸಾಲಲ್ಲಿ ನಿಂತು ಅದ್ಯಾವಾಗ ಬಿಜೆಪಿ ಗುಡಾರಕ್ಕೆ ನೆಗೆದರೊ ಸ್ಥಾನ ಮಾನಗಳು ಹಿಂಬಾಲಿಸಿ ಬಂದವು. ಕೂಡಲೇ ಮೋದಿ ಬಗ್ಗೆ ಎಡೂರಪ್ಪನ ಬಗ್ಗೆಯೂ ಕವನ ಬರೆದು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆದರು. ಮುಂದೆ ಜೋಶಿಗೆ ತೋರುವ ಕೃತಜ್ಞತೆಯ ಫಲವಾಗಿ ಯಾವ ಕವನ ಉದ್ಭವವಾಗುತ್ತದೊ ಎಂಬ ಆತಂಕದ ನಡುವೆ ಇತ್ತ ಚೆಡ್ಡಿಗಳು, ಅತ್ತ ಚುಂಚನಗಿರಿ ಪ್ರಾಂತ್ಯದ ಹುಡುಗರು ಗೌಡರ ಕ್ರಾಂತಿ ಮಾತಿನಿಂದ ಗೊಂದಲಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಈಚೆಗೆ ಕೆಲವು ಮಠಾಧೀಶರು ಸಂಘಟಿತರಾಗಿ ಸರಕಾರಕ್ಕೆ ಸಲಹೆ ಕೊಡುವುದು ಸಾಮಾನ್ಯವಾಗಿದೆಯಂತಲ್ಲಾ. ಈಗವರ ಕಣ್ಣುಬಿದ್ದಿರುವುದು ಶಾಲಾ ಮಕ್ಕಳ ಆಹಾರದ ಬಗ್ಗೆ. ಸಾಮಾನ್ಯವಾಗಿ ಮಠಾಧೀಶರು, ಧರ್ಮವಂತರು, ನೀತಿವಂತರು, ಸತ್ಯವಂತರು. ತಾವು ಪ್ರತಿನಿಧಿಸುವ ಜಾತಿಯ ತಲೆಯ ಮೇಲೂ ಕುಳಿತವರು. ಇಂತಹ ಸ್ಥಾನದಲ್ಲಿರುವವರಿಗೆ ಸಾಮಾನ್ಯವಾಗಿ ಯಾವ ಶ್ರಮವೂ ಇರುವುದಿಲ್ಲ. ವಿಕಲಚೇತನ ಮಗುವಿಗೆ ತಾಯಿ ತಾನೇ ಆಹಾರ ನೀಡಿ ಸಾಕಿ ಸಲಹುವಂತೆ ಜನಾಂಗ ಈ ಜಗದ್ಗುರುಗಳನ್ನ ಸಾಕುತ್ತಿದೆ. ಹೀಗೆ ಸಾಕಿಸಿಕೊಂಡವರೆಲ್ಲಾ ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಮಾತನಾಡುತ್ತಿದ್ದಾರೆ. ಗುರುಗಳ ಭೋಜನದ ಬಗ್ಗೆ ’ಗುರು ಶಿಷ್ಯರು’ ಎಂಬ ಚಿತ್ರದ ತುಣುಕು ಹೇಳಿದರೆ ಅಪ್ರಸ್ತುತವಾಗಲಾರದು. ಉಂಡಾಡಿ ಗುರುವೊಬ್ಬರು ಗುರುವರ್ಯರ ಮನೆಗೆ ಬರುತ್ತಾರೆ. ಆಗ ಆಚಾರ್ಯರು ಅವರ ಕಾರ್ಯಕ್ರಮ ಕೇಳುತ್ತಾರೆ. ಆಗ ಅತಿಥಿಗಳು ಮುಂಜಾನೆ ಸ್ನಾನ, ಸಂಧ್ಯಾವಂದನೆ ಮತ್ತೆ ಉಪಾಹಾರ ಮಧ್ಯಾಹ್ನ ಭೋಜನ, ಶಯನ ನಂತರ ವಾಯುವಿಹಾರ, ರಾತ್ರಿ ಭೋಜನ ಮತ್ತು ಒಂದು ತಂಬಿಗೆ ಕ್ಷೀರ ಇದೇ ನನ್ನ ದಿನಚರಿ ಎನ್ನುತ್ತಾನೆ. ಹೀಗೆ ಬದುಕಿರುವ ನಮ್ಮ ಕೆಲವು ಜಗತ್ ಗುರುಗಳು ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಎಗ್ಗಿಲ್ಲದೆ ಸಲಹೆ ಕೊಡತೊಡಗಿದ್ದಾರೆ. ಇಂತಹವರ ಅವಗಾಹನೆಗೆ ತರುವ ವಿಷಯ ಯಾವುದೆಂದರೆ ಶೃಂಗೇರಿ, ಚುಂಚನಗಿರಿ, ಸಿದ್ಧಗಂಗಾ ಮಠ ಮತ್ತು ಇನ್ನಿತರ ಪ್ರಗತಿಪರ ಚಿಂತಕರನ್ನ ಪಡೆದಿರುವ ಮಠಗಳು ಎಂದೂ ಮಕ್ಕಳ ಆಹಾರ ಪದ್ಧತಿ ಬಗ್ಗೆ ಮಾತನಾಡಿಲ್ಲ. ಆಹಾರ ಅವರವರ ಜನ್ಮಸಿದ್ಧ ಹಕ್ಕು. ಆದ್ದರಿಂದ ತಮಗೆ ಬಿಟ್ಟಿ ಸಿಗುವ ದ್ರಾಕ್ಷಿ, ಉತ್ತುತ್ತೆ, ಗೋಡಂಬಿ ತಿಂದುಕೊಂಡು ಟಿವಿ ನೋಡುತ್ತ ಕಾಲ ಹಾಕಲು ಸಮಸ್ಯೆ ಏನು ಎಂದು ಕೇಳುವಂತೆ ಮಾತನಾಡುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....