Homeಮುಖಪುಟಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

- Advertisement -
- Advertisement -

ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೂ ‘ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ’ಯನ್ನು ಸೋಮವಾರ (ಆ.11) ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇದನ್ನು ‘ಸ್ವಾತಂತ್ರ್ಯ ನಂತರದ ಭಾರತೀಯ ಕ್ರೀಡೆಯಲ್ಲಿನ ಅತಿದೊಡ್ಡ ಸುಧಾರಣೆ’ ಎಂದು ಬಣ್ಣಿಸಿದ್ದಾರೆ.

ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಆರಂಭಿಕ ಮುಂದೂಡಿಕೆಯ ನಂತರ ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಮತ್ತೆ ಸಭೆ ಸೇರಿದಾಗ, ‘ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ’ಯನ್ನು ಕೂಡ ಅಂಗೀಕರಿಸಲಾಯಿತು.

“ಇದು ಕ್ರೀಡೆಯಲ್ಲಿ ಸ್ವಾತಂತ್ರ್ಯದ ನಂತರ ಅತಿದೊಡ್ಡ ಸುಧಾರಣೆಯಾಗಿದೆ. ಈ ಮಸೂದೆಯು ಕ್ರೀಡಾ ಒಕ್ಕೂಟಗಳಲ್ಲಿ ಹೊಣೆಗಾರಿಕೆ, ನ್ಯಾಯ ಮತ್ತು ಉತ್ತಮ ಆಡಳಿತವನ್ನು ಖಚಿತಪಡಿಸುತ್ತದೆ” ಎಂದು ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆ ಸಚಿವ ಮಾಂಡವಿಯಾ ಹೇಳಿದರು.

“ಇದು ಭಾರತದ ಕ್ರೀಡಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಭಾರೀ ಮಹತ್ವವನ್ನು ಹೊಂದಿರುವ ವಿಷಯಗಳು. ಇಂತಹ ಮಹತ್ವದ ಮಸೂದೆ ಮತ್ತು ಸುಧಾರಣೆಯಲ್ಲಿ ವಿರೋಧ ಪಕ್ಷದ ಭಾಗವಹಿಸುವಿಕೆ ಇಲ್ಲದಿರುವುದು ದುರದೃಷ್ಟಕರ” ಎಂದು ಮಾಂಡವೀಯಾ ಟೀಕಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ ಸಂಸದರು ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಕಡೆಗೆ ಮೆರವಣಿಗೆ ಹೊರಟಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಹಾಗಾಗಿ, ಮಸೂದೆಗಳನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದಾಗ ವಿರೋಧ ಪಕ್ಷದ ಸಂಸದರು ಸದನದಲ್ಲಿ ಇರಲಿಲ್ಲ.

ಆದರೆ, ಇಬ್ಬರು ಸಂಸದರು ಮಸೂದೆಯ ಪರಿಗಣನಾ ಚರ್ಚೆಯಲ್ಲಿ ಭಾಗವಹಿಸಿ, ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ನಂತರ, ವಿರೋಧ ಪಕ್ಷದ ಸದಸ್ಯರು ಸದನಕ್ಕೆ ಹಿಂತಿರುಗಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಗದ್ದಲದ ನಡುವೆಯೇ, ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ನಂತರ ಸದನವನ್ನು ಸಂಜೆ 4 ಗಂಟೆಯವರೆಗೆ ಮುಂದೂಡಲಾಯಿತು.

ಇದಕ್ಕೂ ಮೊದಲು, ಕ್ರೀಡಾ ಸಂಸದೀಯ ಸಮಿತಿಯ ಅಧ್ಯಕ್ಷ ದಿಗ್ವಿಜಯ ಸಿಂಗ್ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯನ್ನು ಸಂಸದೀಯ ಸಮಿತಿಗೆ ಕಳಿಸುವಂತೆ ವಿನಂತಿಸಿದರು. ಸಂಸತ್ತು ಮಸೂದೆಯನ್ನು ಅಂಗೀಕರಿಸುವ ಮೊದಲು ಪರಿಶೀಲಿಸಬೇಕು ಮತ್ತು ಚರ್ಚಿಸಬೇಕು ಎಂದು ಹೇಳಿದರು.

2036ರ ಒಲಿಂಪಿಕ್ಸ್‌ಗೆ ಬಿಡ್ ಮಾಡಲು ಮುಂದಾಗಿರುವ ಭಾರತದಲ್ಲಿ ‘ಪಾರದರ್ಶಕ, ಜವಾಬ್ದಾರಿಯುತ ಮತ್ತು ವಿಶ್ವ ದರ್ಜೆಯ ಕ್ರೀಡಾ ಪರಿಸರ ವ್ಯವಸ್ಥೆಯನ್ನು’ ನಿರ್ಮಿಸುವ ಗುರಿಯನ್ನು ಹೊಂದಿರುವ ಎರಡು ಮಸೂದೆಗಳು ಪ್ರಮುಖ ಸುಧಾರಣೆಗಳಾಗಿವೆ ಎಂದು ಸಚಿವ ಮಾಂಡವಿಯಾ ಸಮರ್ಥಿಸಿಕೊಂಡರು.

“1975ರಿಂದ ಕಾಯ್ದೆಯಲ್ಲಿ ತಿದ್ದುಪಡಿಗೆ ಪ್ರಯತ್ನಗಳು ನಡೆದಿವೆ. 1985ರಲ್ಲಿ, ಮೊದಲ ಕರಡು ಮಸೂದೆಯನ್ನು ಸಿದ್ದಪಡಿಸಲಾಗಿತ್ತು. ಆದರೆ, ವೈಯಕ್ತಿಕ ಲಾಭಕ್ಕಾಗಿ ಕ್ರೀಡೆಗಳನ್ನು ಕೂಡ ರಾಜಕೀಯಗೊಳಿಸಲಾಯಿತು. ಕೆಲವು ಮಂತ್ರಿಗಳು ಮಸೂದೆ ಮಂಡಿಸಲು ಪ್ರಯತ್ನಗಳನ್ನು ನಡೆಸಿದ್ದರು. ಆದರೆ, ಮುಂದುವರಿಯಲು ಸಾಧ್ಯವಾಗಲಿಲ್ಲ” ಎಂದು ಸಚಿವ ಮಾಂಡವೀಯಾ ಹೇಳಿದರು.

“2011ರಲ್ಲಿ, ನಾವು ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ಜಾರಿಗೆ ತಂದೆವು. ಅದನ್ನು ಮಸೂದೆಯಾಗಿ ಪರಿವರ್ತಿಸಲು ಮತ್ತೊಂದು ಪ್ರಯತ್ನ ಮಾಡಲಾಯಿತು. ಅದು ಸಂಪುಟವನ್ನು ತಲುಪಿತು, ಚರ್ಚೆಯೂ ನಡೆಯಿತು. ಆದರೆ, ಅದರ ನಂತರ ಮಸೂದೆಯನ್ನು ಮುಂದೂಡಲಾಯಿತು. ಅದು ಸಂಸತ್ತನ್ನು ತಲುಪಲಿಲ್ಲ” ಎಂದು ಮಸೂದೆಯ ಹಿನ್ನೆಲೆಯನ್ನು ಪ್ರಸ್ತುತಪಡಿಸುತ್ತಾ ಸಚಿವರು ತಿಳಿಸಿದರು.

“ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯು ಬದಲಾವಣೆಯ ಶಕ್ತಿಯಾಗಿದೆ. ಇಷ್ಟು ದೊಡ್ಡ ದೇಶವಾಗಿದ್ದರೂ, ಒಲಿಂಪಿಕ್ ಕ್ರೀಡಾಕೂಟ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ಸಾಧನೆ ತೃಪ್ತಿಕರವಾಗಿಲ್ಲ. ಈ ಮಸೂದೆಯು ಭಾರತದ ಕ್ರೀಡಾ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದರು.

ವರದಿಗಳ ಪ್ರಕಾರ, ಕ್ರೀಡಾ ಆಡಳಿತ ಮಸೂದೆಯು ರಾಷ್ಟ್ರೀಯ ಕ್ರೀಡಾ ಮಂಡಳಿ (ಎನ್‌ಎಸ್‌ಬಿ)ಗೆ ಕಠಿಣ ಹೊಣೆಗಾರಿಕೆ ವ್ಯವಸ್ಥೆಯನ್ನು ರಚಿಸಲು ಅವಕಾಶಗಳನ್ನು ಕೊಡುತ್ತದೆ. ಎಲ್ಲಾ ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು (ಎನ್‌ಎಸ್‌ಎಫ್‌ಗಳು) ಕೇಂದ್ರ ಸರ್ಕಾರದ ನಿಧಿಯನ್ನು ಪಡೆಯಲು ಎನ್‌ಎಸ್‌ಬಿಯ ಮಾನ್ಯತೆಯನ್ನು ಪಡೆಯಬೇಕಾಗುತ್ತದೆ.

ತನ್ನ ಕಾರ್ಯಕಾರಿ ಸಮಿತಿಗೆ ಚುನಾವಣೆಗಳನ್ನು ನಡೆಸಲು ವಿಫಲವಾದ ಅಥವಾ ‘ಚುನಾವಣಾ ಕಾರ್ಯವಿಧಾನಗಳಲ್ಲಿ ಸಂಪೂರ್ಣ ಅಕ್ರಮಗಳನ್ನು’ ಎಸಗಿದ ರಾಷ್ಟ್ರೀಯ ಸಂಸ್ಥೆಯ ಮಾನ್ಯತೆಯನ್ನು ರದ್ದುಗೊಳಿಸುವ ಅಧಿಕಾರ ಎನ್‌ಎಸ್‌ಬಿಗೆ ಇರುತ್ತದೆ.

ವಾರ್ಷಿಕ ಲೆಕ್ಕಪರಿಶೋಧನೆ ಮಾಹಿತಿಯನ್ನು ಪ್ರಕಟಿಸಲು ವಿಫಲವಾದರೆ ಅಥವಾ ಸಾರ್ವಜನಿಕ ನಿಧಿಗಳ ದುರುಪಯೋಗಪ ಸಂಬಂಧ ಕ್ರಮಗಳನ್ನು ಕೈಗೊಳ್ಳಲು ಎನ್‌ಎಸ್‌ಬಿಗೆ ಅಧಿಕಾರವಿರುತ್ತದೆ. ಅದರ, ಕ್ರಮ ಕೈಗೊಳ್ಳುವ ಮೊದಲು ಸಂಬಂಧಪಟ್ಟ ಸಂಸ್ಥೆಯನ್ನು ಸಂಪರ್ಕಿಸುವುದು ಅಗತ್ಯವಾಗಿರುತ್ತದೆ.

ಮತ್ತೊಂದು ವೈಶಿಷ್ಟ್ಯವೆಂದರೆ, ರಾಷ್ಟ್ರೀಯ ಕ್ರೀಡಾ ನ್ಯಾಯಮಂಡಳಿಯ ಪ್ರಸ್ತಾವನೆ. ಇದು ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ಹೊಂದಿದ್ದು, ಫೆಡರೇಶನ್‌ಗಳು ಮತ್ತು ಕ್ರೀಡಾಪಟುಗಳನ್ನು ಒಳಗೊಂಡ ಆಯ್ಕೆಯಿಂದ ಚುನಾವಣೆಯವರೆಗಿನ ವಿವಾದಗಳನ್ನು ನಿರ್ಧರಿಸುತ್ತದೆ. ಒಮ್ಮೆ ಸ್ಥಾಪಿಸಿದ ನಂತರ, ನ್ಯಾಯಮಂಡಳಿಯ ನಿರ್ಧಾರಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರ ಪ್ರಶ್ನಿಸಬಹುದು.

ಸಂಬಂಧಪಟ್ಟ ಅಂತಾರಾಷ್ಟ್ರೀಯ ಸಂಸ್ಥೆಗಳ ಕಾನೂನುಗಳು ಮತ್ತು ಬೈಲಾಗಳು ಅನುಮತಿಸಿದರೆ, 70 ರಿಂದ 75 ವರ್ಷದೊಳಗಿನವರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಮೂಲಕ ಆಡಳಿತಾಧಿಕಾರಿಗಳಿಗೆ ವಯಸ್ಸಿನ ಮಿತಿಯ ವಿಷಯದಲ್ಲಿ ಮಸೂದೆಯು ಕೆಲವು ರಿಯಾಯಿತಿಗಳನ್ನು ನೀಡುತ್ತದೆ. ಇದು ವಯಸ್ಸಿನ ಮಿತಿಯನ್ನು 70 ಕ್ಕೆ ಸೀಮಿತಗೊಳಿಸಿದ ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ತೆಗೆದು ಹಾಕುತ್ತದೆ.

2036 ರ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟದ ಬಿಡ್ಡಿಂಗ್‌ಗೆ ಪೂರ್ವಸಿದ್ಧತಾ ಚಟುವಟಿಕೆಗಳ ಭಾಗವಾಗಿ, ಉತ್ತಮ ಫಲಿತಾಂಶಗಳನ್ನು ತರಲು, ಕ್ರೀಡಾ ಶ್ರೇಷ್ಠತೆಯನ್ನು ತರಲು ಮತ್ತು ಪ್ರಮುಖ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸುಧಾರಿತ ಪ್ರದರ್ಶನಕ್ಕೆ ಸಹಾಯ ಮಾಡಲು ಕ್ರೀಡಾ ಆಡಳಿತದ ವ್ಯವಸ್ಥೆಯು ಸಕಾರಾತ್ಮಕ ರೂಪಾಂತರಕ್ಕೆ ಒಳಗಾಗುವುದು ಕಡ್ಡಾಯವಾಗಿದೆ” ಎಂದು ಮಸೂದೆಯ ಉದ್ದೇಶಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...