Homeಅಂಕಣಗಳುಎರಡು ದುಃಖದ ಸಂಗತಿ ಎದುರಾದವಲ್ಲಾ

ಎರಡು ದುಃಖದ ಸಂಗತಿ ಎದುರಾದವಲ್ಲಾ

- Advertisement -
- Advertisement -

ಈವಾರ ಎರಡು ದುಃಖಕರ ಸಂಗತಿಗಳು ಹೊರಬಿದ್ದಿವೆಯಲ್ಲಾ. ಮೊದಲನೆಯದಾಗಿ ನಮ್ಮ ಸಭ್ಯರಾಜಕಾರಣಿ ಎಸ್.ಎಂ ಕೃಷ್ಣ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ನಿರ್ಧಾರಕ್ಕೆ ಬಿಜೆಪಿಗಳು ಕಿವಿ ಕೇಳದಂತಿರುವುದು ಸಹಜ. ಕೃಷ್ಣ ತಮ್ಮ ರಾಜಕಾರಣದ ಇತಿಹಾಸದಲ್ಲಿ ಎಂದೂ ಅಸಭ್ಯವಾಗಿ ನಡೆದುಕೊಂಡವರಲ್ಲ. ಅಸಂಬದ್ಧ ಮಾತನಾಡಿದವರಲ್ಲಾ. ಯಾರನ್ನೂ ಕಟುವಾಗಿ ಟೀಕಿಸಿದವರಲ್ಲ. ತಮ್ಮ ಕಾರಿನ ಡ್ರೈವರನ್ನು ಕೂಡ ಬಹುವಚನದಲ್ಲಿ ಮಾತನಾಡಿಸಿದ ವ್ಯಕ್ತಿ. ಎಲ್ಲಕ್ಕಿಂತ ಮುಖ್ಯವಾಗಿ ನರಹಂತಕ ವೀರಪ್ಪನ್‌ನನ್ನು, ’ವೀರಪ್ಪನ್‌ರವರೆ’ ಎಂದು ಸಂಭೋಧಿಸಿ “ಕಿಸ್ನ ನಲ್ಲ ಪೆರಿಯವರು” ಎಂಬ ಬಿರುದು ಪಡೆದವರು. ಕೃಷ್ಣರಲ್ಲಿರುವ ಈ ಗುಣಗಳಿಗಾಗಿ ಅವರು ಸುಮ್ಮನಾಗಬಹುದಿತ್ತು. ಅದುಬಿಟ್ಟು, ತಮ್ಮ ನಡವಳಿಕೆ ಭಾಷೆ ಮತ್ತು ಬುದ್ಧಿಯ ಸಮೀಪಕ್ಕೂ ಬಾರದ ಬಿಜೆಪಿ ಸೇರಿದ್ದು ಈ ಶತಮಾನದ ರಾಜಕೀಯ ದ್ರೋಹವಾಗಿ ಕಂಡಿತಂತಲ್ಲಾ. ಯಾರೋ ರಾಹುಲ್‌ಗಾಂಧಿಯವರನ್ನು ಕೇಳಿದಾಗ, ಇದು ಕೃಷ್ಣರ ಸಮಸ್ಯೆ, ಕಾಂಗ್ರೆಸ್ ಮತ್ತು ಬಿಜೆಪಿ ಸಮಸ್ಯೆಯಲ್ಲ; ಅಲ್ಲಿ ಯಾರೂ ಇವರನ್ನು ಕರೆದಿಲ್ಲ ಎಂದುಬಿಟ್ಟಿದ್ದರಲ್ಲಾ. ಆದರೇನು ಕೃಷ್ಣ ಎಲ್ಲವನ್ನು ಬಿಟ್ಟು ಬಿಜೆಪಿಯ ಬಾಗಿಲಿಗೆ ಹೋದರು. ಖಾಲಿಯಿದ್ದ ಒಂದು ಆರಾಮ ಕುರ್ಚಿಯಲ್ಲಿ ಕುಳಿತರು. ಯಾರೂ ಕ್ಯಾರೆ ಅನ್ನಲಿಲ್ಲ. ನಿಧಾನವಾಗಿ ಎದ್ದು ಬರ್ತಿನಿ ಇವುರೆ, ಬಹಳ ಹೊತ್ತು ಕೂರಕ್ಕೆ ವಯಸ್ಸು ಪರ್ಮಿಟ್ ಮಾಡ್ತ ಇಲ್ಲ ಎಂದು ನಿಧಾನವಾಗಿ ಎದ್ದು ಹೊರಟಾಗಲೂ ಯಾವ ಬಿಜೆಪಿಗಳೂ ಕೂಡ ಆಯ್ತು ಸರ್ ಹೋಗಿ ಬನ್ನಿ ಅನ್ನಲಿಲ್ಲವಂತಲ್ಲಾ, ಥೂತ್ತೇರಿ.

*******

ಎರಡನೆ ದುಃಖಪೂರಿತ ಸಂಗತಿ ಯಾವುದೆಂದರೇ ಗೃಹಮಂತ್ರಿ ಆರಗ ಜ್ಞಾನೇಂದ್ರ ಆತ್ಮಹತ್ಯೆಯ ಮಾತನಾಡಿರುವುದು. ಕರ್ನಾಟಕದ ರಾಜಕೀಯದ ಆಗಸದಲ್ಲಿ ಎಂದೆಂದೂ ಮಿನುಗುವ ನಕ್ಷತ್ರವಾಗುಳಿದಿರುವ ಶಾಂತವೇರಿ ಗೋಪಾಲಗೌಡರು ಆರಿಸಿ ಬಂದಿದ್ದ ತೀರ್ಥಹಳ್ಳಿಯನ್ನು ಪ್ರತಿನಿಧಿಸುತ್ತಿರುವ ಜ್ಞಾನೇಂದ್ರ ಅವರು ರಾಷ್ಟ್ರಕವಿ ಕುವೆಂಪು ವಿಚಾರಧಾರೆಗಳ ವಾಹಕನಾಗಿ ಬದುಕಲಾಗದೆ ಬಲವಂತವಾಗಿ ಎಂಬಂತೆ ಗೋಳವಲಕರ, ಹೆಡಗೆವಾರ, ಸಾವರಕರ ಇತ್ಯಾದಿ ಭಯಂಕರ ಹಿಂದೂವಾದಿಗಳ ಹಿಂಬಾಲಕರಾಗಿ, ಅವರ ಸಿದ್ಧಾಂತಗಳ ಪ್ರತಿಪಾದಕರಾಗಿ ಬದುಕಿದವರು. ಸದಾ ಶ್ವೇತವಸ್ತ್ರಧಾರಿಯಾಗಿ ಶುಭ್ರವಾಗಿ ಬದುಕಿದ್ದ ಅರಗರ ಪಕ್ಕ ಸ್ಯಾಂಟ್ರೊ ರವಿ ಅದೇ ಡ್ರೆಸ್ಸಿನಲ್ಲಿ ಬಂದು ನಿಂತಿದ್ದೂ ಅಲ್ಲದೆ, ಅರಗರ ಅರಿವಿಗೂ ಬರದೆ ಜೇಬಿಗೆ ಏನೊ ಇಟ್ಟು ಹೋದದ್ದು ಗಮನಕ್ಕೇ ಬರಲಿಲ್ಲವಂತಲ್ಲಾ. ಈಗ ನೋಡಿದರೆ ಸ್ಯಾಂಟ್ರೊ ರವಿ ಪೊಲೀಸ್ ವರ್ಗಾವಣೆಯಲ್ಲಿ ಪಡೆದ ಕಾಸಿನ ಕವಡೆಯನ್ನು ಅರಗರ ಜೇಬಿಗೆ ಹಾ ಹೋಗಿದ್ದಾನೆಂಬ ಸುದ್ದಿ ಹಬ್ಬಿದೆಯಲ್ಲಾ. ಇಂತಹ ಸುದ್ದಿಗಳ ಶೋಧನೆ ಮತ್ತು ಅನಾವರಣದಲ್ಲಿ ಎತ್ತಿದ ಕೈಯಾದ ಕುಮಾರಣ್ಣನವರು, ಆತ್ಮಹತ್ಯೆ ಬೇಡ ಆತ್ಮಸಾಕ್ಷಿಯಿದ್ದರೆ ಸಾಕು; ಆತ್ಮಹತ್ಯೆಯ ಹೆಸರೆತ್ತುವುದೂ ಅಪರಾಧವೇ, ಹಾಗೆ ರಾಜಕಾರಣಿಗಳು ಆತ್ಮಹತ್ಯೆ ಮಾಡಿಕೊಂಡರೆ ಇಡೀ ದೇಶದಲ್ಲಿ ರಾಜಕಾರಣಿಗಳೇ ಇಲ್ಲದಂತಾಗಿ ದೇಶವೇ ಅರಾಜಕ ಸ್ಥಿತಿಗೆ ಹೋಗುತ್ತದೆ ಎಂದಿಲ್ಲವಲ್ಲಾ, ಥೂತ್ತೇರಿ.

******

ಹಾವೇರಿ ಸಾಹಿತ್ಯ ಸಮ್ಮೇಳನ ಮುಗಿದಿದೆ. ಜೋಶಿಯ ಲೆಕ್ಕಾಚಾರಗಳು ಸಾಂಗವಾಗಿ ನಡೆದಿವೆ. ಈ ನಡುವೆ ಹಾವೇರಿಯ ಸಣ್ಣವೇದಿಕೆಯಿಂದ ದೊಡ್ಡ ಗಂಟಲಲ್ಲಿ ಅಬ್ಬರಿಸಿದ ದೊಡ್ಡರಂಗೇಗೌಡರ ದನಿ ನಾಡಿನ ಮೂಲೆಮೂಲೆಗೆ ತಲುಪಿ ತುಸು ಗೊಂದಲ ಮೂಡಿಸಿದೆಯಂತಲ್ಲಾ. ಕಳೆದ ಶತಮಾನದಲ್ಲಿ ಕುವೆಂಪು ಹೊಸ ತರುಣ ಜನಾಂಗಕ್ಕೆ ಆತ್ಮಶ್ರೀಗಾಗಿ ನಿರಂಕುಶ ಮತಿಗಳಾಗಿ ಎಂದರು. ಆ ಕೂಡಲೇ ಹಲವು ತರುಣರು ದೇವರು ದಿಂಡಿರನ್ನು ಮತ್ತು ಜ್ಯೋತಿಷಿಗಳನ್ನು ಬಿಟ್ಟು ಮಂತ್ರ ಮಾಂಗಲ್ಯದ ಮದುವೆಯಾದರು, ಉರಿಯುವ ಪಂಜುಗಳಾದರು. ಆದರೀಗ ದೊಡ್ಡರಂಗೇಗೌಡರ ದನಿಗೆ ಕಿವಿಯಾದ ಹುಡುಗರು ಯಾವ ರೂಪದ ಕ್ರಾಂತಿ ಮಾಡಬೇಕೆಂದು ಯೋಚಿಸುತ್ತಿದ್ದಾರಂತಲ್ಲಾ. ಏಕೆಂದರೆ ಗೌಡರು ಮಠೋಪಜೀವಿಯಂತಹ ಕವಿ. ಆದಿಚುಂಚನಗಿರಿ ಬೆಟ್ಟದ ಮೇಲೆ ನಿಂತು ಸೂರ್ಯೋದಯ ನೋಡಿದ ಫಲವಾಗಿ “ತೇರಾಏರಿ ಅಂಬರದಾಗ ನೇಸರು ನಗತಾನೆ ಮರಗಿಡ ಕೂಗ್ಯಾವೇ ಹಕ್ಕಿ ಹಾಡ್ಯಾವೇ” ಎಂದು ಬೇಂದ್ರೆ ತೋರಿದ ಬೆಳಗಿನ ಪ್ರತಿಯಾಗಿ ನೇಸರ ತೋರಿದ ಕವಿ. ಆದರೇನು ಶೂದ್ರ ಸಮೂಹದ ಬೆಟ್ಟಸಾಲಲ್ಲಿ ನಿಂತು ಅದ್ಯಾವಾಗ ಬಿಜೆಪಿ ಗುಡಾರಕ್ಕೆ ನೆಗೆದರೊ ಸ್ಥಾನ ಮಾನಗಳು ಹಿಂಬಾಲಿಸಿ ಬಂದವು. ಕೂಡಲೇ ಮೋದಿ ಬಗ್ಗೆ ಎಡೂರಪ್ಪನ ಬಗ್ಗೆಯೂ ಕವನ ಬರೆದು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆದರು. ಮುಂದೆ ಜೋಶಿಗೆ ತೋರುವ ಕೃತಜ್ಞತೆಯ ಫಲವಾಗಿ ಯಾವ ಕವನ ಉದ್ಭವವಾಗುತ್ತದೊ ಎಂಬ ಆತಂಕದ ನಡುವೆ ಇತ್ತ ಚೆಡ್ಡಿಗಳು, ಅತ್ತ ಚುಂಚನಗಿರಿ ಪ್ರಾಂತ್ಯದ ಹುಡುಗರು ಗೌಡರ ಕ್ರಾಂತಿ ಮಾತಿನಿಂದ ಗೊಂದಲಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಈಚೆಗೆ ಕೆಲವು ಮಠಾಧೀಶರು ಸಂಘಟಿತರಾಗಿ ಸರಕಾರಕ್ಕೆ ಸಲಹೆ ಕೊಡುವುದು ಸಾಮಾನ್ಯವಾಗಿದೆಯಂತಲ್ಲಾ. ಈಗವರ ಕಣ್ಣುಬಿದ್ದಿರುವುದು ಶಾಲಾ ಮಕ್ಕಳ ಆಹಾರದ ಬಗ್ಗೆ. ಸಾಮಾನ್ಯವಾಗಿ ಮಠಾಧೀಶರು, ಧರ್ಮವಂತರು, ನೀತಿವಂತರು, ಸತ್ಯವಂತರು. ತಾವು ಪ್ರತಿನಿಧಿಸುವ ಜಾತಿಯ ತಲೆಯ ಮೇಲೂ ಕುಳಿತವರು. ಇಂತಹ ಸ್ಥಾನದಲ್ಲಿರುವವರಿಗೆ ಸಾಮಾನ್ಯವಾಗಿ ಯಾವ ಶ್ರಮವೂ ಇರುವುದಿಲ್ಲ. ವಿಕಲಚೇತನ ಮಗುವಿಗೆ ತಾಯಿ ತಾನೇ ಆಹಾರ ನೀಡಿ ಸಾಕಿ ಸಲಹುವಂತೆ ಜನಾಂಗ ಈ ಜಗದ್ಗುರುಗಳನ್ನ ಸಾಕುತ್ತಿದೆ. ಹೀಗೆ ಸಾಕಿಸಿಕೊಂಡವರೆಲ್ಲಾ ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಮಾತನಾಡುತ್ತಿದ್ದಾರೆ. ಗುರುಗಳ ಭೋಜನದ ಬಗ್ಗೆ ’ಗುರು ಶಿಷ್ಯರು’ ಎಂಬ ಚಿತ್ರದ ತುಣುಕು ಹೇಳಿದರೆ ಅಪ್ರಸ್ತುತವಾಗಲಾರದು. ಉಂಡಾಡಿ ಗುರುವೊಬ್ಬರು ಗುರುವರ್ಯರ ಮನೆಗೆ ಬರುತ್ತಾರೆ. ಆಗ ಆಚಾರ್ಯರು ಅವರ ಕಾರ್ಯಕ್ರಮ ಕೇಳುತ್ತಾರೆ. ಆಗ ಅತಿಥಿಗಳು ಮುಂಜಾನೆ ಸ್ನಾನ, ಸಂಧ್ಯಾವಂದನೆ ಮತ್ತೆ ಉಪಾಹಾರ ಮಧ್ಯಾಹ್ನ ಭೋಜನ, ಶಯನ ನಂತರ ವಾಯುವಿಹಾರ, ರಾತ್ರಿ ಭೋಜನ ಮತ್ತು ಒಂದು ತಂಬಿಗೆ ಕ್ಷೀರ ಇದೇ ನನ್ನ ದಿನಚರಿ ಎನ್ನುತ್ತಾನೆ. ಹೀಗೆ ಬದುಕಿರುವ ನಮ್ಮ ಕೆಲವು ಜಗತ್ ಗುರುಗಳು ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಎಗ್ಗಿಲ್ಲದೆ ಸಲಹೆ ಕೊಡತೊಡಗಿದ್ದಾರೆ. ಇಂತಹವರ ಅವಗಾಹನೆಗೆ ತರುವ ವಿಷಯ ಯಾವುದೆಂದರೆ ಶೃಂಗೇರಿ, ಚುಂಚನಗಿರಿ, ಸಿದ್ಧಗಂಗಾ ಮಠ ಮತ್ತು ಇನ್ನಿತರ ಪ್ರಗತಿಪರ ಚಿಂತಕರನ್ನ ಪಡೆದಿರುವ ಮಠಗಳು ಎಂದೂ ಮಕ್ಕಳ ಆಹಾರ ಪದ್ಧತಿ ಬಗ್ಗೆ ಮಾತನಾಡಿಲ್ಲ. ಆಹಾರ ಅವರವರ ಜನ್ಮಸಿದ್ಧ ಹಕ್ಕು. ಆದ್ದರಿಂದ ತಮಗೆ ಬಿಟ್ಟಿ ಸಿಗುವ ದ್ರಾಕ್ಷಿ, ಉತ್ತುತ್ತೆ, ಗೋಡಂಬಿ ತಿಂದುಕೊಂಡು ಟಿವಿ ನೋಡುತ್ತ ಕಾಲ ಹಾಕಲು ಸಮಸ್ಯೆ ಏನು ಎಂದು ಕೇಳುವಂತೆ ಮಾತನಾಡುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...